Homeಮುಖಪುಟಮಣಿಪುರ ಹಿಂಸಾಚಾರ | ಸುಟ್ಟ ವಸತಿ ಮತ್ತು ಆಸ್ತಿಗಳ ವಿವರ ನೀಡುವಂತೆ ಕೇಳಿದ ಸುಪ್ರಿಂಕೋರ್ಟ್

ಮಣಿಪುರ ಹಿಂಸಾಚಾರ | ಸುಟ್ಟ ವಸತಿ ಮತ್ತು ಆಸ್ತಿಗಳ ವಿವರ ನೀಡುವಂತೆ ಕೇಳಿದ ಸುಪ್ರಿಂಕೋರ್ಟ್

- Advertisement -
- Advertisement -

ಮಣಿಪುರದ ಜನಾಂಗೀಯ ಹಿಂಸಾಚಾರದ ಸಂದರ್ಭದಲ್ಲಿ ಸಂಪೂರ್ಣ ಅಥವಾ ಭಾಗಶಃ ಸುಟ್ಟು ಭಸ್ಮವಾಗಿರುವ ವಸತಿಗಳು ಮತ್ತು ಆಸ್ತಿಗಳ ವಿವರಗಳನ್ನು ಮುಚ್ಚಿದ ಕವರ್‌ನಲ್ಲಿ ಒದಗಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಮಣಿಪುರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮಣಿಪುರ ಹಿಂಸಾಚಾರ

ಅಪರಾಧಿಗಳು ಮತ್ತು ಅತಿಕ್ರಮಣದಾರರ ವಿರುದ್ಧ ತೆಗೆದುಕೊಂಡ ಕ್ರಮಗಳ ವಿವರಗಳನ್ನು ಹೇಳುವಂತೆ ಕೂಡಾ ರಾಜ್ಯ ಸರ್ಕಾರವನ್ನು ಸುಪ್ರೀಂ ಕೋರ್ಟ್ ಕೇಳಿದೆ. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಜನವರಿ 20 ನಂತರದ ಅರ್ಜಿಯ ವಿಚಾರಣೆಗೆ ನಿಗದಿಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಳೆದ ವರ್ಷ ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್, ಸಂತ್ರಸ್ತರ ಪರಿಹಾರ ಮತ್ತು ಪುನರ್ವಸತಿ ಮತ್ತು ಅವರಿಗೆ ಪರಿಹಾರವನ್ನು ಮೇಲ್ವಿಚಾರಣೆ ಮಾಡಲು ಮೂವರು ಮಾಜಿ ಮಹಿಳಾ ಹೈಕೋರ್ಟ್ ನ್ಯಾಯಾಧೀಶರ ಸಮಿತಿಯನ್ನು ಸ್ಥಾಪಿಸಲು ಆದೇಶಿಸಿತ್ತು. ಜೊತೆಗೆ ಅಪರಾಧ ಪ್ರಕರಣಗಳ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ಮಹಾರಾಷ್ಟ್ರದ ಮಾಜಿ ಪೊಲೀಸ್ ಮುಖ್ಯಸ್ಥ ದತ್ತಾತ್ರೇ ಪಡಸಾಲ್ಗಿಕರ್ ಅವರನ್ನು ಕೇಳಿತ್ತು. ಮಣಿಪುರ ಹಿಂಸಾಚಾರ

2023ರ ಮೇ 3ರಂದು ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ ಬುಡಕಟ್ಟು ಜನಾಂದ ನಡುವೆ ಜನಾಂಗೀಯ ಹಿಂಸಾಚಾರಗಳು ಭುಗಿಲೆದ್ದಿತ್ತು. ನವೆಂಬರ್ 2024 ರ ಅಂತ್ಯದ ವೇಳೆಗೆ ಹಿಂಸಾಚಾರದಲ್ಲಿ 258 ಜನರು ಮೃತಪಟ್ಟಿದ್ದಾರೆ. ಹಿಂಸಾಚಾರದಿಂದ 9,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಸುಮಾರು 60,000 ಜನರು ನಿರಾಶ್ರಿತರಾಗಿದ್ದಾರೆ. ಬಿಕ್ಕಟ್ಟಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸುವುದರೊಂದಿಗೆ ಪರಿಸ್ಥಿತಿಯು ಉಲ್ಬಣಗೊಳ್ಳುತ್ತಲೆ ಇದೆ.

ಈ ನಡುವೆ, ಮಣಿಪುರದ ವಿವಿಧ ಕಾಲೇಜುಗಳ ಕನಿಷ್ಠ 200 ಬುಡಕಟ್ಟು ವಿದ್ಯಾರ್ಥಿಗಳು ರಾಜಧಾನಿ ಇಂಫಾಲ್‌ನ ರಾಜಭವನದ ಬಳಿ 2023-24ರ ಪರಿಶಿಷ್ಟ ಪಂಗಡದ ವಿದ್ಯಾರ್ಥಿವೇತನವನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಎಲ್ಲಾ ಕಾಲೇಜು ಬುಡಕಟ್ಟು ವಿದ್ಯಾರ್ಥಿ ಒಕ್ಕೂಟದ (ಎಸಿಟಿಎಸ್‌ಯು) ನೇತೃತ್ವದಲ್ಲಿ ರಾಜಭವನದ ಬಳಿಯ ಜಿಪಿ ಮಹಿಳಾ ಕಾಲೇಜು ಎದುರು ಜಮಾಯಿಸಿದ ವಿದ್ಯಾರ್ಥಿಗಳು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದ್ದಾರೆ.

ಸ್ಥಳದಲ್ಲಿ ನಿಯೋಜಿಸಲಾಗಿದ್ದ ಭದ್ರತಾ ಪಡೆಗಳು ಅವರನ್ನು ರ್ಯಾಲಿ ನಡೆಸದಂತೆ ತಡೆದರು. ಇದು ಸ್ವಲ್ಪ ಸಮಯದ ಘರ್ಷಣೆಗೆ ಕಾರಣವಾಯಿತು. ಧರಣಿ ನಿರತ ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಕೆಲವು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದಾರೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿದ್ಯಾರ್ಥಿ ಪ್ರತಿನಿಧಿ ಜಿ ಪನ್ಮೆ, ”2023-24ರ ನಮ್ಮ ಎಸ್‌ಟಿ ವಿದ್ಯಾರ್ಥಿವೇತನ ಇನ್ನೂ ಬಿಡುಗಡೆಯಾಗಿಲ್ಲ. ನಂತರ ಬುಡಕಟ್ಟು ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಿ ಪರಿಸ್ಥಿತಿಯ ಬಗ್ಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡನ್ನು ಮಣಿಪುರಕ್ಕೆ  ಹೋಲಿಸಿದ ನಟ ವಿಜಯ್; ವಿರೋಧ ವ್ಯಕ್ತಪಡಿಸಿದ ಡಿಎಂಕೆ

ತಮಿಳುನಾಡನ್ನು ಮಣಿಪುರಕ್ಕೆ  ಹೋಲಿಸಿದ ನಟ ವಿಜಯ್; ವಿರೋಧ ವ್ಯಕ್ತಪಡಿಸಿದ ಡಿಎಂಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...