Homeಮುಖಪುಟಮೈತೇಯಿಗಳ ಜೊತೆ ಬಿರೇನ್ ಸಿಂಗ್ ಸರ್ಕಾರದ ಸಹಭಾಗಿತ್ವ: ಹಾಗಾಗಿ ಮಣಿಪುರ ಹಿಂಸಾಚಾರ ತಡೆಯಲಿಲ್ಲ ಎಂದ ಬಿಜೆಪಿ...

ಮೈತೇಯಿಗಳ ಜೊತೆ ಬಿರೇನ್ ಸಿಂಗ್ ಸರ್ಕಾರದ ಸಹಭಾಗಿತ್ವ: ಹಾಗಾಗಿ ಮಣಿಪುರ ಹಿಂಸಾಚಾರ ತಡೆಯಲಿಲ್ಲ ಎಂದ ಬಿಜೆಪಿ ಶಾಸಕ

ಪ್ರಧಾನಿಗಳು ತಮ್ಮ ಆದ್ಯತೆಗಳನ್ನು ಪರಿಗಣಿಸುವುದರಲ್ಲಿ ಎಡವಿದ್ದಾರೆ. ಅವರನ್ನು ಭೇಟಿಯಾಗಲು ಎಷ್ಟೇ ಪ್ರಯತ್ನ ಪಟ್ಟರೂ ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಮಣಿಪುರದಲ್ಲಿ ಮೇ 3 ರಿಂದ ಆರಂಭವಾದ ಜನಾಂಗೀಯ ಹಿಂಸಾಚಾರವನ್ನು ಕೂಡಲೇ ನಿಗ್ರಹಿಸಬಹುದಿತ್ತು. ಆದರೆ ಆ ಹಿಂಸಾಚಾರದಲ್ಲಿ ರಾಜ್ಯ ಸರ್ಕಾರದ ಸಹಭಾಗಿತ್ವವಿದ್ದ ಕಾರಣದಿಂದಲೇ ಅದು ಇಲ್ಲಿಯವರೆಗೂ ಬೆಳೆಯಿತು ಎಂದು ಸ್ವತಃ ಮಣಿಪುರದ ಬಿಜೆಪಿ ಶಾಸಕ ಪೋಲಿಯೆನ್‌ಲಾಲ್ ಹಾಕಿಪ್ ಆರೋಪಿಸಿದ್ದಾರೆ.

