Homeಮುಖಪುಟಮಣಿಪುರ ಹಿಂಸಾಚಾರ: ಖ್ಯಾತ ಆದಿವಾಸಿ ಗೀತೆ ರಚನೆಕಾರ ಸೇರಿ ಆರು ಜನ ಗುಂಡಿನ ದಾಳಿಗೆ ಬಲಿ

ಮಣಿಪುರ ಹಿಂಸಾಚಾರ: ಖ್ಯಾತ ಆದಿವಾಸಿ ಗೀತೆ ರಚನೆಕಾರ ಸೇರಿ ಆರು ಜನ ಗುಂಡಿನ ದಾಳಿಗೆ ಬಲಿ

- Advertisement -
- Advertisement -

ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಕುಕಿ ಪ್ರಾಬಲ್ಯದ ಚುರಾಚಂದ್‌ಪುರ ಮತ್ತು ಮೈತಿ ಪ್ರಾಬಲ್ಯದ ಬಿಷ್ಣುಪುರ್ ಜಿಲ್ಲೆಗಳ ಗಡಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರದಲ್ಲಿ ಖ್ಯಾತ ಆದಿವಾಸಿ ಗೀತ ರಚನೆಗಾರ- ಸಂಗೀತ ಸಂಯೋಜಕ ಸೇರಿದಂತೆ ಆರು ಮಂದಿ ಬಲಿಯಾಗಿದ್ದಾರೆ. ಈ ಘಟನೆಯಲ್ಲಿ 14 ಜನ ಗಾಯಗೊಂಡಿದ್ದಾರೆ.

ಈ ಗುಂಡಿನ ದಾಳಿ, ಸ್ಫೋಟಗಳು ಮತ್ತು ನಿರಂತರ ಶೆಲ್ಲಿಂಗ್ನಿಂದ, ಆದಿವಾಸಿ ಗೀತೆ “ಐ ಗಾಮ್ ಹಿಲೋ ಹಮ್” ರಚಿಸಿದ್ದ ಎಲ್.ಎಸ್.ಮಂಗ್ಬೋಯ್ ಲುಂಗ್ಡಿಮ್ (42) ಎಂಬ ಗೀತರಚನೆಕಾರ ಮೃತಪಟ್ಟಿದ್ದಾರೆ. ಈ ಮೂಲಕ ಕೆಲ ಸಮಯದ ವರೆಗೆ ಶಾಂತಿಯುತವಾಗಿದ್ದ ರಾಜ್ಯದಲ್ಲಿ ಮತ್ತೆ ರಕ್ತಪಾತ ಶುರುವಾಗಿದೆ.

ಮಂಗ್ಬೋಯ್ ಲುಂಗ್ಡಿಮ್ ಅವರು ಮೋರ್ಟರ್ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಮಿಜೋರಾಂ ರಾಜಧಾನಿ ಐಜ್ವಾಲ್‌ಗೆ ಚಿಕಿತ್ಸೆಗಾಗಿ ಕರೆ ತರುತ್ತಿದ್ದಾಗ ಗುರುವಾರ ಮಧ್ಯರಾತ್ರಿ ಬಳಿಕ 1 ಗಂಟೆಯ ವೇಳೆಗೆ ಅವರು ಕೊನೆಯುಸಿರೆಳೆದಿದ್ದಾರೆ.

ಕೊಯಿರೆಂಗ್ಟೆಕ್- ನರನ್ ಸೇನಿಯಾ ಪ್ರದೇಶದಲ್ಲಿ ನಡೆದ ಶೆಲ್ಲಿಂಗ್ ದಾಳಿಯಲ್ಲಿ ಗಾಯಗೊಂಡಿದ್ದ ರಿಚರ್ಡ್ ಹೆಮ್ ಕೊಲನ್ ಗಯಟೆ (31) ಬೆಳಿಗ್ಗೆ 9 ಗಂಟೆಯ ವೇಳೆಗೆ ಐಜ್ವಾಲ್ ಮೂಲಕ ಗುವಾಹತಿಗೆ ಕರೆದೊಯ್ಯುತ್ತಿದ್ದ ವೇಳೆ ಮೃತಪಟ್ಟರು.

