Homeಮುಖಪುಟಮಣಿಪುರದಲ್ಲಿ ತೀವ್ರಗೊಂಡ ಹಿಂಸಾಚಾರ | ಆರು ಮಂದಿಯ ಅಪಹರಣ : ಮೂವರ ಶವ ಪತ್ತೆ

ಮಣಿಪುರದಲ್ಲಿ ತೀವ್ರಗೊಂಡ ಹಿಂಸಾಚಾರ | ಆರು ಮಂದಿಯ ಅಪಹರಣ : ಮೂವರ ಶವ ಪತ್ತೆ

- Advertisement -
- Advertisement -

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ಬಂಡುಕೋರರು ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳನ್ನು ಅಪಹರಿಸಿದ ಬೆನ್ನಲ್ಲೇ, ಮೂವರ ಮೃತದೇಹಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ.

ಮಣಿಪುರ-ಅಸ್ಸಾಂ ಗಡಿಯಲ್ಲಿ ಶುಕ್ರವಾರ (ನ.15) ಮೂವರು ಮಹಿಳೆಯರ ಕೊಳೆತ ಶವಗಳು ಪತ್ತೆಯಾಗಿವೆ. ಅದು ಅಪಹರಣಕ್ಕೆ ಒಳಗಾದವರದ್ದೇ? ಎಂಬುವುದು ಇನ್ನೂ ದೃಢಪಟ್ಟಿಲ್ಲ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಅಸ್ಸಾಂನ ಸಿಲ್ಚಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇನ್ನೂ ಕೆಲ ವರದಿಗಳು ಒಬ್ಬರು ಮಹಿಳೆ ಮತ್ತು ಇಬ್ಬರು ಮಕ್ಕಳ ಮೃತದೇಹಗಳು ಶುಕ್ರವಾರ ಸಂಜೆ ಜೀರಿ ನದಿಯಲ್ಲಿ ತೇಲಿ ಬಂದಿದೆ ಎಂದು ಹೇಳಿವೆ. ಹಾಗಾಗಿ, ಶವಗಳು ದೊರೆತಿರುವುದು ಮಹಿಳೆಯರದ್ದಾ? ಇಲ್ಲಾ ಮಕ್ಕಳು ಮತ್ತು ಮಹಿಳೆಯದ್ದಾ? ಎಂಬ ಗೊಂದಲ ಏರ್ಪಟ್ಟಿದೆ.

ಜಿರಿಬಾಮ್‌ ಜಿಲ್ಲೆಯಲ್ಲಿ ಮೈತೇಯಿ ಸಮುದಾಯಕ್ಕೆ ಸೇರಿದ ಆರು ಮಂದಿ ಸೋಮವಾರದಿಂದ (ನ.11) ನಾಪತ್ತೆಯಾಗಿದ್ದಾರೆ. ಅವರನ್ನು ಬಂಡುಕೋರರು ಅಪಹರಿಸಿದ್ದಾರೆ ಎಂದು ವರದಿಯಾಗಿದೆ. ಜಿರಿಬಾಮ್‌ ಅಸ್ಸಾಂನ ಕ್ಯಾಚಾರ್ ಜಿಲ್ಲೆಯೊಂದಿಗೆ ಗಡಿ ಹಂಚಿಕೊಂಡಿದೆ. ಸಿಲ್ಚಾರ್ ಕ್ಯಾಚಾರ್‌ನ ಜಿಲ್ಲಾ ಕೇಂದ್ರವಾಗಿದೆ.

ಬಂಡುಕೋರರು ಅಪಹರಿಸಿದ್ದಾರೆ ಎನ್ನಲಾಗಿರುವ ಆರು ಮಂದಿಯನ್ನು ರಕ್ಷಿಸುವಂತೆ ವಿವಿಧ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವ ನಡುವೆ ಮೂವರು ಮಹಿಳೆಯರ ಶವಗಳು ಪತ್ತೆಯಾಗಿರುವ ಸುದ್ದಿ ಹೊರಬಿದ್ದಿದೆ. ಇದು ಇನ್ನಷ್ಟು ಉದ್ವಿಗ್ನತೆಗೆ ಕಾರಣವಾಗಿದೆ.

