Homeಮುಖಪುಟಮಣಿಪುರ ಮಹಿಳೆ ಅತ್ಯಾಚಾರ ಪ್ರಕರಣದ ಆರೋಪಿ ಮುಸ್ಲಿಂ ಎಂದು ಸುಳ್ಳು ಸುದ್ದಿ ಪ್ರಕಟಿಸಿ ನಂತರ ಡಿಲೀಟ್...

ಮಣಿಪುರ ಮಹಿಳೆ ಅತ್ಯಾಚಾರ ಪ್ರಕರಣದ ಆರೋಪಿ ಮುಸ್ಲಿಂ ಎಂದು ಸುಳ್ಳು ಸುದ್ದಿ ಪ್ರಕಟಿಸಿ ನಂತರ ಡಿಲೀಟ್ ಮಾಡಿದ ANI: ತೀವ್ರ ಖಂಡನೆ

- Advertisement -
- Advertisement -

ಮಣಿಪುರದ ಕುಕಿ ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರದ ವಿಡಿಯೋವೊಂದು ಗುರುವಾರ ವೈರಲ್ ಆಗಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಅಲ್ಲಿಯವರೆಗೂ ಮೌನವಾಗಿದ್ದ ಪ್ರಧಾನಿ ಮೋದಿ ಮಣಿಪುರದ ಬಗ್ಗೆ ತುಟಿ ಬಿಚ್ಚಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಆ ಹೀನ ಪ್ರಕರಣದ ಆರೋಪಿ ಮುಸ್ಲಿಂ ಎಂದು ಸುದ್ದಿ ಸಂಸ್ಥೆ ANI ಸುಳ್ಳು ಸುದ್ದಿ ಪ್ರಕಟಿಸಿ ನಂತರ ಡಿಲೀಟ್ ಮಾಡಿದ ಘಟನೆ ನಡೆದಿದ್ದು, ಅದಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.

ಗುರುವಾರ ರಾತ್ರಿ 9.27ರ ಸಮಯದಲ್ಲಿ, “ಮಣಿಪುರ ವೈರಲ್ ವಿಡಿಯೋ ಪ್ರಕರಣ| ಪೀಪಲ್ಸ್ ರೆವಲ್ಯೂಷನರಿ ಪಾರ್ಟಿ ಆಫ್ ಕಂಗ್ಲೀಪಾಕ್ (PREPAK) ಪರ ಕಾರ್ಯಕರ್ತನಾದ ಇಂಫಾಲ್ ಪೂರ್ವದ ಎಂ.ಡಿ ಇಬುಂಗೋ ಅಲಿಯಾಸ್ ಅಬ್ದುಲ್ ಹಿಲಿಮ್ (38) ನನ್ನು ಇಂಫಾಲ್ ಪೂರ್ವ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಪಿಎಸ್ ಅಡಿಯಲ್ಲಿ ಅಪಹರಣ ಮತ್ತು ಸಾಮೂಹಿಕ ಅತ್ಯಾಚಾರದ ಘೋರ ಅಪರಾಧದ ಒಟ್ಟು ಮೂವರು ಪ್ರಮುಖ ಆರೋಪಿಗಳನ್ನು ಇಂದು ಬಂಧಿಸಲಾಗಿದೆ: ಮಣಿಪುರ ಪೊಲೀಸರು” ಎಂದು ANI ಟ್ವೀಟ್ ಮಾಡಿತ್ತು.

