Homeಮುಖಪುಟಮಣಿಪುರ ಮಹಿಳೆ ಅತ್ಯಾಚಾರ ಪ್ರಕರಣದ ಆರೋಪಿ ಮುಸ್ಲಿಂ ಎಂದು ಸುಳ್ಳು ಸುದ್ದಿ ಪ್ರಕಟಿಸಿ ನಂತರ ಡಿಲೀಟ್...

ಮಣಿಪುರ ಮಹಿಳೆ ಅತ್ಯಾಚಾರ ಪ್ರಕರಣದ ಆರೋಪಿ ಮುಸ್ಲಿಂ ಎಂದು ಸುಳ್ಳು ಸುದ್ದಿ ಪ್ರಕಟಿಸಿ ನಂತರ ಡಿಲೀಟ್ ಮಾಡಿದ ANI: ತೀವ್ರ ಖಂಡನೆ

- Advertisement -
- Advertisement -

ಮಣಿಪುರದ ಕುಕಿ ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರದ ವಿಡಿಯೋವೊಂದು ಗುರುವಾರ ವೈರಲ್ ಆಗಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಅಲ್ಲಿಯವರೆಗೂ ಮೌನವಾಗಿದ್ದ ಪ್ರಧಾನಿ ಮೋದಿ ಮಣಿಪುರದ ಬಗ್ಗೆ ತುಟಿ ಬಿಚ್ಚಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಆ ಹೀನ ಪ್ರಕರಣದ ಆರೋಪಿ ಮುಸ್ಲಿಂ ಎಂದು ಸುದ್ದಿ ಸಂಸ್ಥೆ ANI ಸುಳ್ಳು ಸುದ್ದಿ ಪ್ರಕಟಿಸಿ ನಂತರ ಡಿಲೀಟ್ ಮಾಡಿದ ಘಟನೆ ನಡೆದಿದ್ದು, ಅದಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.

ಗುರುವಾರ ರಾತ್ರಿ 9.27ರ ಸಮಯದಲ್ಲಿ, “ಮಣಿಪುರ ವೈರಲ್ ವಿಡಿಯೋ ಪ್ರಕರಣ| ಪೀಪಲ್ಸ್ ರೆವಲ್ಯೂಷನರಿ ಪಾರ್ಟಿ ಆಫ್ ಕಂಗ್ಲೀಪಾಕ್ (PREPAK) ಪರ ಕಾರ್ಯಕರ್ತನಾದ ಇಂಫಾಲ್ ಪೂರ್ವದ ಎಂ.ಡಿ ಇಬುಂಗೋ ಅಲಿಯಾಸ್ ಅಬ್ದುಲ್ ಹಿಲಿಮ್ (38) ನನ್ನು ಇಂಫಾಲ್ ಪೂರ್ವ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಪಿಎಸ್ ಅಡಿಯಲ್ಲಿ ಅಪಹರಣ ಮತ್ತು ಸಾಮೂಹಿಕ ಅತ್ಯಾಚಾರದ ಘೋರ ಅಪರಾಧದ ಒಟ್ಟು ಮೂವರು ಪ್ರಮುಖ ಆರೋಪಿಗಳನ್ನು ಇಂದು ಬಂಧಿಸಲಾಗಿದೆ: ಮಣಿಪುರ ಪೊಲೀಸರು” ಎಂದು ANI ಟ್ವೀಟ್ ಮಾಡಿತ್ತು.

