Homeಮುಖಪುಟಮೈತೇಯಿಗಳ ಜೊತೆ ಬಿರೇನ್ ಸಿಂಗ್ ಸರ್ಕಾರದ ಸಹಭಾಗಿತ್ವ: ಹಾಗಾಗಿ ಮಣಿಪುರ ಹಿಂಸಾಚಾರ ತಡೆಯಲಿಲ್ಲ ಎಂದ ಬಿಜೆಪಿ...

ಮೈತೇಯಿಗಳ ಜೊತೆ ಬಿರೇನ್ ಸಿಂಗ್ ಸರ್ಕಾರದ ಸಹಭಾಗಿತ್ವ: ಹಾಗಾಗಿ ಮಣಿಪುರ ಹಿಂಸಾಚಾರ ತಡೆಯಲಿಲ್ಲ ಎಂದ ಬಿಜೆಪಿ ಶಾಸಕ

ಪ್ರಧಾನಿಗಳು ತಮ್ಮ ಆದ್ಯತೆಗಳನ್ನು ಪರಿಗಣಿಸುವುದರಲ್ಲಿ ಎಡವಿದ್ದಾರೆ. ಅವರನ್ನು ಭೇಟಿಯಾಗಲು ಎಷ್ಟೇ ಪ್ರಯತ್ನ ಪಟ್ಟರೂ ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಮಣಿಪುರದಲ್ಲಿ ಮೇ 3 ರಿಂದ ಆರಂಭವಾದ ಜನಾಂಗೀಯ ಹಿಂಸಾಚಾರವನ್ನು ಕೂಡಲೇ ನಿಗ್ರಹಿಸಬಹುದಿತ್ತು. ಆದರೆ ಆ ಹಿಂಸಾಚಾರದಲ್ಲಿ ರಾಜ್ಯ ಸರ್ಕಾರದ ಸಹಭಾಗಿತ್ವವಿದ್ದ ಕಾರಣದಿಂದಲೇ ಅದು ಇಲ್ಲಿಯವರೆಗೂ ಬೆಳೆಯಿತು ಎಂದು ಸ್ವತಃ ಮಣಿಪುರದ ಬಿಜೆಪಿ ಶಾಸಕ ಪೋಲಿಯೆನ್‌ಲಾಲ್ ಹಾಕಿಪ್ ಆರೋಪಿಸಿದ್ದಾರೆ.

