Homeಮುಖಪುಟಮಣಿಪುರ ಮಹಿಳೆ ಅತ್ಯಾಚಾರ ಪ್ರಕರಣದ ಆರೋಪಿ ಮುಸ್ಲಿಂ ಎಂದು ಸುಳ್ಳು ಸುದ್ದಿ ಪ್ರಕಟಿಸಿ ನಂತರ ಡಿಲೀಟ್...

ಮಣಿಪುರ ಮಹಿಳೆ ಅತ್ಯಾಚಾರ ಪ್ರಕರಣದ ಆರೋಪಿ ಮುಸ್ಲಿಂ ಎಂದು ಸುಳ್ಳು ಸುದ್ದಿ ಪ್ರಕಟಿಸಿ ನಂತರ ಡಿಲೀಟ್ ಮಾಡಿದ ANI: ತೀವ್ರ ಖಂಡನೆ

- Advertisement -
- Advertisement -

ಮಣಿಪುರದ ಕುಕಿ ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರದ ವಿಡಿಯೋವೊಂದು ಗುರುವಾರ ವೈರಲ್ ಆಗಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಅಲ್ಲಿಯವರೆಗೂ ಮೌನವಾಗಿದ್ದ ಪ್ರಧಾನಿ ಮೋದಿ ಮಣಿಪುರದ ಬಗ್ಗೆ ತುಟಿ ಬಿಚ್ಚಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಆ ಹೀನ ಪ್ರಕರಣದ ಆರೋಪಿ ಮುಸ್ಲಿಂ ಎಂದು ಸುದ್ದಿ ಸಂಸ್ಥೆ ANI ಸುಳ್ಳು ಸುದ್ದಿ ಪ್ರಕಟಿಸಿ ನಂತರ ಡಿಲೀಟ್ ಮಾಡಿದ ಘಟನೆ ನಡೆದಿದ್ದು, ಅದಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.

ಗುರುವಾರ ರಾತ್ರಿ 9.27ರ ಸಮಯದಲ್ಲಿ, “ಮಣಿಪುರ ವೈರಲ್ ವಿಡಿಯೋ ಪ್ರಕರಣ| ಪೀಪಲ್ಸ್ ರೆವಲ್ಯೂಷನರಿ ಪಾರ್ಟಿ ಆಫ್ ಕಂಗ್ಲೀಪಾಕ್ (PREPAK) ಪರ ಕಾರ್ಯಕರ್ತನಾದ ಇಂಫಾಲ್ ಪೂರ್ವದ ಎಂ.ಡಿ ಇಬುಂಗೋ ಅಲಿಯಾಸ್ ಅಬ್ದುಲ್ ಹಿಲಿಮ್ (38) ನನ್ನು ಇಂಫಾಲ್ ಪೂರ್ವ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಪಿಎಸ್ ಅಡಿಯಲ್ಲಿ ಅಪಹರಣ ಮತ್ತು ಸಾಮೂಹಿಕ ಅತ್ಯಾಚಾರದ ಘೋರ ಅಪರಾಧದ ಒಟ್ಟು ಮೂವರು ಪ್ರಮುಖ ಆರೋಪಿಗಳನ್ನು ಇಂದು ಬಂಧಿಸಲಾಗಿದೆ: ಮಣಿಪುರ ಪೊಲೀಸರು” ಎಂದು ANI ಟ್ವೀಟ್ ಮಾಡಿತ್ತು.

