Homeಮುಖಪುಟಮಣಿಪುರ ಹಿಂಸಾಚಾರವು ಭಾರತದ ಆತ್ಮಸಾಕ್ಷಿಗಾದ ಆಳವಾದ ಗಾಯ: ಸೋನಿಯಾ ಗಾಂಧಿ

ಮಣಿಪುರ ಹಿಂಸಾಚಾರವು ಭಾರತದ ಆತ್ಮಸಾಕ್ಷಿಗಾದ ಆಳವಾದ ಗಾಯ: ಸೋನಿಯಾ ಗಾಂಧಿ

- Advertisement -
- Advertisement -

ಮಣಿಪುರದಲ್ಲಿ ಶಾಂತಿ ಕಾಪಾಡುವಂತೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬುಧವಾರ ವಿಡಿಯೊ ಸಂದೇಶದಲ್ಲಿ ಹೇಳಿದ್ದಾರೆ. ಮಣಿಪುರದ ಜನರು ನಂಬಿಕೆಯನ್ನು ಮರಳಿ ಪಡೆದು ಪುಟಿದೇಳಬೇಕು ಎಂದು ಮಣಿಪುರದ ಜನತೆಗೆ ಮನವಿ ಮಾಡಿದ್ದಾರೆ.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು 2.5 ನಿಮಿಷಗಳ ವಿಡಿಯೊ ಸಂದೇಶದಲ್ಲಿ ”ಒಬ್ಬ ತಾಯಿಯಾಗಿ ನಾನು ನಿಮ್ಮ ನೋವನ್ನು ಅರ್ಥಮಾಡಿಕೊಂಡಿದ್ದು, ಶಾಂತಿ ಸೌಹಾರ್ದತೆಗೆ ದಾರಿ ಮಾಡಿಕೊಡುವಂತೆ ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.

”ಮಣಿಪುರದ ಇತಿಹಾಸವು ಎಲ್ಲಾ ಜನಾಂಗಗಳು, ಧರ್ಮಗಳು ಮತ್ತು ಹಿನ್ನೆಲೆಗಳ ಜನರನ್ನು ಅಪ್ಪಿಕೊಳ್ಳುವ ಸಾಮರ್ಥ್ಯ ಮತ್ತು ವೈವಿಧ್ಯಮಯ ಸಮಾಜದ ಅಸಂಖ್ಯಾತ ಸಾಧ್ಯತೆಗಳಿಗೆ ಸಾಕ್ಷಿಯಾಗಿದೆ. ಭ್ರಾತೃತ್ವದ ಮನೋಭಾವವನ್ನು ಪೋಷಿಸಲು ಅಪಾರವಾದ ನಂಬಿಕೆ ಬೇಕು. ಆದರೆ ದ್ವೇಷ ಮತ್ತು ವಿಭಜನೆಯ ಬೆಂಕಿ ಉಂಟುಮಾಡಲು ಒಂದೇ ತಪ್ಪು ಹೆಜ್ಜೆ ಸಾಕು” ಎಂದಿದ್ದಾರೆ.

”ಇಂದು, ನಾವು ಪ್ರಮುಖ ಕವಲುದಾರಿಯಲ್ಲಿದ್ದೇವೆ. ಪರಿಸ್ಥಿತಿ ಸುಧಾರಿಸುವ ಹಾದಿಯನ್ನು ಪ್ರಾರಂಭಿಸುವ ನಮ್ಮ ಆಯ್ಕೆಯು ನಮ್ಮ ಮಕ್ಕಳು ಆನುವಂಶಿಕವಾಗಿ ಪಡೆಯುವ ರೀತಿಯ ಭವಿಷ್ಯವನ್ನು ರೂಪಿಸುತ್ತದೆ. ನಾನು ಮಣಿಪುರದ ಜನರಿಗೆ, ವಿಶೇಷವಾಗಿ ನನ್ನ ಧೈರ್ಯಶಾಲಿ ಸಹೋದರಿಯರಲ್ಲಿ ಈ ಸುಂದರ ಭೂಮಿಗೆ ಸಾಮರಸ್ಯ ಮತ್ತು ಶಾಂತಿಯನ್ನು ತರಲು ದಾರಿ ಮಾಡಿಕೊಡುವಂತೆ ಮನವಿ ಮಾಡುತ್ತೇನೆ” ಎಂದು ಹೇಳಿದರು.

