Homeಮುಖಪುಟಮಣಿಪುರ ಹಿಂಸಾಚಾರ: ಅಗತ್ಯ ವಸ್ತುಗಳ ಬೆಲೆ ಮುಗಿಲೆತ್ತರ!

ಮಣಿಪುರ ಹಿಂಸಾಚಾರ: ಅಗತ್ಯ ವಸ್ತುಗಳ ಬೆಲೆ ಮುಗಿಲೆತ್ತರ!

ಎಲ್‌ಪಿಜಿ ಸಿಲಿಂಡರ್‌ ಬೆಲೆ ರೂ. 2,000ಕ್ಕಿಂತ ಹೆಚ್ಚಿದ್ದರೆ, ಪೆಟ್ರೋಲ್ ಬೆಲೆ ರೂ. 250 ಆಗಿದೆ

- Advertisement -
- Advertisement -

ಮಣಿಪುರದಲ್ಲಿ ಎಸ್‌ಟಿ ಮೀಸಲಾತಿ ವಿಚಾರ ಸಂಬಂಧ ಕುಕಿಗಳು ಮತ್ತು ಮೈಥೇಯಿ ಸಮುದಾಯಗಳ ನಡುವೆ ಭುಗಿಲೆದ್ದಿರುವ ಸಂಘರ್ಷವು ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಿ ಪರಿಣಮಿಸಿದೆ.

ರಾಜ್ಯದ ಹಲವೆಡೆ ನಿರಂತರ ಕರ್ಫ್ಯೂ ಮುಂದುವರಿಕೆ ಆಗುತ್ತಿರುವುದರಿಂದ ಅಡುಗೆ ಅನಿಲ ಮತ್ತು ಪೆಟ್ರೋಲ್‌ನಂತಹ ಅತ್ಯಗತ್ಯ ಸರಕುಗಳು ಸುಲಭವಾಗಿ ಲಭ್ಯವಾಗುತ್ತಿಲ್ಲ. ಕಾಳಸಂತೆಕೋರರು ಸನ್ನಿವೇಶದ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆಂದು ರಾಜ್ಯದ ಜನತೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಎಲ್‌ಪಿಜಿ ಸಿಲಿಂಡರ್‌ನ ಬೆಲೆ 2,000 ರೂ.ಗಿಂತ ಹೆಚ್ಚಿದ್ದರೆ, ಕಾಳಸಂತೆಯಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ಗೆ 250 ರೂ. ಏರಿಕೆ ಮಾಡಲಾಗಿದೆ.

ಅದೇ ರೀತಿ ಅಕ್ಕಿ, ಆಲೂಗಡ್ಡೆ, ಈರುಳ್ಳಿ ಮತ್ತು ಇತರ ತರಕಾರಿಗಳಂತಹ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿವೆ.

ಇಂಫಾಲ್ ಕಣಿವೆಯ ನಿವಾಸಿ ಶ್ಯಾಮಕುಮಾರ್ ಅಯೆಕ್ಪಾಕ್ ‘ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌’ಗೆ ಪ್ರತಿಕ್ರಿಯಿಸಿ, “ಜನರು ಅಗತ್ಯ ವಸ್ತುಗಳನ್ನು ಖರೀದಿಸಲು ಪರದಾಡುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

“ಇಲ್ಲಿನ ಜನರು ಈಗಾಗಲೇ ಹಿಂಸಾಚಾರದಿಂದ ಜರ್ಜರಿತರಾಗಿದ್ದಾರೆ. ಕರ್ಫ್ಯೂ ಈಗ ಜನರ ಸಂಕಷ್ಟವನ್ನು ಹೆಚ್ಚಿಸಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಏನೂ ಸುಲಭವಾಗಿ ಲಭ್ಯವಾಗುತ್ತಿಲ್ಲ. ಪೆಟ್ರೋಲ್ ಬಂಕ್‌ಗಳನ್ನು ಮುಚ್ಚಲಾಗಿದೆ. ಇದು ಕಾಳಸಂತೆಕೋರರಿಗೆ ಅವಕಾಶ ಒದಗಿಸಿದೆ. ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯುವುದು ಸೇರಿದಂತೆ ತುರ್ತು ಸೇವೆಗಳಿಗೆ ಪೆಟ್ರೋಲ್ ಅಗತ್ಯವಾಗಿದೆ. ಕಾಳಸಂತೆಯಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ಗೆ 250 ರೂ. ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಹೇಳಿದ್ದಾರೆ.

