Homeಮುಖಪುಟಮಣಿಪುರ ಹಿಂಸಾಚಾರವು ಭಾರತದ ಆತ್ಮಸಾಕ್ಷಿಗಾದ ಆಳವಾದ ಗಾಯ: ಸೋನಿಯಾ ಗಾಂಧಿ

ಮಣಿಪುರ ಹಿಂಸಾಚಾರವು ಭಾರತದ ಆತ್ಮಸಾಕ್ಷಿಗಾದ ಆಳವಾದ ಗಾಯ: ಸೋನಿಯಾ ಗಾಂಧಿ

- Advertisement -
- Advertisement -

ಮಣಿಪುರದಲ್ಲಿ ಶಾಂತಿ ಕಾಪಾಡುವಂತೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬುಧವಾರ ವಿಡಿಯೊ ಸಂದೇಶದಲ್ಲಿ ಹೇಳಿದ್ದಾರೆ. ಮಣಿಪುರದ ಜನರು ನಂಬಿಕೆಯನ್ನು ಮರಳಿ ಪಡೆದು ಪುಟಿದೇಳಬೇಕು ಎಂದು ಮಣಿಪುರದ ಜನತೆಗೆ ಮನವಿ ಮಾಡಿದ್ದಾರೆ.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು 2.5 ನಿಮಿಷಗಳ ವಿಡಿಯೊ ಸಂದೇಶದಲ್ಲಿ ”ಒಬ್ಬ ತಾಯಿಯಾಗಿ ನಾನು ನಿಮ್ಮ ನೋವನ್ನು ಅರ್ಥಮಾಡಿಕೊಂಡಿದ್ದು, ಶಾಂತಿ ಸೌಹಾರ್ದತೆಗೆ ದಾರಿ ಮಾಡಿಕೊಡುವಂತೆ ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.

”ಮಣಿಪುರದ ಇತಿಹಾಸವು ಎಲ್ಲಾ ಜನಾಂಗಗಳು, ಧರ್ಮಗಳು ಮತ್ತು ಹಿನ್ನೆಲೆಗಳ ಜನರನ್ನು ಅಪ್ಪಿಕೊಳ್ಳುವ ಸಾಮರ್ಥ್ಯ ಮತ್ತು ವೈವಿಧ್ಯಮಯ ಸಮಾಜದ ಅಸಂಖ್ಯಾತ ಸಾಧ್ಯತೆಗಳಿಗೆ ಸಾಕ್ಷಿಯಾಗಿದೆ. ಭ್ರಾತೃತ್ವದ ಮನೋಭಾವವನ್ನು ಪೋಷಿಸಲು ಅಪಾರವಾದ ನಂಬಿಕೆ ಬೇಕು. ಆದರೆ ದ್ವೇಷ ಮತ್ತು ವಿಭಜನೆಯ ಬೆಂಕಿ ಉಂಟುಮಾಡಲು ಒಂದೇ ತಪ್ಪು ಹೆಜ್ಜೆ ಸಾಕು” ಎಂದಿದ್ದಾರೆ.

”ಇಂದು, ನಾವು ಪ್ರಮುಖ ಕವಲುದಾರಿಯಲ್ಲಿದ್ದೇವೆ. ಪರಿಸ್ಥಿತಿ ಸುಧಾರಿಸುವ ಹಾದಿಯನ್ನು ಪ್ರಾರಂಭಿಸುವ ನಮ್ಮ ಆಯ್ಕೆಯು ನಮ್ಮ ಮಕ್ಕಳು ಆನುವಂಶಿಕವಾಗಿ ಪಡೆಯುವ ರೀತಿಯ ಭವಿಷ್ಯವನ್ನು ರೂಪಿಸುತ್ತದೆ. ನಾನು ಮಣಿಪುರದ ಜನರಿಗೆ, ವಿಶೇಷವಾಗಿ ನನ್ನ ಧೈರ್ಯಶಾಲಿ ಸಹೋದರಿಯರಲ್ಲಿ ಈ ಸುಂದರ ಭೂಮಿಗೆ ಸಾಮರಸ್ಯ ಮತ್ತು ಶಾಂತಿಯನ್ನು ತರಲು ದಾರಿ ಮಾಡಿಕೊಡುವಂತೆ ಮನವಿ ಮಾಡುತ್ತೇನೆ” ಎಂದು ಹೇಳಿದರು.