”ಮುಂಬರುವ ವಾರಗಳು ಮತ್ತು ತಿಂಗಳುಗಳಲ್ಲಿ, ನಾವು ನಂಬಿಕೆಯನ್ನು ಪುನರ್ನಿರ್ಮಿಸುವ ದೀರ್ಘ ಪ್ರಯಾಣವನ್ನು ಪ್ರಾರಂಭಿಸುತ್ತೇವೆ .ಈ ಪ್ರಯೋಗದಿಂದ ಮತ್ತೆ ಎದ್ದು ನಿಲ್ಲುತ್ತೇವೆ ಎಂಬುದು ನನ್ನ ಪ್ರಾಮಾಣಿಕ ಆಶಯವಾಗಿದೆ. ಮಣಿಪುರದ ಜನರಲ್ಲಿ ನನಗೆ ಅಪಾರ ಭರವಸೆ ಮತ್ತು ನಂಬಿಕೆ ಇದೆ. ನಾವು ಜತೆಯಾಗಿ ಈ ಅಗ್ನಿಪರೀಕ್ಷೆಯನ್ನು ಜಯಿಸುತ್ತೇವೆ” ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

”ಮಣಿಪುರದಲ್ಲಿ ಜನರ ಜೀವನವನ್ನು ಧ್ವಂಸಗೊಳಿಸಿದ ಈ ಹಿಂಸಾಚಾರವು ನಮ್ಮ ರಾಷ್ಟ್ರದ ಆತ್ಮಸಾಕ್ಷಿಗಾದ ಆಳವಾದ ಗಾಯವಾಗಿದೆ. ಅಸಂಖ್ಯಾತ ಜನರು ತಮ್ಮ ಮನೆಗಳಿಂದಲೇ ಪಲಾಯನ ಮಾಡಲು ಒತ್ತಾಯಿಸುವುದನ್ನು ನೋಡಿ ನನಗೆ ತುಂಬಾ ದುಃಖವಾಗಿದೆ” ಎಂದರು.

ಮಣಿಪುರದಲ್ಲಿ ಬಿಜೆಪಿ ವಿಭಜಕ ರಾಜಕೀಯ ನಡೆಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದ್ದು ಈಶಾನ್ಯ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ರಾಜ್ಯ ಮತ್ತು ಕೇಂದ್ರದ ಸರ್ಕಾರಗಳು ತಮ್ಮ ಕರ್ತವ್ಯದಲ್ಲಿ ವಿಫಲವಾಗಿವೆ ಎಂದಿದೆ.

ಅಂದ ಹಾಗೆ ಮಣಿಪುರ ಹಿಂಸಾಚಾರ ಬಗ್ಗೆ ಕಾಂಗ್ರೆಸ್ ಬುಧವಾರ ಹೆಚ್ಚು ದನಿಯೆತ್ತಿರುವುದು ಕಾಣುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮಣಿಪುರ ಹಿಂಸಾಚಾರವನ್ನು ಕಡೆಗಣಿಸಿ ಅಮೆರಿಕ ಪ್ರವಾಸಕ್ಕೆ ಹೋಗಿದ್ದಾರೆ ಎಂದು ವಿಪಕ್ಷಗಳು ವಾಗ್ದಾಳಿ ನಡೆಸಿವೆ. ಮೋದಿ ಅಮೆರಿಕ ಭೇಟಿ ಬಗ್ಗೆ ವಿದೇಶಿ ಮಾಧ್ಯಮಗಳು ಕೂಡಾ ಹೆಚ್ಚಿನ ಪ್ರಾಮುಖ್ಯತೆ ನೀಡಿರುವುದರಿಂದ ಮೋದಿಗೆ ನೀಡಿರುವ ಗಮನವನ್ನು ಕಡಿಮೆ ಮಾಡಲು ಕಾಂಗ್ರೆಸ್ ಪ್ರಯತ್ನಿಸುತ್ತಿರುವಂತೆ ಕಾಣುತ್ತದೆ.

