Homeಮುಖಪುಟಮಣಿಪುರ ಹಿಂಸಾಚಾರ: ಸಿಎಂ ಸಿಂಗ್‌ರನ್ನು ಪದಚ್ಯುತಗೊಳಿಸಲು ಸರ್ವಪಕ್ಷ ಸಭೆಯಲ್ಲಿ ಒತ್ತಾಯ

ಮಣಿಪುರ ಹಿಂಸಾಚಾರ: ಸಿಎಂ ಸಿಂಗ್‌ರನ್ನು ಪದಚ್ಯುತಗೊಳಿಸಲು ಸರ್ವಪಕ್ಷ ಸಭೆಯಲ್ಲಿ ಒತ್ತಾಯ

- Advertisement -
- Advertisement -

ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರನ್ನು ಪದಚ್ಯುತಗೊಳಿಸಬೇಕು. ಏಕೆಂದರೆ ರಾಜ್ಯದ ಜನರು ಅವರ ಮೇಲಿನ ನಂಬಿಕೆಯನ್ನು ಕಳೆದುಕೊಂಡಿದ್ದಾರೆ ಎಂದು ಎಂದು ಪ್ರತಿಪಕ್ಷ ನಾಯಕರು ಶನಿವಾರ ಒತ್ತಾಯಿಸಿದ್ದಾರೆ.

ದೆಹಲಿಯಲ್ಲಿ ನಡೆದ ಸರ್ವಪಕ್ಷ ಸಭೆಯ ನಂತರ ಮಾತನಾಡಿದ ಆರ್‌ಜೆಡಿ ಸಂಸದ ಮನೋಜ್ ಝಾ ಅವರು. ”ಮಣಿಪುರದಲ್ಲಿ ಆಡಳಿತದ ನೇತೃತ್ವ ವಹಿಸುವ ವ್ಯಕ್ತಿಯ ಮೇಲೆ ನಂಬಿಕೆ ಇಲ್ಲ ಎಂದು ಹೇಳುವ ಮಟ್ಟಕ್ಕೆ ಇಡೀ ಪ್ರತಿಪಕ್ಷಗಳು ಬಂದಿವೆ. ಆ ವ್ಯಕ್ತಿ ಉಸ್ತುವಾರಿಯಾಗುವವರೆಗೂ ನೀವು ಶಾಂತಿಯನ್ನು ಹೊಂದಲು ಸಾಧ್ಯವಿಲ್ಲ” ಎಂದು ಹೇಳಿದರು.

ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದ ಕುರಿತು ಚರ್ಚಿಸಲು ಜೂನ್ 22 ರಂದು ಗೃಹ ಸಚಿವ ಅಮಿತ್ ಶಾ ಅವರು ಸರ್ವಪಕ್ಷ ಸಭೆಯನ್ನು ಕರೆದಿದ್ದರು. ಸಭೆಯಲ್ಲಿ ಕಾಂಗ್ರೆಸ್, ಭಾರತೀಯ ಜನತಾ ಪಕ್ಷ, ಆರ್‌ಜೆಡಿ, ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ), ಆಮ್ ಆದ್ಮಿ ಪಕ್ಷ, ದ್ರಾವಿಡ ಮುನ್ನೇತ್ರ ಕಳಗಂ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ, ಸಮಾಜವಾದಿ ಪಕ್ಷ, ನ್ಯಾಷನಲ್ ಪೀಪಲ್ಸ್ ಪಾರ್ಟಿ ಮತ್ತು ಬಿಜು ಜನತಾ ದಳ ಇತರ ಮುಖಂಡರು ಭಾಗವಹಿಸಿದ್ದರು.