ಇದನ್ನೇ ಆಧರಿಸಿ NDTV ಸೇರಿದಂತೆ ಹಲವು ಮುಖ್ಯವಾಹಿನಿ ಮಾಧ್ಯಮಗಳು ಟ್ವೀಟ್ ಮತ್ತು ಸುದ್ದಿ ವರದಿ ಮಾಡಿದ್ದವು. ಅದರ ಬೆನ್ನಲೇ ಬಲಪಂಥೀಯರು ಮತ್ತು ಬಿಜೆಪಿ ಐಟಿ ಸೆಲ್ ಸಾಮೂಹಿಕ ಅತ್ಯಾಚಾರದ ಆರೋಪಿ ಮುಸ್ಲಿಂ ಎಂದು ಷರಾ ಬರೆದಿದ್ದರು. ತಾಜಿಂದರ್ ಪಾಲ್ ಬಗ್ಗಾ ಮತ್ತು ರಿಷಿ ಬಾಗೀ ಎಂಬ ಬಿಜೆಪಿ ಮುಖಂಡರು ಅಬ್ದುಲ್ ಖಾನ್ ಆರೋಪಿ ಎಂದು ಟ್ವೀಟ್ ಮಾಡಿದರು. ಆ ಮೂಲಕ ಸುಳ್ಳು ಸುದ್ದಿಯನ್ನು ವೈರಲ್ ಮಾಡಿದರು. ಆದರೆ ಸ್ವಲ್ಪ ಹೊತ್ತಿನಲ್ಲೇ ANI ತನ್ನ ಟ್ವೀಟ್ ಅನ್ನು ಡಿಲೀಟ್ ಮಾಡಿತು.

ವಾಸ್ತವವೇನು?

ಮಣಿಪುರ ಪೊಲೀಸರ ಪ್ರಕಾರ ಬೆತ್ತಲೆ ಮೆರವಣಿಗೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತೌಬಲ್ ಜಿಲ್ಲೆಯ 4 ಆರೋಪಿಗಳನ್ನು ಬಂಧಿಸಲಾಗಿದೆ. ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಬೇರೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ PREPAK ಪರ ಕಾರ್ಯಕರ್ತನಾದ ಅಬ್ದುಲ್ ಹಿಲಿಮ್ ಎಂಬುವವರನ್ನು ಬಂಧಿಸಿದ್ದಾರೆ. ಆದರೆ ಸಂಬಂಧವಿಲ್ಲದ ಆ ಪ್ರಕರಣದ ಆರೋಪಿಯನ್ನು ಬೆತ್ತಲೆ ಮೆರವಣಿಗೆ ವಿಡಿಯೋಗೆ ತಳುಕು ಹಾಕಿ ANI ಟ್ವೀಟ್ ಮಾಡಿತ್ತು. ನಂತರ ತಪ್ಪಿನ ಅರಿವಾಗಿ ಡಿಲೀಟ್ ಮಾಡಿದೆ. ಆದರೆ ಅಷ್ಟರಲ್ಲಿ ಹಲವು ಸುದ್ದಿಸಂಸ್ಥೆಗಳು ಅದನ್ನೇ ನಿಜವೆಂದು ನಂಬಿ ಪ್ರಸಾರ ಮಾಡಿವೆ. ಬಿಜೆಪಿ ಐಡಿ ಸೆಲ್ ಕಾರ್ಯಕರ್ತರು ಮುಸ್ಲಿಂ ದ್ವೇಷ ಕಾರಿಕೊಂಡಿದ್ದಾರೆ.

ಕ್ಷಮೆಯಾಚಿಸಿದ ANI

ಸ್ಟೋರಿ ಹಿಂತೆಗೆದುಕೊಳ್ಳುವಿಕೆ ಮತ್ತು ಕ್ಷಮೆಯಾಚನೆಯ ಕುರಿತು ಟಿಪ್ಪಣಿ: ನಿನ್ನೆ ಸಂಜೆ, ಮಣಿಪುರ ಪೊಲೀಸರು ಕೈಗೊಂಡ ಬಂಧನಗಳ ಬಗ್ಗೆ ANI ಯಿಂದ ಟ್ವೀಟ್ ಅನ್ನು ಪೋಸ್ಟ್ ಮಾಡಲಾಗಿದೆ. ಇದು ವೈರಲ್ ವೀಡಿಯೊದಲ್ಲಿ ತೋರಿಸಿರುವ ಘಟನೆಗಳಿಗೆ ಸಂಬಂಧಿಸಿದಂತೆ ಮಣಿಪುರ ಪೊಲೀಸರು ಮಾಡಿದ ಇತರ ಬಂಧನಗಳಿಗೆ ಸಂಬಂಧಿಸಿದಂತೆ ಹಿಂದಿನ ಟ್ವೀಟ್‌ನೊಂದಿಗೆ ಗೊಂದಲಕ್ಕೊಳಗಾದ ಕಾರಣ ಪೋಸ್ಟ್ ಮಾಡಿದ ಟ್ವೀಟ್‌ಗಳ ತಪ್ಪಾದ ಓದುವಿಕೆಯನ್ನು ಆಧರಿಸಿದೆ. ಸ್ವಲ್ಪ ಸಮಯದ ನಂತರ, ಕೆಲವೇ ನಿಮಿಷಗಳಲ್ಲಿ, ದೋಷವನ್ನು ಅರಿತುಕೊಂಡ ತಕ್ಷಣ ಟ್ವೀಟ್ ಅನ್ನು ತಕ್ಷಣವೇ ಅಳಿಸಲಾಗಿದೆ ಮತ್ತು ಸರಿಪಡಿಸಿದ ಆವೃತ್ತಿಯನ್ನು ತಕ್ಷಣವೇ ಪ್ರಕಟಿಸಲಾಗಿದೆ. ಈ ತಪ್ಪಿಗೆ ವಿಷಾದಿಸುತ್ತೇವೆ ಎಂದು ANI ಶುಕ್ರವಾರ ಬೆಳಿಗ್ಗೆ 10.29 ರ ಸಮಯದಲ್ಲಿ ಮತ್ತೊಂದು ಟ್ವೀಟ್ ಮಾಡಿದೆ.

