Homeಮುಖಪುಟಮಣಿಪುರ ಹಿಂಸಾಚಾರ: ರಾಜ್ಯ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ ಕುಕಿ ಪೀಪಲ್ಸ್ ಅಲೈಯನ್ಸ್

ಮಣಿಪುರ ಹಿಂಸಾಚಾರ: ರಾಜ್ಯ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ ಕುಕಿ ಪೀಪಲ್ಸ್ ಅಲೈಯನ್ಸ್

- Advertisement -
- Advertisement -

ರಾಜ್ಯದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದ ಹಿನ್ನೆಲೆಯಲ್ಲಿ ಬಿಜೆಪಿ ನೇತೃತ್ವದ ಮಣಿಪುರ ಸರ್ಕಾರಕ್ಕೆ ನೀಡಿದ್ದ ತನ್ನ ಬೆಂಬಲವನ್ನು ಕುಕಿ ಪೀಪಲ್ಸ್ ಅಲೈಯನ್ಸ್(KPA) ಭಾನುವಾರ ಹಿಂತೆಗೆದುಕೊಂಡಿದೆ ಎಂದು ದಿ ಹಿಂದೂ ವರದಿ ಮಾಡಿದೆ.

60 ಸದಸ್ಯ ಬಲದ ಮಣಿಪುರ ವಿಧಾನಸಭೆಯಲ್ಲಿ ಕುಕಿ ಪೀಪಲ್ಸ್ ಅಲೈಯನ್ಸ್ ಇಬ್ಬರು ಶಾಸಕರನ್ನು ಹೊಂದಿದ್ದು, ಭಾನುವಾರ  ರಾಜ್ಯಪಾಲ ಅನುಸೂಯಾ ಉಯಿಕೆ ಅವರಿಗೆ ಪಕ್ಷದ ವತಿಯಿಂದ ಪತ್ರ ಬರೆದು ಬೆಂಬಲ ಹಿಂಪಡೆಯುವುದಾಗಿ ಘೋಷಿಸಿದೆ. ಇನ್ನು ವಿಧಾನಸಭೆಯಲ್ಲಿ ಬಿಜೆಪಿ 32 ಸ್ಥಾನಗಳನ್ನು ಹೊಂದಿದೆ.

ಎನ್ ಬಿರೇನ್ ಸಿಂಗ್ ನೇತೃತ್ವದ ಸರ್ಕಾರವು ರಾಜ್ಯದಲ್ಲಿ 160 ಕ್ಕೂ ಹೆಚ್ಚು ಜನರನ್ನು ಕೊಂದಿರುವ ಹಿಂಸಾಚಾರವನ್ನು ನಿಯಂತ್ರಣಕ್ಕೆ ತರಲು ಅಸಮರ್ಥತೆಯ ಬಿಸಿಯನ್ನು ಎದುರಿಸುತ್ತಿರುವಂತೆಯೇ ಆಡಳಿತಾರೂಢ ಮೈತ್ರಿಯಿಂದ ಹೊರಬರಲು ಕೆಪಿಎ ನಿರ್ಧಾರವು ಬಂದಿದೆ.

”ಪ್ರಸ್ತುತ ಘರ್ಷಣೆಯನ್ನು ಎಚ್ಚರಿಕೆಯಿಂದ ಪರಿಗಣಿಸಿದ ನಂತರ, ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ನೇತೃತ್ವದ ಮಣಿಪುರದ ಸರ್ಕಾರಕ್ಕೆ ಬೆಂಬಲ ನೀಡಿರುವುದು ಫಲಪ್ರದವಾಗಿಲ್ಲ. ಅದರಂತೆ, ಮಣಿಪುರ ಸರ್ಕಾರಕ್ಕೆ KPA ಬೆಂಬಲವನ್ನು ಹಿಂತೆಗೆದುಕೊಳ್ಳಲಾಗಿದೆ ಮತ್ತು ಅನೂರ್ಜಿತವೆಂದು ಪರಿಗಣಿಸಬಹುದು” ಎಂದು ಹೇಳಿದೆ.

ಕುಕಿ ಪೀಪಲ್ಸ್ ಅಲೈಯನ್ಸ್ ಕೇಂದ್ರದಲ್ಲಿ ಆಡಳಿತಾರೂಢ NDAದ ಮಿತ್ರ ಪಕ್ಷವಾಗಿದೆ. ಜುಲೈ 18ರಂದು ದೆಹಲಿಯಲ್ಲಿ ನಡೆದ ಮೈತ್ರಿಕೂಟದ ಸಭೆಯಲ್ಲೂ ಭಾಗವಹಿಸಿತ್ತು.

ಮಣಿಪುರವು ಮೇ 3 ರಿಂದ ಕುಕಿ ಮತ್ತು ಬಹುಸಂಖ್ಯಾತ ಮೈತಿ ಸಮುದಾಯಗಳ ನಡುವೆ ಜನಾಂಗೀಯ ಘರ್ಷಣೆಗೆ ಸಾಕ್ಷಿಯಾಗಿದೆ. ಕನಿಷ್ಠ 187 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 60,000 ಜನರು ತಮ್ಮ ಮನೆಗಳನ್ನು ತೊರೆದಿದ್ದಾರೆ.

ಮಣಿಪುರದ ಹಲವಾರು ಕುಕಿ ಗುಂಪುಗಳು ಸಿಂಗ್ ಅವರು ಹಿಂಸಾತ್ಮಕ ಮೈತಿ ಗುಂಪುಗಳಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅವರು ಮೇ ತಿಂಗಳಿನಿಂದ ರಾಜ್ಯದಲ್ಲಿ ನಡೆದ ಹಲವಾರು ಹಿಂಸಾಚಾರದ ಘಟನೆಗಳಲ್ಲಿ ಭಾಗಿಯಾಗಿದ್ದಾರೆ. ಹಲವಾರು ವಿರೋಧ ಪಕ್ಷದ ನಾಯಕರು ಮತ್ತು ಮಣಿಪುರದ ಬಿಜೆಪಿ ಶಾಸಕರು ಕೂಡ ಮೈತಿ ಸಮುದಾಯಕ್ಕೆ ಸೇರಿದ ಸಿಂಗ್ ಅವರನ್ನು ಪದಚ್ಯುತಗೊಳಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...