Homeಮುಖಪುಟಮಣಿಪುರದ ಇತಿಹಾಸ ತಿರುಚಿದ ಆರೋಪ: ಲೇಖಕ, ಇಬ್ಬರು ಶಿಕ್ಷಣ ತಜ್ಞರ ವಿರುದ್ಧ ಎಫ್‌ಐಆರ್

ಮಣಿಪುರದ ಇತಿಹಾಸ ತಿರುಚಿದ ಆರೋಪ: ಲೇಖಕ, ಇಬ್ಬರು ಶಿಕ್ಷಣ ತಜ್ಞರ ವಿರುದ್ಧ ಎಫ್‌ಐಆರ್

- Advertisement -
- Advertisement -

ಪುಸ್ತಕವೊಂದರಲ್ಲಿ ಮಣಿಪುರ ರಾಜ್ಯದ ಇತಿಹಾಸವನ್ನು ತಿರುಚಿದ ಆರೋಪದ ಮೇಲೆ ಕುಕಿ-ಜೋ ಬುಡುಕಟ್ಟು ಸಮುದಾಯದ ಲೇಖಕ ಮತ್ತು ಇಬ್ಬರು ಶಿಕ್ಷಣ ತಜ್ಞರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

‘ದಿ ಆಂಗ್ಲೋ-ಕುಕಿ ವಾರ್ 1917-1919’ ಎಂಬ ಶೀರ್ಷಿಕೆಯ ಪುಸ್ತಕವನ್ನು ನಿವೃತ್ತ ಕರ್ನಲ್ ವಿಜಯ್ ಚೆಂಜಿ ಬರೆದಿದ್ದಾರೆ ಮತ್ತು ಶಿಕ್ಷಣತಜ್ಞರಾದ ಜಾಂಗ್‌ಖೋಮಾಂಗ್ ಗೈಟ್ ಮತ್ತು ಥೋಂಗ್‌ಖೋಲಾಲ್ ಹಾಕಿಪ್ ಸಂಪಾದಿಸಿದ್ದಾರೆ. ಈ ಮೂವರ ವಿರುದ್ಧ ಇಂಫಾಲ್‌ನ ಫೆಡರೇಶನ್ ಆಫ್ ಹೌಮಿ ಎನ್ನುವ ನಾಗರಿಕ ಸಂಘಟನೆ ದೂರು ನೀಡಿದೆ.

Buy The Anglo- Kuki War, 1917-1919: A Frontier Uprising Against Imperialism During the First World War Book Online at Low Prices in India | The Anglo- Kuki War, 1917-1919: A Frontier Uprising

ಚೆಂಜಿ, ಗೈಟ್ ಮತ್ತು ಹಾಕಿಪ್ ಮೇಲೆ ಐಪಿಸಿ ಸೆಕ್ಷನ್ ಅಡಿಯಲ್ಲಿ ಭಾರತ ಸರ್ಕಾರದ ವಿರುದ್ಧ ಯುದ್ಧ ಮಾಡುವುದು, ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸುಳ್ಳು ಮಾಹಿತಿ ಹಂಚಿರುವುದಾಗಿ ಪ್ರಕರಣ ದಾಖಲಿಸಿದ್ದಾರೆ.

ಆಗಸ್ಟ್ 9ರಂದು ಚೆಂಜಿ ವಿರುದ್ಧ ಎಫ್ಐಆರ್ ದಾಖಲಿಸಿದ್ದರೆ, ಗೈಟ್ ಮತ್ತು ಹಾಕಿಪ್ ವಿರುದ್ಧ ಆಗಸ್ಟ್ 7 ರಂದು ಪ್ರಕರಣ ದಾಖಲಾಗಿದೆ.

ಗೈಟ್ ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಐತಿಹಾಸಿಕ ಅಧ್ಯಯನ ಕೇಂದ್ರದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದರೆ. ಹಾಕಿಪ್ ವಿಶ್ವವಿದ್ಯಾಲಯದ ಕಾನೂನು ಮತ್ತು ಆಡಳಿತದ ಅಧ್ಯಯನ ಕೇಂದ್ರದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ.