ಈ ಕುರಿತು ಇಂಡಿಯಾ ಟುಡೆ ಪತ್ರಿಕೆಗೆ ವಿವರವಾದ ಲೇಖನ ಬರೆದಿರುವ ಅವರು, ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದಾಗ ಅದನ್ನು ಜನಾಂಗೀಯ ಕೋಮು ಹಿಂಸಾಚಾರ ಎಂಬುದನ್ನು ಮರೆಮಾಚಲು ಸ್ವತಃ ಮುಖ್ಯಮಂತ್ರಿಗಳು ಡ್ರಗ್ಸ್ ವಿರುದ್ಧದ ಸಮರ ಎಂಬಂತೆ ತಪ್ಪಾಗಿ ಬಿಂಬಿಸಿದರು. ಅಲ್ಲಿಂದಲೇ ರಾಜ್ಯದಲ್ಲಿ ಜಟಿಲತೆ ಆರಂಭವಾಯಿತು. ಆನಂತರ ಕುಕಿ ಸಮುದಾಯದ ವಿರುದ್ಧ ಮೈತೇಯಿ ಸಮುದಾಯ ದಾಳಿ ಮಾಡಲು ರಾಜ್ಯ ಸರ್ಕಾರದ ಪಡೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿ ಶಾಸಕ ಪೋಲಿಯೆನ್‌ಲಾಲ್ ಹಾಕಿಪ್ ಸೇರಿದಂತೆ 10 ಶಾಸಕರು ಮೇ ತಿಂಗಳಿನಲ್ಲಿಯೇ ಹಿಂಸಾಚಾರವನ್ನು ತಡೆಯುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್‌ರವರಿಗೆ ಪತ್ರ ಬರೆದಿದ್ದರು. ಆ ಪತ್ರದಲ್ಲಿ ಬಹುಸಂಖ್ಯಾತ ಮೈತೇಯಿ ಸಮುದಾಯದವರು ಕುಕಿ ಸಮುದಾಯದ ಮೇಲೆ ಹಿಂಸಾಚಾರ ನಡೆಸುತ್ತಿದ್ದು ಅದನ್ನು ಬಿಜೆಪಿ ಆಡಳಿತ ಸರ್ಕಾರ ಮೌನವಾಗಿ ಬೆಂಬಲಿಸುತ್ತಿದೆ ಎಂದು ಆರೋಪಿಸಿದ್ದರು. ಹಿಂಸಾಚಾರವನ್ನು ತಹಬದಿಗೆ ತರಲು ‘ರಾಜ್ಯದಲ್ಲಿ ಕುಕಿ ಪ್ರಾಬಲ್ಯವಿರುವ ಜಿಲ್ಲೆಗಳಿಗೆ ಪ್ರತ್ಯೇಕ ಆಡಳಿತದ’ ಬೇಡಿಕೆ ಇಟ್ಟಿದ್ದರು. ಆದರೆ ರಾಜ್ಯದ ಸಮಗ್ರತೆಯ ವಿಚಾರ ಮುಂದಿಟ್ಟು ಆ ಬೇಡಿಕೆಯನ್ನು ಮುಖ್ಯಮಂತ್ರಿಗಳು ತಿರಸ್ಕರಿಸಿದ್ದರು.

ಆರಂಭದಲ್ಲಿ ಡ್ರಗ್ಸ್ ವಿರುದ್ಧದ ಯುದ್ಧ ಎಂಬರ್ಥದಲ್ಲಿ ಕುಕಿಗಳ ಮೇಲಿನ ದಾಳಿಗೆ ರಾಜ್ಯದ ಯಂತ್ರಾಂಗವನ್ನು ದುರಪಯೋಗಪಡಿಸಕೊಳ್ಳಲಾಯಿತು. ಅದು ಮುಂದುವರಿದು ಮೈತೇಯಿಗಳು ರಕ್ತಪಾತಕ್ಕೆ ಕಾರಣರಾದರು. ಅಲ್ಲದೇ ಸಂವಿಧಾನದ ಅಡಿಯಲ್ಲಿ ಹಕ್ಕುಗಳ ಮೇಲಿನ ದೀರ್ಘಕಾಲದ ಸಂಘರ್ಷವು ರಾಜ್ಯ ರಚನೆಯ ಪೂರ್ವದ ದಿನಗಳಿಂದಲೂ ಅಸ್ತಿತ್ವದಲ್ಲಿದೆ. ರಾಜ್ಯದ ಸಂಪತ್ತಿನ ಮೇಲಿನ ಹೆಚ್ಚಿನ ಹಿಡಿತ ಮೈತೇಯಿಗಳ ಕೈಯಲ್ಲಿದೆ. ಶಾಸನ ಸಭೆಗಳಲ್ಲಿಯೂ ಸಹ ಗುಡ್ಡಗಾಡು ಪ್ರದೇಶಗಳ ಸಮಿತಿಯ ಅಧಿಕಾರವನ್ನು ಕಿತ್ತುಕೊಳ್ಳಲಾಗಿದೆ. ಕುಕಿ ಸಮುದಾಯದ ಹಿಡಿತ ಹೊಂದಿದ್ದ ಬುಡಕಟ್ಟು ಭೂಮಿಗಳನ್ನು ಕಾಯ್ದಿರಿಸಿದ ಅರಣ್ಯಗಳು ಮತ್ತು ಸಂರಕ್ಷಿತ ಅರಣ್ಯಗಳಾಗಿ ಬದಲಾಯಿಸಲಾಗಿದೆ. ಅಲ್ಲದೇ ಜನಸಂಖ್ಯಾವಾರು ಮೀಸಲಾತಿ ಪರಿಚಯಿಸಲು ಮುಂದಾಗುತ್ತಿರುವುದು ಕುಕಿಗಳಿಗೆ ತಮ್ಮ ಅಸ್ತಿತ್ವದ ಪ್ರಶ್ನೆಯಾಗಿ ಕಂಡರೆ ಮೈತೇಯಿಗಳಿಗೆ ಕಣಿವೆ ಪ್ರದೇಶದ ಭೂಮಿಯ ಆಸೆಯಾಗಿ ಕಂಡಿದೆ ಎಂದು ಪೋಲಿಯೆನ್‌ಲಾಲ್ ಹಾಕಿಪ್ ಲೇಖನದಲ್ಲಿ ವಿವರಿಸಿದ್ದಾರೆ.

