Homeಮುಖಪುಟಮಣಿಪುರ ಹಿಂಸಾಚಾರ: ಅಪ್ರಚೋದಿತ ಗುಂಡಿನ ದಾಳಿ; ಯೋಧನಿಗೆ ಗಾಯ

ಮಣಿಪುರ ಹಿಂಸಾಚಾರ: ಅಪ್ರಚೋದಿತ ಗುಂಡಿನ ದಾಳಿ; ಯೋಧನಿಗೆ ಗಾಯ

- Advertisement -
- Advertisement -

ಹಿಂಸಾಚಾರ ಪೀಡಿತ ಮಣಿಪುರದ ಚಿಂಗ್‌ಮಾಂಗ್ ಗ್ರಾಮದ ಕಡೆಗೆ ಜೂನ್ 18 ಮತ್ತು 19 ರ ಮಧ್ಯರಾತ್ರಿಯಲ್ಲಿ  ಸಶಸ್ತ್ರ ದುಷ್ಕರ್ಮಿಗಳು ಕಾಂಟೋ ಸಬಲ್‌ನಿಂದ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಇದರಿಂದ ಭಾರತೀಯ ಸೇನೆಯ ಸಿಬ್ಬಂದಿಗೆ ಗಾಯಗೊಂಡಿದ್ದಾರೆ ಎಂದು ಭಾರತೀಯ ಸೇನೆಯ ಸ್ಪಿಯರ್ ಕಾರ್ಪ್ಸ್ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಗಾಯಗೊಂಡ ಸಿಬ್ಬಂದಿಯನ್ನು ಲೀಮಾಖೋಂಗ್‌ನ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಈ ಪ್ರದೇಶದಲ್ಲಿ ಗ್ರಾಮಸ್ಥರ ಉಪಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸೇನಾ ತಂಡಗಳು ಪ್ರತೀಕಾರದ ಗುಂಡಿನ ಮೂಲಕ ಪರಿಸ್ಥಿತಿಯನ್ನು ನಿಯಂತ್ರಿಸಿವೆ. ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಣಿಪುರದಲ್ಲಿ ಮೈತಿ ಮತ್ತು ಕುಕಿ ಬುಡಕಟ್ಟು ಸಮುದಾಯದ ನಡುವಣ ಹಿಂಸಾಚಾರ ಆರಂಭವಾಗಿ 45 ದಿನಗಳು ಉರುಳಿದರೂ ಇನ್ನೂ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿಲ್ಲ. ಸಧ್ಯ ರಾಜ್ಯದಲ್ಲಿ ಕರ್ಫ್ಯೂ ಸಡಿಲಿಸಲು ಅಧಿಕಾರಿಗಳು ನಿರ್ಧರಿಸಿದ ನಂತರ ಈ ಘಟನೆ ನಡೆದಿದೆ.

ಭದ್ರತಾ ಪಡೆಗಳು ಇನ್ನೂ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಬಿಗಿಯಾದ ಜಾಗರೂಕತೆಯನ್ನು ನಿರ್ವಹಿಸುತ್ತಿವೆ ಮತ್ತು ಭಾರತೀಯ ಸೇನೆಯು ಇಂಫಾಲ್ ಕಣಿವೆಯಲ್ಲಿ ಭಾನುವಾರ ಧ್ವಜ ಮೆರವಣಿಗೆಯನ್ನು ನಡೆಸಿತು.

ಇದನ್ನೂ ಓದಿ: ಮಣಿಪುರದಲ್ಲಿ ಹೆಚ್ಚಾದ ಹಿಂಸಾಚಾರ: ಕೇಂದ್ರ ಸಚಿವರ ಮನೆಗೆ ಬೆಂಕಿ!

ಈ ಹಿಂಸಾಚಾರದಿಂದ ಇಲ್ಲಿಯವರೆಗೆ 115 ಜನರು ಪ್ರಾಣ ಕಳೆದುಕೊಂಡಿದ್ದು, 60 ಸಾವಿರ ಮಂದಿ ನೆಲೆ ಕಳೆದುಕೊಂಡಿದ್ದಾರೆ. ಸಚಿವರ ಮನೆಗಳನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ. ಶಾಂತಿ ಪುನರ್ ಸ್ಥಾಪನೆಗೆ ಭಾರತೀಯ ಸೇನೆ ಸೇರಿದಂತೆ 40 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಮೊಕ್ಕಾಂ ಹೂಡಿದ್ದು, ಸಂಘರ್ಷ ನಿಯಂತ್ರಣಕ್ಕೆ ಹರಸಾಹಸಪಡುತ್ತಿದ್ದಾರೆ.

ಮತ್ತೊಂದೆಡೆ ಕೇಂದ್ರ ಮತ್ತು ಮಣಿಪುರದ ಬಿಜೆಪಿ ಸರ್ಕಾರವು ಯಥಾಸ್ಥಿತಿ ಕಾಯ್ದುಕೊಳ್ಳುವ ಸಂಬಂಧ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳುತ್ತಿವೆ. ಇದರ ಭಾಗವಾಗಿಯೇ ಮೈತೇಯಿ ಮತ್ತು ಕುಕಿ ಸಮುದಾಯದ ಬೇಡಿಕೆ ಈಡೇರಿಸುವುದಾಗಿ ಹೇಳಿದರೂ ಶಾಂತಿ ಸ್ಥಾಪನೆಯು ಮರೀಚಿಕೆಯಾಗಿದೆ.

ನೆರೆಯ ಈಶಾನ್ಯ ರಾಜ್ಯಗಳು ನಿರಾಶ್ರಿತರಿಗೆ ಆಶ್ರಯ ಪಡೆಯಲು ಸಹಾಯ ಮಾಡುತ್ತಿವೆ. ತಮ್ಮ ಯೋಗಕ್ಷೇಮ ಮತ್ತು ಭದ್ರತೆಗೆ ಹಣ ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸುತ್ತಿದ್ದಾರೆ. ಮಣಿಪುರದ ಹಿಂಸಾಚಾರದ ಸುತ್ತಲಿನ ರಾಜಕೀಯವು ತೀವ್ರಗೊಳ್ಳುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಪ್ರತಿಪಕ್ಷ ನಾಯಕರು ಸರ್ಕಾರವನ್ನು ದೂಷಿಸುತ್ತಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಹಲವು ಬಾರಿ ಪ್ರವಾಸ ಕೈಗೊಂಡಿದ್ದು, ಹಿಂಸಾಚಾರದ ಘಟನೆಯ ತನಿಖೆಗೆ ಸಮಿತಿಗಳನ್ನು ಕೂಡ ರಚಿಸಿದ್ದಾರೆ. ಹಿಂಸಾಚಾರವನ್ನು ಹತ್ತಿಕ್ಕಲು ಸುಮಾರು 40,000 ಕೇಂದ್ರ ಭದ್ರತಾ ಪಡೆಗಳು ಮಣಿಪುರ ಪೊಲೀಸರಿಗೆ ಬೆಂಬಲ ನೀಡುವುದನ್ನು ಮುಂದುವರಿಸುವುದಾಗಿ ಸಚಿವಾಲಯ ದೃಢಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...