Homeಮುಖಪುಟಮಣಿಪುರ ಹಿಂಸಾಚಾರ: ಸಿಆರ್‌ಪಿಎಫ್‌ ಯೋಧನಿಗೆ ಗುಂಡಿಕ್ಕಿ ಹತ್ಯೆ

ಮಣಿಪುರ ಹಿಂಸಾಚಾರ: ಸಿಆರ್‌ಪಿಎಫ್‌ ಯೋಧನಿಗೆ ಗುಂಡಿಕ್ಕಿ ಹತ್ಯೆ

- Advertisement -
- Advertisement -

ಮಣಿಪುರದ ಚುರಾಚಂದ್‌ಪುರ ಜಿಲ್ಲೆಯ ತನ್ನ ಮನೆಗೆ ರಜೆಯ ಮೇಲೆ ತೆರಳಿದ್ದ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್‌) ಕೋಬ್ರಾ ಘಟಕದ ಕಮಾಂಡೋ ಒಬ್ಬರನ್ನು ಶುಕ್ರವಾರ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

204ನೇ ಕೋಬ್ರಾ ಬೆಟಾಲಿಯನ್‌ನ ಡೆಲ್ಟಾ ಕಂಪನಿಯ ಕಾನ್‌ಸ್ಟೆಬಲ್ ಚೋನ್‌ಖೋಲೆನ್ ಹಾಕಿಪ್ ಅವರನ್ನು ಶುಕ್ರವಾರ ಮಧ್ಯಾಹ್ನ 2 ರಿಂದ 3 ಗಂಟೆಯ ನಡುವೆ ಕೊಲ್ಲಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೆಂಟ್ರಲ್ ರಿಸರ್ವ್ ಪೋಲೀಸ್ ಫೋರ್ಸ್‌ನ ಕೋಬ್ರಾ ಬೆಟಾಲಿಯನ್‌ನ ಕಂಟ್ರೋಲ್ ರೂಮ್‌ಗೆ ಸಂಜೆ 5.50 ವೇಳೆಗೆ ಹಾಕಿಪ್ ಸಾವಿನ ಬಗ್ಗೆ ಅವರ ಸಹೋದರನಿಂದ ಮಾಹಿತಿ ಸಿಕ್ಕಿದೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಮಣಿಪುರದಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವಿನ ಹಿಂಸಾಚಾರ ತಾರಕಕ್ಕೇರಿದೆ. ಬುಧವಾರದಿಂದ ಇಲ್ಲಿಯವರಿಗೆ ಕನಿಷ್ಠ 13 ಜೀವಗಳನ್ನು ಬಲಿ ತೆಗೆದುಕೊಂಡಿದೆ ಎಂದು ಇಂಫಾಲ್‌ನ ಪ್ರಾದೇಶಿಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಹಿರಿಯ ಅಧಿಕಾರಿ ಶುಕ್ರವಾರ ಮಧ್ಯಾಹ್ನ ‘ಸ್ಕ್ರಾಲ್‌’ಗೆ ತಿಳಿಸಿದ್ದಾರೆ.

ಇದನ್ನೂ ಓದಿರಿ: ದಾಖಲೆ ರಹಿತ ವಲಸಿಗರ ಪತ್ತೆಗೆ ಮನೆಮನೆ ಸರ್ವೇ: ಮಣಿಪುರ ಸರ್ಕಾರ

ಮಣಿಪುರದ 16 ಜಿಲ್ಲೆಗಳ ಪೈಕಿ ಒಂಬತ್ತು ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಸುಮಾರು 20,000 ಜನರು ನಿರಾಶ್ರಿತರಾಗಿದ್ದಾರೆ ಮತ್ತು ರಾಜ್ಯದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿಸಬೇಕೆಂಬ ಬಹುಸಂಖ್ಯಾತ ಮೈತೇಯಿ ಸಮುದಾಯದ ಬೇಡಿಕೆಯನ್ನು ವಿರೋಧಿಸಿ ಮಣಿಪುರದ ಎಲ್ಲಾ ಬುಡಕಟ್ಟು ವಿದ್ಯಾರ್ಥಿಗಳ ಒಕ್ಕೂಟವು ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ ನಂತರ ಬುಧವಾರ ಹಿಂಸಾಚಾರ ಭುಗಿಲೆದ್ದಿತು.

ಕಳೆದ ತಿಂಗಳು ವಿಚಾರಣೆಯನ್ನು ನಡೆಸಿದ ಮಣಿಪುರ ಉಚ್ಚ ನ್ಯಾಯಾಲಯವು, ಮೈತೇಯಿ ಸಮುದಾಯದ ಬೇಡಿಕೆಯ ಅರ್ಜಿಗಳನ್ನು ಪರಿಗಣಿಸಲು ಮತ್ತು ಅದನ್ನು “ತ್ವರಿತವಾಗಿ” ವಿಲೇವಾರಿ ಮಾಡಲು ಬಿಜೆಪಿ ಸರ್ಕಾರಕ್ಕೆ ಸೂಚಿಸಿತ್ತು.

