Homeಮುಖಪುಟಮಣಿಪುರ ಮಹಿಳೆ ಅತ್ಯಾಚಾರ ಪ್ರಕರಣದ ಆರೋಪಿ ಮುಸ್ಲಿಂ ಎಂದು ಸುಳ್ಳು ಸುದ್ದಿ ಪ್ರಕಟಿಸಿ ನಂತರ ಡಿಲೀಟ್...

ಮಣಿಪುರ ಮಹಿಳೆ ಅತ್ಯಾಚಾರ ಪ್ರಕರಣದ ಆರೋಪಿ ಮುಸ್ಲಿಂ ಎಂದು ಸುಳ್ಳು ಸುದ್ದಿ ಪ್ರಕಟಿಸಿ ನಂತರ ಡಿಲೀಟ್ ಮಾಡಿದ ANI: ತೀವ್ರ ಖಂಡನೆ

- Advertisement -
- Advertisement -

ಮಣಿಪುರದ ಕುಕಿ ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರದ ವಿಡಿಯೋವೊಂದು ಗುರುವಾರ ವೈರಲ್ ಆಗಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಅಲ್ಲಿಯವರೆಗೂ ಮೌನವಾಗಿದ್ದ ಪ್ರಧಾನಿ ಮೋದಿ ಮಣಿಪುರದ ಬಗ್ಗೆ ತುಟಿ ಬಿಚ್ಚಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಆ ಹೀನ ಪ್ರಕರಣದ ಆರೋಪಿ ಮುಸ್ಲಿಂ ಎಂದು ಸುದ್ದಿ ಸಂಸ್ಥೆ ANI ಸುಳ್ಳು ಸುದ್ದಿ ಪ್ರಕಟಿಸಿ ನಂತರ ಡಿಲೀಟ್ ಮಾಡಿದ ಘಟನೆ ನಡೆದಿದ್ದು, ಅದಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.

ಗುರುವಾರ ರಾತ್ರಿ 9.27ರ ಸಮಯದಲ್ಲಿ, “ಮಣಿಪುರ ವೈರಲ್ ವಿಡಿಯೋ ಪ್ರಕರಣ| ಪೀಪಲ್ಸ್ ರೆವಲ್ಯೂಷನರಿ ಪಾರ್ಟಿ ಆಫ್ ಕಂಗ್ಲೀಪಾಕ್ (PREPAK) ಪರ ಕಾರ್ಯಕರ್ತನಾದ ಇಂಫಾಲ್ ಪೂರ್ವದ ಎಂ.ಡಿ ಇಬುಂಗೋ ಅಲಿಯಾಸ್ ಅಬ್ದುಲ್ ಹಿಲಿಮ್ (38) ನನ್ನು ಇಂಫಾಲ್ ಪೂರ್ವ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಪಿಎಸ್ ಅಡಿಯಲ್ಲಿ ಅಪಹರಣ ಮತ್ತು ಸಾಮೂಹಿಕ ಅತ್ಯಾಚಾರದ ಘೋರ ಅಪರಾಧದ ಒಟ್ಟು ಮೂವರು ಪ್ರಮುಖ ಆರೋಪಿಗಳನ್ನು ಇಂದು ಬಂಧಿಸಲಾಗಿದೆ: ಮಣಿಪುರ ಪೊಲೀಸರು” ಎಂದು ANI ಟ್ವೀಟ್ ಮಾಡಿತ್ತು.

