Homeಮುಖಪುಟಮಣಿಪುರ ಹಿಂಸಾಚಾರ: ತಗ್ಗದ ಸಾವು ನೋವು, ಅಮಿತ್ ಷಾ ಭೇಟಿ

ಮಣಿಪುರ ಹಿಂಸಾಚಾರ: ತಗ್ಗದ ಸಾವು ನೋವು, ಅಮಿತ್ ಷಾ ಭೇಟಿ

- Advertisement -
- Advertisement -

ಪರಿಶಿಷ್ಟ ಪಂಗಡದ ಮೀಸಲಾತಿ ವಿಚಾರವಾಗಿ ಕುಕಿ ಮತ್ತು ಮೈಥೇಯಿ ಸಮುದಾಯದ ನಡುವೆ ಮಣಿಪುರದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ತೀವ್ರ ಸ್ವರೂಪ ಪಡೆಯುತ್ತಿರುವ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ರಾಜ್ಯಕ್ಕೆ ಬುಧವಾರ ಭೇಟಿ ನೀಡಿದ್ದಾರೆ.

ತಮ್ಮ ಭೇಟಿಯ ವೇಳೆ, ಕೇಂದ್ರ ಸಚಿವ ಅಮಿತ್ ಶಾ ಅವರು, “ಸಾಧ್ಯವಾದಷ್ಟು ಬೇಗ ಮಣಿಪುರದಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಸ್ಥಳಾಂತರಗೊಂಡ ಜನರನ್ನು ಅವರ ಮನೆಗಳಿಗೆ ಕರೆತರಲು ನಾವು ಬದ್ಧರಾಗಿದ್ದೇವೆ” ಎಂದು ತಿಳಿಸಿದ್ದಾರೆ.

ಅಮಿತ್ ಶಾ ಅವರು ಬುಧವಾರ ಮಣಿಪುರದ ಮೊರೆಹ್‌ನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಮಣಿಪುರದ ಕುಕಿ ಮತ್ತು ಮೈತೇಯಿ ಸಮುದಾಯಗಳ ಶಿಬಿರಗಳಿಗೆ ಭೇಟಿ ನೀಡಿದ ನಂತರ ಅವರು ಪ್ರತಿಕ್ರಿಯಿಸಿದ್ದಾರೆ.

“ಕಾಂಗ್ಪೊಕ್ಪಿಯಲ್ಲಿನ ಪರಿಹಾರ ಶಿಬಿರಕ್ಕೆ ಭೇಟಿ ನೀಡಿ ಅಲ್ಲಿನ ಕುಕಿ ಸಮುದಾಯದ ಸದಸ್ಯರನ್ನು ಭೇಟಿ ಮಾಡಿದ್ದೇವೆ. ಮಣಿಪುರದಲ್ಲಿ ಆದಷ್ಟು ಬೇಗ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಅವರನ್ನು ಮನೆಗಳಿಗೆ ಸುರಕ್ಷಿತವಾಗಿ ಕಳುಹಿಸಲು ನಾವು ಬದ್ಧರಾಗಿದ್ದೇವೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಗೃಹ ಸಚಿವರು ಮಣಿಪುರದ ಕಾಂಗ್‌ಪೋಕ್ಪಿಯಲ್ಲಿ ನಾಗರಿಕ ಸಮಾಜ ಸಂಘಟನೆಗಳೊಂದಿಗೆ ಸಭೆಯನ್ನು ಕರೆದಿದ್ದಾರೆ. “ಮಣಿಪುರದಲ್ಲಿ ಸಮುದಾಯಗಳ ನಡುವೆ ಸಾಮರಸ್ಯವನ್ನು ಪುನರುಜ್ಜೀವನಗೊಳಿಸುವಲ್ಲಿ ಸರ್ಕಾರದೊಂದಿಗೆ ಸಕ್ರಿಯವಾಗಿ ಭಾಗವಹಿಸಲು ಅವರು ಉತ್ಸುಕರಾಗಿದ್ದಾರೆ” ಎಂದು ಹೇಳಿದ್ದಾರೆ.

ಆದರೆ ಮಣಿಪುರದ ಗುಡ್ಡಗಾಡು ಜಿಲ್ಲೆಗಳು ಮತ್ತು ತಪ್ಪಲಿನ ಪ್ರದೇಶಗಳಲ್ಲಿನ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇತ್ತೀಚಿನ ವರದಿಗಳು ಬಂದಿವೆ.

ತೀವ್ರ ಸ್ವರೂಪ ಪಡೆದಿರುವ ಕಲಹದಲ್ಲಿ ವಿದ್ಯಾರ್ಥಿ ನಾಯಕನಿಂದ ಹಿಡಿದು ವಯಸ್ಸಾದ ಮಹಿಳೆಯವರೆಗೆ ಸಾವಿಗೀಡಾಗಿದ್ದಾರೆ. ಆದರೆ ನವೀಕರಿಸಲ್ಪಷ್ಟ ಸಾವಿನ ಸಂಖ್ಯೆಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ‘ಇಂಡಿಯನ್‌ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಭಾನುವಾರ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಬಿರೇನ್ ಸಿಂಗ್, ಪರಿಸ್ಥಿತಿಯನ್ನು ಹತೋಟಿಗೆ ತರುವ ಕಾರ್ಯಾಚರಣೆಯ ಭಾಗವಾಗಿ 40 ಭಯೋತ್ಪಾದಕರನ್ನು ಕೊಲ್ಲಲಾಗಿದೆ ಎಂದು ಹೇಳಿದ್ದರು. ಆದರೆ ಸತ್ತವರ ಗುರುತು ಮತ್ತು ಸಾವು ಸಂಭವಿಸಿದ ಸಮಯವನ್ನು ಬಹಿರಂಗಪಡಿಸಿಲ್ಲ.

