Homeಮುಖಪುಟಮಣಿಪುರ ಹಿಂಸಾಚಾರ: ಅಗತ್ಯ ವಸ್ತುಗಳ ಬೆಲೆ ಮುಗಿಲೆತ್ತರ!

ಮಣಿಪುರ ಹಿಂಸಾಚಾರ: ಅಗತ್ಯ ವಸ್ತುಗಳ ಬೆಲೆ ಮುಗಿಲೆತ್ತರ!

ಎಲ್‌ಪಿಜಿ ಸಿಲಿಂಡರ್‌ ಬೆಲೆ ರೂ. 2,000ಕ್ಕಿಂತ ಹೆಚ್ಚಿದ್ದರೆ, ಪೆಟ್ರೋಲ್ ಬೆಲೆ ರೂ. 250 ಆಗಿದೆ

- Advertisement -
- Advertisement -

ಮಣಿಪುರದಲ್ಲಿ ಎಸ್‌ಟಿ ಮೀಸಲಾತಿ ವಿಚಾರ ಸಂಬಂಧ ಕುಕಿಗಳು ಮತ್ತು ಮೈಥೇಯಿ ಸಮುದಾಯಗಳ ನಡುವೆ ಭುಗಿಲೆದ್ದಿರುವ ಸಂಘರ್ಷವು ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಿ ಪರಿಣಮಿಸಿದೆ.

ರಾಜ್ಯದ ಹಲವೆಡೆ ನಿರಂತರ ಕರ್ಫ್ಯೂ ಮುಂದುವರಿಕೆ ಆಗುತ್ತಿರುವುದರಿಂದ ಅಡುಗೆ ಅನಿಲ ಮತ್ತು ಪೆಟ್ರೋಲ್‌ನಂತಹ ಅತ್ಯಗತ್ಯ ಸರಕುಗಳು ಸುಲಭವಾಗಿ ಲಭ್ಯವಾಗುತ್ತಿಲ್ಲ. ಕಾಳಸಂತೆಕೋರರು ಸನ್ನಿವೇಶದ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆಂದು ರಾಜ್ಯದ ಜನತೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಎಲ್‌ಪಿಜಿ ಸಿಲಿಂಡರ್‌ನ ಬೆಲೆ 2,000 ರೂ.ಗಿಂತ ಹೆಚ್ಚಿದ್ದರೆ, ಕಾಳಸಂತೆಯಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ಗೆ 250 ರೂ. ಏರಿಕೆ ಮಾಡಲಾಗಿದೆ.

ಅದೇ ರೀತಿ ಅಕ್ಕಿ, ಆಲೂಗಡ್ಡೆ, ಈರುಳ್ಳಿ ಮತ್ತು ಇತರ ತರಕಾರಿಗಳಂತಹ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿವೆ.

ಇಂಫಾಲ್ ಕಣಿವೆಯ ನಿವಾಸಿ ಶ್ಯಾಮಕುಮಾರ್ ಅಯೆಕ್ಪಾಕ್ ‘ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌’ಗೆ ಪ್ರತಿಕ್ರಿಯಿಸಿ, “ಜನರು ಅಗತ್ಯ ವಸ್ತುಗಳನ್ನು ಖರೀದಿಸಲು ಪರದಾಡುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

“ಇಲ್ಲಿನ ಜನರು ಈಗಾಗಲೇ ಹಿಂಸಾಚಾರದಿಂದ ಜರ್ಜರಿತರಾಗಿದ್ದಾರೆ. ಕರ್ಫ್ಯೂ ಈಗ ಜನರ ಸಂಕಷ್ಟವನ್ನು ಹೆಚ್ಚಿಸಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಏನೂ ಸುಲಭವಾಗಿ ಲಭ್ಯವಾಗುತ್ತಿಲ್ಲ. ಪೆಟ್ರೋಲ್ ಬಂಕ್‌ಗಳನ್ನು ಮುಚ್ಚಲಾಗಿದೆ. ಇದು ಕಾಳಸಂತೆಕೋರರಿಗೆ ಅವಕಾಶ ಒದಗಿಸಿದೆ. ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯುವುದು ಸೇರಿದಂತೆ ತುರ್ತು ಸೇವೆಗಳಿಗೆ ಪೆಟ್ರೋಲ್ ಅಗತ್ಯವಾಗಿದೆ. ಕಾಳಸಂತೆಯಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ಗೆ 250 ರೂ. ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಹೇಳಿದ್ದಾರೆ.