ಆರು ಮಂದಿಯ ಅಪಹರಣ ಘಟನೆ ಬಳಿಕ ಕಳೆದ ಬುಧವಾರ (ನ.13) 13 ನಾಗರಿಕ ಸಂಘಟನೆಗಳು ಇಂಫಾಲ್ ಕಣಿವೆಯಲ್ಲಿ ಬಂದ್ ನಡೆಸಿತ್ತು. ಅಪಹರಣಕ್ಕೊಳಗಾದವರ ಸುರಕ್ಷಿತ ಬಿಡುಗಡೆಗೆ ಸರ್ಕಾರದ ಮಧ್ಯಸ್ಥಿಕೆ ವಹಿಸುವಂತೆ ಒತ್ತಾಯಿಸಿತ್ತು.

ಇದನ್ನೂ ಓದಿ : ಗ್ರೇಟರ್ ಹೈದರಾಬಾದ್‌ನ ಟ್ರಾಫಿಕ್ ಸ್ವಯಂಸೇವಕರಾಗಿ ಟ್ರಾನ್ಸ್‌ಜೆಂಡರ್‌ಗಳ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಲ-ವಂಚನೆ-ಹಣ ವರ್ಗಾವಣೆ ಪ್ರಕರಣ: ಅಂಬಾನಿ ಗ್ರೂಪ್ ಮಾಜಿ ಕಾರ್ಯನಿರ್ವಾಹಕ ಅಮಿತಾಬ್ ಜುಂಜುನ್‌ವಾಲಾ ಅವರನ್ನು ಬಂಧಿಸಿದ ಇಡಿ

ನವದೆಹಲಿ: ಬ್ಯಾಂಕ್ ಸಾಲ ವಂಚನೆ-ಸಂಬಂಧಿತ ಹಣ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ಧೀರೂಭಾಯಿ ಅಂಬಾನಿ ಗ್ರೂಪ್ (ADAG) ನ ಮಾಜಿ ಹಿರಿಯ ಕಾರ್ಯನಿರ್ವಾಹಕ ಅಮಿತಾಭ್ ಜುನ್ಜುನ್ವಾಲಾ ಅವರನ್ನು ಜಾರಿ ನಿರ್ದೇಶನಾಲಯ (ED) ಬುಧವಾರ ಬಂಧಿಸಿದೆ...

ಲೈಂಗಿಕ ದೌರ್ಜನ್ಯ ವಿವಾದದ ಬಳಿಕ ಕಾರ್ಯಾಚರಣೆ ಸ್ಥಗಿತಗೊಳಿಸಿದ ನಾಸಿಕ್ ಟಿಸಿಎಸ್; ಮನೆಯಿಂದಲೇ ಕೆಲಸ ಮಾಡುತ್ತಿರುವ ಸಿಬ್ಬಂದಿ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ನ ವ್ಯವಹಾರ ಪ್ರಕ್ರಿಯೆಯ ಹೊರಗುತ್ತಿಗೆ (ಬಿಪಿಒ) ಕೇಂದ್ರದಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಬಲವಂತದ ಮತಾಂತರ ಪ್ರಕರಣಗಳ ವಿವಾದದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಉದ್ಯೋಗಿಗಳಿಗೆ...

ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ : ಕಪ್ಪು ಬಾವುಟ ಹಾರಿಸಿ, ಮಸೂದೆ ಪ್ರತಿಸುಟ್ಟು ಪ್ರತಿಭಟನೆಗೆ ಚಾಲನೆ ಕೊಟ್ಟ ಎಂ.ಕೆ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸಮರ ಸಾರಿದ್ದು, ಗುರುವಾರ (ಏ.16) ಅಧಿಕೃತವಾಗಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆ, ನಾಮಕ್ಕಲ್‌ನಲ್ಲಿ ಪ್ರಚಾರ ಕಾರ್ಯ ಕೈಗೊಂಡಿರುವ...

ತೆಲಂಗಾಣ ಜಾತಿ ಜನಗಣತಿ: ಸಾಮಾನ್ಯ ಜಾತಿಗಳಿಗಿಂತ ಮೂರು ಪಟ್ಟು ಹೆಚ್ಚು ಹಿಂದುಳಿದಿರುವ ಎಸ್‌ಸಿ- ಎಸ್‌ಟಿ ಸಮುದಾಯ

ತೆಲಂಗಾಣದ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯಗಳು ಸಾಮಾನ್ಯ ಜಾತಿಗಳಿಗಿಂತ ಮೂರು ಪಟ್ಟು ಹೆಚ್ಚು ಹಿಂದುಳಿದಿವೆ, ಹಿಂದುಳಿದ ವರ್ಗಗಳು (ಬಿಸಿ) 2.7 ಪಟ್ಟು ಹೆಚ್ಚು ಹಿಂದುಳಿದಿವೆ; ರಾಜ್ಯದ ಕಲ್ಯಾಣ...

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...