Homeಮುಖಪುಟಮಣಿಪುರ ಹಿಂಸಾಚಾರ: ಸಿಬಿಐ ಅಡಿಯಲ್ಲಿನ ಪ್ರಕರಣಗಳ ವಿಚಾರಣೆ ಅಸ್ಸಾಂ ಹೈಕೋರ್ಟ್​ಗೆ ವರ್ಗಾಯಿಸಿದ ಸುಪ್ರೀಂ

ಮಣಿಪುರ ಹಿಂಸಾಚಾರ: ಸಿಬಿಐ ಅಡಿಯಲ್ಲಿನ ಪ್ರಕರಣಗಳ ವಿಚಾರಣೆ ಅಸ್ಸಾಂ ಹೈಕೋರ್ಟ್​ಗೆ ವರ್ಗಾಯಿಸಿದ ಸುಪ್ರೀಂ

- Advertisement -
- Advertisement -

”ಮಣಿಪುರದ ನಡೆದ ಹಿಂಸಾಚಾರದಿಂದ ಕಣಿವೆ ಮತ್ತು ಬೆಟ್ಟಗಳಲ್ಲಿರುವ ಜನಾಂಗಗಳು ಸಂತ್ರಸ್ತರಿದ್ದಾರೆ. ಅವರಲ್ಲಿ ಯಾರು ಹೆಚ್ಚು ಸಾವು ನೋವು ಅನುಭವಿಸಿದ್ದಾರೆಂದು ನಾವು ಹೇಳಲಾಗುವುದಿಲ್ಲ, ಎರಡೂ ಸಮುದಾಯದವರು ಬಲಿಪಶುಗಳಿದ್ದಾರೆ” ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.

ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಬಿಐ ತನಿಖೆ ನಡೆಸುತ್ತಿರುವ ಎಲ್ಲ ಪ್ರಕರಣಗಳ ವಿಚಾರಣೆಯನ್ನು ಅಸ್ಸಾಂ ಹೈಕೋರ್ಟ್​ಗೆ ವರ್ಗಾಯಿಸಲಾಗಿದೆ ಎಂದು ಸುಪ್ರೀಂ ಕೋರ್ಟ್​​ ಇಂದು (ಆ.25) ಆದೇಶವನ್ನು ನೀಡಿದೆ.

ಈ ಪ್ರಕರಣಗಳನ್ನು ವ್ಯವಹರಿಸಲು ಒಬ್ಬರು ಅಥವಾ ಹೆಚ್ಚಿನ ನ್ಯಾಯಾಂಗ ಅಧಿಕಾರಿಗಳನ್ನು ನಾಮನಿರ್ದೇಶನ ಮಾಡುವಂತೆ ಗುವಾಹಾಟಿ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರನ್ನು ಸುಪ್ರೀಂ ಕೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಮಣಿಪುರ ಹಿಂಸಾಚಾರದ ಅರ್ಜಿಯನ್ನು ವಿಚಾರಣೆ ನಡೆಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸದಂತೆ ಹಲವು ನಿರ್ದೇಶನಗಳನ್ನು ನೀಡಿದೆ. ಜತೆಗೆ ಆರೋಪಿಗಳನ್ನು ಕೋರ್ಟ್​​ಗೆ ಹಾಜರುಪಡಿಸುವ ಪ್ರಕ್ರಿಯೆ, ಬಂಧನ, ನ್ಯಾಯಾಂಗ ಬಂಧನ ಮತ್ತು ಅದರ ವಿಸ್ತರಣೆಗೆ ಸಂಬಂಧಿಸಿದ ನ್ಯಾಯಾಂಗ ಕಾರ್ಯವಿಧಾನಗಳನ್ನು ಗುವಾಹಾಟಿ ಹೈಕೋರ್ಟ್​​​ ಆನ್‌ಲೈನ್‌ ಮೂಲಕ ನಡೆಸಲಿದೆ ಎಂದು ಹೇಳಿದೆ.

ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಈಗಾಗಲೇ  ನ್ಯಾಯಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ಅವರನ್ನು ವಿಚಾರಣೆಗೆ ಮಣಿಪುರದಿಂದ ಗೌಹಾಟಿಯ ಹೈಕೋರ್ಟ್​ಗೆ ಕರೆದುಕೊಂಡ ಬರಲು ಸಾಧ್ಯವಾಗದಿದ್ದರೆ, ಆನ್​​ಲೈನ್​​ ಮೂಲಕವೇ ಅವರನ್ನು ನ್ಯಾಯಧೀಶರ​ ಮುಂದೆ ಹಾಜರು ಪಡಿಸಬಹುದು ಎಂದು ಹೇಳಿದೆ. ಒಂದು ವೇಳೆ ನೆಟ್​​ವರ್ಕ್​​​ ಸಮಸ್ಯೆ ಅಥವಾ ತಾಂತ್ರಿಕ ದೋಷಗಳಿಂದ ಆನ್​​​ಲೈನ್​ನಲ್ಲಿ ಹಾಜರುಪಡಿಸಲು ಸಾಧ್ಯವಾಗದಿದ್ದಾರೆ ಅಥವಾ ಅವರನ್ನು ಕೋರ್ಟ್​ ಮುಂದೆ ಕರೆದುಕೊಂಡು ಬರುವುದು ಅನಿವಾರ್ಯ ಇದೆ ಎಂದು ಕಂಡು ಬಂದರೆ ಮಾತ್ರ ಅವರನ್ನು ನ್ಯಾಯಲಯದ ಮುಂದೆ ಕರೆದುಕೊಂಡು ಬರಲು ಅನುಮತಿ ನೀಡಲಾಗಿದೆ.