ಮತ್ತೊಬ್ಬ ನಿವಾಸಿ ಸರೋಜ್ ಸಿಂಗ್ ಮಾತನಾಡಿ, “ಬಹುತೇಕ ವಿವಿಧ ತಳಿಯ ಅಕ್ಕಿಯ ಬೆಲೆ ಶೇ.50ರಷ್ಟು ಏರಿಕೆಯಾಗಿದೆ. ಅಂಗಡಿಗಳು ಮುಚ್ಚಿರುವುದರಿಂದ ಜನರಿಗೆ ಏನೂ ಸಿಗುತ್ತಿಲ್ಲ. ಅವರು ಅಗತ್ಯ ವಸ್ತುಗಳನ್ನು ಕಾಳಸಂತೆಯಿಂದ ಖರೀದಿಸುವುದು ಅನಿವಾರ್ಯವಾಗಿದೆ” ಎಂದು ವಿಷಾದಿಸಿದ್ದಾರೆ.

“ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆಯಾಗಿದೆ. ಮದುವೆಗಳನ್ನು ಏರ್ಪಡಿಸಿಕೊಂಡಿರುವ ಕುಟುಂಬಗಳು ಭಾರೀ ಬೆಲೆ ತೆರಬೇಕಾಗಿದೆ” ಎಂದು ವಿವರಿಸಿದ್ದಾರೆ.

ಇದನ್ನೂ ಓದಿರಿ: ಮಣಿಪುರ; ಮತ್ತೆ ಉದ್ವಿಗ್ನತೆ, ಗುಂಡಿನ ದಾಳಿಗೆ ವ್ಯಕ್ತಿ ಬಲಿ

ಇಂಫಾಲ್‌ನ ಹೋಟೆಲ್‌ನ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸುತ್ತಿರುವ ಅಸ್ಸಾಂನ ಸುಬೀರ್ ದಾಸ್, “ಪ್ರತಿಯೊಂದು ವಸ್ತುವಿನ ಬೆಲೆ ಗಣನೀಯವಾಗಿ ಹೆಚ್ಚಾಗಿದೆ” ಎಂದಿದ್ದಾರೆ.

“ಒಂದು ಪ್ಲೇಟ್ ಬ್ರಾಯ್ಲರ್ ಮೊಟ್ಟೆ ಈಗ 260 ರಿಂದ 300 ರೂ.ವರೆಗೆ ಏರಿಕೆಯಾಗಿದೆ. ಹಿಂಸಾಚಾರ ಭುಗಿಲೇಳುವ ಮೊದಲು ಒಂದು ಪ್ಲೇಟ್‌ ಮೊಟ್ಟೆ 200 ರೂ.ಗೆ ಮಾರಾಟವಾಗುತ್ತಿತ್ತು. ಬ್ರಾಯ್ಲರ್ ಉಂಡು ಕೋಳಿ ಕೆಜಿಗೆ 200 ರೂ.ನಿಂದ 300 ರೂ.ಗೆ ಏರಿಕೆಯಾಗಿದೆ. ಆಲೂಗಡ್ಡೆ ಕೆಜಿಗೆ ರೂ. 20 ಇತ್ತು. ಈಗ ಕೆಜಿಗೆ 40 ರೂ. ಆಗಿದೆ. ಅದೇ ರೀತಿ ಈರುಳ್ಳಿ ಬೆಲೆ ಕೆಜಿಗೆ 30 ರೂ.ನಿಂದ 50-60 ರೂ.ಗೆ ಏರಿದೆ, ತರಕಾರಿಗಳು ಕೂಡ ದುಬಾರಿಯಾಗಿದೆ” ಎಂದು ದಾಸ್‌ ಆತಂಕ ವ್ಯಕ್ತಪಡಿಸಿದ್ದಾರೆ.

“ನಾಗಾ ಹಿಲ್ಸ್‌ನಲ್ಲಿ ಯಾವುದೇ ಕರ್ಫ್ಯೂ ಇಲ್ಲ. ಆದರೆ ಅಗತ್ಯ ವಸ್ತುಗಳ ಬೆಲೆಗಳು ಅಲ್ಲಿಯೂ ಏರಿಕೆ ಕಂಡಿವೆ. ನಮ್ಮ ಉಖ್ರುಲ್ ಜಿಲ್ಲೆಯಲ್ಲಿ ಪ್ರತಿ ಅಗತ್ಯ ವಸ್ತುಗಳ ಬೆಲೆ ಶೇ.10-20ರಷ್ಟು ಹೆಚ್ಚಾಗಿದೆ” ಎಂದು ನಾಗಾ ಮುಖಂಡ ಮಂಗ್ಯಾಂಗ್ ರಾಮನ್ ತಿಳಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...