Homeಮುಖಪುಟಮಣಿಪುರದ ಇತಿಹಾಸ ತಿರುಚಿದ ಆರೋಪ: ಲೇಖಕ, ಇಬ್ಬರು ಶಿಕ್ಷಣ ತಜ್ಞರ ವಿರುದ್ಧ ಎಫ್‌ಐಆರ್

ಮಣಿಪುರದ ಇತಿಹಾಸ ತಿರುಚಿದ ಆರೋಪ: ಲೇಖಕ, ಇಬ್ಬರು ಶಿಕ್ಷಣ ತಜ್ಞರ ವಿರುದ್ಧ ಎಫ್‌ಐಆರ್

- Advertisement -
- Advertisement -

ಪುಸ್ತಕವೊಂದರಲ್ಲಿ ಮಣಿಪುರ ರಾಜ್ಯದ ಇತಿಹಾಸವನ್ನು ತಿರುಚಿದ ಆರೋಪದ ಮೇಲೆ ಕುಕಿ-ಜೋ ಬುಡುಕಟ್ಟು ಸಮುದಾಯದ ಲೇಖಕ ಮತ್ತು ಇಬ್ಬರು ಶಿಕ್ಷಣ ತಜ್ಞರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

‘ದಿ ಆಂಗ್ಲೋ-ಕುಕಿ ವಾರ್ 1917-1919’ ಎಂಬ ಶೀರ್ಷಿಕೆಯ ಪುಸ್ತಕವನ್ನು ನಿವೃತ್ತ ಕರ್ನಲ್ ವಿಜಯ್ ಚೆಂಜಿ ಬರೆದಿದ್ದಾರೆ ಮತ್ತು ಶಿಕ್ಷಣತಜ್ಞರಾದ ಜಾಂಗ್‌ಖೋಮಾಂಗ್ ಗೈಟ್ ಮತ್ತು ಥೋಂಗ್‌ಖೋಲಾಲ್ ಹಾಕಿಪ್ ಸಂಪಾದಿಸಿದ್ದಾರೆ. ಈ ಮೂವರ ವಿರುದ್ಧ ಇಂಫಾಲ್‌ನ ಫೆಡರೇಶನ್ ಆಫ್ ಹೌಮಿ ಎನ್ನುವ ನಾಗರಿಕ ಸಂಘಟನೆ ದೂರು ನೀಡಿದೆ.

Buy The Anglo- Kuki War, 1917-1919: A Frontier Uprising Against Imperialism During the First World War Book Online at Low Prices in India | The Anglo- Kuki War, 1917-1919: A Frontier Uprising

ಚೆಂಜಿ, ಗೈಟ್ ಮತ್ತು ಹಾಕಿಪ್ ಮೇಲೆ ಐಪಿಸಿ ಸೆಕ್ಷನ್ ಅಡಿಯಲ್ಲಿ ಭಾರತ ಸರ್ಕಾರದ ವಿರುದ್ಧ ಯುದ್ಧ ಮಾಡುವುದು, ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸುಳ್ಳು ಮಾಹಿತಿ ಹಂಚಿರುವುದಾಗಿ ಪ್ರಕರಣ ದಾಖಲಿಸಿದ್ದಾರೆ.

ಆಗಸ್ಟ್ 9ರಂದು ಚೆಂಜಿ ವಿರುದ್ಧ ಎಫ್ಐಆರ್ ದಾಖಲಿಸಿದ್ದರೆ, ಗೈಟ್ ಮತ್ತು ಹಾಕಿಪ್ ವಿರುದ್ಧ ಆಗಸ್ಟ್ 7 ರಂದು ಪ್ರಕರಣ ದಾಖಲಾಗಿದೆ.

ಗೈಟ್ ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಐತಿಹಾಸಿಕ ಅಧ್ಯಯನ ಕೇಂದ್ರದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದರೆ. ಹಾಕಿಪ್ ವಿಶ್ವವಿದ್ಯಾಲಯದ ಕಾನೂನು ಮತ್ತು ಆಡಳಿತದ ಅಧ್ಯಯನ ಕೇಂದ್ರದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ.