ಗುವಾಹಾಟಿ ನ್ಯಾಯಾಲಯದಲ್ಲಿ ಆನ್‌ಲೈನ್ ಮೋಡ್ ಮೂಲಕ ಸಿಬಿಐ ಪ್ರಕರಣಗಳ ವಿಚಾರಣೆಗೆ ಅನುಕೂಲವಾಗುವಂತೆ ಸರಿಯಾದ ಇಂಟರ್ನೆಟ್ ಸೇವೆಗಳನ್ನು ಒದಗಿಸುವಂತೆ ಮಣಿಪುರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮಣಿಪುರದಿಂದ ವೀಡಿಯೊ ಕಾನ್ಫರೆನ್ಸಿಂಗ್ ಇತ್ಯಾದಿಗಳಿಗೆ ಸರಿಯಾದ ಇಂಟರ್ನೆಟ್ ಸೌಲಭ್ಯಗಳನ್ನು ಒದಗಿಸಲಾಗುತ್ತದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ. ಗುವಾಹಟಿಯಲ್ಲಿ ಖುದ್ದು ಹಾಜರಾಗಲು ಬಯಸುವವರಿಗೆ ಅದರ ನಿರ್ದೇಶನಗಳು ಅಡ್ಡಿಯಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಆಗಸ್ಟ್ 21ರಂದು, ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ಸಂತ್ರಸ್ತರ ಪರಿಹಾರ ಮತ್ತು ಪುನರ್ವಸತಿ ಮೇಲ್ವಿಚಾರಣೆಗೆ ನ್ಯಾಯಮೂರ್ತಿ ಗೀತಾ ಮಿತ್ತಲ್ ಸಮಿತಿಯನ್ನು ಸುಪ್ರೀಂ ಕೋರ್ಟ್ ನೇಮಿಸಿತ್ತು. ಇದರ ಜತೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಇಬ್ಬರು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ ಸೇರಿದಂತೆ 10ಕ್ಕೂ ಹೆಚ್ಚು ಪ್ರಕರಣಗಳನ್ನು ಸಿಬಿಐಗೆ ವರ್ಗಾಯಿಸಲಾಗಿದೆ.

ಈ ಜನಾಂಗೀಯ ಹಿಂಸಾಚಾರದಿಂದ ಹಲವಾರು ಮಣಿಪುರ ನಿವಾಸಿಗಳು ತಮ್ಮ ಗುರುತಿನ ದಾಖಲೆಗಳನ್ನು ಕಳೆದುಕೊಂಡಿರುವುದನ್ನು ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಗಮನಿಸಿದ್ದು, ಈಗಾಗಲೇ ಸುಪ್ರೀಂ ನೇಮಿಸಿದ ಸಮಿತಿಯು ಆಧಾರ್ ಕಾರ್ಡ್‌ ಮತ್ತು ಇತರ ದಾಖಲೆಗಳನ್ನು ತಕ್ಷಣದಿಂದಲೇ ನೀಡಲು ರಾಜ್ಯ ಸರ್ಕಾರ ಮತ್ತು ಯುಐಡಿಎಐ ಸೇರಿದಂತೆ ಇತರರಿಗೆ ಇಲಾಖೆ ನಿರ್ದೇಶನ ರವಾನಿಸುವಂತೆ ಸುಪ್ರೀಂ ಕೋರ್ಟ್‌ಗೆ ಹೇಳಿದೆ.

ಪ್ರಸ್ತುತ ಹಂತದಲ್ಲಿ, ಮಣಿಪುರದ ಒಟ್ಟಾರೆ ಪರಿಸರವನ್ನು ಗಮನದಲ್ಲಿಟ್ಟುಕೊಂಡು ಮತ್ತು ಕ್ರಿಮಿನಲ್ ಪ್ರಕರಣಗಳ ವಿಚಾರಣೆಯನ್ನು ನಡೆಸಲು ಒಬ್ಬರು ಅಥವಾ ಹೆಚ್ಚಿನ ನ್ಯಾಯಾಂಗ ಅಧಿಕಾರಿಗಳನ್ನು ನಾಮನಿರ್ದೇಶನ ಮಾಡುವಂತೆ ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನು ಸುಪ್ರೀಂ ಕೋರ್ಟ್ ಕೋರಿದೆ.

ಮಣಿಪುರದಲ್ಲಿ ಮಾತನಾಡುವ ಒಂದು ಅಥವಾ ಹೆಚ್ಚು ಭಾಷೆಗಳನ್ನು ತಿಳಿದಿರುವ ನ್ಯಾಯಾಧೀಶರನ್ನು ನಾಮನಿರ್ದೇಶನ ಮಾಡುವಂತೆ ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಿಗೆ ನಿರ್ದೇಶನ ನೀಡಲಾಗಿದೆ.

ಇದನ್ನೂ ಓದಿ: ಮಣಿಪುರ ರಾಜ್ಯಪಾಲರನ್ನು ಭೇಟಿ ಮಾಡಿದ ಸಿಪಿಐ(ಎಂ) ನಿಯೋಗ: ಪರಿಹಾರ ಶಿಬಿರಗಳಲ್ಲಿನ ಭೀಕರ ಪರಿಸ್ಥಿತಿ ಕುರಿತು ಚರ್ಚೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...