Homeಮುಖಪುಟಮಣಿಪುರ ಮಹಿಳೆ ಅತ್ಯಾಚಾರ ಪ್ರಕರಣದ ಆರೋಪಿ ಮುಸ್ಲಿಂ ಎಂದು ಸುಳ್ಳು ಸುದ್ದಿ ಪ್ರಕಟಿಸಿ ನಂತರ ಡಿಲೀಟ್...

ಮಣಿಪುರ ಮಹಿಳೆ ಅತ್ಯಾಚಾರ ಪ್ರಕರಣದ ಆರೋಪಿ ಮುಸ್ಲಿಂ ಎಂದು ಸುಳ್ಳು ಸುದ್ದಿ ಪ್ರಕಟಿಸಿ ನಂತರ ಡಿಲೀಟ್ ಮಾಡಿದ ANI: ತೀವ್ರ ಖಂಡನೆ

- Advertisement -
- Advertisement -

ಮಣಿಪುರದ ಕುಕಿ ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರದ ವಿಡಿಯೋವೊಂದು ಗುರುವಾರ ವೈರಲ್ ಆಗಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಅಲ್ಲಿಯವರೆಗೂ ಮೌನವಾಗಿದ್ದ ಪ್ರಧಾನಿ ಮೋದಿ ಮಣಿಪುರದ ಬಗ್ಗೆ ತುಟಿ ಬಿಚ್ಚಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಆ ಹೀನ ಪ್ರಕರಣದ ಆರೋಪಿ ಮುಸ್ಲಿಂ ಎಂದು ಸುದ್ದಿ ಸಂಸ್ಥೆ ANI ಸುಳ್ಳು ಸುದ್ದಿ ಪ್ರಕಟಿಸಿ ನಂತರ ಡಿಲೀಟ್ ಮಾಡಿದ ಘಟನೆ ನಡೆದಿದ್ದು, ಅದಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.

ಗುರುವಾರ ರಾತ್ರಿ 9.27ರ ಸಮಯದಲ್ಲಿ, “ಮಣಿಪುರ ವೈರಲ್ ವಿಡಿಯೋ ಪ್ರಕರಣ| ಪೀಪಲ್ಸ್ ರೆವಲ್ಯೂಷನರಿ ಪಾರ್ಟಿ ಆಫ್ ಕಂಗ್ಲೀಪಾಕ್ (PREPAK) ಪರ ಕಾರ್ಯಕರ್ತನಾದ ಇಂಫಾಲ್ ಪೂರ್ವದ ಎಂ.ಡಿ ಇಬುಂಗೋ ಅಲಿಯಾಸ್ ಅಬ್ದುಲ್ ಹಿಲಿಮ್ (38) ನನ್ನು ಇಂಫಾಲ್ ಪೂರ್ವ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಪಿಎಸ್ ಅಡಿಯಲ್ಲಿ ಅಪಹರಣ ಮತ್ತು ಸಾಮೂಹಿಕ ಅತ್ಯಾಚಾರದ ಘೋರ ಅಪರಾಧದ ಒಟ್ಟು ಮೂವರು ಪ್ರಮುಖ ಆರೋಪಿಗಳನ್ನು ಇಂದು ಬಂಧಿಸಲಾಗಿದೆ: ಮಣಿಪುರ ಪೊಲೀಸರು” ಎಂದು ANI ಟ್ವೀಟ್ ಮಾಡಿತ್ತು.

