Homeಮುಖಪುಟಮಣಿಪುರ ಹಿಂಸಾಚಾರ: ಖ್ಯಾತ ಆದಿವಾಸಿ ಗೀತೆ ರಚನೆಕಾರ ಸೇರಿ ಆರು ಜನ ಗುಂಡಿನ ದಾಳಿಗೆ ಬಲಿ

ಮಣಿಪುರ ಹಿಂಸಾಚಾರ: ಖ್ಯಾತ ಆದಿವಾಸಿ ಗೀತೆ ರಚನೆಕಾರ ಸೇರಿ ಆರು ಜನ ಗುಂಡಿನ ದಾಳಿಗೆ ಬಲಿ

- Advertisement -
- Advertisement -

ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಕುಕಿ ಪ್ರಾಬಲ್ಯದ ಚುರಾಚಂದ್‌ಪುರ ಮತ್ತು ಮೈತಿ ಪ್ರಾಬಲ್ಯದ ಬಿಷ್ಣುಪುರ್ ಜಿಲ್ಲೆಗಳ ಗಡಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರದಲ್ಲಿ ಖ್ಯಾತ ಆದಿವಾಸಿ ಗೀತ ರಚನೆಗಾರ- ಸಂಗೀತ ಸಂಯೋಜಕ ಸೇರಿದಂತೆ ಆರು ಮಂದಿ ಬಲಿಯಾಗಿದ್ದಾರೆ. ಈ ಘಟನೆಯಲ್ಲಿ 14 ಜನ ಗಾಯಗೊಂಡಿದ್ದಾರೆ.

ಈ ಗುಂಡಿನ ದಾಳಿ, ಸ್ಫೋಟಗಳು ಮತ್ತು ನಿರಂತರ ಶೆಲ್ಲಿಂಗ್ನಿಂದ, ಆದಿವಾಸಿ ಗೀತೆ “ಐ ಗಾಮ್ ಹಿಲೋ ಹಮ್” ರಚಿಸಿದ್ದ ಎಲ್.ಎಸ್.ಮಂಗ್ಬೋಯ್ ಲುಂಗ್ಡಿಮ್ (42) ಎಂಬ ಗೀತರಚನೆಕಾರ ಮೃತಪಟ್ಟಿದ್ದಾರೆ. ಈ ಮೂಲಕ ಕೆಲ ಸಮಯದ ವರೆಗೆ ಶಾಂತಿಯುತವಾಗಿದ್ದ ರಾಜ್ಯದಲ್ಲಿ ಮತ್ತೆ ರಕ್ತಪಾತ ಶುರುವಾಗಿದೆ.

ಮಂಗ್ಬೋಯ್ ಲುಂಗ್ಡಿಮ್ ಅವರು ಮೋರ್ಟರ್ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಮಿಜೋರಾಂ ರಾಜಧಾನಿ ಐಜ್ವಾಲ್‌ಗೆ ಚಿಕಿತ್ಸೆಗಾಗಿ ಕರೆ ತರುತ್ತಿದ್ದಾಗ ಗುರುವಾರ ಮಧ್ಯರಾತ್ರಿ ಬಳಿಕ 1 ಗಂಟೆಯ ವೇಳೆಗೆ ಅವರು ಕೊನೆಯುಸಿರೆಳೆದಿದ್ದಾರೆ.

ಕೊಯಿರೆಂಗ್ಟೆಕ್- ನರನ್ ಸೇನಿಯಾ ಪ್ರದೇಶದಲ್ಲಿ ನಡೆದ ಶೆಲ್ಲಿಂಗ್ ದಾಳಿಯಲ್ಲಿ ಗಾಯಗೊಂಡಿದ್ದ ರಿಚರ್ಡ್ ಹೆಮ್ ಕೊಲನ್ ಗಯಟೆ (31) ಬೆಳಿಗ್ಗೆ 9 ಗಂಟೆಯ ವೇಳೆಗೆ ಐಜ್ವಾಲ್ ಮೂಲಕ ಗುವಾಹತಿಗೆ ಕರೆದೊಯ್ಯುತ್ತಿದ್ದ ವೇಳೆ ಮೃತಪಟ್ಟರು.