1917 ರಿಂದ 1919 ರವರೆಗಿನ ಕುಕಿ ದಂಗೆಯನ್ನು ಆಂಗ್ಲೋ-ಕುಕಿ ಯುದ್ಧ ಎಂದು ಪುಸ್ತಕವು ತಪ್ಪಾಗಿ ಚಿತ್ರಿಸಿದೆ ಎಂದು ಫೆಡರೇಶನ್ ಆಫ್ ಹೌಮಿ ಸಂಘಟನೆ ಆರೋಪಿಸಿದೆ. ಮಣಿಪುರದ ಇತಿಹಾಸದಲ್ಲಿ ಯಾವುದೇ ಆಂಗ್ಲೋ-ಕುಕಿ ಯುದ್ಧ ನಡೆದಿಲ್ಲ ಎಂದು ಸಂಘಟನೆ ಹೇಳಿಕೊಂಡಿದೆ.

ಈ ಪ್ರದೇಶದ ಲೇಬರ್ ಕಾರ್ಪ್ಸ್‌ನಲ್ಲಿ ಕುಕಿಗಳ ನೇಮಕಾತಿಯನ್ನು ವಿರೋಧಿಸಿದ್ದರಿಂದ ಕುಕಿ ಬಂಡಾಯ ನಡೆದಿದೆ ಎಂದು ದೂರುದಾರರು ಹೇಳಿದ್ದಾರೆ. ಈ ಭಾರತೀಯ ಲೇಬರ್ ಕಾರ್ಪ್ಸ್ ವಿಶ್ವ ಯುದ್ದ I ರ ಸಮಯದಲ್ಲಿ ವಿಶ್ವದ ಹಲವಾರು ಭಾಗಗಳಲ್ಲಿ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳಲು ಬ್ರಿಟಿಷ್ ಸರ್ಕಾರದಿಂದ ನೇಮಕಗೊಂಡ ಕಾರ್ಮಿಕರನ್ನು ಒಳಗೊಂಡಿತ್ತು.

ಕುಕಿ ದಂಗೆಯು ಬೆಟ್ಟದ ಪ್ರದೇಶಗಳಲ್ಲಿನ ನಾಗಾಗಳು, ಕೋಮ್‌ಗಳ ಹತ್ಯಾಕಾಂಡ, ಕಣಿವೆಯಲ್ಲಿ ಮೈತೀಸ್ ಮತ್ತು ಮುಸ್ಲಿಮರ ಹತ್ಯಾಕಾಂಡವನ್ನು ಒಳಗೊಂಡಿತ್ತು ಎಂದು ಸಂಘಟನೆಯು ಹೇಳಿಕೊಂಡಿದೆ.

ಬಂಡಾಯ ನಾಯಕರು, ತಾವು ಸರ್ಕಾರದ ವಿರುದ್ಧ ಹೋರಾಟ ಮಾಡಿದ್ದು ತಪ್ಪಾಗಿದೆ ಎಂದು ಸ್ಥಳೀಯ ಅಧಿಕಾರಿಗಳಿಗೆ ಕ್ಷಮಾಪಣಾ ಪತ್ರ ಬರೆದು ಇನ್ಮುಂದೆ ಸರ್ಕಾರಕ್ಕೆ ನಿಷ್ಠೆಯಿಂದ ಇರುತ್ತೇವೆ ಎಂದು ಪ್ರತಿಜ್ಞೆ ಮಾಡಿದ ದಾಖಲೆಗಳಿವೆ ಎಂದು ಫೆಡರೇಶನ್ ಆಫ್ ಹೌಮಿ ಹೇಳಿಕೊಂಡಿದೆ.

ಲೇಖಕರು ಐತಿಹಾಸಿಕ ಸತ್ಯಗಳನ್ನು ಮುಚ್ಚಿಟ್ಟು, ವೈಯಕ್ತಿಕ ಲಾಭಕ್ಕಾಗಿ ಮತ್ತು ನಿರ್ದಿಷ್ಟ ಸಮುದಾಯದ ಪರವಾಗಿ ಇತಿಹಾಸವನ್ನು ತಿರುಚಲು ಉದ್ದೇಶಪೂರ್ವಕವಾಗಿ ಅನೇಕ ಸುಳ್ಳುಗಳನ್ನು ರಚಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ವಿಳಂಬ ತನಿಖೆಗೆ ಸುಪ್ರೀಂ ಬೇಸರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...