Homeಮುಖಪುಟಮೈತೇಯಿಗಳ ಜೊತೆ ಬಿರೇನ್ ಸಿಂಗ್ ಸರ್ಕಾರದ ಸಹಭಾಗಿತ್ವ: ಹಾಗಾಗಿ ಮಣಿಪುರ ಹಿಂಸಾಚಾರ ತಡೆಯಲಿಲ್ಲ ಎಂದ ಬಿಜೆಪಿ...

ಮೈತೇಯಿಗಳ ಜೊತೆ ಬಿರೇನ್ ಸಿಂಗ್ ಸರ್ಕಾರದ ಸಹಭಾಗಿತ್ವ: ಹಾಗಾಗಿ ಮಣಿಪುರ ಹಿಂಸಾಚಾರ ತಡೆಯಲಿಲ್ಲ ಎಂದ ಬಿಜೆಪಿ ಶಾಸಕ

ಪ್ರಧಾನಿಗಳು ತಮ್ಮ ಆದ್ಯತೆಗಳನ್ನು ಪರಿಗಣಿಸುವುದರಲ್ಲಿ ಎಡವಿದ್ದಾರೆ. ಅವರನ್ನು ಭೇಟಿಯಾಗಲು ಎಷ್ಟೇ ಪ್ರಯತ್ನ ಪಟ್ಟರೂ ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಮಣಿಪುರದಲ್ಲಿ ಮೇ 3 ರಿಂದ ಆರಂಭವಾದ ಜನಾಂಗೀಯ ಹಿಂಸಾಚಾರವನ್ನು ಕೂಡಲೇ ನಿಗ್ರಹಿಸಬಹುದಿತ್ತು. ಆದರೆ ಆ ಹಿಂಸಾಚಾರದಲ್ಲಿ ರಾಜ್ಯ ಸರ್ಕಾರದ ಸಹಭಾಗಿತ್ವವಿದ್ದ ಕಾರಣದಿಂದಲೇ ಅದು ಇಲ್ಲಿಯವರೆಗೂ ಬೆಳೆಯಿತು ಎಂದು ಸ್ವತಃ ಮಣಿಪುರದ ಬಿಜೆಪಿ ಶಾಸಕ ಪೋಲಿಯೆನ್‌ಲಾಲ್ ಹಾಕಿಪ್ ಆರೋಪಿಸಿದ್ದಾರೆ.