”ಮುಂಬರುವ ವಾರಗಳು ಮತ್ತು ತಿಂಗಳುಗಳಲ್ಲಿ, ನಾವು ನಂಬಿಕೆಯನ್ನು ಪುನರ್ನಿರ್ಮಿಸುವ ದೀರ್ಘ ಪ್ರಯಾಣವನ್ನು ಪ್ರಾರಂಭಿಸುತ್ತೇವೆ .ಈ ಪ್ರಯೋಗದಿಂದ ಮತ್ತೆ ಎದ್ದು ನಿಲ್ಲುತ್ತೇವೆ ಎಂಬುದು ನನ್ನ ಪ್ರಾಮಾಣಿಕ ಆಶಯವಾಗಿದೆ. ಮಣಿಪುರದ ಜನರಲ್ಲಿ ನನಗೆ ಅಪಾರ ಭರವಸೆ ಮತ್ತು ನಂಬಿಕೆ ಇದೆ. ನಾವು ಜತೆಯಾಗಿ ಈ ಅಗ್ನಿಪರೀಕ್ಷೆಯನ್ನು ಜಯಿಸುತ್ತೇವೆ” ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

”ಮಣಿಪುರದಲ್ಲಿ ಜನರ ಜೀವನವನ್ನು ಧ್ವಂಸಗೊಳಿಸಿದ ಈ ಹಿಂಸಾಚಾರವು ನಮ್ಮ ರಾಷ್ಟ್ರದ ಆತ್ಮಸಾಕ್ಷಿಗಾದ ಆಳವಾದ ಗಾಯವಾಗಿದೆ. ಅಸಂಖ್ಯಾತ ಜನರು ತಮ್ಮ ಮನೆಗಳಿಂದಲೇ ಪಲಾಯನ ಮಾಡಲು ಒತ್ತಾಯಿಸುವುದನ್ನು ನೋಡಿ ನನಗೆ ತುಂಬಾ ದುಃಖವಾಗಿದೆ” ಎಂದರು.

ಮಣಿಪುರದಲ್ಲಿ ಬಿಜೆಪಿ ವಿಭಜಕ ರಾಜಕೀಯ ನಡೆಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದ್ದು ಈಶಾನ್ಯ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ರಾಜ್ಯ ಮತ್ತು ಕೇಂದ್ರದ ಸರ್ಕಾರಗಳು ತಮ್ಮ ಕರ್ತವ್ಯದಲ್ಲಿ ವಿಫಲವಾಗಿವೆ ಎಂದಿದೆ.

ಅಂದ ಹಾಗೆ ಮಣಿಪುರ ಹಿಂಸಾಚಾರ ಬಗ್ಗೆ ಕಾಂಗ್ರೆಸ್ ಬುಧವಾರ ಹೆಚ್ಚು ದನಿಯೆತ್ತಿರುವುದು ಕಾಣುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮಣಿಪುರ ಹಿಂಸಾಚಾರವನ್ನು ಕಡೆಗಣಿಸಿ ಅಮೆರಿಕ ಪ್ರವಾಸಕ್ಕೆ ಹೋಗಿದ್ದಾರೆ ಎಂದು ವಿಪಕ್ಷಗಳು ವಾಗ್ದಾಳಿ ನಡೆಸಿವೆ. ಮೋದಿ ಅಮೆರಿಕ ಭೇಟಿ ಬಗ್ಗೆ ವಿದೇಶಿ ಮಾಧ್ಯಮಗಳು ಕೂಡಾ ಹೆಚ್ಚಿನ ಪ್ರಾಮುಖ್ಯತೆ ನೀಡಿರುವುದರಿಂದ ಮೋದಿಗೆ ನೀಡಿರುವ ಗಮನವನ್ನು ಕಡಿಮೆ ಮಾಡಲು ಕಾಂಗ್ರೆಸ್ ಪ್ರಯತ್ನಿಸುತ್ತಿರುವಂತೆ ಕಾಣುತ್ತದೆ.

