Homeಮುಖಪುಟಮಣಿಪುರ ಹಿಂಸಾಚಾರ: ತಗ್ಗದ ಸಾವು ನೋವು, ಅಮಿತ್ ಷಾ ಭೇಟಿ

ಮಣಿಪುರ ಹಿಂಸಾಚಾರ: ತಗ್ಗದ ಸಾವು ನೋವು, ಅಮಿತ್ ಷಾ ಭೇಟಿ

- Advertisement -
- Advertisement -

ಪರಿಶಿಷ್ಟ ಪಂಗಡದ ಮೀಸಲಾತಿ ವಿಚಾರವಾಗಿ ಕುಕಿ ಮತ್ತು ಮೈಥೇಯಿ ಸಮುದಾಯದ ನಡುವೆ ಮಣಿಪುರದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ತೀವ್ರ ಸ್ವರೂಪ ಪಡೆಯುತ್ತಿರುವ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ರಾಜ್ಯಕ್ಕೆ ಬುಧವಾರ ಭೇಟಿ ನೀಡಿದ್ದಾರೆ.

ತಮ್ಮ ಭೇಟಿಯ ವೇಳೆ, ಕೇಂದ್ರ ಸಚಿವ ಅಮಿತ್ ಶಾ ಅವರು, “ಸಾಧ್ಯವಾದಷ್ಟು ಬೇಗ ಮಣಿಪುರದಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಸ್ಥಳಾಂತರಗೊಂಡ ಜನರನ್ನು ಅವರ ಮನೆಗಳಿಗೆ ಕರೆತರಲು ನಾವು ಬದ್ಧರಾಗಿದ್ದೇವೆ” ಎಂದು ತಿಳಿಸಿದ್ದಾರೆ.

ಅಮಿತ್ ಶಾ ಅವರು ಬುಧವಾರ ಮಣಿಪುರದ ಮೊರೆಹ್‌ನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಮಣಿಪುರದ ಕುಕಿ ಮತ್ತು ಮೈತೇಯಿ ಸಮುದಾಯಗಳ ಶಿಬಿರಗಳಿಗೆ ಭೇಟಿ ನೀಡಿದ ನಂತರ ಅವರು ಪ್ರತಿಕ್ರಿಯಿಸಿದ್ದಾರೆ.

“ಕಾಂಗ್ಪೊಕ್ಪಿಯಲ್ಲಿನ ಪರಿಹಾರ ಶಿಬಿರಕ್ಕೆ ಭೇಟಿ ನೀಡಿ ಅಲ್ಲಿನ ಕುಕಿ ಸಮುದಾಯದ ಸದಸ್ಯರನ್ನು ಭೇಟಿ ಮಾಡಿದ್ದೇವೆ. ಮಣಿಪುರದಲ್ಲಿ ಆದಷ್ಟು ಬೇಗ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಅವರನ್ನು ಮನೆಗಳಿಗೆ ಸುರಕ್ಷಿತವಾಗಿ ಕಳುಹಿಸಲು ನಾವು ಬದ್ಧರಾಗಿದ್ದೇವೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಗೃಹ ಸಚಿವರು ಮಣಿಪುರದ ಕಾಂಗ್‌ಪೋಕ್ಪಿಯಲ್ಲಿ ನಾಗರಿಕ ಸಮಾಜ ಸಂಘಟನೆಗಳೊಂದಿಗೆ ಸಭೆಯನ್ನು ಕರೆದಿದ್ದಾರೆ. “ಮಣಿಪುರದಲ್ಲಿ ಸಮುದಾಯಗಳ ನಡುವೆ ಸಾಮರಸ್ಯವನ್ನು ಪುನರುಜ್ಜೀವನಗೊಳಿಸುವಲ್ಲಿ ಸರ್ಕಾರದೊಂದಿಗೆ ಸಕ್ರಿಯವಾಗಿ ಭಾಗವಹಿಸಲು ಅವರು ಉತ್ಸುಕರಾಗಿದ್ದಾರೆ” ಎಂದು ಹೇಳಿದ್ದಾರೆ.

ಆದರೆ ಮಣಿಪುರದ ಗುಡ್ಡಗಾಡು ಜಿಲ್ಲೆಗಳು ಮತ್ತು ತಪ್ಪಲಿನ ಪ್ರದೇಶಗಳಲ್ಲಿನ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇತ್ತೀಚಿನ ವರದಿಗಳು ಬಂದಿವೆ.

ತೀವ್ರ ಸ್ವರೂಪ ಪಡೆದಿರುವ ಕಲಹದಲ್ಲಿ ವಿದ್ಯಾರ್ಥಿ ನಾಯಕನಿಂದ ಹಿಡಿದು ವಯಸ್ಸಾದ ಮಹಿಳೆಯವರೆಗೆ ಸಾವಿಗೀಡಾಗಿದ್ದಾರೆ. ಆದರೆ ನವೀಕರಿಸಲ್ಪಷ್ಟ ಸಾವಿನ ಸಂಖ್ಯೆಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ‘ಇಂಡಿಯನ್‌ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಭಾನುವಾರ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಬಿರೇನ್ ಸಿಂಗ್, ಪರಿಸ್ಥಿತಿಯನ್ನು ಹತೋಟಿಗೆ ತರುವ ಕಾರ್ಯಾಚರಣೆಯ ಭಾಗವಾಗಿ 40 ಭಯೋತ್ಪಾದಕರನ್ನು ಕೊಲ್ಲಲಾಗಿದೆ ಎಂದು ಹೇಳಿದ್ದರು. ಆದರೆ ಸತ್ತವರ ಗುರುತು ಮತ್ತು ಸಾವು ಸಂಭವಿಸಿದ ಸಮಯವನ್ನು ಬಹಿರಂಗಪಡಿಸಿಲ್ಲ.