ಇದನ್ನೇ ಆಧರಿಸಿ NDTV ಸೇರಿದಂತೆ ಹಲವು ಮುಖ್ಯವಾಹಿನಿ ಮಾಧ್ಯಮಗಳು ಟ್ವೀಟ್ ಮತ್ತು ಸುದ್ದಿ ವರದಿ ಮಾಡಿದ್ದವು. ಅದರ ಬೆನ್ನಲೇ ಬಲಪಂಥೀಯರು ಮತ್ತು ಬಿಜೆಪಿ ಐಟಿ ಸೆಲ್ ಸಾಮೂಹಿಕ ಅತ್ಯಾಚಾರದ ಆರೋಪಿ ಮುಸ್ಲಿಂ ಎಂದು ಷರಾ ಬರೆದಿದ್ದರು. ತಾಜಿಂದರ್ ಪಾಲ್ ಬಗ್ಗಾ ಮತ್ತು ರಿಷಿ ಬಾಗೀ ಎಂಬ ಬಿಜೆಪಿ ಮುಖಂಡರು ಅಬ್ದುಲ್ ಖಾನ್ ಆರೋಪಿ ಎಂದು ಟ್ವೀಟ್ ಮಾಡಿದರು. ಆ ಮೂಲಕ ಸುಳ್ಳು ಸುದ್ದಿಯನ್ನು ವೈರಲ್ ಮಾಡಿದರು. ಆದರೆ ಸ್ವಲ್ಪ ಹೊತ್ತಿನಲ್ಲೇ ANI ತನ್ನ ಟ್ವೀಟ್ ಅನ್ನು ಡಿಲೀಟ್ ಮಾಡಿತು.

ವಾಸ್ತವವೇನು?

ಮಣಿಪುರ ಪೊಲೀಸರ ಪ್ರಕಾರ ಬೆತ್ತಲೆ ಮೆರವಣಿಗೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತೌಬಲ್ ಜಿಲ್ಲೆಯ 4 ಆರೋಪಿಗಳನ್ನು ಬಂಧಿಸಲಾಗಿದೆ. ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಬೇರೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ PREPAK ಪರ ಕಾರ್ಯಕರ್ತನಾದ ಅಬ್ದುಲ್ ಹಿಲಿಮ್ ಎಂಬುವವರನ್ನು ಬಂಧಿಸಿದ್ದಾರೆ. ಆದರೆ ಸಂಬಂಧವಿಲ್ಲದ ಆ ಪ್ರಕರಣದ ಆರೋಪಿಯನ್ನು ಬೆತ್ತಲೆ ಮೆರವಣಿಗೆ ವಿಡಿಯೋಗೆ ತಳುಕು ಹಾಕಿ ANI ಟ್ವೀಟ್ ಮಾಡಿತ್ತು. ನಂತರ ತಪ್ಪಿನ ಅರಿವಾಗಿ ಡಿಲೀಟ್ ಮಾಡಿದೆ. ಆದರೆ ಅಷ್ಟರಲ್ಲಿ ಹಲವು ಸುದ್ದಿಸಂಸ್ಥೆಗಳು ಅದನ್ನೇ ನಿಜವೆಂದು ನಂಬಿ ಪ್ರಸಾರ ಮಾಡಿವೆ. ಬಿಜೆಪಿ ಐಡಿ ಸೆಲ್ ಕಾರ್ಯಕರ್ತರು ಮುಸ್ಲಿಂ ದ್ವೇಷ ಕಾರಿಕೊಂಡಿದ್ದಾರೆ.

ಕ್ಷಮೆಯಾಚಿಸಿದ ANI

ಸ್ಟೋರಿ ಹಿಂತೆಗೆದುಕೊಳ್ಳುವಿಕೆ ಮತ್ತು ಕ್ಷಮೆಯಾಚನೆಯ ಕುರಿತು ಟಿಪ್ಪಣಿ: ನಿನ್ನೆ ಸಂಜೆ, ಮಣಿಪುರ ಪೊಲೀಸರು ಕೈಗೊಂಡ ಬಂಧನಗಳ ಬಗ್ಗೆ ANI ಯಿಂದ ಟ್ವೀಟ್ ಅನ್ನು ಪೋಸ್ಟ್ ಮಾಡಲಾಗಿದೆ. ಇದು ವೈರಲ್ ವೀಡಿಯೊದಲ್ಲಿ ತೋರಿಸಿರುವ ಘಟನೆಗಳಿಗೆ ಸಂಬಂಧಿಸಿದಂತೆ ಮಣಿಪುರ ಪೊಲೀಸರು ಮಾಡಿದ ಇತರ ಬಂಧನಗಳಿಗೆ ಸಂಬಂಧಿಸಿದಂತೆ ಹಿಂದಿನ ಟ್ವೀಟ್‌ನೊಂದಿಗೆ ಗೊಂದಲಕ್ಕೊಳಗಾದ ಕಾರಣ ಪೋಸ್ಟ್ ಮಾಡಿದ ಟ್ವೀಟ್‌ಗಳ ತಪ್ಪಾದ ಓದುವಿಕೆಯನ್ನು ಆಧರಿಸಿದೆ. ಸ್ವಲ್ಪ ಸಮಯದ ನಂತರ, ಕೆಲವೇ ನಿಮಿಷಗಳಲ್ಲಿ, ದೋಷವನ್ನು ಅರಿತುಕೊಂಡ ತಕ್ಷಣ ಟ್ವೀಟ್ ಅನ್ನು ತಕ್ಷಣವೇ ಅಳಿಸಲಾಗಿದೆ ಮತ್ತು ಸರಿಪಡಿಸಿದ ಆವೃತ್ತಿಯನ್ನು ತಕ್ಷಣವೇ ಪ್ರಕಟಿಸಲಾಗಿದೆ. ಈ ತಪ್ಪಿಗೆ ವಿಷಾದಿಸುತ್ತೇವೆ ಎಂದು ANI ಶುಕ್ರವಾರ ಬೆಳಿಗ್ಗೆ 10.29 ರ ಸಮಯದಲ್ಲಿ ಮತ್ತೊಂದು ಟ್ವೀಟ್ ಮಾಡಿದೆ.