ಮಣಿಪುರದಲ್ಲಿ ಮೇ 3ರಿಂದ ಮೈತಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಘರ್ಷಣೆಗಳು ನಡೆಯುತ್ತಲೇ ಇವೆ. ಈ ಹಿಂಸಾಚಾರದಲ್ಲಿ 100ಕ್ಕೂ ಹೆಚ್ಚು ಜನರ ಸಾವಿಗೀಡಾಗಿದ್ದಾರೆ, 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು ಸಾವಿರಾರು ಮಂದಿ ಸ್ಥಳಾಂತರಗೊಂಡಿದ್ದಾರೆ. ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿಸಬೇಕೆಂಬ ಬಹುಸಂಖ್ಯಾತ ಮೈತಿ ಸಮುದಾಯದ ಬೇಡಿಕೆಯನ್ನು ವಿರೋಧಿಸಿ ಸಾವಿರಾರು ಜನರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ ನಂತರ ಹಿಂಸಾಚಾರ ಾರಂಭವಾಯಿತು.

ಮಣಿಪುರದಲ್ಲಿ ಹಿಂಸಾಚಾರವನ್ನು ಕೊನೆಗೊಳಿಸಲು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸರ್ಕಾರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರ್ಕಾರಗಳು ಬೇಕಿರುವಷ್ಟು ಪ್ರಯತ್ನಗಳನ್ನು ಮಾಡಿಲ್ಲ ಎಂದು ಹಲವಾರು ವಿರೋಧ ಪಕ್ಷಗಳು ಟೀಕಿಸಿವೆ.

ಶನಿವಾರ, ಗೃಹ ಸಚಿವರು ಆಯೋಜಿಸಿದ ಸರ್ವಪಕ್ಷ ಸಭೆಯು “ಕೇವಲ ಕಣ್ಣು ಒರೆಸುವ” ಮತ್ತು ಔಪಚಾರಿಕವಾಗಿದೆ ಎಂದು ಕಾಂಗ್ರೆಸ್ ಹೇಳಿದೆ.

ಈ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರತಿನಿಧಿ, ಮಣಿಪುರದ ಮಾಜಿ ಮುಖ್ಯಮಂತ್ರಿ ಒಕ್ರಾಮ್ ಇಬೋಬಿ ಸಿಂಗ್ ಅವರಿಗೆ ಹೆಚ್ಚಿಗೆ ಮಾತನಾಡಲು ಅವಕಾಶ ನೀಡಲಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರವು ಭಾರತದ ಆತ್ಮಸಾಕ್ಷಿಗಾದ ಆಳವಾದ ಗಾಯ: ಸೋನಿಯಾ ಗಾಂಧಿ

”ಇಂದು ನಡೆದ ಸರ್ವಪಕ್ಷ ಸಭೆಯಲ್ಲಿ ಮಣಿಪುರದ ಏಕೈಕ ನಾಯಕ ಹಾಗೂ ಮಣಿಪುರದ ಪ್ರತಿನಿಧಿಯಾಗಿರುವ ಮಾಜಿ ಸಿಎಂ ಒಕ್ರಾಮ್ ಇಬೋಬಿ ಸಿಂಗ್ ಅವರಿಗೆ ಸಂಪೂರ್ಣವಾಗಿ ವಿಚಾರವನ್ನು ಹೇಳಲು ಅವಕಾಶ ನೀಡದಿರುವುದು ಅವರಿಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಮಾತ್ರವಲ್ಲ, ಮಣಿಪುರದ ಜನತೆಗೆ ಮಾಡಿದ ಅವಮಾನವಾಗಿದೆ” ಅವರು ಹೇಳಿದರು.

”ನಾನು ಮಣಿಪುರ ವಿವಿಧ ಸಮುದಾಯಗಳ ಗುಂಪುಗಳನ್ನು ಭೇಟಿ ಮಾಡಿದ್ದೇನೆ ಮತ್ತು ಅವರೆಲ್ಲರೂ ಮಣಿಪುರದ ಮುಖ್ಯಮಂತ್ರಿಯ ಮೇಲೆ ವಿಶ್ವಾಸವಿಲ್ಲ ಎನ್ನುವ ಮಾತುಗಳನ್ನೇ ಹೇಳಿದ್ದಾರೆ” ಎಂದು ಸಭೆಯ ನಂತರ ಶಿವಸೇನಾ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ನಾಯಕಿ ಪ್ರಿಯಾಂಕಾ ಚತುರ್ವೇದಿ ಹೇಳಿದ್ದಾರೆ.

