Homeಮುಖಪುಟಮಣಿಪುರ ಹಿಂಸಾಚಾರ: ಸಿಬಿಐ ಅಡಿಯಲ್ಲಿನ ಪ್ರಕರಣಗಳ ವಿಚಾರಣೆ ಅಸ್ಸಾಂ ಹೈಕೋರ್ಟ್​ಗೆ ವರ್ಗಾಯಿಸಿದ ಸುಪ್ರೀಂ

ಮಣಿಪುರ ಹಿಂಸಾಚಾರ: ಸಿಬಿಐ ಅಡಿಯಲ್ಲಿನ ಪ್ರಕರಣಗಳ ವಿಚಾರಣೆ ಅಸ್ಸಾಂ ಹೈಕೋರ್ಟ್​ಗೆ ವರ್ಗಾಯಿಸಿದ ಸುಪ್ರೀಂ

- Advertisement -
- Advertisement -

”ಮಣಿಪುರದ ನಡೆದ ಹಿಂಸಾಚಾರದಿಂದ ಕಣಿವೆ ಮತ್ತು ಬೆಟ್ಟಗಳಲ್ಲಿರುವ ಜನಾಂಗಗಳು ಸಂತ್ರಸ್ತರಿದ್ದಾರೆ. ಅವರಲ್ಲಿ ಯಾರು ಹೆಚ್ಚು ಸಾವು ನೋವು ಅನುಭವಿಸಿದ್ದಾರೆಂದು ನಾವು ಹೇಳಲಾಗುವುದಿಲ್ಲ, ಎರಡೂ ಸಮುದಾಯದವರು ಬಲಿಪಶುಗಳಿದ್ದಾರೆ” ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.

ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಬಿಐ ತನಿಖೆ ನಡೆಸುತ್ತಿರುವ ಎಲ್ಲ ಪ್ರಕರಣಗಳ ವಿಚಾರಣೆಯನ್ನು ಅಸ್ಸಾಂ ಹೈಕೋರ್ಟ್​ಗೆ ವರ್ಗಾಯಿಸಲಾಗಿದೆ ಎಂದು ಸುಪ್ರೀಂ ಕೋರ್ಟ್​​ ಇಂದು (ಆ.25) ಆದೇಶವನ್ನು ನೀಡಿದೆ.

ಈ ಪ್ರಕರಣಗಳನ್ನು ವ್ಯವಹರಿಸಲು ಒಬ್ಬರು ಅಥವಾ ಹೆಚ್ಚಿನ ನ್ಯಾಯಾಂಗ ಅಧಿಕಾರಿಗಳನ್ನು ನಾಮನಿರ್ದೇಶನ ಮಾಡುವಂತೆ ಗುವಾಹಾಟಿ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರನ್ನು ಸುಪ್ರೀಂ ಕೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಮಣಿಪುರ ಹಿಂಸಾಚಾರದ ಅರ್ಜಿಯನ್ನು ವಿಚಾರಣೆ ನಡೆಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸದಂತೆ ಹಲವು ನಿರ್ದೇಶನಗಳನ್ನು ನೀಡಿದೆ. ಜತೆಗೆ ಆರೋಪಿಗಳನ್ನು ಕೋರ್ಟ್​​ಗೆ ಹಾಜರುಪಡಿಸುವ ಪ್ರಕ್ರಿಯೆ, ಬಂಧನ, ನ್ಯಾಯಾಂಗ ಬಂಧನ ಮತ್ತು ಅದರ ವಿಸ್ತರಣೆಗೆ ಸಂಬಂಧಿಸಿದ ನ್ಯಾಯಾಂಗ ಕಾರ್ಯವಿಧಾನಗಳನ್ನು ಗುವಾಹಾಟಿ ಹೈಕೋರ್ಟ್​​​ ಆನ್‌ಲೈನ್‌ ಮೂಲಕ ನಡೆಸಲಿದೆ ಎಂದು ಹೇಳಿದೆ.

ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಈಗಾಗಲೇ  ನ್ಯಾಯಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ಅವರನ್ನು ವಿಚಾರಣೆಗೆ ಮಣಿಪುರದಿಂದ ಗೌಹಾಟಿಯ ಹೈಕೋರ್ಟ್​ಗೆ ಕರೆದುಕೊಂಡ ಬರಲು ಸಾಧ್ಯವಾಗದಿದ್ದರೆ, ಆನ್​​ಲೈನ್​​ ಮೂಲಕವೇ ಅವರನ್ನು ನ್ಯಾಯಧೀಶರ​ ಮುಂದೆ ಹಾಜರು ಪಡಿಸಬಹುದು ಎಂದು ಹೇಳಿದೆ. ಒಂದು ವೇಳೆ ನೆಟ್​​ವರ್ಕ್​​​ ಸಮಸ್ಯೆ ಅಥವಾ ತಾಂತ್ರಿಕ ದೋಷಗಳಿಂದ ಆನ್​​​ಲೈನ್​ನಲ್ಲಿ ಹಾಜರುಪಡಿಸಲು ಸಾಧ್ಯವಾಗದಿದ್ದಾರೆ ಅಥವಾ ಅವರನ್ನು ಕೋರ್ಟ್​ ಮುಂದೆ ಕರೆದುಕೊಂಡು ಬರುವುದು ಅನಿವಾರ್ಯ ಇದೆ ಎಂದು ಕಂಡು ಬಂದರೆ ಮಾತ್ರ ಅವರನ್ನು ನ್ಯಾಯಲಯದ ಮುಂದೆ ಕರೆದುಕೊಂಡು ಬರಲು ಅನುಮತಿ ನೀಡಲಾಗಿದೆ.