ಈ ಕುರಿತು ಇಂಡಿಯಾ ಟುಡೆ ಪತ್ರಿಕೆಗೆ ವಿವರವಾದ ಲೇಖನ ಬರೆದಿರುವ ಅವರು, ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದಾಗ ಅದನ್ನು ಜನಾಂಗೀಯ ಕೋಮು ಹಿಂಸಾಚಾರ ಎಂಬುದನ್ನು ಮರೆಮಾಚಲು ಸ್ವತಃ ಮುಖ್ಯಮಂತ್ರಿಗಳು ಡ್ರಗ್ಸ್ ವಿರುದ್ಧದ ಸಮರ ಎಂಬಂತೆ ತಪ್ಪಾಗಿ ಬಿಂಬಿಸಿದರು. ಅಲ್ಲಿಂದಲೇ ರಾಜ್ಯದಲ್ಲಿ ಜಟಿಲತೆ ಆರಂಭವಾಯಿತು. ಆನಂತರ ಕುಕಿ ಸಮುದಾಯದ ವಿರುದ್ಧ ಮೈತೇಯಿ ಸಮುದಾಯ ದಾಳಿ ಮಾಡಲು ರಾಜ್ಯ ಸರ್ಕಾರದ ಪಡೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿ ಶಾಸಕ ಪೋಲಿಯೆನ್‌ಲಾಲ್ ಹಾಕಿಪ್ ಸೇರಿದಂತೆ 10 ಶಾಸಕರು ಮೇ ತಿಂಗಳಿನಲ್ಲಿಯೇ ಹಿಂಸಾಚಾರವನ್ನು ತಡೆಯುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್‌ರವರಿಗೆ ಪತ್ರ ಬರೆದಿದ್ದರು. ಆ ಪತ್ರದಲ್ಲಿ ಬಹುಸಂಖ್ಯಾತ ಮೈತೇಯಿ ಸಮುದಾಯದವರು ಕುಕಿ ಸಮುದಾಯದ ಮೇಲೆ ಹಿಂಸಾಚಾರ ನಡೆಸುತ್ತಿದ್ದು ಅದನ್ನು ಬಿಜೆಪಿ ಆಡಳಿತ ಸರ್ಕಾರ ಮೌನವಾಗಿ ಬೆಂಬಲಿಸುತ್ತಿದೆ ಎಂದು ಆರೋಪಿಸಿದ್ದರು. ಹಿಂಸಾಚಾರವನ್ನು ತಹಬದಿಗೆ ತರಲು ‘ರಾಜ್ಯದಲ್ಲಿ ಕುಕಿ ಪ್ರಾಬಲ್ಯವಿರುವ ಜಿಲ್ಲೆಗಳಿಗೆ ಪ್ರತ್ಯೇಕ ಆಡಳಿತದ’ ಬೇಡಿಕೆ ಇಟ್ಟಿದ್ದರು. ಆದರೆ ರಾಜ್ಯದ ಸಮಗ್ರತೆಯ ವಿಚಾರ ಮುಂದಿಟ್ಟು ಆ ಬೇಡಿಕೆಯನ್ನು ಮುಖ್ಯಮಂತ್ರಿಗಳು ತಿರಸ್ಕರಿಸಿದ್ದರು.

ಆರಂಭದಲ್ಲಿ ಡ್ರಗ್ಸ್ ವಿರುದ್ಧದ ಯುದ್ಧ ಎಂಬರ್ಥದಲ್ಲಿ ಕುಕಿಗಳ ಮೇಲಿನ ದಾಳಿಗೆ ರಾಜ್ಯದ ಯಂತ್ರಾಂಗವನ್ನು ದುರಪಯೋಗಪಡಿಸಕೊಳ್ಳಲಾಯಿತು. ಅದು ಮುಂದುವರಿದು ಮೈತೇಯಿಗಳು ರಕ್ತಪಾತಕ್ಕೆ ಕಾರಣರಾದರು. ಅಲ್ಲದೇ ಸಂವಿಧಾನದ ಅಡಿಯಲ್ಲಿ ಹಕ್ಕುಗಳ ಮೇಲಿನ ದೀರ್ಘಕಾಲದ ಸಂಘರ್ಷವು ರಾಜ್ಯ ರಚನೆಯ ಪೂರ್ವದ ದಿನಗಳಿಂದಲೂ ಅಸ್ತಿತ್ವದಲ್ಲಿದೆ. ರಾಜ್ಯದ ಸಂಪತ್ತಿನ ಮೇಲಿನ ಹೆಚ್ಚಿನ ಹಿಡಿತ ಮೈತೇಯಿಗಳ ಕೈಯಲ್ಲಿದೆ. ಶಾಸನ ಸಭೆಗಳಲ್ಲಿಯೂ ಸಹ ಗುಡ್ಡಗಾಡು ಪ್ರದೇಶಗಳ ಸಮಿತಿಯ ಅಧಿಕಾರವನ್ನು ಕಿತ್ತುಕೊಳ್ಳಲಾಗಿದೆ. ಕುಕಿ ಸಮುದಾಯದ ಹಿಡಿತ ಹೊಂದಿದ್ದ ಬುಡಕಟ್ಟು ಭೂಮಿಗಳನ್ನು ಕಾಯ್ದಿರಿಸಿದ ಅರಣ್ಯಗಳು ಮತ್ತು ಸಂರಕ್ಷಿತ ಅರಣ್ಯಗಳಾಗಿ ಬದಲಾಯಿಸಲಾಗಿದೆ. ಅಲ್ಲದೇ ಜನಸಂಖ್ಯಾವಾರು ಮೀಸಲಾತಿ ಪರಿಚಯಿಸಲು ಮುಂದಾಗುತ್ತಿರುವುದು ಕುಕಿಗಳಿಗೆ ತಮ್ಮ ಅಸ್ತಿತ್ವದ ಪ್ರಶ್ನೆಯಾಗಿ ಕಂಡರೆ ಮೈತೇಯಿಗಳಿಗೆ ಕಣಿವೆ ಪ್ರದೇಶದ ಭೂಮಿಯ ಆಸೆಯಾಗಿ ಕಂಡಿದೆ ಎಂದು ಪೋಲಿಯೆನ್‌ಲಾಲ್ ಹಾಕಿಪ್ ಲೇಖನದಲ್ಲಿ ವಿವರಿಸಿದ್ದಾರೆ.

