Homeಮುಖಪುಟಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ಸಿಬಿಐ'ನಿಂದ ಚಾರ್ಜ್‌ಶೀಟ್ ಸಲ್ಲಿಕೆ

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ಸಿಬಿಐ’ನಿಂದ ಚಾರ್ಜ್‌ಶೀಟ್ ಸಲ್ಲಿಕೆ

- Advertisement -
- Advertisement -

ಮಣಿಪುರದ ಕಾಂಗೊಕ್ಸಿ ಪ್ರದೇಶಕ್ಕೆ ಸೇರಿದ ಮೂವರು ಬುಡಕಟ್ಟು ಮಹಿಳೆಯರನ್ನು ಮೇ 4 ರಂದು ಅವರ ಕೆಲಸದ ಸ್ಥಳದಿಂದ ಅಪಹರಿಸಿ, ಸಾಮೂಹಿಕ ಅತ್ಯಾಚಾರ, ಕೊಲೆ ಹಾಗೂ ಬೆತ್ತಲೆ ಮೆರವಣಿಗೆ ಮಾಡಿದ್ದ ಪ್ರಕರಣದಲ್ಲಿ ಕಾನೂನು ಸಂಘರ್ಷ ಎದುರಿಸುತ್ತಿರುವ ಬಾಲಕ ಮತ್ತು ಇತರ 6 ಜನರ ವಿರುದ್ಧ ಸಿಬಿಐ ಸೋಮವಾರ ದೋಷಾರೋಪ ಪಟ್ಟಿಯನ್ನು ದಾಖಲಿಸಿದೆ. ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಕಿರುಕುಳ ನೀಡುತ್ತಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಪ್ರಕರಣ ವ್ಯಾಪಕ ಗಮನ ಸೆಳೆದಿತ್ತು.

ಮಣಿಪುರ ಜನಾಂಗೀಯ ಸಂಘರ್ಷ ಪೀಡಿತ ಕಾಂಗೊಕ್ಸಿ ಜಿಲ್ಲೆಯಲ್ಲಿ ಈ ವರ್ಷದ ಮೇ ತಿಂಗಳಲ್ಲಿ ನಡೆದಿದ್ದ ಕೃತ್ಯದ ವಿಡಿಯೊ ಜುಲೈ ತಿಂಗಳಲ್ಲಿ ಬಯಲಾಗಿತ್ತು. ದೇಶದಾದ್ಯಂತ ಈ ಕೃತ್ಯಕ್ಕೆ ತೀವ್ರ ಖಂಡನೆ ವ್ಯಕ್ತವಾಗಿತ್ತು. ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಸಿಬಿಐ ವಹಿಸಿ ತನಿಖೆ ನಡೆಸುವಂತೆ ಆದೇಶಿಸಿತ್ತು. ಸುಪ್ರೀಂ ಕೋರ್ಟ್‌ನ ಆದೇಶದಂತೆ ಗುವಾಹಟಿಯ ಸಿಬಿಐ ನ್ಯಾಯಾಲಯದ ವಿಶೇಷ ನ್ಯಾಯಾಧೀಶರ ಮುಂದೆ ಇಂದು ಚಾರ್ಜ್‌ಶೀಟ್ ಸಲ್ಲಿಸಲಾಗಿದೆ ಎಂದು ಸಿಬಿಐ ಹೇಳಿಕೆಯಲ್ಲಿ ತಿಳಿಸಿದೆ.

ದೋಷಾರೋಪ ಪಟ್ಟಿ ಪ್ರಕಾರ, ಆಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ 900- 1000 ಜನರಿದ್ದ ಗುಂಪು ಹಿಂಸಾಚಾರ ಪೀಡಿತ ಕಾಂಗೊಕ್ಸಿ ಜಿಲ್ಲೆಯ ಫೈನೊಮ್ ಗ್ರಾಮದಲ್ಲಿ ದಾಂದಲೆ ನಡೆಸಿ ಮನೆಗಳಿಗೆ ಬೆಂಕಿ ಹಚ್ಚಿ, ಲೂಟಿ ಮಾಡಿದೆ. ಗ್ರಾಮಸ್ಥರ ಮೇಲೆ ಹಲ್ಲೆ ಕೊಲೆ, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದೆ ಎಂದು ಸಿಬಿಐ ಉಲ್ಲೇಖಿಸಿದೆ.