ಈ ವೇಳೆ ಗಡಿಯ ಪಕ್ಕ ನಡೆದ ಗುಂಡಿನ ದಾಳಿಯಲ್ಲಿ ಗ್ರಾಮ ಸ್ವಯಂಸೇವಕರಿಬ್ಬರು ಸಾವಿಗೀಡಾಗಿದ್ದಾರೆ. ಚುರಚಂದನಪುರದ ಕೌಸಂಬಂಗ್ ಎಂಬಲ್ಲಿ ನಡೆದ ಶೆಲ್ಲಿಂಗ್ ದಾಳಿಯಲ್ಲಿ ಎಂಟು ಜನರು೭ ಗಾಯಗೊಂಡಿದ್ದಾರೆ.

ಇನ್ನು ಬಿಷ್ಣುಪುರದ ತಮ್ನಪೋಕ್ಪಿ ಮತ್ತು ನರನ್ ಸೇನಿಯಾ ಎಂಬಲ್ಲಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಪೆಬಮ್ ದೇಬನ್ ಮತ್ತು ಮೊಯಿರಂಗಥೆಮ್ ರೊಪೆನ್ ಎಂಬ ಇಬ್ಬರು ಪ್ರಾಣ ಬಿಟ್ಟಿದ್ದಾರೆ.

ಬಿಜೆಪಿ ಆಡಳಿತವಿರುವ ಮಣಿಪುರದಲ್ಲಿ ಮೇ 3ರಿಂದ ಹಿಂಸಾತ್ಮಕ ಕೃತ್ಯಗಳು ನಡೆಯುತ್ತಲೇ ಇವೆ. ಇಲ್ಲಿಯವರೆಗೆ ಮಣಿಪುರ ಹಿಂಸಾಚಾರದಲ್ಲಿ 190ಕ್ಕಿಂತ ಹೆಚ್ಚು ಜನರು ಸಾವಿಗೀಡಾಗಿದ್ದಾರೆ

ಮಂಗಳವಾರ, ಬಿಷ್ಣುಪುರ್ ಜಿಲ್ಲೆಯ ನರಸೇನಾ ಪಕ್ಕದ ಹಳ್ಳಿಗಳಲ್ಲಿ ಗುಂಡಿನ ದಾಳಿ ನಡೆದಿದೆ. ಪರಿಹಾರ ಶಿಬಿರದಲ್ಲಿ ತಂಗಿದ್ದ ಕುಕಿ ಗ್ರಾಮ ರಕ್ಷಣಾ ಸ್ವಯಂಸೇವಕನು ಈ ಬಾಂಬ್ ಸ್ಫೋಟದ ನಂತರ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು 30 ವರ್ಷದ ಜಂಗ್ಮಿನ್ಲುನ್ ಗಂಗ್ಟೆ ಎಂದು ಗುರುತಿಸಲಾಗಿದೆ ಎಂದು ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ ತಿಳಿಸಿದೆ.

ಮತ್ತೋರ್ವ ವ್ಯಕ್ತಿಯನ್ನು ಲೈಬುಜಮ್ ಇನಾವೋ ಎಂದು ಗುರುತಿಸಲಾಗಿದೆ. ಅವರಿಗೆ ಬುಲೆಟ್ ತಾಗಿದ್ದರಿಂದ ಗಾಯಗೊಂಡು ಇಂಫಾಲ್ ಆಸ್ಪತ್ರೆ ಗೆ ಸೇರಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದರೆ  ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

”ದಾಳಿಯ ವೇಳೆ ಮತ್ತೊಬ್ಬ ವ್ಯಕ್ತಿ ಮೇಲೆ ಗುಂಡು ಹಾರಿಸಲಾಗಿದ್ದು, ಆತನನ್ನು ಇಂಫಾಲ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ, ಗೋಲಿಬಾರ್ ಮತ್ತು ಪ್ರತಿಭಟನಾಕಾರರ ಸಭೆಯ ನಂತರ ರಾಜ್ಯದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿತ್ತು” ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಹಿಂಸಾಚಾರ ಪ್ರಾರಂಭವಾದಾಗಿನಿಂದ, ರಾಜ್ಯದಲ್ಲಿ ಕನಿಷ್ಠ 60,000 ಜನರು ಸ್ಥಳಾಂತರಗೊಂಡಿದ್ದಾರೆ. ಮಹಿಳೆಯರ ವಿರುದ್ಧದ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಪ್ರಕರಣಗಳು ವರದಿಯಾಗಿವೆ ಮತ್ತು ಕೇಂದ್ರ ಭದ್ರತಾ ಪಡೆಗಳಿದ್ದರೂ ಜನಸಮೂಹವು ಪೊಲೀಸ್ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಿದೆ ಮತ್ತು ಹಲವಾರು ಮನೆಗಳಿಗೆ ಬೆಂಕಿ ಹಚ್ಚಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...