Homeಮುಖಪುಟಮೈತೇಯಿಗಳ ಜೊತೆ ಬಿರೇನ್ ಸಿಂಗ್ ಸರ್ಕಾರದ ಸಹಭಾಗಿತ್ವ: ಹಾಗಾಗಿ ಮಣಿಪುರ ಹಿಂಸಾಚಾರ ತಡೆಯಲಿಲ್ಲ ಎಂದ ಬಿಜೆಪಿ...

ಮೈತೇಯಿಗಳ ಜೊತೆ ಬಿರೇನ್ ಸಿಂಗ್ ಸರ್ಕಾರದ ಸಹಭಾಗಿತ್ವ: ಹಾಗಾಗಿ ಮಣಿಪುರ ಹಿಂಸಾಚಾರ ತಡೆಯಲಿಲ್ಲ ಎಂದ ಬಿಜೆಪಿ ಶಾಸಕ

ಪ್ರಧಾನಿಗಳು ತಮ್ಮ ಆದ್ಯತೆಗಳನ್ನು ಪರಿಗಣಿಸುವುದರಲ್ಲಿ ಎಡವಿದ್ದಾರೆ. ಅವರನ್ನು ಭೇಟಿಯಾಗಲು ಎಷ್ಟೇ ಪ್ರಯತ್ನ ಪಟ್ಟರೂ ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಮಣಿಪುರದಲ್ಲಿ ಮೇ 3 ರಿಂದ ಆರಂಭವಾದ ಜನಾಂಗೀಯ ಹಿಂಸಾಚಾರವನ್ನು ಕೂಡಲೇ ನಿಗ್ರಹಿಸಬಹುದಿತ್ತು. ಆದರೆ ಆ ಹಿಂಸಾಚಾರದಲ್ಲಿ ರಾಜ್ಯ ಸರ್ಕಾರದ ಸಹಭಾಗಿತ್ವವಿದ್ದ ಕಾರಣದಿಂದಲೇ ಅದು ಇಲ್ಲಿಯವರೆಗೂ ಬೆಳೆಯಿತು ಎಂದು ಸ್ವತಃ ಮಣಿಪುರದ ಬಿಜೆಪಿ ಶಾಸಕ ಪೋಲಿಯೆನ್‌ಲಾಲ್ ಹಾಕಿಪ್ ಆರೋಪಿಸಿದ್ದಾರೆ.