ಈ ಕುರಿತು ಇಂಡಿಯಾ ಟುಡೆ ಪತ್ರಿಕೆಗೆ ವಿವರವಾದ ಲೇಖನ ಬರೆದಿರುವ ಅವರು, ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದಾಗ ಅದನ್ನು ಜನಾಂಗೀಯ ಕೋಮು ಹಿಂಸಾಚಾರ ಎಂಬುದನ್ನು ಮರೆಮಾಚಲು ಸ್ವತಃ ಮುಖ್ಯಮಂತ್ರಿಗಳು ಡ್ರಗ್ಸ್ ವಿರುದ್ಧದ ಸಮರ ಎಂಬಂತೆ ತಪ್ಪಾಗಿ ಬಿಂಬಿಸಿದರು. ಅಲ್ಲಿಂದಲೇ ರಾಜ್ಯದಲ್ಲಿ ಜಟಿಲತೆ ಆರಂಭವಾಯಿತು. ಆನಂತರ ಕುಕಿ ಸಮುದಾಯದ ವಿರುದ್ಧ ಮೈತೇಯಿ ಸಮುದಾಯ ದಾಳಿ ಮಾಡಲು ರಾಜ್ಯ ಸರ್ಕಾರದ ಪಡೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿ ಶಾಸಕ ಪೋಲಿಯೆನ್‌ಲಾಲ್ ಹಾಕಿಪ್ ಸೇರಿದಂತೆ 10 ಶಾಸಕರು ಮೇ ತಿಂಗಳಿನಲ್ಲಿಯೇ ಹಿಂಸಾಚಾರವನ್ನು ತಡೆಯುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್‌ರವರಿಗೆ ಪತ್ರ ಬರೆದಿದ್ದರು. ಆ ಪತ್ರದಲ್ಲಿ ಬಹುಸಂಖ್ಯಾತ ಮೈತೇಯಿ ಸಮುದಾಯದವರು ಕುಕಿ ಸಮುದಾಯದ ಮೇಲೆ ಹಿಂಸಾಚಾರ ನಡೆಸುತ್ತಿದ್ದು ಅದನ್ನು ಬಿಜೆಪಿ ಆಡಳಿತ ಸರ್ಕಾರ ಮೌನವಾಗಿ ಬೆಂಬಲಿಸುತ್ತಿದೆ ಎಂದು ಆರೋಪಿಸಿದ್ದರು. ಹಿಂಸಾಚಾರವನ್ನು ತಹಬದಿಗೆ ತರಲು ‘ರಾಜ್ಯದಲ್ಲಿ ಕುಕಿ ಪ್ರಾಬಲ್ಯವಿರುವ ಜಿಲ್ಲೆಗಳಿಗೆ ಪ್ರತ್ಯೇಕ ಆಡಳಿತದ’ ಬೇಡಿಕೆ ಇಟ್ಟಿದ್ದರು. ಆದರೆ ರಾಜ್ಯದ ಸಮಗ್ರತೆಯ ವಿಚಾರ ಮುಂದಿಟ್ಟು ಆ ಬೇಡಿಕೆಯನ್ನು ಮುಖ್ಯಮಂತ್ರಿಗಳು ತಿರಸ್ಕರಿಸಿದ್ದರು.

ಆರಂಭದಲ್ಲಿ ಡ್ರಗ್ಸ್ ವಿರುದ್ಧದ ಯುದ್ಧ ಎಂಬರ್ಥದಲ್ಲಿ ಕುಕಿಗಳ ಮೇಲಿನ ದಾಳಿಗೆ ರಾಜ್ಯದ ಯಂತ್ರಾಂಗವನ್ನು ದುರಪಯೋಗಪಡಿಸಕೊಳ್ಳಲಾಯಿತು. ಅದು ಮುಂದುವರಿದು ಮೈತೇಯಿಗಳು ರಕ್ತಪಾತಕ್ಕೆ ಕಾರಣರಾದರು. ಅಲ್ಲದೇ ಸಂವಿಧಾನದ ಅಡಿಯಲ್ಲಿ ಹಕ್ಕುಗಳ ಮೇಲಿನ ದೀರ್ಘಕಾಲದ ಸಂಘರ್ಷವು ರಾಜ್ಯ ರಚನೆಯ ಪೂರ್ವದ ದಿನಗಳಿಂದಲೂ ಅಸ್ತಿತ್ವದಲ್ಲಿದೆ. ರಾಜ್ಯದ ಸಂಪತ್ತಿನ ಮೇಲಿನ ಹೆಚ್ಚಿನ ಹಿಡಿತ ಮೈತೇಯಿಗಳ ಕೈಯಲ್ಲಿದೆ. ಶಾಸನ ಸಭೆಗಳಲ್ಲಿಯೂ ಸಹ ಗುಡ್ಡಗಾಡು ಪ್ರದೇಶಗಳ ಸಮಿತಿಯ ಅಧಿಕಾರವನ್ನು ಕಿತ್ತುಕೊಳ್ಳಲಾಗಿದೆ. ಕುಕಿ ಸಮುದಾಯದ ಹಿಡಿತ ಹೊಂದಿದ್ದ ಬುಡಕಟ್ಟು ಭೂಮಿಗಳನ್ನು ಕಾಯ್ದಿರಿಸಿದ ಅರಣ್ಯಗಳು ಮತ್ತು ಸಂರಕ್ಷಿತ ಅರಣ್ಯಗಳಾಗಿ ಬದಲಾಯಿಸಲಾಗಿದೆ. ಅಲ್ಲದೇ ಜನಸಂಖ್ಯಾವಾರು ಮೀಸಲಾತಿ ಪರಿಚಯಿಸಲು ಮುಂದಾಗುತ್ತಿರುವುದು ಕುಕಿಗಳಿಗೆ ತಮ್ಮ ಅಸ್ತಿತ್ವದ ಪ್ರಶ್ನೆಯಾಗಿ ಕಂಡರೆ ಮೈತೇಯಿಗಳಿಗೆ ಕಣಿವೆ ಪ್ರದೇಶದ ಭೂಮಿಯ ಆಸೆಯಾಗಿ ಕಂಡಿದೆ ಎಂದು ಪೋಲಿಯೆನ್‌ಲಾಲ್ ಹಾಕಿಪ್ ಲೇಖನದಲ್ಲಿ ವಿವರಿಸಿದ್ದಾರೆ.

