Homeಮುಖಪುಟಮಣಿಪುರ ಹಿಂಸಾಚಾರ: ಖ್ಯಾತ ಆದಿವಾಸಿ ಗೀತೆ ರಚನೆಕಾರ ಸೇರಿ ಆರು ಜನ ಗುಂಡಿನ ದಾಳಿಗೆ ಬಲಿ

ಮಣಿಪುರ ಹಿಂಸಾಚಾರ: ಖ್ಯಾತ ಆದಿವಾಸಿ ಗೀತೆ ರಚನೆಕಾರ ಸೇರಿ ಆರು ಜನ ಗುಂಡಿನ ದಾಳಿಗೆ ಬಲಿ

- Advertisement -
- Advertisement -

ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಕುಕಿ ಪ್ರಾಬಲ್ಯದ ಚುರಾಚಂದ್‌ಪುರ ಮತ್ತು ಮೈತಿ ಪ್ರಾಬಲ್ಯದ ಬಿಷ್ಣುಪುರ್ ಜಿಲ್ಲೆಗಳ ಗಡಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರದಲ್ಲಿ ಖ್ಯಾತ ಆದಿವಾಸಿ ಗೀತ ರಚನೆಗಾರ- ಸಂಗೀತ ಸಂಯೋಜಕ ಸೇರಿದಂತೆ ಆರು ಮಂದಿ ಬಲಿಯಾಗಿದ್ದಾರೆ. ಈ ಘಟನೆಯಲ್ಲಿ 14 ಜನ ಗಾಯಗೊಂಡಿದ್ದಾರೆ.

ಈ ಗುಂಡಿನ ದಾಳಿ, ಸ್ಫೋಟಗಳು ಮತ್ತು ನಿರಂತರ ಶೆಲ್ಲಿಂಗ್ನಿಂದ, ಆದಿವಾಸಿ ಗೀತೆ “ಐ ಗಾಮ್ ಹಿಲೋ ಹಮ್” ರಚಿಸಿದ್ದ ಎಲ್.ಎಸ್.ಮಂಗ್ಬೋಯ್ ಲುಂಗ್ಡಿಮ್ (42) ಎಂಬ ಗೀತರಚನೆಕಾರ ಮೃತಪಟ್ಟಿದ್ದಾರೆ. ಈ ಮೂಲಕ ಕೆಲ ಸಮಯದ ವರೆಗೆ ಶಾಂತಿಯುತವಾಗಿದ್ದ ರಾಜ್ಯದಲ್ಲಿ ಮತ್ತೆ ರಕ್ತಪಾತ ಶುರುವಾಗಿದೆ.

ಮಂಗ್ಬೋಯ್ ಲುಂಗ್ಡಿಮ್ ಅವರು ಮೋರ್ಟರ್ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಮಿಜೋರಾಂ ರಾಜಧಾನಿ ಐಜ್ವಾಲ್‌ಗೆ ಚಿಕಿತ್ಸೆಗಾಗಿ ಕರೆ ತರುತ್ತಿದ್ದಾಗ ಗುರುವಾರ ಮಧ್ಯರಾತ್ರಿ ಬಳಿಕ 1 ಗಂಟೆಯ ವೇಳೆಗೆ ಅವರು ಕೊನೆಯುಸಿರೆಳೆದಿದ್ದಾರೆ.

ಕೊಯಿರೆಂಗ್ಟೆಕ್- ನರನ್ ಸೇನಿಯಾ ಪ್ರದೇಶದಲ್ಲಿ ನಡೆದ ಶೆಲ್ಲಿಂಗ್ ದಾಳಿಯಲ್ಲಿ ಗಾಯಗೊಂಡಿದ್ದ ರಿಚರ್ಡ್ ಹೆಮ್ ಕೊಲನ್ ಗಯಟೆ (31) ಬೆಳಿಗ್ಗೆ 9 ಗಂಟೆಯ ವೇಳೆಗೆ ಐಜ್ವಾಲ್ ಮೂಲಕ ಗುವಾಹತಿಗೆ ಕರೆದೊಯ್ಯುತ್ತಿದ್ದ ವೇಳೆ ಮೃತಪಟ್ಟರು.

