Homeಮುಖಪುಟಮಣಿಪುರ ಹಿಂಸಾಚಾರ: ಅಪ್ರಚೋದಿತ ಗುಂಡಿನ ದಾಳಿ; ಯೋಧನಿಗೆ ಗಾಯ

ಮಣಿಪುರ ಹಿಂಸಾಚಾರ: ಅಪ್ರಚೋದಿತ ಗುಂಡಿನ ದಾಳಿ; ಯೋಧನಿಗೆ ಗಾಯ

- Advertisement -
- Advertisement -

ಹಿಂಸಾಚಾರ ಪೀಡಿತ ಮಣಿಪುರದ ಚಿಂಗ್‌ಮಾಂಗ್ ಗ್ರಾಮದ ಕಡೆಗೆ ಜೂನ್ 18 ಮತ್ತು 19 ರ ಮಧ್ಯರಾತ್ರಿಯಲ್ಲಿ  ಸಶಸ್ತ್ರ ದುಷ್ಕರ್ಮಿಗಳು ಕಾಂಟೋ ಸಬಲ್‌ನಿಂದ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಇದರಿಂದ ಭಾರತೀಯ ಸೇನೆಯ ಸಿಬ್ಬಂದಿಗೆ ಗಾಯಗೊಂಡಿದ್ದಾರೆ ಎಂದು ಭಾರತೀಯ ಸೇನೆಯ ಸ್ಪಿಯರ್ ಕಾರ್ಪ್ಸ್ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಗಾಯಗೊಂಡ ಸಿಬ್ಬಂದಿಯನ್ನು ಲೀಮಾಖೋಂಗ್‌ನ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಈ ಪ್ರದೇಶದಲ್ಲಿ ಗ್ರಾಮಸ್ಥರ ಉಪಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸೇನಾ ತಂಡಗಳು ಪ್ರತೀಕಾರದ ಗುಂಡಿನ ಮೂಲಕ ಪರಿಸ್ಥಿತಿಯನ್ನು ನಿಯಂತ್ರಿಸಿವೆ. ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಣಿಪುರದಲ್ಲಿ ಮೈತಿ ಮತ್ತು ಕುಕಿ ಬುಡಕಟ್ಟು ಸಮುದಾಯದ ನಡುವಣ ಹಿಂಸಾಚಾರ ಆರಂಭವಾಗಿ 45 ದಿನಗಳು ಉರುಳಿದರೂ ಇನ್ನೂ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿಲ್ಲ. ಸಧ್ಯ ರಾಜ್ಯದಲ್ಲಿ ಕರ್ಫ್ಯೂ ಸಡಿಲಿಸಲು ಅಧಿಕಾರಿಗಳು ನಿರ್ಧರಿಸಿದ ನಂತರ ಈ ಘಟನೆ ನಡೆದಿದೆ.

ಭದ್ರತಾ ಪಡೆಗಳು ಇನ್ನೂ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಬಿಗಿಯಾದ ಜಾಗರೂಕತೆಯನ್ನು ನಿರ್ವಹಿಸುತ್ತಿವೆ ಮತ್ತು ಭಾರತೀಯ ಸೇನೆಯು ಇಂಫಾಲ್ ಕಣಿವೆಯಲ್ಲಿ ಭಾನುವಾರ ಧ್ವಜ ಮೆರವಣಿಗೆಯನ್ನು ನಡೆಸಿತು.

ಇದನ್ನೂ ಓದಿ: ಮಣಿಪುರದಲ್ಲಿ ಹೆಚ್ಚಾದ ಹಿಂಸಾಚಾರ: ಕೇಂದ್ರ ಸಚಿವರ ಮನೆಗೆ ಬೆಂಕಿ!

ಈ ಹಿಂಸಾಚಾರದಿಂದ ಇಲ್ಲಿಯವರೆಗೆ 115 ಜನರು ಪ್ರಾಣ ಕಳೆದುಕೊಂಡಿದ್ದು, 60 ಸಾವಿರ ಮಂದಿ ನೆಲೆ ಕಳೆದುಕೊಂಡಿದ್ದಾರೆ. ಸಚಿವರ ಮನೆಗಳನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ. ಶಾಂತಿ ಪುನರ್ ಸ್ಥಾಪನೆಗೆ ಭಾರತೀಯ ಸೇನೆ ಸೇರಿದಂತೆ 40 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಮೊಕ್ಕಾಂ ಹೂಡಿದ್ದು, ಸಂಘರ್ಷ ನಿಯಂತ್ರಣಕ್ಕೆ ಹರಸಾಹಸಪಡುತ್ತಿದ್ದಾರೆ.

ಮತ್ತೊಂದೆಡೆ ಕೇಂದ್ರ ಮತ್ತು ಮಣಿಪುರದ ಬಿಜೆಪಿ ಸರ್ಕಾರವು ಯಥಾಸ್ಥಿತಿ ಕಾಯ್ದುಕೊಳ್ಳುವ ಸಂಬಂಧ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳುತ್ತಿವೆ. ಇದರ ಭಾಗವಾಗಿಯೇ ಮೈತೇಯಿ ಮತ್ತು ಕುಕಿ ಸಮುದಾಯದ ಬೇಡಿಕೆ ಈಡೇರಿಸುವುದಾಗಿ ಹೇಳಿದರೂ ಶಾಂತಿ ಸ್ಥಾಪನೆಯು ಮರೀಚಿಕೆಯಾಗಿದೆ.

ನೆರೆಯ ಈಶಾನ್ಯ ರಾಜ್ಯಗಳು ನಿರಾಶ್ರಿತರಿಗೆ ಆಶ್ರಯ ಪಡೆಯಲು ಸಹಾಯ ಮಾಡುತ್ತಿವೆ. ತಮ್ಮ ಯೋಗಕ್ಷೇಮ ಮತ್ತು ಭದ್ರತೆಗೆ ಹಣ ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸುತ್ತಿದ್ದಾರೆ. ಮಣಿಪುರದ ಹಿಂಸಾಚಾರದ ಸುತ್ತಲಿನ ರಾಜಕೀಯವು ತೀವ್ರಗೊಳ್ಳುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಪ್ರತಿಪಕ್ಷ ನಾಯಕರು ಸರ್ಕಾರವನ್ನು ದೂಷಿಸುತ್ತಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಹಲವು ಬಾರಿ ಪ್ರವಾಸ ಕೈಗೊಂಡಿದ್ದು, ಹಿಂಸಾಚಾರದ ಘಟನೆಯ ತನಿಖೆಗೆ ಸಮಿತಿಗಳನ್ನು ಕೂಡ ರಚಿಸಿದ್ದಾರೆ. ಹಿಂಸಾಚಾರವನ್ನು ಹತ್ತಿಕ್ಕಲು ಸುಮಾರು 40,000 ಕೇಂದ್ರ ಭದ್ರತಾ ಪಡೆಗಳು ಮಣಿಪುರ ಪೊಲೀಸರಿಗೆ ಬೆಂಬಲ ನೀಡುವುದನ್ನು ಮುಂದುವರಿಸುವುದಾಗಿ ಸಚಿವಾಲಯ ದೃಢಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...