ಮುಂದಿನ ವಾರ ಮಣಿಪುರಕ್ಕೆ ಸರ್ವಪಕ್ಷಗಳ ನಿಯೋಗವನ್ನು ಕಳುಹಿಸಬೇಕೆಂದು ತೃಣಮೂಲ ಕಾಂಗ್ರೆಸ್ ಒತ್ತಾಯಿಸಿದೆ.

”ಮಣಿಪುರದ ಜನರ ವಿಶ್ವಾಸವನ್ನು ಹೆಚ್ಚಿಸಲು ಮತ್ತು ಅಲ್ಲಿ ಶಾಂತಿ ಸ್ಥಾಪಿಸಲುಯ, ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಮುಂದಿನ ವಾರದಲ್ಲಿ ರಾಜ್ಯಕ್ಕೆ ಸರ್ವಪಕ್ಷಗಳ ನಿಯೋಗವನ್ನು ಕಳುಹಿಸಬೇಕೆಂದು ಒತ್ತಾಯಿಸುತ್ತದೆ” ಎಂದು ಪಕ್ಷವು ಹೇಳಿದೆ.

”ಕೇಂದ್ರ ಸರ್ಕಾರವು ಮಣಿಪುರ ಬಿಕ್ಕಟ್ಟನ್ನು ನಿರ್ಲಕ್ಷಿಸುತ್ತಿದೆ ಎಂಬ ಸಂದೇಶ ಹೊರಬಿದ್ದಿದೆ. ಅದನ್ನು ಸರಿಪಡಿಸಲು, ಅಲ್ಲಿಯ ಜನಸಮುದಾಯವನ್ನು ಕಾಳಜಿ ಮಾಡಲು, ಶಾಂತಿ ಮತ್ತು ಸಾಮರಸ್ಯವನ್ನು ಪುನಃಸ್ಥಾಪಿಸುವ ಕೆಲಸವಾಗಬೇಕಿದೆ” ಎಂದು ಟಿಎಂಸಿ ಹೇಳಿದೆ.

ಈ ವೇಳೆ ಅಮಿತ್ ಶಾ ಮಾತನಾಡಿ, ಪ್ರಧಾನಿಯವರ ಸೂಚನೆಯ ಮೇರೆಗೆ ಬಿಜೆಪಿಯ ಮಣಿಪುರ ಉಸ್ತುವಾರಿ ಸಂಬಿತ್ ಪಾತ್ರಾ ಅವರು ಮಣಿಪುರದಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಪ್ರತಿಪಕ್ಷಗಳಿಗೆ ತಿಳಿಸಿದರು.

”ರಾಜ್ಯದಲ್ಲಿ ಶಾಂತಿ ಮರುಸ್ಥಾಪನೆಗಾಗಿ ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಸಲಹೆಗಳನ್ನು ನೀಡಿವೆ. ಕೇಂದ್ರ ಸರ್ಕಾರವು ಅವುಗಳನ್ನು ಮುಕ್ತ ಮನಸ್ಸಿನಿಂದ ಪರಿಗಣಿಸುತ್ತದೆ” ಎಂದು ಹೇಳಿದ್ದಾರೆ.

”ಮಣಿಪುರದಲ್ಲಿ ಶಾಂತಿ ಮರುಸ್ಥಾಪನೆಗಾಗಿ ಎಲ್ಲಾ ರಾಜಕೀಯ ಪಕ್ಷಗಳು ಸೂಕ್ಷ್ಮವಾಗಿ ಮತ್ತು ರಾಜಕೀಯವನ್ನು ಬದಿಗಿಟ್ಟು ತಮ್ಮ ಸಲಹೆಗಳನ್ನು ನೀಡಿವೆ. ಭಾರತ ಸರ್ಕಾರ ಈ ಸಲಹೆಗಳನ್ನು ಮುಕ್ತ ಮನಸ್ಸಿನಿಂದ ಪರಿಗಣಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ಮೊದಲ ದಿನದಿಂದ ಮಣಿಪುರದ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಈ ಸಮಸ್ಯೆಗೆ ಪರಿಹಾರವನ್ನು ಕಂಡುಹಿಡಿಯಲು ನಮಗೆ ಮಾರ್ಗದರ್ಶನ ನೀಡುತ್ತಿದ್ದಾರೆ” ಎಂದು ಶಾ ಹೇಳಿದ್ದಾರೆ.

