Homeಮುಖಪುಟಮೈತೇಯಿಗಳ ಜೊತೆ ಬಿರೇನ್ ಸಿಂಗ್ ಸರ್ಕಾರದ ಸಹಭಾಗಿತ್ವ: ಹಾಗಾಗಿ ಮಣಿಪುರ ಹಿಂಸಾಚಾರ ತಡೆಯಲಿಲ್ಲ ಎಂದ ಬಿಜೆಪಿ...

ಮೈತೇಯಿಗಳ ಜೊತೆ ಬಿರೇನ್ ಸಿಂಗ್ ಸರ್ಕಾರದ ಸಹಭಾಗಿತ್ವ: ಹಾಗಾಗಿ ಮಣಿಪುರ ಹಿಂಸಾಚಾರ ತಡೆಯಲಿಲ್ಲ ಎಂದ ಬಿಜೆಪಿ ಶಾಸಕ

ಪ್ರಧಾನಿಗಳು ತಮ್ಮ ಆದ್ಯತೆಗಳನ್ನು ಪರಿಗಣಿಸುವುದರಲ್ಲಿ ಎಡವಿದ್ದಾರೆ. ಅವರನ್ನು ಭೇಟಿಯಾಗಲು ಎಷ್ಟೇ ಪ್ರಯತ್ನ ಪಟ್ಟರೂ ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಮಣಿಪುರದಲ್ಲಿ ಮೇ 3 ರಿಂದ ಆರಂಭವಾದ ಜನಾಂಗೀಯ ಹಿಂಸಾಚಾರವನ್ನು ಕೂಡಲೇ ನಿಗ್ರಹಿಸಬಹುದಿತ್ತು. ಆದರೆ ಆ ಹಿಂಸಾಚಾರದಲ್ಲಿ ರಾಜ್ಯ ಸರ್ಕಾರದ ಸಹಭಾಗಿತ್ವವಿದ್ದ ಕಾರಣದಿಂದಲೇ ಅದು ಇಲ್ಲಿಯವರೆಗೂ ಬೆಳೆಯಿತು ಎಂದು ಸ್ವತಃ ಮಣಿಪುರದ ಬಿಜೆಪಿ ಶಾಸಕ ಪೋಲಿಯೆನ್‌ಲಾಲ್ ಹಾಕಿಪ್ ಆರೋಪಿಸಿದ್ದಾರೆ.

