Homeಮುಖಪುಟಮಣಿಪುರ ಹಿಂಸಾಚಾರ | ಸುಟ್ಟ ವಸತಿ ಮತ್ತು ಆಸ್ತಿಗಳ ವಿವರ ನೀಡುವಂತೆ ಕೇಳಿದ ಸುಪ್ರಿಂಕೋರ್ಟ್

ಮಣಿಪುರ ಹಿಂಸಾಚಾರ | ಸುಟ್ಟ ವಸತಿ ಮತ್ತು ಆಸ್ತಿಗಳ ವಿವರ ನೀಡುವಂತೆ ಕೇಳಿದ ಸುಪ್ರಿಂಕೋರ್ಟ್

- Advertisement -
- Advertisement -

ಮಣಿಪುರದ ಜನಾಂಗೀಯ ಹಿಂಸಾಚಾರದ ಸಂದರ್ಭದಲ್ಲಿ ಸಂಪೂರ್ಣ ಅಥವಾ ಭಾಗಶಃ ಸುಟ್ಟು ಭಸ್ಮವಾಗಿರುವ ವಸತಿಗಳು ಮತ್ತು ಆಸ್ತಿಗಳ ವಿವರಗಳನ್ನು ಮುಚ್ಚಿದ ಕವರ್‌ನಲ್ಲಿ ಒದಗಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಮಣಿಪುರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮಣಿಪುರ ಹಿಂಸಾಚಾರ

ಅಪರಾಧಿಗಳು ಮತ್ತು ಅತಿಕ್ರಮಣದಾರರ ವಿರುದ್ಧ ತೆಗೆದುಕೊಂಡ ಕ್ರಮಗಳ ವಿವರಗಳನ್ನು ಹೇಳುವಂತೆ ಕೂಡಾ ರಾಜ್ಯ ಸರ್ಕಾರವನ್ನು ಸುಪ್ರೀಂ ಕೋರ್ಟ್ ಕೇಳಿದೆ. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಜನವರಿ 20 ನಂತರದ ಅರ್ಜಿಯ ವಿಚಾರಣೆಗೆ ನಿಗದಿಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಳೆದ ವರ್ಷ ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್, ಸಂತ್ರಸ್ತರ ಪರಿಹಾರ ಮತ್ತು ಪುನರ್ವಸತಿ ಮತ್ತು ಅವರಿಗೆ ಪರಿಹಾರವನ್ನು ಮೇಲ್ವಿಚಾರಣೆ ಮಾಡಲು ಮೂವರು ಮಾಜಿ ಮಹಿಳಾ ಹೈಕೋರ್ಟ್ ನ್ಯಾಯಾಧೀಶರ ಸಮಿತಿಯನ್ನು ಸ್ಥಾಪಿಸಲು ಆದೇಶಿಸಿತ್ತು. ಜೊತೆಗೆ ಅಪರಾಧ ಪ್ರಕರಣಗಳ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ಮಹಾರಾಷ್ಟ್ರದ ಮಾಜಿ ಪೊಲೀಸ್ ಮುಖ್ಯಸ್ಥ ದತ್ತಾತ್ರೇ ಪಡಸಾಲ್ಗಿಕರ್ ಅವರನ್ನು ಕೇಳಿತ್ತು. ಮಣಿಪುರ ಹಿಂಸಾಚಾರ

2023ರ ಮೇ 3ರಂದು ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ ಬುಡಕಟ್ಟು ಜನಾಂದ ನಡುವೆ ಜನಾಂಗೀಯ ಹಿಂಸಾಚಾರಗಳು ಭುಗಿಲೆದ್ದಿತ್ತು. ನವೆಂಬರ್ 2024 ರ ಅಂತ್ಯದ ವೇಳೆಗೆ ಹಿಂಸಾಚಾರದಲ್ಲಿ 258 ಜನರು ಮೃತಪಟ್ಟಿದ್ದಾರೆ. ಹಿಂಸಾಚಾರದಿಂದ 9,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಸುಮಾರು 60,000 ಜನರು ನಿರಾಶ್ರಿತರಾಗಿದ್ದಾರೆ. ಬಿಕ್ಕಟ್ಟಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸುವುದರೊಂದಿಗೆ ಪರಿಸ್ಥಿತಿಯು ಉಲ್ಬಣಗೊಳ್ಳುತ್ತಲೆ ಇದೆ.

ಈ ನಡುವೆ, ಮಣಿಪುರದ ವಿವಿಧ ಕಾಲೇಜುಗಳ ಕನಿಷ್ಠ 200 ಬುಡಕಟ್ಟು ವಿದ್ಯಾರ್ಥಿಗಳು ರಾಜಧಾನಿ ಇಂಫಾಲ್‌ನ ರಾಜಭವನದ ಬಳಿ 2023-24ರ ಪರಿಶಿಷ್ಟ ಪಂಗಡದ ವಿದ್ಯಾರ್ಥಿವೇತನವನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಎಲ್ಲಾ ಕಾಲೇಜು ಬುಡಕಟ್ಟು ವಿದ್ಯಾರ್ಥಿ ಒಕ್ಕೂಟದ (ಎಸಿಟಿಎಸ್‌ಯು) ನೇತೃತ್ವದಲ್ಲಿ ರಾಜಭವನದ ಬಳಿಯ ಜಿಪಿ ಮಹಿಳಾ ಕಾಲೇಜು ಎದುರು ಜಮಾಯಿಸಿದ ವಿದ್ಯಾರ್ಥಿಗಳು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದ್ದಾರೆ.

ಸ್ಥಳದಲ್ಲಿ ನಿಯೋಜಿಸಲಾಗಿದ್ದ ಭದ್ರತಾ ಪಡೆಗಳು ಅವರನ್ನು ರ್ಯಾಲಿ ನಡೆಸದಂತೆ ತಡೆದರು. ಇದು ಸ್ವಲ್ಪ ಸಮಯದ ಘರ್ಷಣೆಗೆ ಕಾರಣವಾಯಿತು. ಧರಣಿ ನಿರತ ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಕೆಲವು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದಾರೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿದ್ಯಾರ್ಥಿ ಪ್ರತಿನಿಧಿ ಜಿ ಪನ್ಮೆ, ”2023-24ರ ನಮ್ಮ ಎಸ್‌ಟಿ ವಿದ್ಯಾರ್ಥಿವೇತನ ಇನ್ನೂ ಬಿಡುಗಡೆಯಾಗಿಲ್ಲ. ನಂತರ ಬುಡಕಟ್ಟು ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಿ ಪರಿಸ್ಥಿತಿಯ ಬಗ್ಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡನ್ನು ಮಣಿಪುರಕ್ಕೆ  ಹೋಲಿಸಿದ ನಟ ವಿಜಯ್; ವಿರೋಧ ವ್ಯಕ್ತಪಡಿಸಿದ ಡಿಎಂಕೆ

ತಮಿಳುನಾಡನ್ನು ಮಣಿಪುರಕ್ಕೆ  ಹೋಲಿಸಿದ ನಟ ವಿಜಯ್; ವಿರೋಧ ವ್ಯಕ್ತಪಡಿಸಿದ ಡಿಎಂಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...