Homeಮುಖಪುಟಮಣಿಪುರ | ನಿಲ್ಲದ ಹಿಂಸಾಚಾರ : ಮೈತೇಯಿ ಗುಂಪಿನಿಂದ ಹಿಂಸಾತ್ಮಕ ಪ್ರತಿಭಟನೆ

ಮಣಿಪುರ | ನಿಲ್ಲದ ಹಿಂಸಾಚಾರ : ಮೈತೇಯಿ ಗುಂಪಿನಿಂದ ಹಿಂಸಾತ್ಮಕ ಪ್ರತಿಭಟನೆ

- Advertisement -
- Advertisement -

ಒಂದೆಡೆ ಆಪಾದಿತ ಕುಕಿ ಬಂಡುಕೋರರ ಬೆದರಿಕೆ ಮತ್ತೊಂದೆಡೆ ಮೈತೇಯಿ ಗುಂಪಿನ ಹಿಂಸಾತ್ಮಕ ಪ್ರತಿಭಟನೆಯಿಂದ ಕಣಿವೆ ರಾಜ್ಯ ಮಣಿಪುರದಲ್ಲಿ ಪರಿಸ್ಥಿತಿ ಇನ್ನೂ ಗಂಭೀರವಾಗಿದೆ.

ನವೆಂಬರ್ 11 ರಂದು ಕುಕಿ ಬಂಡುಕೋರರಿಂದ ಅಪಹರಣಕ್ಕೆ ಒಳಗಾಗಿದ್ದಾರೆ ಎನ್ನಲಾದ ಮೈತೇಯಿ ಗುಂಪಿನ ಆರು ಮಂದಿಯ ಮೃತದೇಹಗಳು ಕಳೆದ ಶುಕ್ರವಾರದಿಂದ-ಭಾನುವಾರದ ನಡುವೆ ಪತ್ತೆಯಾಗಿವೆ. ಇದರಿಂದ ರೊಚ್ಚಿಗೆದ್ದಿರುವ ಮೈತೇಯಿ ಗುಂಪು ಬೀದಿಗಿಳಿದು ಹಿಂಸಾಚಾರದಲ್ಲಿ ತೊಡಗಿದೆ.

ಕರ್ಫ್ಯೂ ಆದೇಶ ಉಲ್ಲಂಘಿಸಿ ಸೋಮವಾರ (ನ.18) ಇಂಫಾಲ ಜಿಲ್ಲೆಯಲ್ಲಿ ಬೀದಿಗಿಳಿದಿದ್ದ ಮೈತೇಯಿ ಗುಂಪು, ಸರ್ಕಾರಿ ಕಚೇರಿಗಳಿಗೆ ಬೀಗ ಹಾಕಿದೆ. ಹಿಂಸಾಚಾರದ ಕೇಂದ್ರ ಬಿಂದುವಾದ ಜಿರಿಬಾಮ್ ಜಿಲ್ಲೆಯಲ್ಲಿ ಉದ್ರಿಕ್ತರು ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿ ಮಾಡಿದ್ದಾರೆ. ಇದನ್ನು ತಡೆಯುವವ ವೇಳೆ ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವೆ ಸಂಘರ್ಷ ನಡೆದಿದೆ.

ಭಾನುವಾರ (ನ.17) ರಾತ್ರಿ ಪೊಲೀಸರೊಂದಿಗಿನ ಘರ್ಷಣೆ ವೇಳೆ ಜಿರಿಬಾಮ್ ಜಿಲ್ಲೆಯಲ್ಲಿ ಮೈತೇಯಿ ಗುಂಪಿನ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಭದ್ರತಾ ಪಡೆಗಳ ಗುಂಡಿಗೆ ಅವರು ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.