ಈ ಕುರಿತು ಇಂಡಿಯಾ ಟುಡೆ ಪತ್ರಿಕೆಗೆ ವಿವರವಾದ ಲೇಖನ ಬರೆದಿರುವ ಅವರು, ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದಾಗ ಅದನ್ನು ಜನಾಂಗೀಯ ಕೋಮು ಹಿಂಸಾಚಾರ ಎಂಬುದನ್ನು ಮರೆಮಾಚಲು ಸ್ವತಃ ಮುಖ್ಯಮಂತ್ರಿಗಳು ಡ್ರಗ್ಸ್ ವಿರುದ್ಧದ ಸಮರ ಎಂಬಂತೆ ತಪ್ಪಾಗಿ ಬಿಂಬಿಸಿದರು. ಅಲ್ಲಿಂದಲೇ ರಾಜ್ಯದಲ್ಲಿ ಜಟಿಲತೆ ಆರಂಭವಾಯಿತು. ಆನಂತರ ಕುಕಿ ಸಮುದಾಯದ ವಿರುದ್ಧ ಮೈತೇಯಿ ಸಮುದಾಯ ದಾಳಿ ಮಾಡಲು ರಾಜ್ಯ ಸರ್ಕಾರದ ಪಡೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿ ಶಾಸಕ ಪೋಲಿಯೆನ್‌ಲಾಲ್ ಹಾಕಿಪ್ ಸೇರಿದಂತೆ 10 ಶಾಸಕರು ಮೇ ತಿಂಗಳಿನಲ್ಲಿಯೇ ಹಿಂಸಾಚಾರವನ್ನು ತಡೆಯುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್‌ರವರಿಗೆ ಪತ್ರ ಬರೆದಿದ್ದರು. ಆ ಪತ್ರದಲ್ಲಿ ಬಹುಸಂಖ್ಯಾತ ಮೈತೇಯಿ ಸಮುದಾಯದವರು ಕುಕಿ ಸಮುದಾಯದ ಮೇಲೆ ಹಿಂಸಾಚಾರ ನಡೆಸುತ್ತಿದ್ದು ಅದನ್ನು ಬಿಜೆಪಿ ಆಡಳಿತ ಸರ್ಕಾರ ಮೌನವಾಗಿ ಬೆಂಬಲಿಸುತ್ತಿದೆ ಎಂದು ಆರೋಪಿಸಿದ್ದರು. ಹಿಂಸಾಚಾರವನ್ನು ತಹಬದಿಗೆ ತರಲು ‘ರಾಜ್ಯದಲ್ಲಿ ಕುಕಿ ಪ್ರಾಬಲ್ಯವಿರುವ ಜಿಲ್ಲೆಗಳಿಗೆ ಪ್ರತ್ಯೇಕ ಆಡಳಿತದ’ ಬೇಡಿಕೆ ಇಟ್ಟಿದ್ದರು. ಆದರೆ ರಾಜ್ಯದ ಸಮಗ್ರತೆಯ ವಿಚಾರ ಮುಂದಿಟ್ಟು ಆ ಬೇಡಿಕೆಯನ್ನು ಮುಖ್ಯಮಂತ್ರಿಗಳು ತಿರಸ್ಕರಿಸಿದ್ದರು.

ಆರಂಭದಲ್ಲಿ ಡ್ರಗ್ಸ್ ವಿರುದ್ಧದ ಯುದ್ಧ ಎಂಬರ್ಥದಲ್ಲಿ ಕುಕಿಗಳ ಮೇಲಿನ ದಾಳಿಗೆ ರಾಜ್ಯದ ಯಂತ್ರಾಂಗವನ್ನು ದುರಪಯೋಗಪಡಿಸಕೊಳ್ಳಲಾಯಿತು. ಅದು ಮುಂದುವರಿದು ಮೈತೇಯಿಗಳು ರಕ್ತಪಾತಕ್ಕೆ ಕಾರಣರಾದರು. ಅಲ್ಲದೇ ಸಂವಿಧಾನದ ಅಡಿಯಲ್ಲಿ ಹಕ್ಕುಗಳ ಮೇಲಿನ ದೀರ್ಘಕಾಲದ ಸಂಘರ್ಷವು ರಾಜ್ಯ ರಚನೆಯ ಪೂರ್ವದ ದಿನಗಳಿಂದಲೂ ಅಸ್ತಿತ್ವದಲ್ಲಿದೆ. ರಾಜ್ಯದ ಸಂಪತ್ತಿನ ಮೇಲಿನ ಹೆಚ್ಚಿನ ಹಿಡಿತ ಮೈತೇಯಿಗಳ ಕೈಯಲ್ಲಿದೆ. ಶಾಸನ ಸಭೆಗಳಲ್ಲಿಯೂ ಸಹ ಗುಡ್ಡಗಾಡು ಪ್ರದೇಶಗಳ ಸಮಿತಿಯ ಅಧಿಕಾರವನ್ನು ಕಿತ್ತುಕೊಳ್ಳಲಾಗಿದೆ. ಕುಕಿ ಸಮುದಾಯದ ಹಿಡಿತ ಹೊಂದಿದ್ದ ಬುಡಕಟ್ಟು ಭೂಮಿಗಳನ್ನು ಕಾಯ್ದಿರಿಸಿದ ಅರಣ್ಯಗಳು ಮತ್ತು ಸಂರಕ್ಷಿತ ಅರಣ್ಯಗಳಾಗಿ ಬದಲಾಯಿಸಲಾಗಿದೆ. ಅಲ್ಲದೇ ಜನಸಂಖ್ಯಾವಾರು ಮೀಸಲಾತಿ ಪರಿಚಯಿಸಲು ಮುಂದಾಗುತ್ತಿರುವುದು ಕುಕಿಗಳಿಗೆ ತಮ್ಮ ಅಸ್ತಿತ್ವದ ಪ್ರಶ್ನೆಯಾಗಿ ಕಂಡರೆ ಮೈತೇಯಿಗಳಿಗೆ ಕಣಿವೆ ಪ್ರದೇಶದ ಭೂಮಿಯ ಆಸೆಯಾಗಿ ಕಂಡಿದೆ ಎಂದು ಪೋಲಿಯೆನ್‌ಲಾಲ್ ಹಾಕಿಪ್ ಲೇಖನದಲ್ಲಿ ವಿವರಿಸಿದ್ದಾರೆ.