ಈ ಕುರಿತು ಸರಣಿ ಟ್ವೀಟ್ ಮೂಲಕ ಅಸಮಾಧಾನ ಹೊರಹಾಕಿರುವ ಆಲ್ಟ್‌ನ್ಯೂಸ್ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್, “ದಕ್ಷಿಣ ಏಷ್ಯಾದ ಅತಿ ದೊಡ್ಡ ಮಾಧ್ಯಮ ಸಂಸ್ಥೆ ಎಂದು ಹೇಳಿಕೊಳ್ಳುವ ANI ತಪ್ಪಾಗಿ ಟ್ವೀಟ್ ಮಾಡಿದೆ. ಬಿಜೆಪಿ ಐಟಿ ಸೆಲ್ ಟ್ರೋಲ್‌ಗಳು ಈ ಪ್ರಕರಣಕ್ಕೆ ಮುಸ್ಲಿಂ ಕೋಮುವಾದಿ ಆಯಾಮ ನೀಡಿದವು. NDTV, PuthiyathalaimuraiTV ಥರಹದ ದೊಡ್ಡ ಫಾಲೋವಿಂಗ್ ಇರುವ ಮಾಧ್ಯಮಗಳು ಅದನ್ನೆ ಪ್ರಸಾರ ಮಾಡಿದವು. ಕೊನೆಯದಾಗಿ ANI 12 ಗಂಟೆಗಳ ನಂತರ ಸ್ಪಷ್ಟೀಕರಣ ನೀಡಿದೆ. ಅವರು ತಮ್ಮ ತಪ್ಪಿನ ಅರಿವಾದ ತಕ್ಷಣವೇ ಸ್ಪಷ್ಟೀಕರಣ ನೀಡಿದ್ದರೆ ಸುಳ್ಳು ಸುದ್ದಿ ಹರಡುವುದನ್ನು ತಪ್ಪಿಸಬಹುದಿತ್ತು” ಎಂದಿದ್ದಾರೆ.

ಪತ್ರಕರ್ತೆ ಸ್ವಾತಿ ಚತುರ್ವೇದಿ ಪ್ರತಿಕ್ರಿಯಿಸಿ, “ANI ಪದೇ ಪದೇ ಫೇಕ್ ನ್ಯೂಸ್ ಹರಡುವ ಮೂಲಕ ಜಾಗತಿಕ ಮಟ್ಟದಲ್ಲಿ ಕುಖ್ಯಾತಿಗೊಳಗಾಗುತ್ತಿದೆ. Reuters ನಂತರ ಪ್ರತಿಷ್ಠತಿ ಸುದ್ದಿ ಸಂಸ್ಥೆಗಳು ANI ಜೊತೆ ಸಹಭಾಗಿಗಳಾಗುವುದಕ್ಕೆ ನಾಚಿಕೆಯಾಗುವುದಿಲ್ಲವೇ?” ಎಂದುಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ಮಣಿಪುರದ ಬೆಂಕಿ ಆರುವುದೆಂದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...