ಇದನ್ನೇ ಆಧರಿಸಿ NDTV ಸೇರಿದಂತೆ ಹಲವು ಮುಖ್ಯವಾಹಿನಿ ಮಾಧ್ಯಮಗಳು ಟ್ವೀಟ್ ಮತ್ತು ಸುದ್ದಿ ವರದಿ ಮಾಡಿದ್ದವು. ಅದರ ಬೆನ್ನಲೇ ಬಲಪಂಥೀಯರು ಮತ್ತು ಬಿಜೆಪಿ ಐಟಿ ಸೆಲ್ ಸಾಮೂಹಿಕ ಅತ್ಯಾಚಾರದ ಆರೋಪಿ ಮುಸ್ಲಿಂ ಎಂದು ಷರಾ ಬರೆದಿದ್ದರು. ತಾಜಿಂದರ್ ಪಾಲ್ ಬಗ್ಗಾ ಮತ್ತು ರಿಷಿ ಬಾಗೀ ಎಂಬ ಬಿಜೆಪಿ ಮುಖಂಡರು ಅಬ್ದುಲ್ ಖಾನ್ ಆರೋಪಿ ಎಂದು ಟ್ವೀಟ್ ಮಾಡಿದರು. ಆ ಮೂಲಕ ಸುಳ್ಳು ಸುದ್ದಿಯನ್ನು ವೈರಲ್ ಮಾಡಿದರು. ಆದರೆ ಸ್ವಲ್ಪ ಹೊತ್ತಿನಲ್ಲೇ ANI ತನ್ನ ಟ್ವೀಟ್ ಅನ್ನು ಡಿಲೀಟ್ ಮಾಡಿತು.

ವಾಸ್ತವವೇನು?

ಮಣಿಪುರ ಪೊಲೀಸರ ಪ್ರಕಾರ ಬೆತ್ತಲೆ ಮೆರವಣಿಗೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತೌಬಲ್ ಜಿಲ್ಲೆಯ 4 ಆರೋಪಿಗಳನ್ನು ಬಂಧಿಸಲಾಗಿದೆ. ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಬೇರೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ PREPAK ಪರ ಕಾರ್ಯಕರ್ತನಾದ ಅಬ್ದುಲ್ ಹಿಲಿಮ್ ಎಂಬುವವರನ್ನು ಬಂಧಿಸಿದ್ದಾರೆ. ಆದರೆ ಸಂಬಂಧವಿಲ್ಲದ ಆ ಪ್ರಕರಣದ ಆರೋಪಿಯನ್ನು ಬೆತ್ತಲೆ ಮೆರವಣಿಗೆ ವಿಡಿಯೋಗೆ ತಳುಕು ಹಾಕಿ ANI ಟ್ವೀಟ್ ಮಾಡಿತ್ತು. ನಂತರ ತಪ್ಪಿನ ಅರಿವಾಗಿ ಡಿಲೀಟ್ ಮಾಡಿದೆ. ಆದರೆ ಅಷ್ಟರಲ್ಲಿ ಹಲವು ಸುದ್ದಿಸಂಸ್ಥೆಗಳು ಅದನ್ನೇ ನಿಜವೆಂದು ನಂಬಿ ಪ್ರಸಾರ ಮಾಡಿವೆ. ಬಿಜೆಪಿ ಐಡಿ ಸೆಲ್ ಕಾರ್ಯಕರ್ತರು ಮುಸ್ಲಿಂ ದ್ವೇಷ ಕಾರಿಕೊಂಡಿದ್ದಾರೆ.

ಕ್ಷಮೆಯಾಚಿಸಿದ ANI

ಸ್ಟೋರಿ ಹಿಂತೆಗೆದುಕೊಳ್ಳುವಿಕೆ ಮತ್ತು ಕ್ಷಮೆಯಾಚನೆಯ ಕುರಿತು ಟಿಪ್ಪಣಿ: ನಿನ್ನೆ ಸಂಜೆ, ಮಣಿಪುರ ಪೊಲೀಸರು ಕೈಗೊಂಡ ಬಂಧನಗಳ ಬಗ್ಗೆ ANI ಯಿಂದ ಟ್ವೀಟ್ ಅನ್ನು ಪೋಸ್ಟ್ ಮಾಡಲಾಗಿದೆ. ಇದು ವೈರಲ್ ವೀಡಿಯೊದಲ್ಲಿ ತೋರಿಸಿರುವ ಘಟನೆಗಳಿಗೆ ಸಂಬಂಧಿಸಿದಂತೆ ಮಣಿಪುರ ಪೊಲೀಸರು ಮಾಡಿದ ಇತರ ಬಂಧನಗಳಿಗೆ ಸಂಬಂಧಿಸಿದಂತೆ ಹಿಂದಿನ ಟ್ವೀಟ್‌ನೊಂದಿಗೆ ಗೊಂದಲಕ್ಕೊಳಗಾದ ಕಾರಣ ಪೋಸ್ಟ್ ಮಾಡಿದ ಟ್ವೀಟ್‌ಗಳ ತಪ್ಪಾದ ಓದುವಿಕೆಯನ್ನು ಆಧರಿಸಿದೆ. ಸ್ವಲ್ಪ ಸಮಯದ ನಂತರ, ಕೆಲವೇ ನಿಮಿಷಗಳಲ್ಲಿ, ದೋಷವನ್ನು ಅರಿತುಕೊಂಡ ತಕ್ಷಣ ಟ್ವೀಟ್ ಅನ್ನು ತಕ್ಷಣವೇ ಅಳಿಸಲಾಗಿದೆ ಮತ್ತು ಸರಿಪಡಿಸಿದ ಆವೃತ್ತಿಯನ್ನು ತಕ್ಷಣವೇ ಪ್ರಕಟಿಸಲಾಗಿದೆ. ಈ ತಪ್ಪಿಗೆ ವಿಷಾದಿಸುತ್ತೇವೆ ಎಂದು ANI ಶುಕ್ರವಾರ ಬೆಳಿಗ್ಗೆ 10.29 ರ ಸಮಯದಲ್ಲಿ ಮತ್ತೊಂದು ಟ್ವೀಟ್ ಮಾಡಿದೆ.