ರಾಜ್ಯದಲ್ಲಿ ಭ್ರಷ್ಟಾಚಾರವು ನಿರ್ವಹಿಸಲಾಗದ ಮಟ್ಟ ತಲುಪಿದೆ. ಇದರಿಂದ ಕುಕಿಗಳು ಅವಕಾಶ ವಂಚಿತರಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಆಳುವವರು ಪಕ್ಷಪಾತ ಮತ್ತು ತಾರತಮ್ಯ ಎಸಗಿದರು. ಮುಖ್ಯಮಂತ್ರಿ ಬಿರೇನ್ ಸಿಂಗ್ ಕುಕಿಗಳ ವಿರುದ್ಧದ ಹಿಂಸಾಚಾರದಲ್ಲಿ ಮೈತೆ ಲೀಪುನ್ ಮತ್ತು ಅರಾಂಬೈ ತೆಂಗೋಲ್‌ನಂತಹ ಮೂಲಭೂತ ಗುಂಪುಗಳೊಂದಿಗೆ ಕೈಜೋಡಿಸಿದ್ದರಿಂದ ಹಿಂಸಾಚಾರ ಉಲ್ಬಣವಾಯಿತು ಎಂದು ಅವರು ಬರೆದಿದ್ದಾರೆ.

ನ್ಯೂಸ್‌ಲಾಂಡ್ರಿಗೆ ನೀಡಿರುವ ಸಂದರ್ಶನದಲ್ಲಿ ಅವರು, ಪ್ರಧಾನಿಗಳು ತಮ್ಮ ಆದ್ಯತೆಗಳನ್ನು ಪರಿಗಣಿಸುವುದರಲ್ಲಿ ಎಡವಿದ್ದಾರೆ. ನಾವು ಪ್ರಧಾನಿಯವರನ್ನು ಭೇಟಿಯಾಗಿ ಮಣಿಪುರದ ಸಮಸ್ಯೆಗಳನ್ನು ಮುಂದಿಡಲು ಪ್ರಯತ್ನಿಸುತ್ತಿದ್ದರೂ ಅವರು ಅದನ್ನು ತಪ್ಪಿಸಿಕೊಳ್ಳುತ್ತಿದ್ದಾರೆ. ಈಗಲೂ ಮಣಿಪುರದ ಹಿಂಸಾಚಾರದ ನಿಯಂತ್ರಣಕ್ಕೆ ಪ್ರಧಾನಿಗಳ ಮಧ್ಯಪ್ರವೇಶ ಅನಿವಾರ್ಯ ಎಂದು ಹೇಳಿದ್ದಾರೆ.

ಇದನ್ನೂ ಓದಿ; ‘ನಾನು ಕಂಡ ಅತ್ಯಂತ ಕೆಟ್ಟ ಪ್ರಧಾನಿ ಈ ಮೋದಿ’: ಸಚಿವ ಆರ್​.ಬಿ.ತಿಮ್ಮಾಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...