ಮತ್ತೊಬ್ಬ ನಿವಾಸಿ ಸರೋಜ್ ಸಿಂಗ್ ಮಾತನಾಡಿ, “ಬಹುತೇಕ ವಿವಿಧ ತಳಿಯ ಅಕ್ಕಿಯ ಬೆಲೆ ಶೇ.50ರಷ್ಟು ಏರಿಕೆಯಾಗಿದೆ. ಅಂಗಡಿಗಳು ಮುಚ್ಚಿರುವುದರಿಂದ ಜನರಿಗೆ ಏನೂ ಸಿಗುತ್ತಿಲ್ಲ. ಅವರು ಅಗತ್ಯ ವಸ್ತುಗಳನ್ನು ಕಾಳಸಂತೆಯಿಂದ ಖರೀದಿಸುವುದು ಅನಿವಾರ್ಯವಾಗಿದೆ” ಎಂದು ವಿಷಾದಿಸಿದ್ದಾರೆ.

“ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆಯಾಗಿದೆ. ಮದುವೆಗಳನ್ನು ಏರ್ಪಡಿಸಿಕೊಂಡಿರುವ ಕುಟುಂಬಗಳು ಭಾರೀ ಬೆಲೆ ತೆರಬೇಕಾಗಿದೆ” ಎಂದು ವಿವರಿಸಿದ್ದಾರೆ.

ಇದನ್ನೂ ಓದಿರಿ: ಮಣಿಪುರ; ಮತ್ತೆ ಉದ್ವಿಗ್ನತೆ, ಗುಂಡಿನ ದಾಳಿಗೆ ವ್ಯಕ್ತಿ ಬಲಿ

ಇಂಫಾಲ್‌ನ ಹೋಟೆಲ್‌ನ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸುತ್ತಿರುವ ಅಸ್ಸಾಂನ ಸುಬೀರ್ ದಾಸ್, “ಪ್ರತಿಯೊಂದು ವಸ್ತುವಿನ ಬೆಲೆ ಗಣನೀಯವಾಗಿ ಹೆಚ್ಚಾಗಿದೆ” ಎಂದಿದ್ದಾರೆ.

“ಒಂದು ಪ್ಲೇಟ್ ಬ್ರಾಯ್ಲರ್ ಮೊಟ್ಟೆ ಈಗ 260 ರಿಂದ 300 ರೂ.ವರೆಗೆ ಏರಿಕೆಯಾಗಿದೆ. ಹಿಂಸಾಚಾರ ಭುಗಿಲೇಳುವ ಮೊದಲು ಒಂದು ಪ್ಲೇಟ್‌ ಮೊಟ್ಟೆ 200 ರೂ.ಗೆ ಮಾರಾಟವಾಗುತ್ತಿತ್ತು. ಬ್ರಾಯ್ಲರ್ ಉಂಡು ಕೋಳಿ ಕೆಜಿಗೆ 200 ರೂ.ನಿಂದ 300 ರೂ.ಗೆ ಏರಿಕೆಯಾಗಿದೆ. ಆಲೂಗಡ್ಡೆ ಕೆಜಿಗೆ ರೂ. 20 ಇತ್ತು. ಈಗ ಕೆಜಿಗೆ 40 ರೂ. ಆಗಿದೆ. ಅದೇ ರೀತಿ ಈರುಳ್ಳಿ ಬೆಲೆ ಕೆಜಿಗೆ 30 ರೂ.ನಿಂದ 50-60 ರೂ.ಗೆ ಏರಿದೆ, ತರಕಾರಿಗಳು ಕೂಡ ದುಬಾರಿಯಾಗಿದೆ” ಎಂದು ದಾಸ್‌ ಆತಂಕ ವ್ಯಕ್ತಪಡಿಸಿದ್ದಾರೆ.

“ನಾಗಾ ಹಿಲ್ಸ್‌ನಲ್ಲಿ ಯಾವುದೇ ಕರ್ಫ್ಯೂ ಇಲ್ಲ. ಆದರೆ ಅಗತ್ಯ ವಸ್ತುಗಳ ಬೆಲೆಗಳು ಅಲ್ಲಿಯೂ ಏರಿಕೆ ಕಂಡಿವೆ. ನಮ್ಮ ಉಖ್ರುಲ್ ಜಿಲ್ಲೆಯಲ್ಲಿ ಪ್ರತಿ ಅಗತ್ಯ ವಸ್ತುಗಳ ಬೆಲೆ ಶೇ.10-20ರಷ್ಟು ಹೆಚ್ಚಾಗಿದೆ” ಎಂದು ನಾಗಾ ಮುಖಂಡ ಮಂಗ್ಯಾಂಗ್ ರಾಮನ್ ತಿಳಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...