ರಾಜ್ಯದಲ್ಲಿ ಭ್ರಷ್ಟಾಚಾರವು ನಿರ್ವಹಿಸಲಾಗದ ಮಟ್ಟ ತಲುಪಿದೆ. ಇದರಿಂದ ಕುಕಿಗಳು ಅವಕಾಶ ವಂಚಿತರಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಆಳುವವರು ಪಕ್ಷಪಾತ ಮತ್ತು ತಾರತಮ್ಯ ಎಸಗಿದರು. ಮುಖ್ಯಮಂತ್ರಿ ಬಿರೇನ್ ಸಿಂಗ್ ಕುಕಿಗಳ ವಿರುದ್ಧದ ಹಿಂಸಾಚಾರದಲ್ಲಿ ಮೈತೆ ಲೀಪುನ್ ಮತ್ತು ಅರಾಂಬೈ ತೆಂಗೋಲ್‌ನಂತಹ ಮೂಲಭೂತ ಗುಂಪುಗಳೊಂದಿಗೆ ಕೈಜೋಡಿಸಿದ್ದರಿಂದ ಹಿಂಸಾಚಾರ ಉಲ್ಬಣವಾಯಿತು ಎಂದು ಅವರು ಬರೆದಿದ್ದಾರೆ.

ನ್ಯೂಸ್‌ಲಾಂಡ್ರಿಗೆ ನೀಡಿರುವ ಸಂದರ್ಶನದಲ್ಲಿ ಅವರು, ಪ್ರಧಾನಿಗಳು ತಮ್ಮ ಆದ್ಯತೆಗಳನ್ನು ಪರಿಗಣಿಸುವುದರಲ್ಲಿ ಎಡವಿದ್ದಾರೆ. ನಾವು ಪ್ರಧಾನಿಯವರನ್ನು ಭೇಟಿಯಾಗಿ ಮಣಿಪುರದ ಸಮಸ್ಯೆಗಳನ್ನು ಮುಂದಿಡಲು ಪ್ರಯತ್ನಿಸುತ್ತಿದ್ದರೂ ಅವರು ಅದನ್ನು ತಪ್ಪಿಸಿಕೊಳ್ಳುತ್ತಿದ್ದಾರೆ. ಈಗಲೂ ಮಣಿಪುರದ ಹಿಂಸಾಚಾರದ ನಿಯಂತ್ರಣಕ್ಕೆ ಪ್ರಧಾನಿಗಳ ಮಧ್ಯಪ್ರವೇಶ ಅನಿವಾರ್ಯ ಎಂದು ಹೇಳಿದ್ದಾರೆ.

ಇದನ್ನೂ ಓದಿ; ‘ನಾನು ಕಂಡ ಅತ್ಯಂತ ಕೆಟ್ಟ ಪ್ರಧಾನಿ ಈ ಮೋದಿ’: ಸಚಿವ ಆರ್​.ಬಿ.ತಿಮ್ಮಾಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...