”ಎಲ್ಲರನ್ನೂ ಒಗ್ಗೂಡಿಸಿ ಮಣಿಪುರ ಸಮಸ್ಯೆಯನ್ನು ಪರಿಹರಿಸಲು ಮೋದಿ ಸರ್ಕಾರ ಬದ್ಧವಾಗಿದೆ. ರಾಜ್ಯದಲ್ಲಿ ಹಿಂಸಾಚಾರದಿಂದ ಇನ್ನು ಮುಂದೆ ಯಾವುದೇ ಜೀವಗಳು ಬಲಿಯಾಗಬಾರದು ಎಂಬುದು ಮೋದಿ ಸರ್ಕಾರದ ಆದ್ಯತೆಯಾಗಿದೆ” ಎಂದು ಹೇಳಿದರು.

”ಮಣಿಪುರದಲ್ಲಿ ಪರಿಸ್ಥಿತಿ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಜೂನ್ 13 ರ ತಡರಾತ್ರಿಯಿಂದ ರಾಜ್ಯದಲ್ಲಿ ಹಿಂಸಾಚಾರದಲ್ಲಿ ಒಬ್ಬರೂ ಸಾವನ್ನಪ್ಪಿಲ್ಲ. ರಾಜ್ಯದಲ್ಲಿ 36,000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ, 40 ಐಪಿಎಸ್ ಅಧಿಕಾರಿಗಳನ್ನು ಮಣಿಪುರಕ್ಕೆ ಕಳುಹಿಸಲಾಗಿದೆ, 20 ವೈದ್ಯಕೀಯ ತಂಡಗಳನ್ನು ಕಳುಹಿಸಲಾಗಿದ. ಔಷಧಿಗಳು ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಪೂರೈಕೆಯನ್ನು ಖಾತ್ರಿಪಡಿಸಲಾಗುತ್ತಿದೆ” ಎಂದು ಶಾ ಹೇಳಿದ್ದಾರೆ.

ಚುರಚಂದಪುರದಲ್ಲಿ ಮೌನ ರ್ಯಾಲಿ ನಡೆಯಿತು

ಮಣಿಪುರದ ಚುರಾಚಂದ್‌ಪುರ ಜಿಲ್ಲೆಯಲ್ಲಿ ಶನಿವಾರ ಜಂಟಿ ವಿದ್ಯಾರ್ಥಿ ಸಂಘಟನೆಯು ರಾಜ್ಯದಲ್ಲಿ ನಡೆದ ಹಿಂಸಾಚಾರದಲ್ಲಿ ಹುತಾತ್ಮರಾದ ಆದಿವಾಸಿಗಳನ್ನು ಸ್ಮರಿಸಲು ಮೌನ ರ್ಯಾಲಿಯನ್ನು ಆಯೋಜಿಸಿತ್ತು. ಕಪ್ಪು ಬಟ್ಟೆಗಳನ್ನು ಧರಿಸಿ, ಭಾಗವಹಿಸುವವರು ಜನಾಂಗೀಯ ಸಂಘರ್ಷದಲ್ಲಿ ಸತ್ತವರನ್ನು ಪ್ರತಿನಿಧಿಸಲು 100 ಡಮ್ಮಿ ಶವಪೆಟ್ಟಿಗೆಯನ್ನು ಹೊತ್ತುಕೊಂಡು ಮೌನವಾಗಿ ಭಾಗವಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...