Homeಮುಖಪುಟಮಣಿಪುರ ಮಹಿಳೆ ಅತ್ಯಾಚಾರ ಪ್ರಕರಣದ ಆರೋಪಿ ಮುಸ್ಲಿಂ ಎಂದು ಸುಳ್ಳು ಸುದ್ದಿ ಪ್ರಕಟಿಸಿ ನಂತರ ಡಿಲೀಟ್...

ಮಣಿಪುರ ಮಹಿಳೆ ಅತ್ಯಾಚಾರ ಪ್ರಕರಣದ ಆರೋಪಿ ಮುಸ್ಲಿಂ ಎಂದು ಸುಳ್ಳು ಸುದ್ದಿ ಪ್ರಕಟಿಸಿ ನಂತರ ಡಿಲೀಟ್ ಮಾಡಿದ ANI: ತೀವ್ರ ಖಂಡನೆ

- Advertisement -
- Advertisement -

ಮಣಿಪುರದ ಕುಕಿ ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರದ ವಿಡಿಯೋವೊಂದು ಗುರುವಾರ ವೈರಲ್ ಆಗಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಅಲ್ಲಿಯವರೆಗೂ ಮೌನವಾಗಿದ್ದ ಪ್ರಧಾನಿ ಮೋದಿ ಮಣಿಪುರದ ಬಗ್ಗೆ ತುಟಿ ಬಿಚ್ಚಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಆ ಹೀನ ಪ್ರಕರಣದ ಆರೋಪಿ ಮುಸ್ಲಿಂ ಎಂದು ಸುದ್ದಿ ಸಂಸ್ಥೆ ANI ಸುಳ್ಳು ಸುದ್ದಿ ಪ್ರಕಟಿಸಿ ನಂತರ ಡಿಲೀಟ್ ಮಾಡಿದ ಘಟನೆ ನಡೆದಿದ್ದು, ಅದಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.

ಗುರುವಾರ ರಾತ್ರಿ 9.27ರ ಸಮಯದಲ್ಲಿ, “ಮಣಿಪುರ ವೈರಲ್ ವಿಡಿಯೋ ಪ್ರಕರಣ| ಪೀಪಲ್ಸ್ ರೆವಲ್ಯೂಷನರಿ ಪಾರ್ಟಿ ಆಫ್ ಕಂಗ್ಲೀಪಾಕ್ (PREPAK) ಪರ ಕಾರ್ಯಕರ್ತನಾದ ಇಂಫಾಲ್ ಪೂರ್ವದ ಎಂ.ಡಿ ಇಬುಂಗೋ ಅಲಿಯಾಸ್ ಅಬ್ದುಲ್ ಹಿಲಿಮ್ (38) ನನ್ನು ಇಂಫಾಲ್ ಪೂರ್ವ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಪಿಎಸ್ ಅಡಿಯಲ್ಲಿ ಅಪಹರಣ ಮತ್ತು ಸಾಮೂಹಿಕ ಅತ್ಯಾಚಾರದ ಘೋರ ಅಪರಾಧದ ಒಟ್ಟು ಮೂವರು ಪ್ರಮುಖ ಆರೋಪಿಗಳನ್ನು ಇಂದು ಬಂಧಿಸಲಾಗಿದೆ: ಮಣಿಪುರ ಪೊಲೀಸರು” ಎಂದು ANI ಟ್ವೀಟ್ ಮಾಡಿತ್ತು.

