Homeಮುಖಪುಟಮುಂದುವರೆದ ಮಣಿಪುರ ಹಿಂಸಾಚಾರ: ಸಚಿವೆ ಮನೆಗೆ ಬೆಂಕಿ; ಭುಗಿಲೆದ್ದ ಆಕ್ರೋಶ

ಮುಂದುವರೆದ ಮಣಿಪುರ ಹಿಂಸಾಚಾರ: ಸಚಿವೆ ಮನೆಗೆ ಬೆಂಕಿ; ಭುಗಿಲೆದ್ದ ಆಕ್ರೋಶ

- Advertisement -
- Advertisement -

ಮಣಿಪುರದಲ್ಲಿ ಕೆಲ ತಿಂಗಳಿನಿಂದ ನಡೆಯುತ್ತಿರುವ ಹಿಂಸಾಚಾರ ಮುಂದುವರೆದಿದ್ದು, ಪಶ್ಚಿಮ ಇಂಫಾಲ ಜಿಲ್ಲೆಯ ಲಾಂಫೀಲ್‌ನಲ್ಲಿರುವ ಮಣಿಪುರದ ಸಚಿವೆ ನೆಮ್ಯಾ ಕಿಪ್‌ಗೆನ್ ಅವರ ಅಧಿಕೃತ ನಿವಾಸಕ್ಕೆ ಬುಧವಾರ ರಾತ್ರಿ ಅಪರಿಚಿತರು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ಪೂರ್ವ ಇಂಫಾಲದ ಖಾಮೆಲಾಕ್‌ ಗ್ರಾಮದಲ್ಲಿ ಬುಧವಾರ ಶಂಕಿತ ಉಗ್ರರು ನಡೆಸಿದ ದಾಳಿ ವೇಳೆ 9 ಮಂದಿ ಮೃತಪಟ್ಟು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಘಟನೆ ಬೆನ್ನಲ್ಲೇ ಸಚಿವರ ನಿವಾಸಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಕಳೆದ ತಿಂಗಳು ಲೋಕೋಪಯೋಗಿ ಸಚಿವರ ಮನೆಯ ಮೇಲೆ ಇದೇ ರೀತಿ ದಾಳಿ ಮಾಡಲಾಗಿತ್ತು.

ಕೈಗಾರಿಕಾ ಸಚಿವೆ ನೆಮ್ಚಾ ಕಿಪ್‌ಗೆನ್‌ ಅವರಿಗೆ ಸೇರಿದ ಲಾಂಫೀಲ್‌ ಪ್ರದೇಶದಲ್ಲಿರುವ ಸರ್ಕಾರಿ ನಿವಾಸಕ್ಕೆ ಬುಧವಾರ ರಾತ್ರಿ ಬೆಂಕಿ ಹಚ್ಚಲಾಗಿದೆ. ಸಚಿವೆ ಕಿಪ್‌ಗೆನ್‌ ಕುಕಿ ಸಮುದಾಯದ ನಾಯಕಿಯಾಗಿದ್ದಾರೆ. ಈ ಕೃತ್ಯ ನಡೆದ ವೇಳೆ ಸಚಿವೆ ಮನೆಯಲ್ಲಿ ಇರಲಿಲ್ಲ. ಅಧಿಕೃತ ಪ್ರವಾಸದ ಕಾರಣದಿಂದ ಹೊರಗಿದ್ದರು. ಈ ವೇಳೆ ಈ ದುಷ್ಕೃತ್ಯ ನಡೆಸಲಾಗಿದೆ. ಮನೆಯಲ್ಲಿದ್ದ ವಸ್ತುಗಳು ಬೆಂಕಿಗಾಹುತಿಯಾಗಿದ್ದು ಅಪಾರ ಪ್ರಮಾಣದ ನಷ್ಟವಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಯಾವುದೇ ಸಂಘಟನೆ ಘಟನೆಯ ಹೊಣೆ ಹೊತ್ತುಕೊಂಡಿಲ್ಲ.

