Homeಮುಖಪುಟಮಣಿಪುರದ ಇತಿಹಾಸ ತಿರುಚಿದ ಆರೋಪ: ಲೇಖಕ, ಇಬ್ಬರು ಶಿಕ್ಷಣ ತಜ್ಞರ ವಿರುದ್ಧ ಎಫ್‌ಐಆರ್

ಮಣಿಪುರದ ಇತಿಹಾಸ ತಿರುಚಿದ ಆರೋಪ: ಲೇಖಕ, ಇಬ್ಬರು ಶಿಕ್ಷಣ ತಜ್ಞರ ವಿರುದ್ಧ ಎಫ್‌ಐಆರ್

- Advertisement -
- Advertisement -

ಪುಸ್ತಕವೊಂದರಲ್ಲಿ ಮಣಿಪುರ ರಾಜ್ಯದ ಇತಿಹಾಸವನ್ನು ತಿರುಚಿದ ಆರೋಪದ ಮೇಲೆ ಕುಕಿ-ಜೋ ಬುಡುಕಟ್ಟು ಸಮುದಾಯದ ಲೇಖಕ ಮತ್ತು ಇಬ್ಬರು ಶಿಕ್ಷಣ ತಜ್ಞರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

‘ದಿ ಆಂಗ್ಲೋ-ಕುಕಿ ವಾರ್ 1917-1919’ ಎಂಬ ಶೀರ್ಷಿಕೆಯ ಪುಸ್ತಕವನ್ನು ನಿವೃತ್ತ ಕರ್ನಲ್ ವಿಜಯ್ ಚೆಂಜಿ ಬರೆದಿದ್ದಾರೆ ಮತ್ತು ಶಿಕ್ಷಣತಜ್ಞರಾದ ಜಾಂಗ್‌ಖೋಮಾಂಗ್ ಗೈಟ್ ಮತ್ತು ಥೋಂಗ್‌ಖೋಲಾಲ್ ಹಾಕಿಪ್ ಸಂಪಾದಿಸಿದ್ದಾರೆ. ಈ ಮೂವರ ವಿರುದ್ಧ ಇಂಫಾಲ್‌ನ ಫೆಡರೇಶನ್ ಆಫ್ ಹೌಮಿ ಎನ್ನುವ ನಾಗರಿಕ ಸಂಘಟನೆ ದೂರು ನೀಡಿದೆ.

Buy The Anglo- Kuki War, 1917-1919: A Frontier Uprising Against Imperialism During the First World War Book Online at Low Prices in India | The Anglo- Kuki War, 1917-1919: A Frontier Uprising

ಚೆಂಜಿ, ಗೈಟ್ ಮತ್ತು ಹಾಕಿಪ್ ಮೇಲೆ ಐಪಿಸಿ ಸೆಕ್ಷನ್ ಅಡಿಯಲ್ಲಿ ಭಾರತ ಸರ್ಕಾರದ ವಿರುದ್ಧ ಯುದ್ಧ ಮಾಡುವುದು, ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸುಳ್ಳು ಮಾಹಿತಿ ಹಂಚಿರುವುದಾಗಿ ಪ್ರಕರಣ ದಾಖಲಿಸಿದ್ದಾರೆ.

ಆಗಸ್ಟ್ 9ರಂದು ಚೆಂಜಿ ವಿರುದ್ಧ ಎಫ್ಐಆರ್ ದಾಖಲಿಸಿದ್ದರೆ, ಗೈಟ್ ಮತ್ತು ಹಾಕಿಪ್ ವಿರುದ್ಧ ಆಗಸ್ಟ್ 7 ರಂದು ಪ್ರಕರಣ ದಾಖಲಾಗಿದೆ.

ಗೈಟ್ ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಐತಿಹಾಸಿಕ ಅಧ್ಯಯನ ಕೇಂದ್ರದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದರೆ. ಹಾಕಿಪ್ ವಿಶ್ವವಿದ್ಯಾಲಯದ ಕಾನೂನು ಮತ್ತು ಆಡಳಿತದ ಅಧ್ಯಯನ ಕೇಂದ್ರದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ.

