Homeಮುಖಪುಟಮಣಿಪುರ ಹಿಂಸಾಚಾರ ಸಂತ್ರಸ್ತರ ಸ್ಮರಣಾರ್ಥ 'ಗನ್ ಸೆಲ್ಯೂಟ್'; ಎಫ್‌ಐಆರ್ ದಾಖಲು

ಮಣಿಪುರ ಹಿಂಸಾಚಾರ ಸಂತ್ರಸ್ತರ ಸ್ಮರಣಾರ್ಥ ‘ಗನ್ ಸೆಲ್ಯೂಟ್’; ಎಫ್‌ಐಆರ್ ದಾಖಲು

- Advertisement -
- Advertisement -

ಮಣಿಪುರ ಜನಾಂಗೀಯ ಹಿಂಸಾಚಾರದ ಸಮಯದಲ್ಲಿ ಸಾವನ್ನಪ್ಪಿದವರ ಸ್ಮರಣಾರ್ಥ ಜನರ ಗುಂಪೊಂದು ‘ಗನ್ ಸೆಲ್ಯೂಟ್’ ನೀಡಿರುವ ಘಟನೆ ರಾಜ್ಯದ ಕಾಂಗ್ಪೋಕ್ಪಿ ಜಿಲ್ಲೆಯ ಸೈಕುಲ್ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಮಣಿಪುರ ಹಿಂಸಾಚಾರ

ಜನಾಂಗೀಯ ಹಿಂಸಾಚಾರದ ಸಮಯದಲ್ಲಿ ಸಾವನ್ನಪ್ಪಿದವರ ಸ್ಮರಣಾರ್ಥ ಜನರ ಗುಂಪೊಂದು ಗನ್ ಸೆಲ್ಯೂಟ್ ನೀಡಿದೆ ಎಂದು ಹೇಳಲಾಗಿದೆ ಎಂದು TNIE ವರದಿ ಮಾಡಿದೆ. ಈ ನಡುವೆ ಮೈತೇಯಿ ಮತ್ತು ಕುಕಿ-ಝೋ ಬುಡಕಟ್ಟು ಸಮುದಾಯದವರು ಶನಿವಾರ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಂಘರ್ಷದ ಎರಡನೇ ವಾರ್ಷಿಕೋತ್ಸವವನ್ನು ಆಚರಿಸಿದ್ದಾರೆ ಎಂದು ವರದಿಯಾಗಿದೆ.

ಗನ್‌ ಸೆಲ್ಯೂಟ್ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ನಾಯಕರು ಮತ್ತು ಹಿರಿಯರನ್ನು ಪೊಲೀಸ್ ಠಾಣೆಗೆ ಕರೆಸಲಾಗಿದ್ದು, ದುಷ್ಕರ್ಮಿಗಳನ್ನು ಬಂಧಿಸಲು ವಿವಿಧ ಪ್ರದೇಶಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಕಾರ್ಯಕ್ರಮದ ಆಯೋಜಕರ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು” ಎಂದು ಪೊಲೀಸ್ ಹೇಳಿಕೆ ತಿಳಿಸದೆ.

ಐದು ಸಿಂಗಲ್ ಬ್ಯಾರೆಲ್ ಗನ್‌ಗಳು ಮತ್ತು ಸಮವಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದು, ಆರೋಪಿಗಳನ್ನು ಬಂಧಿಸಲು ಮತ್ತು ಇತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲು ದಾಳಿ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.

ಈ ಮಧ್ಯೆ, ಮೈಯೇಯಿ ಮತ್ತು ಥಡೌ ಸಮುದಾಯಗಳನ್ನು ಪ್ರತಿನಿಧಿಸುವ ಐದು ಸಂಘಟನೆಗಳು ರಾಜ್ಯದಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಅನುಷ್ಠಾನಕ್ಕಾಗಿ ಸಾಮೂಹಿಕವಾಗಿ ಧ್ವನಿ ಎತ್ತಿವೆ.

ಮೈತೆಯ್ ಹೆರಿಟೇಜ್ ಸೊಸೈಟಿ, ದೆಹಲಿ ಮಣಿಪುರಿ ಸೊಸೈಟಿ, ಮತ್ತು ನಿಂಗೋಲ್ ಯುನೈಟೆಡ್ ಪ್ರೋಗ್ರೆಸ್ಸಿವ್ ಇನಿಶಿಯೇಟಿವ್ (ಮೈತೆಯ್‌ಗಳನ್ನು ಪ್ರತಿನಿಧಿಸುತ್ತದೆ) ಮತ್ತು ಥಡೌ ಇನ್ಪಿ ಮಣಿಪುರ ಮತ್ತು ಥಡೌ ವಿದ್ಯಾರ್ಥಿ ಸಂಘ – ಇತ್ತೀಚೆಗೆ ಸಭೆ ಸೇರಿ ಮಣಿಪುರದಲ್ಲಿ ಎನ್‌ಆರ್‌ಸಿ ಅನುಷ್ಠಾನವನ್ನು ತ್ವರಿತಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ನಿರ್ಧರಿಸಿದವು.

ಅಕ್ರಮ ವಲಸಿಗರ ಒಳಹರಿವಿನ ಸಮಸ್ಯೆಯನ್ನು ಸರ್ಕಾರ ತುರ್ತಾಗಿ ಪರಿಹರಿಸಬೇಕೆಂದು ಈ ಗುಂಪುಗಳು ಒತ್ತಾಯಿಸಿವೆ. ಅವರ ಉಪಸ್ಥಿತಿಯು ಸ್ಥಳೀಯ ಸಮುದಾಯಗಳು ಮತ್ತು ರಾಷ್ಟ್ರೀಯ ಭದ್ರತೆಗೆ ಅಪಾಯವನ್ನುಂಟುಮಾಡುತ್ತದೆ ಎಂದು ಅವರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಜನಸಂಖ್ಯಾ ಸಮಗ್ರತೆಯನ್ನು ಕಾಪಾಡಲು ಮತ್ತು ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಸಂಪೂರ್ಣ ಎನ್‌ಆರ್‌ಸಿ ಪ್ರಕ್ರಿಯೆಯು ಮೂಲಭೂತವಾಗಿ ಬೇಕಾಗಿದೆ” ಎಂದು ಅವರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮಣಿಪುರ ಹಿಂಸಾಚಾರ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭೂತಬಂಗಲೆಯಾದ ದೇಶದ 12 ವಿಮಾನ ನಿಲ್ದಾಣಗಳು; ರನ್‌ವೇಯಲ್ಲಿ ಬೀದಿನಾಯಿಗಳು: ವರದಿ

ಭೂತಬಂಗಲೆಯಾದ ದೇಶದ 12 ವಿಮಾನ ನಿಲ್ದಾಣಗಳು; ರನ್‌ವೇಯಲ್ಲಿ ಬೀದಿನಾಯಿಗಳು: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...