ಇದನ್ನೇ ಆಧರಿಸಿ NDTV ಸೇರಿದಂತೆ ಹಲವು ಮುಖ್ಯವಾಹಿನಿ ಮಾಧ್ಯಮಗಳು ಟ್ವೀಟ್ ಮತ್ತು ಸುದ್ದಿ ವರದಿ ಮಾಡಿದ್ದವು. ಅದರ ಬೆನ್ನಲೇ ಬಲಪಂಥೀಯರು ಮತ್ತು ಬಿಜೆಪಿ ಐಟಿ ಸೆಲ್ ಸಾಮೂಹಿಕ ಅತ್ಯಾಚಾರದ ಆರೋಪಿ ಮುಸ್ಲಿಂ ಎಂದು ಷರಾ ಬರೆದಿದ್ದರು. ತಾಜಿಂದರ್ ಪಾಲ್ ಬಗ್ಗಾ ಮತ್ತು ರಿಷಿ ಬಾಗೀ ಎಂಬ ಬಿಜೆಪಿ ಮುಖಂಡರು ಅಬ್ದುಲ್ ಖಾನ್ ಆರೋಪಿ ಎಂದು ಟ್ವೀಟ್ ಮಾಡಿದರು. ಆ ಮೂಲಕ ಸುಳ್ಳು ಸುದ್ದಿಯನ್ನು ವೈರಲ್ ಮಾಡಿದರು. ಆದರೆ ಸ್ವಲ್ಪ ಹೊತ್ತಿನಲ್ಲೇ ANI ತನ್ನ ಟ್ವೀಟ್ ಅನ್ನು ಡಿಲೀಟ್ ಮಾಡಿತು.

ವಾಸ್ತವವೇನು?

ಮಣಿಪುರ ಪೊಲೀಸರ ಪ್ರಕಾರ ಬೆತ್ತಲೆ ಮೆರವಣಿಗೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತೌಬಲ್ ಜಿಲ್ಲೆಯ 4 ಆರೋಪಿಗಳನ್ನು ಬಂಧಿಸಲಾಗಿದೆ. ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಬೇರೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ PREPAK ಪರ ಕಾರ್ಯಕರ್ತನಾದ ಅಬ್ದುಲ್ ಹಿಲಿಮ್ ಎಂಬುವವರನ್ನು ಬಂಧಿಸಿದ್ದಾರೆ. ಆದರೆ ಸಂಬಂಧವಿಲ್ಲದ ಆ ಪ್ರಕರಣದ ಆರೋಪಿಯನ್ನು ಬೆತ್ತಲೆ ಮೆರವಣಿಗೆ ವಿಡಿಯೋಗೆ ತಳುಕು ಹಾಕಿ ANI ಟ್ವೀಟ್ ಮಾಡಿತ್ತು. ನಂತರ ತಪ್ಪಿನ ಅರಿವಾಗಿ ಡಿಲೀಟ್ ಮಾಡಿದೆ. ಆದರೆ ಅಷ್ಟರಲ್ಲಿ ಹಲವು ಸುದ್ದಿಸಂಸ್ಥೆಗಳು ಅದನ್ನೇ ನಿಜವೆಂದು ನಂಬಿ ಪ್ರಸಾರ ಮಾಡಿವೆ. ಬಿಜೆಪಿ ಐಡಿ ಸೆಲ್ ಕಾರ್ಯಕರ್ತರು ಮುಸ್ಲಿಂ ದ್ವೇಷ ಕಾರಿಕೊಂಡಿದ್ದಾರೆ.

ಕ್ಷಮೆಯಾಚಿಸಿದ ANI

ಸ್ಟೋರಿ ಹಿಂತೆಗೆದುಕೊಳ್ಳುವಿಕೆ ಮತ್ತು ಕ್ಷಮೆಯಾಚನೆಯ ಕುರಿತು ಟಿಪ್ಪಣಿ: ನಿನ್ನೆ ಸಂಜೆ, ಮಣಿಪುರ ಪೊಲೀಸರು ಕೈಗೊಂಡ ಬಂಧನಗಳ ಬಗ್ಗೆ ANI ಯಿಂದ ಟ್ವೀಟ್ ಅನ್ನು ಪೋಸ್ಟ್ ಮಾಡಲಾಗಿದೆ. ಇದು ವೈರಲ್ ವೀಡಿಯೊದಲ್ಲಿ ತೋರಿಸಿರುವ ಘಟನೆಗಳಿಗೆ ಸಂಬಂಧಿಸಿದಂತೆ ಮಣಿಪುರ ಪೊಲೀಸರು ಮಾಡಿದ ಇತರ ಬಂಧನಗಳಿಗೆ ಸಂಬಂಧಿಸಿದಂತೆ ಹಿಂದಿನ ಟ್ವೀಟ್‌ನೊಂದಿಗೆ ಗೊಂದಲಕ್ಕೊಳಗಾದ ಕಾರಣ ಪೋಸ್ಟ್ ಮಾಡಿದ ಟ್ವೀಟ್‌ಗಳ ತಪ್ಪಾದ ಓದುವಿಕೆಯನ್ನು ಆಧರಿಸಿದೆ. ಸ್ವಲ್ಪ ಸಮಯದ ನಂತರ, ಕೆಲವೇ ನಿಮಿಷಗಳಲ್ಲಿ, ದೋಷವನ್ನು ಅರಿತುಕೊಂಡ ತಕ್ಷಣ ಟ್ವೀಟ್ ಅನ್ನು ತಕ್ಷಣವೇ ಅಳಿಸಲಾಗಿದೆ ಮತ್ತು ಸರಿಪಡಿಸಿದ ಆವೃತ್ತಿಯನ್ನು ತಕ್ಷಣವೇ ಪ್ರಕಟಿಸಲಾಗಿದೆ. ಈ ತಪ್ಪಿಗೆ ವಿಷಾದಿಸುತ್ತೇವೆ ಎಂದು ANI ಶುಕ್ರವಾರ ಬೆಳಿಗ್ಗೆ 10.29 ರ ಸಮಯದಲ್ಲಿ ಮತ್ತೊಂದು ಟ್ವೀಟ್ ಮಾಡಿದೆ.