ಈ ವೇಳೆ ಗಡಿಯ ಪಕ್ಕ ನಡೆದ ಗುಂಡಿನ ದಾಳಿಯಲ್ಲಿ ಗ್ರಾಮ ಸ್ವಯಂಸೇವಕರಿಬ್ಬರು ಸಾವಿಗೀಡಾಗಿದ್ದಾರೆ. ಚುರಚಂದನಪುರದ ಕೌಸಂಬಂಗ್ ಎಂಬಲ್ಲಿ ನಡೆದ ಶೆಲ್ಲಿಂಗ್ ದಾಳಿಯಲ್ಲಿ ಎಂಟು ಜನರು೭ ಗಾಯಗೊಂಡಿದ್ದಾರೆ.

ಇನ್ನು ಬಿಷ್ಣುಪುರದ ತಮ್ನಪೋಕ್ಪಿ ಮತ್ತು ನರನ್ ಸೇನಿಯಾ ಎಂಬಲ್ಲಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಪೆಬಮ್ ದೇಬನ್ ಮತ್ತು ಮೊಯಿರಂಗಥೆಮ್ ರೊಪೆನ್ ಎಂಬ ಇಬ್ಬರು ಪ್ರಾಣ ಬಿಟ್ಟಿದ್ದಾರೆ.

ಬಿಜೆಪಿ ಆಡಳಿತವಿರುವ ಮಣಿಪುರದಲ್ಲಿ ಮೇ 3ರಿಂದ ಹಿಂಸಾತ್ಮಕ ಕೃತ್ಯಗಳು ನಡೆಯುತ್ತಲೇ ಇವೆ. ಇಲ್ಲಿಯವರೆಗೆ ಮಣಿಪುರ ಹಿಂಸಾಚಾರದಲ್ಲಿ 190ಕ್ಕಿಂತ ಹೆಚ್ಚು ಜನರು ಸಾವಿಗೀಡಾಗಿದ್ದಾರೆ

ಮಂಗಳವಾರ, ಬಿಷ್ಣುಪುರ್ ಜಿಲ್ಲೆಯ ನರಸೇನಾ ಪಕ್ಕದ ಹಳ್ಳಿಗಳಲ್ಲಿ ಗುಂಡಿನ ದಾಳಿ ನಡೆದಿದೆ. ಪರಿಹಾರ ಶಿಬಿರದಲ್ಲಿ ತಂಗಿದ್ದ ಕುಕಿ ಗ್ರಾಮ ರಕ್ಷಣಾ ಸ್ವಯಂಸೇವಕನು ಈ ಬಾಂಬ್ ಸ್ಫೋಟದ ನಂತರ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು 30 ವರ್ಷದ ಜಂಗ್ಮಿನ್ಲುನ್ ಗಂಗ್ಟೆ ಎಂದು ಗುರುತಿಸಲಾಗಿದೆ ಎಂದು ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ ತಿಳಿಸಿದೆ.

ಮತ್ತೋರ್ವ ವ್ಯಕ್ತಿಯನ್ನು ಲೈಬುಜಮ್ ಇನಾವೋ ಎಂದು ಗುರುತಿಸಲಾಗಿದೆ. ಅವರಿಗೆ ಬುಲೆಟ್ ತಾಗಿದ್ದರಿಂದ ಗಾಯಗೊಂಡು ಇಂಫಾಲ್ ಆಸ್ಪತ್ರೆ ಗೆ ಸೇರಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದರೆ  ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

”ದಾಳಿಯ ವೇಳೆ ಮತ್ತೊಬ್ಬ ವ್ಯಕ್ತಿ ಮೇಲೆ ಗುಂಡು ಹಾರಿಸಲಾಗಿದ್ದು, ಆತನನ್ನು ಇಂಫಾಲ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ, ಗೋಲಿಬಾರ್ ಮತ್ತು ಪ್ರತಿಭಟನಾಕಾರರ ಸಭೆಯ ನಂತರ ರಾಜ್ಯದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿತ್ತು” ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಹಿಂಸಾಚಾರ ಪ್ರಾರಂಭವಾದಾಗಿನಿಂದ, ರಾಜ್ಯದಲ್ಲಿ ಕನಿಷ್ಠ 60,000 ಜನರು ಸ್ಥಳಾಂತರಗೊಂಡಿದ್ದಾರೆ. ಮಹಿಳೆಯರ ವಿರುದ್ಧದ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಪ್ರಕರಣಗಳು ವರದಿಯಾಗಿವೆ ಮತ್ತು ಕೇಂದ್ರ ಭದ್ರತಾ ಪಡೆಗಳಿದ್ದರೂ ಜನಸಮೂಹವು ಪೊಲೀಸ್ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಿದೆ ಮತ್ತು ಹಲವಾರು ಮನೆಗಳಿಗೆ ಬೆಂಕಿ ಹಚ್ಚಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...