ರಾಜ್ಯದಲ್ಲಿ ಭ್ರಷ್ಟಾಚಾರವು ನಿರ್ವಹಿಸಲಾಗದ ಮಟ್ಟ ತಲುಪಿದೆ. ಇದರಿಂದ ಕುಕಿಗಳು ಅವಕಾಶ ವಂಚಿತರಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಆಳುವವರು ಪಕ್ಷಪಾತ ಮತ್ತು ತಾರತಮ್ಯ ಎಸಗಿದರು. ಮುಖ್ಯಮಂತ್ರಿ ಬಿರೇನ್ ಸಿಂಗ್ ಕುಕಿಗಳ ವಿರುದ್ಧದ ಹಿಂಸಾಚಾರದಲ್ಲಿ ಮೈತೆ ಲೀಪುನ್ ಮತ್ತು ಅರಾಂಬೈ ತೆಂಗೋಲ್‌ನಂತಹ ಮೂಲಭೂತ ಗುಂಪುಗಳೊಂದಿಗೆ ಕೈಜೋಡಿಸಿದ್ದರಿಂದ ಹಿಂಸಾಚಾರ ಉಲ್ಬಣವಾಯಿತು ಎಂದು ಅವರು ಬರೆದಿದ್ದಾರೆ.

ನ್ಯೂಸ್‌ಲಾಂಡ್ರಿಗೆ ನೀಡಿರುವ ಸಂದರ್ಶನದಲ್ಲಿ ಅವರು, ಪ್ರಧಾನಿಗಳು ತಮ್ಮ ಆದ್ಯತೆಗಳನ್ನು ಪರಿಗಣಿಸುವುದರಲ್ಲಿ ಎಡವಿದ್ದಾರೆ. ನಾವು ಪ್ರಧಾನಿಯವರನ್ನು ಭೇಟಿಯಾಗಿ ಮಣಿಪುರದ ಸಮಸ್ಯೆಗಳನ್ನು ಮುಂದಿಡಲು ಪ್ರಯತ್ನಿಸುತ್ತಿದ್ದರೂ ಅವರು ಅದನ್ನು ತಪ್ಪಿಸಿಕೊಳ್ಳುತ್ತಿದ್ದಾರೆ. ಈಗಲೂ ಮಣಿಪುರದ ಹಿಂಸಾಚಾರದ ನಿಯಂತ್ರಣಕ್ಕೆ ಪ್ರಧಾನಿಗಳ ಮಧ್ಯಪ್ರವೇಶ ಅನಿವಾರ್ಯ ಎಂದು ಹೇಳಿದ್ದಾರೆ.

ಇದನ್ನೂ ಓದಿ; ‘ನಾನು ಕಂಡ ಅತ್ಯಂತ ಕೆಟ್ಟ ಪ್ರಧಾನಿ ಈ ಮೋದಿ’: ಸಚಿವ ಆರ್​.ಬಿ.ತಿಮ್ಮಾಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...