ಇದನ್ನೇ ಆಧರಿಸಿ NDTV ಸೇರಿದಂತೆ ಹಲವು ಮುಖ್ಯವಾಹಿನಿ ಮಾಧ್ಯಮಗಳು ಟ್ವೀಟ್ ಮತ್ತು ಸುದ್ದಿ ವರದಿ ಮಾಡಿದ್ದವು. ಅದರ ಬೆನ್ನಲೇ ಬಲಪಂಥೀಯರು ಮತ್ತು ಬಿಜೆಪಿ ಐಟಿ ಸೆಲ್ ಸಾಮೂಹಿಕ ಅತ್ಯಾಚಾರದ ಆರೋಪಿ ಮುಸ್ಲಿಂ ಎಂದು ಷರಾ ಬರೆದಿದ್ದರು. ತಾಜಿಂದರ್ ಪಾಲ್ ಬಗ್ಗಾ ಮತ್ತು ರಿಷಿ ಬಾಗೀ ಎಂಬ ಬಿಜೆಪಿ ಮುಖಂಡರು ಅಬ್ದುಲ್ ಖಾನ್ ಆರೋಪಿ ಎಂದು ಟ್ವೀಟ್ ಮಾಡಿದರು. ಆ ಮೂಲಕ ಸುಳ್ಳು ಸುದ್ದಿಯನ್ನು ವೈರಲ್ ಮಾಡಿದರು. ಆದರೆ ಸ್ವಲ್ಪ ಹೊತ್ತಿನಲ್ಲೇ ANI ತನ್ನ ಟ್ವೀಟ್ ಅನ್ನು ಡಿಲೀಟ್ ಮಾಡಿತು.

ವಾಸ್ತವವೇನು?

ಮಣಿಪುರ ಪೊಲೀಸರ ಪ್ರಕಾರ ಬೆತ್ತಲೆ ಮೆರವಣಿಗೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತೌಬಲ್ ಜಿಲ್ಲೆಯ 4 ಆರೋಪಿಗಳನ್ನು ಬಂಧಿಸಲಾಗಿದೆ. ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಬೇರೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ PREPAK ಪರ ಕಾರ್ಯಕರ್ತನಾದ ಅಬ್ದುಲ್ ಹಿಲಿಮ್ ಎಂಬುವವರನ್ನು ಬಂಧಿಸಿದ್ದಾರೆ. ಆದರೆ ಸಂಬಂಧವಿಲ್ಲದ ಆ ಪ್ರಕರಣದ ಆರೋಪಿಯನ್ನು ಬೆತ್ತಲೆ ಮೆರವಣಿಗೆ ವಿಡಿಯೋಗೆ ತಳುಕು ಹಾಕಿ ANI ಟ್ವೀಟ್ ಮಾಡಿತ್ತು. ನಂತರ ತಪ್ಪಿನ ಅರಿವಾಗಿ ಡಿಲೀಟ್ ಮಾಡಿದೆ. ಆದರೆ ಅಷ್ಟರಲ್ಲಿ ಹಲವು ಸುದ್ದಿಸಂಸ್ಥೆಗಳು ಅದನ್ನೇ ನಿಜವೆಂದು ನಂಬಿ ಪ್ರಸಾರ ಮಾಡಿವೆ. ಬಿಜೆಪಿ ಐಡಿ ಸೆಲ್ ಕಾರ್ಯಕರ್ತರು ಮುಸ್ಲಿಂ ದ್ವೇಷ ಕಾರಿಕೊಂಡಿದ್ದಾರೆ.

ಕ್ಷಮೆಯಾಚಿಸಿದ ANI

ಸ್ಟೋರಿ ಹಿಂತೆಗೆದುಕೊಳ್ಳುವಿಕೆ ಮತ್ತು ಕ್ಷಮೆಯಾಚನೆಯ ಕುರಿತು ಟಿಪ್ಪಣಿ: ನಿನ್ನೆ ಸಂಜೆ, ಮಣಿಪುರ ಪೊಲೀಸರು ಕೈಗೊಂಡ ಬಂಧನಗಳ ಬಗ್ಗೆ ANI ಯಿಂದ ಟ್ವೀಟ್ ಅನ್ನು ಪೋಸ್ಟ್ ಮಾಡಲಾಗಿದೆ. ಇದು ವೈರಲ್ ವೀಡಿಯೊದಲ್ಲಿ ತೋರಿಸಿರುವ ಘಟನೆಗಳಿಗೆ ಸಂಬಂಧಿಸಿದಂತೆ ಮಣಿಪುರ ಪೊಲೀಸರು ಮಾಡಿದ ಇತರ ಬಂಧನಗಳಿಗೆ ಸಂಬಂಧಿಸಿದಂತೆ ಹಿಂದಿನ ಟ್ವೀಟ್‌ನೊಂದಿಗೆ ಗೊಂದಲಕ್ಕೊಳಗಾದ ಕಾರಣ ಪೋಸ್ಟ್ ಮಾಡಿದ ಟ್ವೀಟ್‌ಗಳ ತಪ್ಪಾದ ಓದುವಿಕೆಯನ್ನು ಆಧರಿಸಿದೆ. ಸ್ವಲ್ಪ ಸಮಯದ ನಂತರ, ಕೆಲವೇ ನಿಮಿಷಗಳಲ್ಲಿ, ದೋಷವನ್ನು ಅರಿತುಕೊಂಡ ತಕ್ಷಣ ಟ್ವೀಟ್ ಅನ್ನು ತಕ್ಷಣವೇ ಅಳಿಸಲಾಗಿದೆ ಮತ್ತು ಸರಿಪಡಿಸಿದ ಆವೃತ್ತಿಯನ್ನು ತಕ್ಷಣವೇ ಪ್ರಕಟಿಸಲಾಗಿದೆ. ಈ ತಪ್ಪಿಗೆ ವಿಷಾದಿಸುತ್ತೇವೆ ಎಂದು ANI ಶುಕ್ರವಾರ ಬೆಳಿಗ್ಗೆ 10.29 ರ ಸಮಯದಲ್ಲಿ ಮತ್ತೊಂದು ಟ್ವೀಟ್ ಮಾಡಿದೆ.

