Homeಮುಖಪುಟಮಣಿಪುರದ ಇತಿಹಾಸ ತಿರುಚಿದ ಆರೋಪ: ಲೇಖಕ, ಇಬ್ಬರು ಶಿಕ್ಷಣ ತಜ್ಞರ ವಿರುದ್ಧ ಎಫ್‌ಐಆರ್

ಮಣಿಪುರದ ಇತಿಹಾಸ ತಿರುಚಿದ ಆರೋಪ: ಲೇಖಕ, ಇಬ್ಬರು ಶಿಕ್ಷಣ ತಜ್ಞರ ವಿರುದ್ಧ ಎಫ್‌ಐಆರ್

- Advertisement -
- Advertisement -

ಪುಸ್ತಕವೊಂದರಲ್ಲಿ ಮಣಿಪುರ ರಾಜ್ಯದ ಇತಿಹಾಸವನ್ನು ತಿರುಚಿದ ಆರೋಪದ ಮೇಲೆ ಕುಕಿ-ಜೋ ಬುಡುಕಟ್ಟು ಸಮುದಾಯದ ಲೇಖಕ ಮತ್ತು ಇಬ್ಬರು ಶಿಕ್ಷಣ ತಜ್ಞರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

‘ದಿ ಆಂಗ್ಲೋ-ಕುಕಿ ವಾರ್ 1917-1919’ ಎಂಬ ಶೀರ್ಷಿಕೆಯ ಪುಸ್ತಕವನ್ನು ನಿವೃತ್ತ ಕರ್ನಲ್ ವಿಜಯ್ ಚೆಂಜಿ ಬರೆದಿದ್ದಾರೆ ಮತ್ತು ಶಿಕ್ಷಣತಜ್ಞರಾದ ಜಾಂಗ್‌ಖೋಮಾಂಗ್ ಗೈಟ್ ಮತ್ತು ಥೋಂಗ್‌ಖೋಲಾಲ್ ಹಾಕಿಪ್ ಸಂಪಾದಿಸಿದ್ದಾರೆ. ಈ ಮೂವರ ವಿರುದ್ಧ ಇಂಫಾಲ್‌ನ ಫೆಡರೇಶನ್ ಆಫ್ ಹೌಮಿ ಎನ್ನುವ ನಾಗರಿಕ ಸಂಘಟನೆ ದೂರು ನೀಡಿದೆ.

Buy The Anglo- Kuki War, 1917-1919: A Frontier Uprising Against Imperialism During the First World War Book Online at Low Prices in India | The Anglo- Kuki War, 1917-1919: A Frontier Uprising

ಚೆಂಜಿ, ಗೈಟ್ ಮತ್ತು ಹಾಕಿಪ್ ಮೇಲೆ ಐಪಿಸಿ ಸೆಕ್ಷನ್ ಅಡಿಯಲ್ಲಿ ಭಾರತ ಸರ್ಕಾರದ ವಿರುದ್ಧ ಯುದ್ಧ ಮಾಡುವುದು, ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸುಳ್ಳು ಮಾಹಿತಿ ಹಂಚಿರುವುದಾಗಿ ಪ್ರಕರಣ ದಾಖಲಿಸಿದ್ದಾರೆ.

ಆಗಸ್ಟ್ 9ರಂದು ಚೆಂಜಿ ವಿರುದ್ಧ ಎಫ್ಐಆರ್ ದಾಖಲಿಸಿದ್ದರೆ, ಗೈಟ್ ಮತ್ತು ಹಾಕಿಪ್ ವಿರುದ್ಧ ಆಗಸ್ಟ್ 7 ರಂದು ಪ್ರಕರಣ ದಾಖಲಾಗಿದೆ.

ಗೈಟ್ ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಐತಿಹಾಸಿಕ ಅಧ್ಯಯನ ಕೇಂದ್ರದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದರೆ. ಹಾಕಿಪ್ ವಿಶ್ವವಿದ್ಯಾಲಯದ ಕಾನೂನು ಮತ್ತು ಆಡಳಿತದ ಅಧ್ಯಯನ ಕೇಂದ್ರದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ.