ಈ ಕುರಿತು ಇಂಡಿಯಾ ಟುಡೆ ಪತ್ರಿಕೆಗೆ ವಿವರವಾದ ಲೇಖನ ಬರೆದಿರುವ ಅವರು, ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದಾಗ ಅದನ್ನು ಜನಾಂಗೀಯ ಕೋಮು ಹಿಂಸಾಚಾರ ಎಂಬುದನ್ನು ಮರೆಮಾಚಲು ಸ್ವತಃ ಮುಖ್ಯಮಂತ್ರಿಗಳು ಡ್ರಗ್ಸ್ ವಿರುದ್ಧದ ಸಮರ ಎಂಬಂತೆ ತಪ್ಪಾಗಿ ಬಿಂಬಿಸಿದರು. ಅಲ್ಲಿಂದಲೇ ರಾಜ್ಯದಲ್ಲಿ ಜಟಿಲತೆ ಆರಂಭವಾಯಿತು. ಆನಂತರ ಕುಕಿ ಸಮುದಾಯದ ವಿರುದ್ಧ ಮೈತೇಯಿ ಸಮುದಾಯ ದಾಳಿ ಮಾಡಲು ರಾಜ್ಯ ಸರ್ಕಾರದ ಪಡೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿ ಶಾಸಕ ಪೋಲಿಯೆನ್‌ಲಾಲ್ ಹಾಕಿಪ್ ಸೇರಿದಂತೆ 10 ಶಾಸಕರು ಮೇ ತಿಂಗಳಿನಲ್ಲಿಯೇ ಹಿಂಸಾಚಾರವನ್ನು ತಡೆಯುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್‌ರವರಿಗೆ ಪತ್ರ ಬರೆದಿದ್ದರು. ಆ ಪತ್ರದಲ್ಲಿ ಬಹುಸಂಖ್ಯಾತ ಮೈತೇಯಿ ಸಮುದಾಯದವರು ಕುಕಿ ಸಮುದಾಯದ ಮೇಲೆ ಹಿಂಸಾಚಾರ ನಡೆಸುತ್ತಿದ್ದು ಅದನ್ನು ಬಿಜೆಪಿ ಆಡಳಿತ ಸರ್ಕಾರ ಮೌನವಾಗಿ ಬೆಂಬಲಿಸುತ್ತಿದೆ ಎಂದು ಆರೋಪಿಸಿದ್ದರು. ಹಿಂಸಾಚಾರವನ್ನು ತಹಬದಿಗೆ ತರಲು ‘ರಾಜ್ಯದಲ್ಲಿ ಕುಕಿ ಪ್ರಾಬಲ್ಯವಿರುವ ಜಿಲ್ಲೆಗಳಿಗೆ ಪ್ರತ್ಯೇಕ ಆಡಳಿತದ’ ಬೇಡಿಕೆ ಇಟ್ಟಿದ್ದರು. ಆದರೆ ರಾಜ್ಯದ ಸಮಗ್ರತೆಯ ವಿಚಾರ ಮುಂದಿಟ್ಟು ಆ ಬೇಡಿಕೆಯನ್ನು ಮುಖ್ಯಮಂತ್ರಿಗಳು ತಿರಸ್ಕರಿಸಿದ್ದರು.

ಆರಂಭದಲ್ಲಿ ಡ್ರಗ್ಸ್ ವಿರುದ್ಧದ ಯುದ್ಧ ಎಂಬರ್ಥದಲ್ಲಿ ಕುಕಿಗಳ ಮೇಲಿನ ದಾಳಿಗೆ ರಾಜ್ಯದ ಯಂತ್ರಾಂಗವನ್ನು ದುರಪಯೋಗಪಡಿಸಕೊಳ್ಳಲಾಯಿತು. ಅದು ಮುಂದುವರಿದು ಮೈತೇಯಿಗಳು ರಕ್ತಪಾತಕ್ಕೆ ಕಾರಣರಾದರು. ಅಲ್ಲದೇ ಸಂವಿಧಾನದ ಅಡಿಯಲ್ಲಿ ಹಕ್ಕುಗಳ ಮೇಲಿನ ದೀರ್ಘಕಾಲದ ಸಂಘರ್ಷವು ರಾಜ್ಯ ರಚನೆಯ ಪೂರ್ವದ ದಿನಗಳಿಂದಲೂ ಅಸ್ತಿತ್ವದಲ್ಲಿದೆ. ರಾಜ್ಯದ ಸಂಪತ್ತಿನ ಮೇಲಿನ ಹೆಚ್ಚಿನ ಹಿಡಿತ ಮೈತೇಯಿಗಳ ಕೈಯಲ್ಲಿದೆ. ಶಾಸನ ಸಭೆಗಳಲ್ಲಿಯೂ ಸಹ ಗುಡ್ಡಗಾಡು ಪ್ರದೇಶಗಳ ಸಮಿತಿಯ ಅಧಿಕಾರವನ್ನು ಕಿತ್ತುಕೊಳ್ಳಲಾಗಿದೆ. ಕುಕಿ ಸಮುದಾಯದ ಹಿಡಿತ ಹೊಂದಿದ್ದ ಬುಡಕಟ್ಟು ಭೂಮಿಗಳನ್ನು ಕಾಯ್ದಿರಿಸಿದ ಅರಣ್ಯಗಳು ಮತ್ತು ಸಂರಕ್ಷಿತ ಅರಣ್ಯಗಳಾಗಿ ಬದಲಾಯಿಸಲಾಗಿದೆ. ಅಲ್ಲದೇ ಜನಸಂಖ್ಯಾವಾರು ಮೀಸಲಾತಿ ಪರಿಚಯಿಸಲು ಮುಂದಾಗುತ್ತಿರುವುದು ಕುಕಿಗಳಿಗೆ ತಮ್ಮ ಅಸ್ತಿತ್ವದ ಪ್ರಶ್ನೆಯಾಗಿ ಕಂಡರೆ ಮೈತೇಯಿಗಳಿಗೆ ಕಣಿವೆ ಪ್ರದೇಶದ ಭೂಮಿಯ ಆಸೆಯಾಗಿ ಕಂಡಿದೆ ಎಂದು ಪೋಲಿಯೆನ್‌ಲಾಲ್ ಹಾಕಿಪ್ ಲೇಖನದಲ್ಲಿ ವಿವರಿಸಿದ್ದಾರೆ.