ಈ ವೇಳೆ ಗಡಿಯ ಪಕ್ಕ ನಡೆದ ಗುಂಡಿನ ದಾಳಿಯಲ್ಲಿ ಗ್ರಾಮ ಸ್ವಯಂಸೇವಕರಿಬ್ಬರು ಸಾವಿಗೀಡಾಗಿದ್ದಾರೆ. ಚುರಚಂದನಪುರದ ಕೌಸಂಬಂಗ್ ಎಂಬಲ್ಲಿ ನಡೆದ ಶೆಲ್ಲಿಂಗ್ ದಾಳಿಯಲ್ಲಿ ಎಂಟು ಜನರು೭ ಗಾಯಗೊಂಡಿದ್ದಾರೆ.

ಇನ್ನು ಬಿಷ್ಣುಪುರದ ತಮ್ನಪೋಕ್ಪಿ ಮತ್ತು ನರನ್ ಸೇನಿಯಾ ಎಂಬಲ್ಲಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಪೆಬಮ್ ದೇಬನ್ ಮತ್ತು ಮೊಯಿರಂಗಥೆಮ್ ರೊಪೆನ್ ಎಂಬ ಇಬ್ಬರು ಪ್ರಾಣ ಬಿಟ್ಟಿದ್ದಾರೆ.

ಬಿಜೆಪಿ ಆಡಳಿತವಿರುವ ಮಣಿಪುರದಲ್ಲಿ ಮೇ 3ರಿಂದ ಹಿಂಸಾತ್ಮಕ ಕೃತ್ಯಗಳು ನಡೆಯುತ್ತಲೇ ಇವೆ. ಇಲ್ಲಿಯವರೆಗೆ ಮಣಿಪುರ ಹಿಂಸಾಚಾರದಲ್ಲಿ 190ಕ್ಕಿಂತ ಹೆಚ್ಚು ಜನರು ಸಾವಿಗೀಡಾಗಿದ್ದಾರೆ

ಮಂಗಳವಾರ, ಬಿಷ್ಣುಪುರ್ ಜಿಲ್ಲೆಯ ನರಸೇನಾ ಪಕ್ಕದ ಹಳ್ಳಿಗಳಲ್ಲಿ ಗುಂಡಿನ ದಾಳಿ ನಡೆದಿದೆ. ಪರಿಹಾರ ಶಿಬಿರದಲ್ಲಿ ತಂಗಿದ್ದ ಕುಕಿ ಗ್ರಾಮ ರಕ್ಷಣಾ ಸ್ವಯಂಸೇವಕನು ಈ ಬಾಂಬ್ ಸ್ಫೋಟದ ನಂತರ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು 30 ವರ್ಷದ ಜಂಗ್ಮಿನ್ಲುನ್ ಗಂಗ್ಟೆ ಎಂದು ಗುರುತಿಸಲಾಗಿದೆ ಎಂದು ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ ತಿಳಿಸಿದೆ.

ಮತ್ತೋರ್ವ ವ್ಯಕ್ತಿಯನ್ನು ಲೈಬುಜಮ್ ಇನಾವೋ ಎಂದು ಗುರುತಿಸಲಾಗಿದೆ. ಅವರಿಗೆ ಬುಲೆಟ್ ತಾಗಿದ್ದರಿಂದ ಗಾಯಗೊಂಡು ಇಂಫಾಲ್ ಆಸ್ಪತ್ರೆ ಗೆ ಸೇರಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದರೆ  ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

”ದಾಳಿಯ ವೇಳೆ ಮತ್ತೊಬ್ಬ ವ್ಯಕ್ತಿ ಮೇಲೆ ಗುಂಡು ಹಾರಿಸಲಾಗಿದ್ದು, ಆತನನ್ನು ಇಂಫಾಲ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ, ಗೋಲಿಬಾರ್ ಮತ್ತು ಪ್ರತಿಭಟನಾಕಾರರ ಸಭೆಯ ನಂತರ ರಾಜ್ಯದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿತ್ತು” ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಹಿಂಸಾಚಾರ ಪ್ರಾರಂಭವಾದಾಗಿನಿಂದ, ರಾಜ್ಯದಲ್ಲಿ ಕನಿಷ್ಠ 60,000 ಜನರು ಸ್ಥಳಾಂತರಗೊಂಡಿದ್ದಾರೆ. ಮಹಿಳೆಯರ ವಿರುದ್ಧದ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಪ್ರಕರಣಗಳು ವರದಿಯಾಗಿವೆ ಮತ್ತು ಕೇಂದ್ರ ಭದ್ರತಾ ಪಡೆಗಳಿದ್ದರೂ ಜನಸಮೂಹವು ಪೊಲೀಸ್ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಿದೆ ಮತ್ತು ಹಲವಾರು ಮನೆಗಳಿಗೆ ಬೆಂಕಿ ಹಚ್ಚಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...