ಈ ಕುರಿತು ಸರಣಿ ಟ್ವೀಟ್ ಮೂಲಕ ಅಸಮಾಧಾನ ಹೊರಹಾಕಿರುವ ಆಲ್ಟ್‌ನ್ಯೂಸ್ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್, “ದಕ್ಷಿಣ ಏಷ್ಯಾದ ಅತಿ ದೊಡ್ಡ ಮಾಧ್ಯಮ ಸಂಸ್ಥೆ ಎಂದು ಹೇಳಿಕೊಳ್ಳುವ ANI ತಪ್ಪಾಗಿ ಟ್ವೀಟ್ ಮಾಡಿದೆ. ಬಿಜೆಪಿ ಐಟಿ ಸೆಲ್ ಟ್ರೋಲ್‌ಗಳು ಈ ಪ್ರಕರಣಕ್ಕೆ ಮುಸ್ಲಿಂ ಕೋಮುವಾದಿ ಆಯಾಮ ನೀಡಿದವು. NDTV, PuthiyathalaimuraiTV ಥರಹದ ದೊಡ್ಡ ಫಾಲೋವಿಂಗ್ ಇರುವ ಮಾಧ್ಯಮಗಳು ಅದನ್ನೆ ಪ್ರಸಾರ ಮಾಡಿದವು. ಕೊನೆಯದಾಗಿ ANI 12 ಗಂಟೆಗಳ ನಂತರ ಸ್ಪಷ್ಟೀಕರಣ ನೀಡಿದೆ. ಅವರು ತಮ್ಮ ತಪ್ಪಿನ ಅರಿವಾದ ತಕ್ಷಣವೇ ಸ್ಪಷ್ಟೀಕರಣ ನೀಡಿದ್ದರೆ ಸುಳ್ಳು ಸುದ್ದಿ ಹರಡುವುದನ್ನು ತಪ್ಪಿಸಬಹುದಿತ್ತು” ಎಂದಿದ್ದಾರೆ.

ಪತ್ರಕರ್ತೆ ಸ್ವಾತಿ ಚತುರ್ವೇದಿ ಪ್ರತಿಕ್ರಿಯಿಸಿ, “ANI ಪದೇ ಪದೇ ಫೇಕ್ ನ್ಯೂಸ್ ಹರಡುವ ಮೂಲಕ ಜಾಗತಿಕ ಮಟ್ಟದಲ್ಲಿ ಕುಖ್ಯಾತಿಗೊಳಗಾಗುತ್ತಿದೆ. Reuters ನಂತರ ಪ್ರತಿಷ್ಠತಿ ಸುದ್ದಿ ಸಂಸ್ಥೆಗಳು ANI ಜೊತೆ ಸಹಭಾಗಿಗಳಾಗುವುದಕ್ಕೆ ನಾಚಿಕೆಯಾಗುವುದಿಲ್ಲವೇ?” ಎಂದುಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ಮಣಿಪುರದ ಬೆಂಕಿ ಆರುವುದೆಂದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...