Homeಮುಖಪುಟಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಗುಂಡಿನ ದಾಳಿಗೆ ನಾಲ್ವರು ಬಲಿ, 5 ಜಿಲ್ಲೆಗಳಲ್ಲಿ ಕರ್ಫ್ಯೂ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಗುಂಡಿನ ದಾಳಿಗೆ ನಾಲ್ವರು ಬಲಿ, 5 ಜಿಲ್ಲೆಗಳಲ್ಲಿ ಕರ್ಫ್ಯೂ

- Advertisement -
- Advertisement -

ಸುದೀರ್ಘ ಜನಾಂಗೀಯ ಸಂಘರ್ಷದ ಬಳಿಕ ಶಾಂತತೆಗೆ ಮರಳುತ್ತಿದ್ದ ಈಶಾನ್ಯ ರಾಜ್ಯ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಮರುಕಳಿಸಿದೆ. ಜನವರಿ 1ರಂದು, ಮಣಿಪುರದ ತೌಬಲ್ ಜಿಲ್ಲೆಯಲ್ಲಿ ನಾಲ್ಕು ಜನರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಮತ್ತು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮತ್ತೆ ಹಿಂಸಾಚಾರದ ಘಟನೆಯ ಹಿನ್ನೆಲೆ ರಾಜ್ಯದ ಐದು ಕಣಿವೆ ಜಿಲ್ಲೆಗಳಾದ ತೌಬಾಲ್, ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ, ಕಕ್ಚಿಂಗ್ ಮತ್ತು ಬಿಷ್ಣುಪುರಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ.

ಕರ್ಫ್ಯೂ ಸಡಿಲಿಕೆ ಆದೇಶವನ್ನು ರದ್ದುಪಡಿಸಲಾಗಿದೆ ಮತ್ತು ತೌಬಲ್ ಜಿಲ್ಲಾ ವ್ಯಾಪ್ತಿಯಲ್ಲಿ ಸಂಪೂರ್ಣ ಕರ್ಫ್ಯೂ ವಿಧಿಸಲಾಗಿದೆ. ಜಿಲ್ಲಾದ್ಯಂತ ಅಲ್ಲಿನ ನಿವಾಸಿಗಳು ಹೊರತು, ಹೊರಗಿನವರ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಎ ಸುಭಾಷ್ ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ. ಆರೋಗ್ಯ ಸಿಬ್ಬಂದಿ, ಸರ್ಕಾರಿ ಅಧಿಕಾರಿಗಳು, ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮ, ನ್ಯಾಯಾಲಯಗಳ ಸಿಬ್ಬಂದಿ ಸೇರಿದಂತೆ ಅತ್ಯಗತ್ಯ ಸೇವೆ ಮತ್ತು ವ್ಯಕ್ತಿಗಳಿಗೆ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.

ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ತೌಬಲ್‌ ಜಿಲ್ಲೆಯ ಲಿಲಾಂಗ್‌ನಲ್ಲಿ ಗುಂಡಿನ ದಾಳಿ ನಡೆದು ಐವರು ಮೃತಪಟ್ಟಿರುವ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಅಪರಿಚಿತ ಮುಸುಕುಧಾರಿಗಳು ಲಿಲಾಂಗ್ ಚಿಂಗ್ಜಾವೊ ಪ್ರದೇಶದಲ್ಲಿ ಏಕಾಏಕಿ ಸ್ಥಳೀಯರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ.

ವರದಿಗಳ ಪ್ರಕಾರ, ದಾಳಿಕೋರರು ಸ್ಥಳೀಯ ವ್ಯಕ್ತಿಯಿಂದ ಹಣ ವಸೂಲಿ ಮಾಡಲು ಬಂದಿದ್ದರು. ಈ ವೇಳೆ ಸ್ಥಳೀಯರು ಅವರನ್ನು ಓಡಿಸಿದ್ದಾರೆ. ಹಿಂದಿರುಗಿ ಹೋಗುವ ವೇಳೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಇದರಿಂದ ನಾಲ್ವವರು ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿವೆ. ಘಟನೆಯ ನಂತರ ಆಕ್ರೋಶಗೊಂಡ ಸ್ಥಳೀಯರು ದಾಳಿಕೋರರು ಆಗಮಿಸಿದ್ದ ನಾಲ್ಕು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಅವು ಯಾರಿಗೆ ಸೇರಿದ್ದು ಎಂಬುದು ತಿಳಿದುಬಂದಿಲ್ಲ.

ಹಿಂಸಾಚಾರದ ಮರುಕಳಿಸಿರುವ ಬಗ್ಗೆ ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಕಳವಳ ವ್ಯಕ್ತಪಡಿಸಿದ್ದಾರೆ. ಜನರು, ವಿಶೇಷವಾಗಿ ಲಿಲಾಂಗ್ ನಿವಾಸಿಗಳಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ಲಿಲಾಂಗ್‌ನಲ್ಲಿ ಗುಂಡಿನ ದಾಳಿ ಘಟನೆಯ ಹಿಂದಿರುವವರನ್ನು ಬಂಧಿಸಲು ಪೊಲೀಸರು ಕಾರ್ಯಪ್ರವೃತ್ತರಾಗಿದ್ದು, ಶೀಘ್ರವೇ ಬಂಧಿಸಿ ಕಾನೂನು ಪ್ರಕಾರ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಲಿಲಾಂಗ್ ಕ್ಷೇತ್ರದ ಶಾಸಕ ಅಬ್ದುಲ್ ನಾಸಿರ್ ಅವರು ಪರಿಸ್ಥಿತಿಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ತನಗೆ ತಿಳಿಸಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು. ಈ ಪ್ರದೇಶದಲ್ಲಿ ಭದ್ರತೆ ಬಲಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಡಿಸೆಂಬರ್ 30,2023ರಂದು ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೈತೇಯಿ ಮತ್ತು ಕುಕಿ ಗುಂಪುಗಳ ನಡುವೆ ಹಿಂಸಾಚಾರ ನಡೆದಿತ್ತು. ಇದರಲ್ಲಿ ಮೈತೇಯಿ ಗುಂಪಿನ ಒಬ್ಬರು ಮೃತಪಟ್ಟಿದ್ದರು. ಮತ್ತೊಂದು ಕಲಹ ಗಡಿ ಪಟ್ಟಣವಾದ ಮೋರೆಯಲ್ಲಿ ಮಣಿಪುರ ಪೊಲೀಸ್ ಕಮಾಂಡೋಗಳು ಮತ್ತು ಬಂಡುಕೋರರ ನಡುವೆ ನಡೆದಿತ್ತು. ಇದರಲ್ಲಿ ಒಬ್ಬರು ಕಮಾಂಡೋ ಸಿಬ್ಬಂದಿ ಗುಂಡಿನ ದಾಳಿಯಿಂದ ಗಾಯಗೊಂಡಿದ್ದರು.

ತಂಬ್‌ನೈಲ್ ಫೈಲ್ ಫೋಟೋ

ಇದನ್ನೂ ಓದಿ: 1992ರ ಹುಬ್ಬಳ್ಳಿ ಹಿಂಸಾಚಾರ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...