ಇದನ್ನೂ ಓದಿ: ಮಣಿಪುರ ಹಿಂಸಾಚಾರದಲ್ಲಿ 253 ಚರ್ಚ್‌ಗಳಿಗೆ ಬೆಂಕಿ; ಜ್ಞಾಪಕ ಪತ್ರ ಸಲ್ಲಿಕೆ

ಮಣಿಪುರದಲ್ಲಿ ನಡೆದಿರುವ ಹಿಂಸಾಚಾರದ ಭಾಗವಾಗಿ ಕೆಲವು ಸಂಘಟನೆಗಳು ಸಚಿವೆ ಮನೆಯನ್ನು ಗುರಿಯಾಗಿರಿಸಿಕೊಂಡಿದ್ದರು. ಬುಧವಾರ ಸಂಜೆ ನಂತರ ಜಮಾಯಿಸಿದ ಕೆಲವರು ಬೆಂಕಿ ಹಚ್ಚಿದ್ದಾರೆ. ಭದ್ರತಾ ಸಿಬ್ಬಂದಿ ನೋಡುವಷ್ಟರಲ್ಲಿ ಘಟನೆ ನಡೆದಿದ್ದು, ದುಷ್ಕೃತ್ಯ ಎಸಗಿದವರ ಪತ್ತೆಗೆ ಬಲೆ ಬೀಸಲಾಗಿದೆ.

ಮಣಿಪುರದಲ್ಲಿ ಮೈತಿ ಮತ್ತು ಕುಕಿ ಸಮುದಾಯದ ನಡುವೆ ಒಂದು ತಿಂಗಳಿಂದ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದಲ್ಲಿ 100 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. 310 ಜನರು ಗಾಯಗೊಂಡಿದ್ದಾರೆ. ರಾಜ್ಯದಲ್ಲಿ ಶಾಂತಿ ಸ್ಥಾಪಿಸಲು ಸೇನೆ ಮತ್ತು ಅರೆ ಪಡೆಗಳನ್ನು ನಿಯೋಜಿಸಲಾಗಿದೆ.

ಪರಿಶಿಷ್ಟ ಪಂಗಡದ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೈತೇಯಿ ಸಮುದಾಯ ಮೇ 3ರಂದು ಮೆರವಣಿಗೆ ಆಯೋಜಿಸಿತ್ತು. ಆ ಬಳಿಕ ಮಣಿಪುರದಲ್ಲಿ ಘರ್ಷಣೆಗಳು ಭುಗಿಲೆದ್ದಿವೆ.

ಮಣಿಪುರದ ಜನಸಂಖ್ಯೆಯ ಶೇಕಡ 53 ರಷ್ಟಿರುವ ಮೈತಿ ಸಮುದಾಯ, ಇಂಫಾಲದ ಕಣಿವೆಗಳಲ್ಲಿ ಹೆಚ್ಚಾಗಿ ನೆಲಿಸಿವೆ. ಬುಡಕಟ್ಟು ಜನಾಂಗಗಳಾದ ನಾಗಾಗಳು ಮತ್ತು ಕುಕಿಗಳು ಶೇಕಡಾ 40 ರಷ್ಟಿದ್ದು, ಗುಡ್ಡಗಾಡು ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ.

ಕಳೆದ 24 ಗಂಟೆಯಲ್ಲಿ ನಡದಿರುವ ಹಿಂಸಾಚಾರಗಳಲ್ಲಿ ಒಬ್ಬ ಮಹಿಳೆಯೂ ಸೇರಿ 9 ಜನ ಮೃತಪಟ್ಟಿದ್ದಾರೆ. ಹಲವರು ಗುಂಡೇಟಿನಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಖಮೇನ್‌ ಲೋಕ್‌ ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಜೀವ ಕಳೆದುಕೊಂಡಿದ್ದರು. ಕೆಲ ದಿನಗಳ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮೂರು ದಿನ ಮಣಿಪುರದಲ್ಲಿಯೇ ಬೀಡು ಬಿಟ್ಟು ಶಾಂತಿ ಸ್ಥಾಪನೆಗೆ ಹಲವು ಸುತ್ತಿನ ಸಭೆಗಳನ್ನು ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಆದಿವಾಸಿ ಸಮುದಾಯಗಳ ಪ್ರಮುಖರೊಂದಿಗೆ ನಡೆಸಿದ್ದರು. ಮಣಿಪುರದಲ್ಲಿ ಮತ್ತೆಶುರುವಾಗಿರುವ ಹಿಂಸಾಚಾರ ಪ್ರಕರಣಗಳು ಶಾಂತಿ ಮರುಸ್ಥಾಪಿಸುವ ಪ್ರಯತ್ನಕ್ಕೆ ಹಿನ್ನಡೆ ತಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...