Homeಮುಖಪುಟಮಣಿಪುರ ಹಿಂಸಾಚಾರ ಸಂತ್ರಸ್ತರ ಸ್ಮರಣಾರ್ಥ 'ಗನ್ ಸೆಲ್ಯೂಟ್'; ಎಫ್‌ಐಆರ್ ದಾಖಲು

ಮಣಿಪುರ ಹಿಂಸಾಚಾರ ಸಂತ್ರಸ್ತರ ಸ್ಮರಣಾರ್ಥ ‘ಗನ್ ಸೆಲ್ಯೂಟ್’; ಎಫ್‌ಐಆರ್ ದಾಖಲು

- Advertisement -
- Advertisement -

ಮಣಿಪುರ ಜನಾಂಗೀಯ ಹಿಂಸಾಚಾರದ ಸಮಯದಲ್ಲಿ ಸಾವನ್ನಪ್ಪಿದವರ ಸ್ಮರಣಾರ್ಥ ಜನರ ಗುಂಪೊಂದು ‘ಗನ್ ಸೆಲ್ಯೂಟ್’ ನೀಡಿರುವ ಘಟನೆ ರಾಜ್ಯದ ಕಾಂಗ್ಪೋಕ್ಪಿ ಜಿಲ್ಲೆಯ ಸೈಕುಲ್ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಮಣಿಪುರ ಹಿಂಸಾಚಾರ

ಜನಾಂಗೀಯ ಹಿಂಸಾಚಾರದ ಸಮಯದಲ್ಲಿ ಸಾವನ್ನಪ್ಪಿದವರ ಸ್ಮರಣಾರ್ಥ ಜನರ ಗುಂಪೊಂದು ಗನ್ ಸೆಲ್ಯೂಟ್ ನೀಡಿದೆ ಎಂದು ಹೇಳಲಾಗಿದೆ ಎಂದು TNIE ವರದಿ ಮಾಡಿದೆ. ಈ ನಡುವೆ ಮೈತೇಯಿ ಮತ್ತು ಕುಕಿ-ಝೋ ಬುಡಕಟ್ಟು ಸಮುದಾಯದವರು ಶನಿವಾರ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಂಘರ್ಷದ ಎರಡನೇ ವಾರ್ಷಿಕೋತ್ಸವವನ್ನು ಆಚರಿಸಿದ್ದಾರೆ ಎಂದು ವರದಿಯಾಗಿದೆ.

ಗನ್‌ ಸೆಲ್ಯೂಟ್ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ನಾಯಕರು ಮತ್ತು ಹಿರಿಯರನ್ನು ಪೊಲೀಸ್ ಠಾಣೆಗೆ ಕರೆಸಲಾಗಿದ್ದು, ದುಷ್ಕರ್ಮಿಗಳನ್ನು ಬಂಧಿಸಲು ವಿವಿಧ ಪ್ರದೇಶಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಕಾರ್ಯಕ್ರಮದ ಆಯೋಜಕರ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು” ಎಂದು ಪೊಲೀಸ್ ಹೇಳಿಕೆ ತಿಳಿಸದೆ.

ಐದು ಸಿಂಗಲ್ ಬ್ಯಾರೆಲ್ ಗನ್‌ಗಳು ಮತ್ತು ಸಮವಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದು, ಆರೋಪಿಗಳನ್ನು ಬಂಧಿಸಲು ಮತ್ತು ಇತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲು ದಾಳಿ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.

ಈ ಮಧ್ಯೆ, ಮೈಯೇಯಿ ಮತ್ತು ಥಡೌ ಸಮುದಾಯಗಳನ್ನು ಪ್ರತಿನಿಧಿಸುವ ಐದು ಸಂಘಟನೆಗಳು ರಾಜ್ಯದಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಅನುಷ್ಠಾನಕ್ಕಾಗಿ ಸಾಮೂಹಿಕವಾಗಿ ಧ್ವನಿ ಎತ್ತಿವೆ.

ಮೈತೆಯ್ ಹೆರಿಟೇಜ್ ಸೊಸೈಟಿ, ದೆಹಲಿ ಮಣಿಪುರಿ ಸೊಸೈಟಿ, ಮತ್ತು ನಿಂಗೋಲ್ ಯುನೈಟೆಡ್ ಪ್ರೋಗ್ರೆಸ್ಸಿವ್ ಇನಿಶಿಯೇಟಿವ್ (ಮೈತೆಯ್‌ಗಳನ್ನು ಪ್ರತಿನಿಧಿಸುತ್ತದೆ) ಮತ್ತು ಥಡೌ ಇನ್ಪಿ ಮಣಿಪುರ ಮತ್ತು ಥಡೌ ವಿದ್ಯಾರ್ಥಿ ಸಂಘ – ಇತ್ತೀಚೆಗೆ ಸಭೆ ಸೇರಿ ಮಣಿಪುರದಲ್ಲಿ ಎನ್‌ಆರ್‌ಸಿ ಅನುಷ್ಠಾನವನ್ನು ತ್ವರಿತಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ನಿರ್ಧರಿಸಿದವು.

ಅಕ್ರಮ ವಲಸಿಗರ ಒಳಹರಿವಿನ ಸಮಸ್ಯೆಯನ್ನು ಸರ್ಕಾರ ತುರ್ತಾಗಿ ಪರಿಹರಿಸಬೇಕೆಂದು ಈ ಗುಂಪುಗಳು ಒತ್ತಾಯಿಸಿವೆ. ಅವರ ಉಪಸ್ಥಿತಿಯು ಸ್ಥಳೀಯ ಸಮುದಾಯಗಳು ಮತ್ತು ರಾಷ್ಟ್ರೀಯ ಭದ್ರತೆಗೆ ಅಪಾಯವನ್ನುಂಟುಮಾಡುತ್ತದೆ ಎಂದು ಅವರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಜನಸಂಖ್ಯಾ ಸಮಗ್ರತೆಯನ್ನು ಕಾಪಾಡಲು ಮತ್ತು ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಸಂಪೂರ್ಣ ಎನ್‌ಆರ್‌ಸಿ ಪ್ರಕ್ರಿಯೆಯು ಮೂಲಭೂತವಾಗಿ ಬೇಕಾಗಿದೆ” ಎಂದು ಅವರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮಣಿಪುರ ಹಿಂಸಾಚಾರ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭೂತಬಂಗಲೆಯಾದ ದೇಶದ 12 ವಿಮಾನ ನಿಲ್ದಾಣಗಳು; ರನ್‌ವೇಯಲ್ಲಿ ಬೀದಿನಾಯಿಗಳು: ವರದಿ

ಭೂತಬಂಗಲೆಯಾದ ದೇಶದ 12 ವಿಮಾನ ನಿಲ್ದಾಣಗಳು; ರನ್‌ವೇಯಲ್ಲಿ ಬೀದಿನಾಯಿಗಳು: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...