ಇದನ್ನೂ ಓದಿ: ಹಿಂಸಾಚಾರದಿಂದ ನಲುಗಿದ ಮಣಿಪುರ; ಅಸಡ್ಡೆಯ ಮೌನ ತಾಳಿರುವ ಪ್ರಧಾನಿ ಮೋದಿ: ವಿಪಕ್ಷಗಳ ಆರೋಪ

ಕೊನೆಗೂ ಸರ್ವಪಕ್ಷಗಳ ಸಭೆ ಕರೆದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಈ ಹಿಂಸಾಚಾರದಿಂದ ಮಣಿಪುರ ನಲುಗಿಹೋದರೂ ಪ್ರಧಾನಿ ನರೇಂದ್ರ ಮೋದಿ ಅವರು ಅಸಡ್ಡೆಯಿಂದ ಕೂಡಿದ ಮೌನ ತಾಳಿದ್ದಾರೆ ಎಂದು ವಿಪಕ್ಷಗಳು ವಾಗ್ದಾಳಿ ನಡೆಸಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಮಣಿಪುರದ ಸದ್ಯದ ಸ್ಥಿತಿಗತಿ ಬಗ್ಗೆ ಚರ್ಚಿಸಿ ಪರಿಹಾರ ಹುಡುಕಲು ಜೂನ್ 24ರಂದು ಸರ್ವಪಕ್ಷಗಳ ಸಭೆ ಕರೆದಿದ್ದಾರೆ.

ದೆಹಲಿಯಲ್ಲಿ ಜೂನ್ 24ರ ಮಧ್ಯಾಹ್ನ 3ಗಂಟೆಗೆ ಸಭೆ ನಡೆಯಲಿದೆ ಎಂದು ಗೃಹ ಸಚಿವಾಲಯದ ವಕ್ತಾರರು ಟ್ವಿಟ್ ಮಾಡಿದ್ದಾರೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಈ ಪ್ರಕಟಣೆ ಹೊರಬಿದ್ದಿದೆ.

ಮುಂದುವರೆದ ಹಿಂಸಾಚಾರ:

ಮಣಿಪುರ ಪೂರ್ವ ಭಾಗದ ತಂಗ್ಲಿಂಗ್, ಕಾಂಗ್ಟುಪ್ ಭಾಗಕ್ಕೆ ಸೇರಿದ ಗೆಲ್ಲಾಂಗ್ ಮತ್ತು ಸಿಂಗ್ಲಾ ಹಳ್ಳಿಗಳಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಮಂಗಳವಾರ ಮಧ್ಯರಾತ್ರಿ ಮತ್ತೆ ಗುಂಡಿನ ದಾಳಿ ನಡೆಸಿದ್ದಾರೆ. ಅಸ್ಸಾಂ ರೈಫಲ್ಸ್ ಪಡೆಯ ಯೋಧರು ಘಟನಾ ಸ್ಥಳಕ್ಕೆ ತೆರಳಿದ್ದು, ಅನಾಹುತಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬಿಷ್ಣುಪುರ ಜಿಲ್ಲೆಯ ಕ್ವಾಕ್ಕಾ ಪಟ್ಟಣದ ಮೋರಿ ಯೊಂದರ ಬಳಿ ನಿಲ್ಲಿಸಿದ್ದ ಕಾರಿನಲ್ಲಿದ್ದ ಬಾಂಬ್ ಸ್ಫೋಟಗೊಂಡು ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...