ಜುಲೈ 19 ರಂದು, ಸಾಮಾಜಿಕ ಮಾಧ್ಯಮದಲ್ಲಿ 30-ಸೆಕೆಂಡ್‌ಗಳ ವೀಡಿಯೊ ವೈರಲ್ ಆಗಿತ್ತು. ಇದು ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡುವಾಗ ಪುರುಷರ ಗುಂಪೊಂದು ವಿಕೃತಿ ಮೆರೆಯುತ್ತಿರುವುದನ್ನು ಆ ವಿಡಿಯೋ ತೋರಿಸುತ್ತದೆ.

ಮೇ 18 ರಂದು ದಾಖಲಾದ ಎಫ್‌ಐಆರ್‌ನಲ್ಲಿ ಮಹಿಳೆಯರನ್ನು ಕುಕಿ ಎಂದು ಗುರುತಿಸಲಾಗಿದೆ ಮತ್ತು ಜನಸಮೂಹವು ಮೈತಿ ಸಮುದಾಯದವರು ಎಂದು ಹೇಳಿದರು.

ಜುಲೈ 20 ರಂದು ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು, ಒಬ್ಬ ಆರೋಪಿಯನ್ನು ಜುಲೈ 22 ರಂದು ಮತ್ತು ಆರನೇ ಆರೋಪಿಯನ್ನು ಜುಲೈ 23 ರಂದು ಮತ್ತು 7 ನೇ ಆರೋಪಿಯನ್ನು ಜುಲೈ 24 ರಂದು ಬಂಧಿಸಲಾಯಿತು ಮತ್ತು ಆನಂತರ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಯಿತು.

ಮಣಿಪುರ ಪೊಲೀಸರ ವಿರುದ್ಧ ನಿಷ್ಕ್ರಿಯ ಆರೋಪದ ನಂತರ ಜುಲೈ 21 ರಂದು ಸಿಬಿಐ ತನಿಖೆಯನ್ನು ವಹಿಸಿಕೊಂಡಿದೆ.

ಸೋಮವಾರದ ಸಿಬಿಐ ತನ್ನ ಹೇಳಿಕೆ ಬಿಡುಗಡೆ ಮಾಡಿದ್ದು, ”ಘಟನೆಯಲ್ಲಿ ಈ ಆರೋಪಿಗಳು ಭಾಗಿಯಾಗಿರುವುದು ಸಿಬಿಐ ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದ ಇತರ ಅಂಶಗಳ ಜೊತೆಗೆ ಅಪರಾಧಗಳಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಗುರುತಿಸುವಿಕೆ ಸೇರಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ” ಎಂದು ತಿಳಿಸಿದೆ.

ಮೇ 3 ರಿಂದ ರಾಜ್ಯದಲ್ಲಿ ನಡೆದ ಜನಾಂಗೀಯ ಘರ್ಷಣೆಗಳಿಗೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುತ್ತಿರುವ 27 ಎಫ್‌ಐಆರ್‌ಗಳಲ್ಲಿ ಇದು ಮೊದಲ ಚಾರ್ಜ್‌ಶೀಟ್ ಆಗಿದೆ. 27 ಪ್ರಕರಣಗಳಲ್ಲಿ 19 ಮಹಿಳೆಯರ ವಿರುದ್ಧದ ಅಪರಾಧಗಳಾಗಿವೆ.

ಇದನ್ನೂ ಓದಿ: ಪ್ರಧಾನಿ ಮೋದಿಗೆ ಮಣಿಪುರಕ್ಕಿಂತ ಇಸ್ರೇಲ್ ಮೇಲೆಯೇ ಹೆಚ್ಚು ಆಸಕ್ತಿ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...