ರಾಜ್ಯದಲ್ಲಿ ಭ್ರಷ್ಟಾಚಾರವು ನಿರ್ವಹಿಸಲಾಗದ ಮಟ್ಟ ತಲುಪಿದೆ. ಇದರಿಂದ ಕುಕಿಗಳು ಅವಕಾಶ ವಂಚಿತರಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಆಳುವವರು ಪಕ್ಷಪಾತ ಮತ್ತು ತಾರತಮ್ಯ ಎಸಗಿದರು. ಮುಖ್ಯಮಂತ್ರಿ ಬಿರೇನ್ ಸಿಂಗ್ ಕುಕಿಗಳ ವಿರುದ್ಧದ ಹಿಂಸಾಚಾರದಲ್ಲಿ ಮೈತೆ ಲೀಪುನ್ ಮತ್ತು ಅರಾಂಬೈ ತೆಂಗೋಲ್‌ನಂತಹ ಮೂಲಭೂತ ಗುಂಪುಗಳೊಂದಿಗೆ ಕೈಜೋಡಿಸಿದ್ದರಿಂದ ಹಿಂಸಾಚಾರ ಉಲ್ಬಣವಾಯಿತು ಎಂದು ಅವರು ಬರೆದಿದ್ದಾರೆ.

ನ್ಯೂಸ್‌ಲಾಂಡ್ರಿಗೆ ನೀಡಿರುವ ಸಂದರ್ಶನದಲ್ಲಿ ಅವರು, ಪ್ರಧಾನಿಗಳು ತಮ್ಮ ಆದ್ಯತೆಗಳನ್ನು ಪರಿಗಣಿಸುವುದರಲ್ಲಿ ಎಡವಿದ್ದಾರೆ. ನಾವು ಪ್ರಧಾನಿಯವರನ್ನು ಭೇಟಿಯಾಗಿ ಮಣಿಪುರದ ಸಮಸ್ಯೆಗಳನ್ನು ಮುಂದಿಡಲು ಪ್ರಯತ್ನಿಸುತ್ತಿದ್ದರೂ ಅವರು ಅದನ್ನು ತಪ್ಪಿಸಿಕೊಳ್ಳುತ್ತಿದ್ದಾರೆ. ಈಗಲೂ ಮಣಿಪುರದ ಹಿಂಸಾಚಾರದ ನಿಯಂತ್ರಣಕ್ಕೆ ಪ್ರಧಾನಿಗಳ ಮಧ್ಯಪ್ರವೇಶ ಅನಿವಾರ್ಯ ಎಂದು ಹೇಳಿದ್ದಾರೆ.

ಇದನ್ನೂ ಓದಿ; ‘ನಾನು ಕಂಡ ಅತ್ಯಂತ ಕೆಟ್ಟ ಪ್ರಧಾನಿ ಈ ಮೋದಿ’: ಸಚಿವ ಆರ್​.ಬಿ.ತಿಮ್ಮಾಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....