ಇತ್ತೀಚಿನ ಸುತ್ತಿನ ಹಿಂಸಾಚಾರದಲ್ಲಿ ಸತ್ತವರ ಪೈಕಿ ಜೇಕಬ್‌ ಜಮ್ಖೋಥಾಂಗ್ ಟೌತಾಂಗ್ (37) ಎಂಬವರು ಸೇರಿದ್ದಾರೆ. ಮೇ 27 ರಂದು ಸಂಜೆ ಬಿಷ್ಣುಪುರ ಕಣಿವೆ ಜಿಲ್ಲೆಯ ಗಡಿಯಲ್ಲಿರುವ ಚವಾಂಗ್‌ಫೈ ಗ್ರಾಮದಲ್ಲಿ ಅವರನ್ನು ಕೊಲ್ಲಲಾಗಿದೆ.

ಇದನ್ನೂ ಓದಿರಿ: ಜ್ಞಾನವಾಪಿ ಮಸೀದಿ ಸಮಿತಿಯ ಅರ್ಜಿ ವಜಾ; ಅಲಹಾಬಾದ್ ಹೈಕೋರ್ಟ್ ತೀರ್ಪು

ರಾಜ್ಯದಲ್ಲಿ ಮೊದಲು ಹಿಂಸಾಚಾರ ಭುಗಿಲೆದ್ದ ನಂತರ ಗ್ರಾಮದಿಂದ ಮಹಿಳೆಯರು, ಮಕ್ಕಳು ಮತ್ತು ವೃದ್ಧರನ್ನು ಮೇ 3 ರಂದು ಸ್ಥಳಾಂತರ ಮಾಡಲಾಗಿತ್ತು. ಜೇಕಬ್‌ ಸಹೋದರ ಲುಂಕೋಲೆಟ್ ಪ್ರತಿಕ್ರಿಯಿಸಿ, “ಹಳ್ಳಿಯಲ್ಲಿ ಪುರುಷರು ಮಾತ್ರ ಉಳಿದಿದ್ದಾರೆ” ಎಂದಿದ್ದಾರೆ. ಜೇಕಬ್‌ ಅವರು ಸರ್ಕಾರಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕಾಗಿ ಕಾಕ್ಚಿಂಗ್ ಜಿಲ್ಲೆಯಲ್ಲಿದ್ದರು, ಆದರೆ ಹಿಂಸಾಚಾರ ಭುಗಿಲೆದ್ದ ನಂತರ ಹಿಂತಿರುಗಿದ್ದರು.

“ನಮ್ಮ ಗ್ರಾಮವು ಮೈತೆಯ್ ಗ್ರಾಮದ ಪಕ್ಕದಲ್ಲಿದೆ, ಇದನ್ನು ಬಯಲು ಪ್ರದೇಶದಿಂದ ಬೇರ್ಪಡಿಸಲಾಗಿದೆ. ಮೇ 27 ರಂದು ಜೇಕಬ್ ಮತ್ತು ಅವರ ಇಬ್ಬರು ಸ್ನೇಹಿತರು ಗ್ರಾಮ ರಕ್ಷಣಾ ಸ್ವಯಂಸೇವಕರಾಗಿ ಕರ್ತವ್ಯದಲ್ಲಿದ್ದರು, ಸಂಜೆ 5 ಗಂಟೆಯ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಆತನ ಎದೆಗೆ ಗುಂಡು ಹಾರಿಸಲಾಗಿದೆ ಎಂದು ಆತನ ಜೊತೆಯಲ್ಲಿದ್ದ ಸ್ನೇಹಿತರು ಹೇಳಿದ್ದಾರೆ.”

ತಂಗ್ಮಿನ್ಲುನ್ ಹಾಕಿಪ್ (26) ಎಂಬವರು ಕಾಕ್ಚಿಂಗ್ ಕಣಿವೆ ಜಿಲ್ಲೆಯ ಗಡಿಗೆ ಸಮೀಪವಿರುವ ಥಿಂಗ್‌ಕಾಂಗ್‌ಫೈ ಗ್ರಾಮದಲ್ಲಿ ಸಾವಿಗೀಡಾಗಿದ್ದಾರೆ. ಅವರ ಸೋದರಸಂಬಂಧಿ ಹೊಲಾಲ್ ಹಾಕಿಪ್ ಪ್ರಕಾರ, “ತಡರಾತ್ರಿಯಲ್ಲಿ, ಸಶಸ್ತ್ರ ಹೊಂದಿದ್ದ ಜನರು ಗ್ರಾಮದ ಮೇಲೆ ದಾಳಿ ನಡೆಸಿದರು. ದಾಳಿ ನಡೆಸಿದವರು ನಾಗರಿಕರೋ, ಕಮಾಂಡೋಗಳೋ ಆಗಿರಬಹುದು” ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...