ಹಾಕಿಪ್‌ನ ಹತ್ಯೆಯ ಹಿನ್ನೆಲೆಯಲ್ಲಿ, ಕೇಂದ್ರೀಯ ಮೀಸಲು ಪೊಲೀಸ್ ಪಡೆ ಶುಕ್ರವಾರ ಮಣಿಪುರದ ತನ್ನ ಎಲ್ಲಾ ಸಿಬ್ಬಂದಿಗೆ ಸಂದೇಶವನ್ನು ರವಾನಿಸಿದೆ. ರಜೆಯಲ್ಲಿ ಇರುವ ಎಲ್ಲಾ ಸಿಬ್ಬಂದಿ ತಮ್ಮ ಕುಟುಂಬ ಸದಸ್ಯರೊಂದಿಗೆ ಹತ್ತಿರದ ಭದ್ರತಾ ನೆಲೆಗೆ ಬಂದು ತಕ್ಷಣ ವರದಿ ಮಾಡಬೇಕೆಂದು ಸೂಚಿಸಲಾಗಿದೆ. ಅಂತಹ ಸಿಬ್ಬಂದಿಗೆ ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಸಿಆರ್‌ಪಿಎಫ್‌ನ ನಾಗಾಲ್ಯಾಂಡ್ ಸೆಕ್ಟರ್ ಆಫೀಸ್‌ಗೆ ತಿಳಿಸಲಾಗಿದೆ.

ಶುಕ್ರವಾರ ಮುಂಜಾನೆ, ಉಗ್ರಗಾಮಿ ಗುಂಪುಗಳು ಮತ್ತು ಭದ್ರತಾ ಪಡೆಗಳ ನಡುವೆ ಮಧ್ಯಂತರ ಗುಂಡಿನ ಚಕಮಕಿಗಳು ನಡೆದಿವೆ. ಚುರಾಚಂದ್‌ಪುರ ಜಿಲ್ಲೆಯ ಕಾಂಗ್‌ವೈ, ಪಕ್ಕದ ಬಿಷ್ಣುಪುರ ಜಿಲ್ಲೆಯ ಫೌಗಕ್‌ಚಾವೊದ ಪಶ್ಚಿಮ ಗುಡ್ಡಗಾಡು, ಇಂಫಾಲ್ ಪೂರ್ವ ಜಿಲ್ಲೆಯ ದೋಲೈತಾಬಿ ಮತ್ತು ಪುಖಾವೊದಲ್ಲಿ ಗುಂಡಿನ ಘರ್ಷಣೆಗಳು ವರದಿಯಾಗಿವೆ.

ಇದನ್ನೂ ಓದಿರಿ: ಮಣಿಪುರ ಹಿಂಸಾಚಾರ: ರೈಲು ಸಂಚಾರ, ಇಂಟರ್ನೆಟ್ ಸ್ಥಗಿತ

ಸೇನೆ ಮತ್ತು ಅಸ್ಸಾಂ ರೈಫಲ್ಸ್‌ನ 6,000 ಕ್ಕೂ ಹೆಚ್ಚು ಸೈನಿಕರನ್ನು ರಾಜ್ಯದಲ್ಲಿ ನಿಯೋಜಿಸಲಾಗಿದೆ. ರಾಜ್ಯದ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಕೇಂದ್ರದ ಕ್ಷಿಪ್ರ ಕಾರ್ಯಪಡೆಯ ತಂಡಗಳು ಧಾವಿಸಿವೆ.

ಮಣಿಪುರದ ಜನಸಂಖ್ಯೆಯ 60% ರಷ್ಟಿರುವ ಮೈತೇಯಿ ಸಮುದಾಯದ ಸದಸ್ಯರು ಹೆಚ್ಚಾಗಿ ಇಂಫಾಲ್ ಕಣಿವೆಯಲ್ಲಿ ಇದ್ದಾರೆ. ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶಿ ಪ್ರಜೆಗಳಿಂದ ದೊಡ್ಡ ಪ್ರಮಾಣದ ಅಕ್ರಮ ವಲಸೆಯಿಂದಾಗಿ ತೊಂದರೆಗಳನ್ನು ಎದುರಿಸುತ್ತಿರುವುದಾಗಿ ಸಮುದಾಯವು ಹೇಳಿಕೊಂಡಿದೆ. ಅಸ್ತಿತ್ವದಲ್ಲಿರುವ ಕಾನೂನುಗಳ ಪ್ರಕಾರ ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ನೆಲೆಸಲು ವಲಸಿಗರಿಗೆ ಅವಕಾಶವಿಲ್ಲ.

ಪರಿಶಿಷ್ಟ ಪಂಗಡದ ಸ್ಥಾನಮಾನವನ್ನು ನೀಡಿದರೆ ಮೈತೇಯಿ ತಮ್ಮ ಭೂ ಸಂಪನ್ಮೂಲಗಳನ್ನು ಸ್ವಾಧೀನ ಮಾಡಿಕೊಳ್ಳಬಹುದು ಎಂದು ಕುಕಿ ಸಮುದಾಯ ಆತಂಕಗೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...

ದೆಹಲಿ ಫೈಜ್-ಎ-ಇಲಾಹಿ ಮಸೀದಿ ಬಳಿ ತೆರವು ಕಾರ್ಯಾಚರಣೆಗೆ ಸ್ಥಳೀಯರಿಂದ ವಿರೋಧ, ಉದ್ವಿಗ್ನತೆ; ಅಶ್ರುವಾಯು ಪ್ರಯೋಗ, 10 ಜನರ ಬಂಧನ

ದೆಹಲಿಯ ತುರ್ಕಮನ್ ಗೇಟ್-ರಾಮ್ಲೀಲಾ ಮೈದಾನ ಪ್ರದೇಶದಲ್ಲಿರುವ ಶತಮಾನಗಳಷ್ಟು ಹಳೆಯದಾದ ಫೈಜ್-ಎ-ಇಲಾಹಿ ಮಸೀದಿಯ ಬಳಿ ಬುಧವಾರ ಮುಂಜಾನೆ ನಡೆದ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಆ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ, ಇದು...