1917 ರಿಂದ 1919 ರವರೆಗಿನ ಕುಕಿ ದಂಗೆಯನ್ನು ಆಂಗ್ಲೋ-ಕುಕಿ ಯುದ್ಧ ಎಂದು ಪುಸ್ತಕವು ತಪ್ಪಾಗಿ ಚಿತ್ರಿಸಿದೆ ಎಂದು ಫೆಡರೇಶನ್ ಆಫ್ ಹೌಮಿ ಸಂಘಟನೆ ಆರೋಪಿಸಿದೆ. ಮಣಿಪುರದ ಇತಿಹಾಸದಲ್ಲಿ ಯಾವುದೇ ಆಂಗ್ಲೋ-ಕುಕಿ ಯುದ್ಧ ನಡೆದಿಲ್ಲ ಎಂದು ಸಂಘಟನೆ ಹೇಳಿಕೊಂಡಿದೆ.

ಈ ಪ್ರದೇಶದ ಲೇಬರ್ ಕಾರ್ಪ್ಸ್‌ನಲ್ಲಿ ಕುಕಿಗಳ ನೇಮಕಾತಿಯನ್ನು ವಿರೋಧಿಸಿದ್ದರಿಂದ ಕುಕಿ ಬಂಡಾಯ ನಡೆದಿದೆ ಎಂದು ದೂರುದಾರರು ಹೇಳಿದ್ದಾರೆ. ಈ ಭಾರತೀಯ ಲೇಬರ್ ಕಾರ್ಪ್ಸ್ ವಿಶ್ವ ಯುದ್ದ I ರ ಸಮಯದಲ್ಲಿ ವಿಶ್ವದ ಹಲವಾರು ಭಾಗಗಳಲ್ಲಿ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳಲು ಬ್ರಿಟಿಷ್ ಸರ್ಕಾರದಿಂದ ನೇಮಕಗೊಂಡ ಕಾರ್ಮಿಕರನ್ನು ಒಳಗೊಂಡಿತ್ತು.

ಕುಕಿ ದಂಗೆಯು ಬೆಟ್ಟದ ಪ್ರದೇಶಗಳಲ್ಲಿನ ನಾಗಾಗಳು, ಕೋಮ್‌ಗಳ ಹತ್ಯಾಕಾಂಡ, ಕಣಿವೆಯಲ್ಲಿ ಮೈತೀಸ್ ಮತ್ತು ಮುಸ್ಲಿಮರ ಹತ್ಯಾಕಾಂಡವನ್ನು ಒಳಗೊಂಡಿತ್ತು ಎಂದು ಸಂಘಟನೆಯು ಹೇಳಿಕೊಂಡಿದೆ.

ಬಂಡಾಯ ನಾಯಕರು, ತಾವು ಸರ್ಕಾರದ ವಿರುದ್ಧ ಹೋರಾಟ ಮಾಡಿದ್ದು ತಪ್ಪಾಗಿದೆ ಎಂದು ಸ್ಥಳೀಯ ಅಧಿಕಾರಿಗಳಿಗೆ ಕ್ಷಮಾಪಣಾ ಪತ್ರ ಬರೆದು ಇನ್ಮುಂದೆ ಸರ್ಕಾರಕ್ಕೆ ನಿಷ್ಠೆಯಿಂದ ಇರುತ್ತೇವೆ ಎಂದು ಪ್ರತಿಜ್ಞೆ ಮಾಡಿದ ದಾಖಲೆಗಳಿವೆ ಎಂದು ಫೆಡರೇಶನ್ ಆಫ್ ಹೌಮಿ ಹೇಳಿಕೊಂಡಿದೆ.

ಲೇಖಕರು ಐತಿಹಾಸಿಕ ಸತ್ಯಗಳನ್ನು ಮುಚ್ಚಿಟ್ಟು, ವೈಯಕ್ತಿಕ ಲಾಭಕ್ಕಾಗಿ ಮತ್ತು ನಿರ್ದಿಷ್ಟ ಸಮುದಾಯದ ಪರವಾಗಿ ಇತಿಹಾಸವನ್ನು ತಿರುಚಲು ಉದ್ದೇಶಪೂರ್ವಕವಾಗಿ ಅನೇಕ ಸುಳ್ಳುಗಳನ್ನು ರಚಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ವಿಳಂಬ ತನಿಖೆಗೆ ಸುಪ್ರೀಂ ಬೇಸರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...