ಈ ಕುರಿತು ಸರಣಿ ಟ್ವೀಟ್ ಮೂಲಕ ಅಸಮಾಧಾನ ಹೊರಹಾಕಿರುವ ಆಲ್ಟ್‌ನ್ಯೂಸ್ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್, “ದಕ್ಷಿಣ ಏಷ್ಯಾದ ಅತಿ ದೊಡ್ಡ ಮಾಧ್ಯಮ ಸಂಸ್ಥೆ ಎಂದು ಹೇಳಿಕೊಳ್ಳುವ ANI ತಪ್ಪಾಗಿ ಟ್ವೀಟ್ ಮಾಡಿದೆ. ಬಿಜೆಪಿ ಐಟಿ ಸೆಲ್ ಟ್ರೋಲ್‌ಗಳು ಈ ಪ್ರಕರಣಕ್ಕೆ ಮುಸ್ಲಿಂ ಕೋಮುವಾದಿ ಆಯಾಮ ನೀಡಿದವು. NDTV, PuthiyathalaimuraiTV ಥರಹದ ದೊಡ್ಡ ಫಾಲೋವಿಂಗ್ ಇರುವ ಮಾಧ್ಯಮಗಳು ಅದನ್ನೆ ಪ್ರಸಾರ ಮಾಡಿದವು. ಕೊನೆಯದಾಗಿ ANI 12 ಗಂಟೆಗಳ ನಂತರ ಸ್ಪಷ್ಟೀಕರಣ ನೀಡಿದೆ. ಅವರು ತಮ್ಮ ತಪ್ಪಿನ ಅರಿವಾದ ತಕ್ಷಣವೇ ಸ್ಪಷ್ಟೀಕರಣ ನೀಡಿದ್ದರೆ ಸುಳ್ಳು ಸುದ್ದಿ ಹರಡುವುದನ್ನು ತಪ್ಪಿಸಬಹುದಿತ್ತು” ಎಂದಿದ್ದಾರೆ.

ಪತ್ರಕರ್ತೆ ಸ್ವಾತಿ ಚತುರ್ವೇದಿ ಪ್ರತಿಕ್ರಿಯಿಸಿ, “ANI ಪದೇ ಪದೇ ಫೇಕ್ ನ್ಯೂಸ್ ಹರಡುವ ಮೂಲಕ ಜಾಗತಿಕ ಮಟ್ಟದಲ್ಲಿ ಕುಖ್ಯಾತಿಗೊಳಗಾಗುತ್ತಿದೆ. Reuters ನಂತರ ಪ್ರತಿಷ್ಠತಿ ಸುದ್ದಿ ಸಂಸ್ಥೆಗಳು ANI ಜೊತೆ ಸಹಭಾಗಿಗಳಾಗುವುದಕ್ಕೆ ನಾಚಿಕೆಯಾಗುವುದಿಲ್ಲವೇ?” ಎಂದುಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ಮಣಿಪುರದ ಬೆಂಕಿ ಆರುವುದೆಂದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...