ಈ ಕುರಿತು ಸರಣಿ ಟ್ವೀಟ್ ಮೂಲಕ ಅಸಮಾಧಾನ ಹೊರಹಾಕಿರುವ ಆಲ್ಟ್‌ನ್ಯೂಸ್ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್, “ದಕ್ಷಿಣ ಏಷ್ಯಾದ ಅತಿ ದೊಡ್ಡ ಮಾಧ್ಯಮ ಸಂಸ್ಥೆ ಎಂದು ಹೇಳಿಕೊಳ್ಳುವ ANI ತಪ್ಪಾಗಿ ಟ್ವೀಟ್ ಮಾಡಿದೆ. ಬಿಜೆಪಿ ಐಟಿ ಸೆಲ್ ಟ್ರೋಲ್‌ಗಳು ಈ ಪ್ರಕರಣಕ್ಕೆ ಮುಸ್ಲಿಂ ಕೋಮುವಾದಿ ಆಯಾಮ ನೀಡಿದವು. NDTV, PuthiyathalaimuraiTV ಥರಹದ ದೊಡ್ಡ ಫಾಲೋವಿಂಗ್ ಇರುವ ಮಾಧ್ಯಮಗಳು ಅದನ್ನೆ ಪ್ರಸಾರ ಮಾಡಿದವು. ಕೊನೆಯದಾಗಿ ANI 12 ಗಂಟೆಗಳ ನಂತರ ಸ್ಪಷ್ಟೀಕರಣ ನೀಡಿದೆ. ಅವರು ತಮ್ಮ ತಪ್ಪಿನ ಅರಿವಾದ ತಕ್ಷಣವೇ ಸ್ಪಷ್ಟೀಕರಣ ನೀಡಿದ್ದರೆ ಸುಳ್ಳು ಸುದ್ದಿ ಹರಡುವುದನ್ನು ತಪ್ಪಿಸಬಹುದಿತ್ತು” ಎಂದಿದ್ದಾರೆ.

ಪತ್ರಕರ್ತೆ ಸ್ವಾತಿ ಚತುರ್ವೇದಿ ಪ್ರತಿಕ್ರಿಯಿಸಿ, “ANI ಪದೇ ಪದೇ ಫೇಕ್ ನ್ಯೂಸ್ ಹರಡುವ ಮೂಲಕ ಜಾಗತಿಕ ಮಟ್ಟದಲ್ಲಿ ಕುಖ್ಯಾತಿಗೊಳಗಾಗುತ್ತಿದೆ. Reuters ನಂತರ ಪ್ರತಿಷ್ಠತಿ ಸುದ್ದಿ ಸಂಸ್ಥೆಗಳು ANI ಜೊತೆ ಸಹಭಾಗಿಗಳಾಗುವುದಕ್ಕೆ ನಾಚಿಕೆಯಾಗುವುದಿಲ್ಲವೇ?” ಎಂದುಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ಮಣಿಪುರದ ಬೆಂಕಿ ಆರುವುದೆಂದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...