ಇತ್ತೀಚಿನ ಸುತ್ತಿನ ಹಿಂಸಾಚಾರದಲ್ಲಿ ಸತ್ತವರ ಪೈಕಿ ಜೇಕಬ್‌ ಜಮ್ಖೋಥಾಂಗ್ ಟೌತಾಂಗ್ (37) ಎಂಬವರು ಸೇರಿದ್ದಾರೆ. ಮೇ 27 ರಂದು ಸಂಜೆ ಬಿಷ್ಣುಪುರ ಕಣಿವೆ ಜಿಲ್ಲೆಯ ಗಡಿಯಲ್ಲಿರುವ ಚವಾಂಗ್‌ಫೈ ಗ್ರಾಮದಲ್ಲಿ ಅವರನ್ನು ಕೊಲ್ಲಲಾಗಿದೆ.

ಇದನ್ನೂ ಓದಿರಿ: ಜ್ಞಾನವಾಪಿ ಮಸೀದಿ ಸಮಿತಿಯ ಅರ್ಜಿ ವಜಾ; ಅಲಹಾಬಾದ್ ಹೈಕೋರ್ಟ್ ತೀರ್ಪು

ರಾಜ್ಯದಲ್ಲಿ ಮೊದಲು ಹಿಂಸಾಚಾರ ಭುಗಿಲೆದ್ದ ನಂತರ ಗ್ರಾಮದಿಂದ ಮಹಿಳೆಯರು, ಮಕ್ಕಳು ಮತ್ತು ವೃದ್ಧರನ್ನು ಮೇ 3 ರಂದು ಸ್ಥಳಾಂತರ ಮಾಡಲಾಗಿತ್ತು. ಜೇಕಬ್‌ ಸಹೋದರ ಲುಂಕೋಲೆಟ್ ಪ್ರತಿಕ್ರಿಯಿಸಿ, “ಹಳ್ಳಿಯಲ್ಲಿ ಪುರುಷರು ಮಾತ್ರ ಉಳಿದಿದ್ದಾರೆ” ಎಂದಿದ್ದಾರೆ. ಜೇಕಬ್‌ ಅವರು ಸರ್ಕಾರಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕಾಗಿ ಕಾಕ್ಚಿಂಗ್ ಜಿಲ್ಲೆಯಲ್ಲಿದ್ದರು, ಆದರೆ ಹಿಂಸಾಚಾರ ಭುಗಿಲೆದ್ದ ನಂತರ ಹಿಂತಿರುಗಿದ್ದರು.

“ನಮ್ಮ ಗ್ರಾಮವು ಮೈತೆಯ್ ಗ್ರಾಮದ ಪಕ್ಕದಲ್ಲಿದೆ, ಇದನ್ನು ಬಯಲು ಪ್ರದೇಶದಿಂದ ಬೇರ್ಪಡಿಸಲಾಗಿದೆ. ಮೇ 27 ರಂದು ಜೇಕಬ್ ಮತ್ತು ಅವರ ಇಬ್ಬರು ಸ್ನೇಹಿತರು ಗ್ರಾಮ ರಕ್ಷಣಾ ಸ್ವಯಂಸೇವಕರಾಗಿ ಕರ್ತವ್ಯದಲ್ಲಿದ್ದರು, ಸಂಜೆ 5 ಗಂಟೆಯ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಆತನ ಎದೆಗೆ ಗುಂಡು ಹಾರಿಸಲಾಗಿದೆ ಎಂದು ಆತನ ಜೊತೆಯಲ್ಲಿದ್ದ ಸ್ನೇಹಿತರು ಹೇಳಿದ್ದಾರೆ.”

ತಂಗ್ಮಿನ್ಲುನ್ ಹಾಕಿಪ್ (26) ಎಂಬವರು ಕಾಕ್ಚಿಂಗ್ ಕಣಿವೆ ಜಿಲ್ಲೆಯ ಗಡಿಗೆ ಸಮೀಪವಿರುವ ಥಿಂಗ್‌ಕಾಂಗ್‌ಫೈ ಗ್ರಾಮದಲ್ಲಿ ಸಾವಿಗೀಡಾಗಿದ್ದಾರೆ. ಅವರ ಸೋದರಸಂಬಂಧಿ ಹೊಲಾಲ್ ಹಾಕಿಪ್ ಪ್ರಕಾರ, “ತಡರಾತ್ರಿಯಲ್ಲಿ, ಸಶಸ್ತ್ರ ಹೊಂದಿದ್ದ ಜನರು ಗ್ರಾಮದ ಮೇಲೆ ದಾಳಿ ನಡೆಸಿದರು. ದಾಳಿ ನಡೆಸಿದವರು ನಾಗರಿಕರೋ, ಕಮಾಂಡೋಗಳೋ ಆಗಿರಬಹುದು” ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...