1917 ರಿಂದ 1919 ರವರೆಗಿನ ಕುಕಿ ದಂಗೆಯನ್ನು ಆಂಗ್ಲೋ-ಕುಕಿ ಯುದ್ಧ ಎಂದು ಪುಸ್ತಕವು ತಪ್ಪಾಗಿ ಚಿತ್ರಿಸಿದೆ ಎಂದು ಫೆಡರೇಶನ್ ಆಫ್ ಹೌಮಿ ಸಂಘಟನೆ ಆರೋಪಿಸಿದೆ. ಮಣಿಪುರದ ಇತಿಹಾಸದಲ್ಲಿ ಯಾವುದೇ ಆಂಗ್ಲೋ-ಕುಕಿ ಯುದ್ಧ ನಡೆದಿಲ್ಲ ಎಂದು ಸಂಘಟನೆ ಹೇಳಿಕೊಂಡಿದೆ.

ಈ ಪ್ರದೇಶದ ಲೇಬರ್ ಕಾರ್ಪ್ಸ್‌ನಲ್ಲಿ ಕುಕಿಗಳ ನೇಮಕಾತಿಯನ್ನು ವಿರೋಧಿಸಿದ್ದರಿಂದ ಕುಕಿ ಬಂಡಾಯ ನಡೆದಿದೆ ಎಂದು ದೂರುದಾರರು ಹೇಳಿದ್ದಾರೆ. ಈ ಭಾರತೀಯ ಲೇಬರ್ ಕಾರ್ಪ್ಸ್ ವಿಶ್ವ ಯುದ್ದ I ರ ಸಮಯದಲ್ಲಿ ವಿಶ್ವದ ಹಲವಾರು ಭಾಗಗಳಲ್ಲಿ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳಲು ಬ್ರಿಟಿಷ್ ಸರ್ಕಾರದಿಂದ ನೇಮಕಗೊಂಡ ಕಾರ್ಮಿಕರನ್ನು ಒಳಗೊಂಡಿತ್ತು.

ಕುಕಿ ದಂಗೆಯು ಬೆಟ್ಟದ ಪ್ರದೇಶಗಳಲ್ಲಿನ ನಾಗಾಗಳು, ಕೋಮ್‌ಗಳ ಹತ್ಯಾಕಾಂಡ, ಕಣಿವೆಯಲ್ಲಿ ಮೈತೀಸ್ ಮತ್ತು ಮುಸ್ಲಿಮರ ಹತ್ಯಾಕಾಂಡವನ್ನು ಒಳಗೊಂಡಿತ್ತು ಎಂದು ಸಂಘಟನೆಯು ಹೇಳಿಕೊಂಡಿದೆ.

ಬಂಡಾಯ ನಾಯಕರು, ತಾವು ಸರ್ಕಾರದ ವಿರುದ್ಧ ಹೋರಾಟ ಮಾಡಿದ್ದು ತಪ್ಪಾಗಿದೆ ಎಂದು ಸ್ಥಳೀಯ ಅಧಿಕಾರಿಗಳಿಗೆ ಕ್ಷಮಾಪಣಾ ಪತ್ರ ಬರೆದು ಇನ್ಮುಂದೆ ಸರ್ಕಾರಕ್ಕೆ ನಿಷ್ಠೆಯಿಂದ ಇರುತ್ತೇವೆ ಎಂದು ಪ್ರತಿಜ್ಞೆ ಮಾಡಿದ ದಾಖಲೆಗಳಿವೆ ಎಂದು ಫೆಡರೇಶನ್ ಆಫ್ ಹೌಮಿ ಹೇಳಿಕೊಂಡಿದೆ.

ಲೇಖಕರು ಐತಿಹಾಸಿಕ ಸತ್ಯಗಳನ್ನು ಮುಚ್ಚಿಟ್ಟು, ವೈಯಕ್ತಿಕ ಲಾಭಕ್ಕಾಗಿ ಮತ್ತು ನಿರ್ದಿಷ್ಟ ಸಮುದಾಯದ ಪರವಾಗಿ ಇತಿಹಾಸವನ್ನು ತಿರುಚಲು ಉದ್ದೇಶಪೂರ್ವಕವಾಗಿ ಅನೇಕ ಸುಳ್ಳುಗಳನ್ನು ರಚಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ವಿಳಂಬ ತನಿಖೆಗೆ ಸುಪ್ರೀಂ ಬೇಸರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...