ಈ ಕುರಿತು ಸರಣಿ ಟ್ವೀಟ್ ಮೂಲಕ ಅಸಮಾಧಾನ ಹೊರಹಾಕಿರುವ ಆಲ್ಟ್‌ನ್ಯೂಸ್ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್, “ದಕ್ಷಿಣ ಏಷ್ಯಾದ ಅತಿ ದೊಡ್ಡ ಮಾಧ್ಯಮ ಸಂಸ್ಥೆ ಎಂದು ಹೇಳಿಕೊಳ್ಳುವ ANI ತಪ್ಪಾಗಿ ಟ್ವೀಟ್ ಮಾಡಿದೆ. ಬಿಜೆಪಿ ಐಟಿ ಸೆಲ್ ಟ್ರೋಲ್‌ಗಳು ಈ ಪ್ರಕರಣಕ್ಕೆ ಮುಸ್ಲಿಂ ಕೋಮುವಾದಿ ಆಯಾಮ ನೀಡಿದವು. NDTV, PuthiyathalaimuraiTV ಥರಹದ ದೊಡ್ಡ ಫಾಲೋವಿಂಗ್ ಇರುವ ಮಾಧ್ಯಮಗಳು ಅದನ್ನೆ ಪ್ರಸಾರ ಮಾಡಿದವು. ಕೊನೆಯದಾಗಿ ANI 12 ಗಂಟೆಗಳ ನಂತರ ಸ್ಪಷ್ಟೀಕರಣ ನೀಡಿದೆ. ಅವರು ತಮ್ಮ ತಪ್ಪಿನ ಅರಿವಾದ ತಕ್ಷಣವೇ ಸ್ಪಷ್ಟೀಕರಣ ನೀಡಿದ್ದರೆ ಸುಳ್ಳು ಸುದ್ದಿ ಹರಡುವುದನ್ನು ತಪ್ಪಿಸಬಹುದಿತ್ತು” ಎಂದಿದ್ದಾರೆ.

ಪತ್ರಕರ್ತೆ ಸ್ವಾತಿ ಚತುರ್ವೇದಿ ಪ್ರತಿಕ್ರಿಯಿಸಿ, “ANI ಪದೇ ಪದೇ ಫೇಕ್ ನ್ಯೂಸ್ ಹರಡುವ ಮೂಲಕ ಜಾಗತಿಕ ಮಟ್ಟದಲ್ಲಿ ಕುಖ್ಯಾತಿಗೊಳಗಾಗುತ್ತಿದೆ. Reuters ನಂತರ ಪ್ರತಿಷ್ಠತಿ ಸುದ್ದಿ ಸಂಸ್ಥೆಗಳು ANI ಜೊತೆ ಸಹಭಾಗಿಗಳಾಗುವುದಕ್ಕೆ ನಾಚಿಕೆಯಾಗುವುದಿಲ್ಲವೇ?” ಎಂದುಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ಮಣಿಪುರದ ಬೆಂಕಿ ಆರುವುದೆಂದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...