1917 ರಿಂದ 1919 ರವರೆಗಿನ ಕುಕಿ ದಂಗೆಯನ್ನು ಆಂಗ್ಲೋ-ಕುಕಿ ಯುದ್ಧ ಎಂದು ಪುಸ್ತಕವು ತಪ್ಪಾಗಿ ಚಿತ್ರಿಸಿದೆ ಎಂದು ಫೆಡರೇಶನ್ ಆಫ್ ಹೌಮಿ ಸಂಘಟನೆ ಆರೋಪಿಸಿದೆ. ಮಣಿಪುರದ ಇತಿಹಾಸದಲ್ಲಿ ಯಾವುದೇ ಆಂಗ್ಲೋ-ಕುಕಿ ಯುದ್ಧ ನಡೆದಿಲ್ಲ ಎಂದು ಸಂಘಟನೆ ಹೇಳಿಕೊಂಡಿದೆ.

ಈ ಪ್ರದೇಶದ ಲೇಬರ್ ಕಾರ್ಪ್ಸ್‌ನಲ್ಲಿ ಕುಕಿಗಳ ನೇಮಕಾತಿಯನ್ನು ವಿರೋಧಿಸಿದ್ದರಿಂದ ಕುಕಿ ಬಂಡಾಯ ನಡೆದಿದೆ ಎಂದು ದೂರುದಾರರು ಹೇಳಿದ್ದಾರೆ. ಈ ಭಾರತೀಯ ಲೇಬರ್ ಕಾರ್ಪ್ಸ್ ವಿಶ್ವ ಯುದ್ದ I ರ ಸಮಯದಲ್ಲಿ ವಿಶ್ವದ ಹಲವಾರು ಭಾಗಗಳಲ್ಲಿ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳಲು ಬ್ರಿಟಿಷ್ ಸರ್ಕಾರದಿಂದ ನೇಮಕಗೊಂಡ ಕಾರ್ಮಿಕರನ್ನು ಒಳಗೊಂಡಿತ್ತು.

ಕುಕಿ ದಂಗೆಯು ಬೆಟ್ಟದ ಪ್ರದೇಶಗಳಲ್ಲಿನ ನಾಗಾಗಳು, ಕೋಮ್‌ಗಳ ಹತ್ಯಾಕಾಂಡ, ಕಣಿವೆಯಲ್ಲಿ ಮೈತೀಸ್ ಮತ್ತು ಮುಸ್ಲಿಮರ ಹತ್ಯಾಕಾಂಡವನ್ನು ಒಳಗೊಂಡಿತ್ತು ಎಂದು ಸಂಘಟನೆಯು ಹೇಳಿಕೊಂಡಿದೆ.

ಬಂಡಾಯ ನಾಯಕರು, ತಾವು ಸರ್ಕಾರದ ವಿರುದ್ಧ ಹೋರಾಟ ಮಾಡಿದ್ದು ತಪ್ಪಾಗಿದೆ ಎಂದು ಸ್ಥಳೀಯ ಅಧಿಕಾರಿಗಳಿಗೆ ಕ್ಷಮಾಪಣಾ ಪತ್ರ ಬರೆದು ಇನ್ಮುಂದೆ ಸರ್ಕಾರಕ್ಕೆ ನಿಷ್ಠೆಯಿಂದ ಇರುತ್ತೇವೆ ಎಂದು ಪ್ರತಿಜ್ಞೆ ಮಾಡಿದ ದಾಖಲೆಗಳಿವೆ ಎಂದು ಫೆಡರೇಶನ್ ಆಫ್ ಹೌಮಿ ಹೇಳಿಕೊಂಡಿದೆ.

ಲೇಖಕರು ಐತಿಹಾಸಿಕ ಸತ್ಯಗಳನ್ನು ಮುಚ್ಚಿಟ್ಟು, ವೈಯಕ್ತಿಕ ಲಾಭಕ್ಕಾಗಿ ಮತ್ತು ನಿರ್ದಿಷ್ಟ ಸಮುದಾಯದ ಪರವಾಗಿ ಇತಿಹಾಸವನ್ನು ತಿರುಚಲು ಉದ್ದೇಶಪೂರ್ವಕವಾಗಿ ಅನೇಕ ಸುಳ್ಳುಗಳನ್ನು ರಚಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ವಿಳಂಬ ತನಿಖೆಗೆ ಸುಪ್ರೀಂ ಬೇಸರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...