ಇದನ್ನೂ ಓದಿ: ಹಿಂಸಾಚಾರದಿಂದ ನಲುಗಿದ ಮಣಿಪುರ; ಅಸಡ್ಡೆಯ ಮೌನ ತಾಳಿರುವ ಪ್ರಧಾನಿ ಮೋದಿ: ವಿಪಕ್ಷಗಳ ಆರೋಪ

ಕೊನೆಗೂ ಸರ್ವಪಕ್ಷಗಳ ಸಭೆ ಕರೆದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಈ ಹಿಂಸಾಚಾರದಿಂದ ಮಣಿಪುರ ನಲುಗಿಹೋದರೂ ಪ್ರಧಾನಿ ನರೇಂದ್ರ ಮೋದಿ ಅವರು ಅಸಡ್ಡೆಯಿಂದ ಕೂಡಿದ ಮೌನ ತಾಳಿದ್ದಾರೆ ಎಂದು ವಿಪಕ್ಷಗಳು ವಾಗ್ದಾಳಿ ನಡೆಸಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಮಣಿಪುರದ ಸದ್ಯದ ಸ್ಥಿತಿಗತಿ ಬಗ್ಗೆ ಚರ್ಚಿಸಿ ಪರಿಹಾರ ಹುಡುಕಲು ಜೂನ್ 24ರಂದು ಸರ್ವಪಕ್ಷಗಳ ಸಭೆ ಕರೆದಿದ್ದಾರೆ.

ದೆಹಲಿಯಲ್ಲಿ ಜೂನ್ 24ರ ಮಧ್ಯಾಹ್ನ 3ಗಂಟೆಗೆ ಸಭೆ ನಡೆಯಲಿದೆ ಎಂದು ಗೃಹ ಸಚಿವಾಲಯದ ವಕ್ತಾರರು ಟ್ವಿಟ್ ಮಾಡಿದ್ದಾರೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಈ ಪ್ರಕಟಣೆ ಹೊರಬಿದ್ದಿದೆ.

ಮುಂದುವರೆದ ಹಿಂಸಾಚಾರ:

ಮಣಿಪುರ ಪೂರ್ವ ಭಾಗದ ತಂಗ್ಲಿಂಗ್, ಕಾಂಗ್ಟುಪ್ ಭಾಗಕ್ಕೆ ಸೇರಿದ ಗೆಲ್ಲಾಂಗ್ ಮತ್ತು ಸಿಂಗ್ಲಾ ಹಳ್ಳಿಗಳಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಮಂಗಳವಾರ ಮಧ್ಯರಾತ್ರಿ ಮತ್ತೆ ಗುಂಡಿನ ದಾಳಿ ನಡೆಸಿದ್ದಾರೆ. ಅಸ್ಸಾಂ ರೈಫಲ್ಸ್ ಪಡೆಯ ಯೋಧರು ಘಟನಾ ಸ್ಥಳಕ್ಕೆ ತೆರಳಿದ್ದು, ಅನಾಹುತಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬಿಷ್ಣುಪುರ ಜಿಲ್ಲೆಯ ಕ್ವಾಕ್ಕಾ ಪಟ್ಟಣದ ಮೋರಿ ಯೊಂದರ ಬಳಿ ನಿಲ್ಲಿಸಿದ್ದ ಕಾರಿನಲ್ಲಿದ್ದ ಬಾಂಬ್ ಸ್ಫೋಟಗೊಂಡು ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...