ಗುವಾಹಾಟಿ ನ್ಯಾಯಾಲಯದಲ್ಲಿ ಆನ್‌ಲೈನ್ ಮೋಡ್ ಮೂಲಕ ಸಿಬಿಐ ಪ್ರಕರಣಗಳ ವಿಚಾರಣೆಗೆ ಅನುಕೂಲವಾಗುವಂತೆ ಸರಿಯಾದ ಇಂಟರ್ನೆಟ್ ಸೇವೆಗಳನ್ನು ಒದಗಿಸುವಂತೆ ಮಣಿಪುರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮಣಿಪುರದಿಂದ ವೀಡಿಯೊ ಕಾನ್ಫರೆನ್ಸಿಂಗ್ ಇತ್ಯಾದಿಗಳಿಗೆ ಸರಿಯಾದ ಇಂಟರ್ನೆಟ್ ಸೌಲಭ್ಯಗಳನ್ನು ಒದಗಿಸಲಾಗುತ್ತದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ. ಗುವಾಹಟಿಯಲ್ಲಿ ಖುದ್ದು ಹಾಜರಾಗಲು ಬಯಸುವವರಿಗೆ ಅದರ ನಿರ್ದೇಶನಗಳು ಅಡ್ಡಿಯಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಆಗಸ್ಟ್ 21ರಂದು, ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ಸಂತ್ರಸ್ತರ ಪರಿಹಾರ ಮತ್ತು ಪುನರ್ವಸತಿ ಮೇಲ್ವಿಚಾರಣೆಗೆ ನ್ಯಾಯಮೂರ್ತಿ ಗೀತಾ ಮಿತ್ತಲ್ ಸಮಿತಿಯನ್ನು ಸುಪ್ರೀಂ ಕೋರ್ಟ್ ನೇಮಿಸಿತ್ತು. ಇದರ ಜತೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಇಬ್ಬರು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ ಸೇರಿದಂತೆ 10ಕ್ಕೂ ಹೆಚ್ಚು ಪ್ರಕರಣಗಳನ್ನು ಸಿಬಿಐಗೆ ವರ್ಗಾಯಿಸಲಾಗಿದೆ.

ಈ ಜನಾಂಗೀಯ ಹಿಂಸಾಚಾರದಿಂದ ಹಲವಾರು ಮಣಿಪುರ ನಿವಾಸಿಗಳು ತಮ್ಮ ಗುರುತಿನ ದಾಖಲೆಗಳನ್ನು ಕಳೆದುಕೊಂಡಿರುವುದನ್ನು ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಗಮನಿಸಿದ್ದು, ಈಗಾಗಲೇ ಸುಪ್ರೀಂ ನೇಮಿಸಿದ ಸಮಿತಿಯು ಆಧಾರ್ ಕಾರ್ಡ್‌ ಮತ್ತು ಇತರ ದಾಖಲೆಗಳನ್ನು ತಕ್ಷಣದಿಂದಲೇ ನೀಡಲು ರಾಜ್ಯ ಸರ್ಕಾರ ಮತ್ತು ಯುಐಡಿಎಐ ಸೇರಿದಂತೆ ಇತರರಿಗೆ ಇಲಾಖೆ ನಿರ್ದೇಶನ ರವಾನಿಸುವಂತೆ ಸುಪ್ರೀಂ ಕೋರ್ಟ್‌ಗೆ ಹೇಳಿದೆ.

ಪ್ರಸ್ತುತ ಹಂತದಲ್ಲಿ, ಮಣಿಪುರದ ಒಟ್ಟಾರೆ ಪರಿಸರವನ್ನು ಗಮನದಲ್ಲಿಟ್ಟುಕೊಂಡು ಮತ್ತು ಕ್ರಿಮಿನಲ್ ಪ್ರಕರಣಗಳ ವಿಚಾರಣೆಯನ್ನು ನಡೆಸಲು ಒಬ್ಬರು ಅಥವಾ ಹೆಚ್ಚಿನ ನ್ಯಾಯಾಂಗ ಅಧಿಕಾರಿಗಳನ್ನು ನಾಮನಿರ್ದೇಶನ ಮಾಡುವಂತೆ ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನು ಸುಪ್ರೀಂ ಕೋರ್ಟ್ ಕೋರಿದೆ.

ಮಣಿಪುರದಲ್ಲಿ ಮಾತನಾಡುವ ಒಂದು ಅಥವಾ ಹೆಚ್ಚು ಭಾಷೆಗಳನ್ನು ತಿಳಿದಿರುವ ನ್ಯಾಯಾಧೀಶರನ್ನು ನಾಮನಿರ್ದೇಶನ ಮಾಡುವಂತೆ ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಿಗೆ ನಿರ್ದೇಶನ ನೀಡಲಾಗಿದೆ.

ಇದನ್ನೂ ಓದಿ: ಮಣಿಪುರ ರಾಜ್ಯಪಾಲರನ್ನು ಭೇಟಿ ಮಾಡಿದ ಸಿಪಿಐ(ಎಂ) ನಿಯೋಗ: ಪರಿಹಾರ ಶಿಬಿರಗಳಲ್ಲಿನ ಭೀಕರ ಪರಿಸ್ಥಿತಿ ಕುರಿತು ಚರ್ಚೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...