ಇದನ್ನೇ ಆಧರಿಸಿ NDTV ಸೇರಿದಂತೆ ಹಲವು ಮುಖ್ಯವಾಹಿನಿ ಮಾಧ್ಯಮಗಳು ಟ್ವೀಟ್ ಮತ್ತು ಸುದ್ದಿ ವರದಿ ಮಾಡಿದ್ದವು. ಅದರ ಬೆನ್ನಲೇ ಬಲಪಂಥೀಯರು ಮತ್ತು ಬಿಜೆಪಿ ಐಟಿ ಸೆಲ್ ಸಾಮೂಹಿಕ ಅತ್ಯಾಚಾರದ ಆರೋಪಿ ಮುಸ್ಲಿಂ ಎಂದು ಷರಾ ಬರೆದಿದ್ದರು. ತಾಜಿಂದರ್ ಪಾಲ್ ಬಗ್ಗಾ ಮತ್ತು ರಿಷಿ ಬಾಗೀ ಎಂಬ ಬಿಜೆಪಿ ಮುಖಂಡರು ಅಬ್ದುಲ್ ಖಾನ್ ಆರೋಪಿ ಎಂದು ಟ್ವೀಟ್ ಮಾಡಿದರು. ಆ ಮೂಲಕ ಸುಳ್ಳು ಸುದ್ದಿಯನ್ನು ವೈರಲ್ ಮಾಡಿದರು. ಆದರೆ ಸ್ವಲ್ಪ ಹೊತ್ತಿನಲ್ಲೇ ANI ತನ್ನ ಟ್ವೀಟ್ ಅನ್ನು ಡಿಲೀಟ್ ಮಾಡಿತು.

ವಾಸ್ತವವೇನು?

ಮಣಿಪುರ ಪೊಲೀಸರ ಪ್ರಕಾರ ಬೆತ್ತಲೆ ಮೆರವಣಿಗೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತೌಬಲ್ ಜಿಲ್ಲೆಯ 4 ಆರೋಪಿಗಳನ್ನು ಬಂಧಿಸಲಾಗಿದೆ. ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಬೇರೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ PREPAK ಪರ ಕಾರ್ಯಕರ್ತನಾದ ಅಬ್ದುಲ್ ಹಿಲಿಮ್ ಎಂಬುವವರನ್ನು ಬಂಧಿಸಿದ್ದಾರೆ. ಆದರೆ ಸಂಬಂಧವಿಲ್ಲದ ಆ ಪ್ರಕರಣದ ಆರೋಪಿಯನ್ನು ಬೆತ್ತಲೆ ಮೆರವಣಿಗೆ ವಿಡಿಯೋಗೆ ತಳುಕು ಹಾಕಿ ANI ಟ್ವೀಟ್ ಮಾಡಿತ್ತು. ನಂತರ ತಪ್ಪಿನ ಅರಿವಾಗಿ ಡಿಲೀಟ್ ಮಾಡಿದೆ. ಆದರೆ ಅಷ್ಟರಲ್ಲಿ ಹಲವು ಸುದ್ದಿಸಂಸ್ಥೆಗಳು ಅದನ್ನೇ ನಿಜವೆಂದು ನಂಬಿ ಪ್ರಸಾರ ಮಾಡಿವೆ. ಬಿಜೆಪಿ ಐಡಿ ಸೆಲ್ ಕಾರ್ಯಕರ್ತರು ಮುಸ್ಲಿಂ ದ್ವೇಷ ಕಾರಿಕೊಂಡಿದ್ದಾರೆ.

ಕ್ಷಮೆಯಾಚಿಸಿದ ANI

ಸ್ಟೋರಿ ಹಿಂತೆಗೆದುಕೊಳ್ಳುವಿಕೆ ಮತ್ತು ಕ್ಷಮೆಯಾಚನೆಯ ಕುರಿತು ಟಿಪ್ಪಣಿ: ನಿನ್ನೆ ಸಂಜೆ, ಮಣಿಪುರ ಪೊಲೀಸರು ಕೈಗೊಂಡ ಬಂಧನಗಳ ಬಗ್ಗೆ ANI ಯಿಂದ ಟ್ವೀಟ್ ಅನ್ನು ಪೋಸ್ಟ್ ಮಾಡಲಾಗಿದೆ. ಇದು ವೈರಲ್ ವೀಡಿಯೊದಲ್ಲಿ ತೋರಿಸಿರುವ ಘಟನೆಗಳಿಗೆ ಸಂಬಂಧಿಸಿದಂತೆ ಮಣಿಪುರ ಪೊಲೀಸರು ಮಾಡಿದ ಇತರ ಬಂಧನಗಳಿಗೆ ಸಂಬಂಧಿಸಿದಂತೆ ಹಿಂದಿನ ಟ್ವೀಟ್‌ನೊಂದಿಗೆ ಗೊಂದಲಕ್ಕೊಳಗಾದ ಕಾರಣ ಪೋಸ್ಟ್ ಮಾಡಿದ ಟ್ವೀಟ್‌ಗಳ ತಪ್ಪಾದ ಓದುವಿಕೆಯನ್ನು ಆಧರಿಸಿದೆ. ಸ್ವಲ್ಪ ಸಮಯದ ನಂತರ, ಕೆಲವೇ ನಿಮಿಷಗಳಲ್ಲಿ, ದೋಷವನ್ನು ಅರಿತುಕೊಂಡ ತಕ್ಷಣ ಟ್ವೀಟ್ ಅನ್ನು ತಕ್ಷಣವೇ ಅಳಿಸಲಾಗಿದೆ ಮತ್ತು ಸರಿಪಡಿಸಿದ ಆವೃತ್ತಿಯನ್ನು ತಕ್ಷಣವೇ ಪ್ರಕಟಿಸಲಾಗಿದೆ. ಈ ತಪ್ಪಿಗೆ ವಿಷಾದಿಸುತ್ತೇವೆ ಎಂದು ANI ಶುಕ್ರವಾರ ಬೆಳಿಗ್ಗೆ 10.29 ರ ಸಮಯದಲ್ಲಿ ಮತ್ತೊಂದು ಟ್ವೀಟ್ ಮಾಡಿದೆ.