ರಾಜ್ಯದಲ್ಲಿ ಭ್ರಷ್ಟಾಚಾರವು ನಿರ್ವಹಿಸಲಾಗದ ಮಟ್ಟ ತಲುಪಿದೆ. ಇದರಿಂದ ಕುಕಿಗಳು ಅವಕಾಶ ವಂಚಿತರಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಆಳುವವರು ಪಕ್ಷಪಾತ ಮತ್ತು ತಾರತಮ್ಯ ಎಸಗಿದರು. ಮುಖ್ಯಮಂತ್ರಿ ಬಿರೇನ್ ಸಿಂಗ್ ಕುಕಿಗಳ ವಿರುದ್ಧದ ಹಿಂಸಾಚಾರದಲ್ಲಿ ಮೈತೆ ಲೀಪುನ್ ಮತ್ತು ಅರಾಂಬೈ ತೆಂಗೋಲ್‌ನಂತಹ ಮೂಲಭೂತ ಗುಂಪುಗಳೊಂದಿಗೆ ಕೈಜೋಡಿಸಿದ್ದರಿಂದ ಹಿಂಸಾಚಾರ ಉಲ್ಬಣವಾಯಿತು ಎಂದು ಅವರು ಬರೆದಿದ್ದಾರೆ.

ನ್ಯೂಸ್‌ಲಾಂಡ್ರಿಗೆ ನೀಡಿರುವ ಸಂದರ್ಶನದಲ್ಲಿ ಅವರು, ಪ್ರಧಾನಿಗಳು ತಮ್ಮ ಆದ್ಯತೆಗಳನ್ನು ಪರಿಗಣಿಸುವುದರಲ್ಲಿ ಎಡವಿದ್ದಾರೆ. ನಾವು ಪ್ರಧಾನಿಯವರನ್ನು ಭೇಟಿಯಾಗಿ ಮಣಿಪುರದ ಸಮಸ್ಯೆಗಳನ್ನು ಮುಂದಿಡಲು ಪ್ರಯತ್ನಿಸುತ್ತಿದ್ದರೂ ಅವರು ಅದನ್ನು ತಪ್ಪಿಸಿಕೊಳ್ಳುತ್ತಿದ್ದಾರೆ. ಈಗಲೂ ಮಣಿಪುರದ ಹಿಂಸಾಚಾರದ ನಿಯಂತ್ರಣಕ್ಕೆ ಪ್ರಧಾನಿಗಳ ಮಧ್ಯಪ್ರವೇಶ ಅನಿವಾರ್ಯ ಎಂದು ಹೇಳಿದ್ದಾರೆ.

ಇದನ್ನೂ ಓದಿ; ‘ನಾನು ಕಂಡ ಅತ್ಯಂತ ಕೆಟ್ಟ ಪ್ರಧಾನಿ ಈ ಮೋದಿ’: ಸಚಿವ ಆರ್​.ಬಿ.ತಿಮ್ಮಾಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...