ಶಾಲೆ, ಚರ್ಚ್, ಮನೆಗಳಿಗೆ ಬೆಂಕಿ

ಕುಕಿ ಬಂಡುಕೋರರು ತಮ್ಮ ಸಮುದಾಯದವರನ್ನು ಅಪಹರಿಸಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿರುವ ಮೈತೇಯಿ ಸಮುದಾಯ, ಕುಕಿಗಳ ಶಾಲೆ, ಚರ್ಚ್‌ ಮತ್ತು ಮನೆಗಳಿಗೆ ಬೆಂಕಿ ಹಚ್ಚಿದೆ ಎಂದು ವರದಿಗಳು ಹೇಳಿವೆ.

ಐದು ಚರ್ಚ್‌, ಶಾಲೆ, ಪೆಟ್ರೋಲ್ ಬಂಕ್ ಮತ್ತು 14 ಮನೆಗಳಿಗೆ ಮೈತೇಯಿ ಗುಂಪು ಬೆಂಕಿ ಹಚ್ಚಿದೆ ಎಂದು ಕುಕಿ ಝೋ ಬುಡಕಟ್ಟು ಸಂಘಟನೆ ಇಂಡೀಜನಸ್ ಟ್ರೈಬಲ್ ಲೀಡರ್ಸ್‌ ಫೋರಂ (ಐಟಿಎಲ್‌ಎಫ್‌) ಆರೋಪಿಸಿದೆ.

ಕಳೆದ ವಾರ ಭದ್ರತಾ ಪಡೆಗಳ ಗುಂಡಿಗೆ ಬಲಿಯಾದವರು ಭಯೋತ್ಪಾದಕರಲ್ಲ. ಭದ್ರತಾ ಪಡೆಗಳನ್ನು ಕುಕಿಗಳನ್ನು ಗುರಿಯಾಗಿಸಿದೆ ಎಂದು ಕುಕಿ ಸಂಘಟನೆಗಳು ಹೇಳಿವೆ.

ಮೂರು ಪ್ರಕರಣಗಳ ಎನ್‌ಐಎ ತನಿಖೆ

ಮಣಿಪುರದಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ನವೆಂಬರ್ 13 ರಂದು ಮೂರು ಎಫ್‌ಐಆರ್ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದೆ ಎಂದು ತಿಳಿದು ಬಂದಿದೆ.

ಹೆಚ್ಚುವರಿ ಪಡೆಗಳ ರವಾನೆ

ಮಣಿಪುರದಲ್ಲಿ ಇತ್ತೀಚೆಗೆ ಮತ್ತೆ ಹಿಂಸಾಚಾರ ಭುಗಿಲೆದ್ದ ಬಳಿಕ ಕೇಂದ್ರ ಗೃಹ ಸಚಿವಾಲಯ 20 ಸಿಎಪಿಎಫ್‌ ಕಂಪನಿಗಳನ್ನು (ಸಿಆರ್‌ಪಿಎಫ್‌ನ 15 ಮತ್ತು ಬಿಎಸ್‌ಎಫ್‌ನ 5) ರವಾನಿಸಿತ್ತು. ಈಗ ಹೆಚ್ಚುವರಿಯಾಗಿ 50 ಕಂಪನಿಗಳನ್ನು ಈ ವಾರಾಂತ್ಯದೊಳಗೆ ಮಣಿಪುರ ತಲುಪಲಿವೆ. 35 ಸಿಆರ್‌ಪಿಎಫ್‌ ಮತ್ತು ಇನ್ನುಳಿದ ಕಂಪನಿಗಳನ್ನು ಬಿಎಸ್‌ಎಫ್‌ನಿಂದ ರವಾನಿಸಲಾಗುತ್ತದೆ.

ಇದನ್ನೂ ಓದಿ : ಮತಗಟ್ಟೆಗಳಲ್ಲಿ ಮೊಬೈಲ್ ನಿಷೇಧ | ಚುನಾವಣೆ ಆಯೋಗದ ಆದೇಶ ಎತ್ತಿಹಿಡಿದ ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...