ಈ ಕುರಿತು ಸರಣಿ ಟ್ವೀಟ್ ಮೂಲಕ ಅಸಮಾಧಾನ ಹೊರಹಾಕಿರುವ ಆಲ್ಟ್‌ನ್ಯೂಸ್ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್, “ದಕ್ಷಿಣ ಏಷ್ಯಾದ ಅತಿ ದೊಡ್ಡ ಮಾಧ್ಯಮ ಸಂಸ್ಥೆ ಎಂದು ಹೇಳಿಕೊಳ್ಳುವ ANI ತಪ್ಪಾಗಿ ಟ್ವೀಟ್ ಮಾಡಿದೆ. ಬಿಜೆಪಿ ಐಟಿ ಸೆಲ್ ಟ್ರೋಲ್‌ಗಳು ಈ ಪ್ರಕರಣಕ್ಕೆ ಮುಸ್ಲಿಂ ಕೋಮುವಾದಿ ಆಯಾಮ ನೀಡಿದವು. NDTV, PuthiyathalaimuraiTV ಥರಹದ ದೊಡ್ಡ ಫಾಲೋವಿಂಗ್ ಇರುವ ಮಾಧ್ಯಮಗಳು ಅದನ್ನೆ ಪ್ರಸಾರ ಮಾಡಿದವು. ಕೊನೆಯದಾಗಿ ANI 12 ಗಂಟೆಗಳ ನಂತರ ಸ್ಪಷ್ಟೀಕರಣ ನೀಡಿದೆ. ಅವರು ತಮ್ಮ ತಪ್ಪಿನ ಅರಿವಾದ ತಕ್ಷಣವೇ ಸ್ಪಷ್ಟೀಕರಣ ನೀಡಿದ್ದರೆ ಸುಳ್ಳು ಸುದ್ದಿ ಹರಡುವುದನ್ನು ತಪ್ಪಿಸಬಹುದಿತ್ತು” ಎಂದಿದ್ದಾರೆ.

ಪತ್ರಕರ್ತೆ ಸ್ವಾತಿ ಚತುರ್ವೇದಿ ಪ್ರತಿಕ್ರಿಯಿಸಿ, “ANI ಪದೇ ಪದೇ ಫೇಕ್ ನ್ಯೂಸ್ ಹರಡುವ ಮೂಲಕ ಜಾಗತಿಕ ಮಟ್ಟದಲ್ಲಿ ಕುಖ್ಯಾತಿಗೊಳಗಾಗುತ್ತಿದೆ. Reuters ನಂತರ ಪ್ರತಿಷ್ಠತಿ ಸುದ್ದಿ ಸಂಸ್ಥೆಗಳು ANI ಜೊತೆ ಸಹಭಾಗಿಗಳಾಗುವುದಕ್ಕೆ ನಾಚಿಕೆಯಾಗುವುದಿಲ್ಲವೇ?” ಎಂದುಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ಮಣಿಪುರದ ಬೆಂಕಿ ಆರುವುದೆಂದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...