Homeಮುಖಪುಟಚುನಾವಣೆ ಬಳಿಕ ಮತ್ತೆ ಹಿಂಸಾಚಾರದ ಆತಂಕ| ಸುಪ್ರೀಂ ಮೊರೆ ಹೋದ ಮಣಿಪುರದ ಕುಕಿ-ಝೋ ಸಮುದಾಯ: ವರದಿ

ಚುನಾವಣೆ ಬಳಿಕ ಮತ್ತೆ ಹಿಂಸಾಚಾರದ ಆತಂಕ| ಸುಪ್ರೀಂ ಮೊರೆ ಹೋದ ಮಣಿಪುರದ ಕುಕಿ-ಝೋ ಸಮುದಾಯ: ವರದಿ

- Advertisement -
- Advertisement -

ಲೋಕಸಭೆ ಚುನಾವಣೆಯ ಬಳಿಕ ರಾಜ್ಯದಲ್ಲಿ ತಮ್ಮ ವಿರುದ್ದ ಮತ್ತೆ ಹಿಂಸಾಚಾರ ನಡೆಯುವ ಆತಂಕ ವ್ಯಕ್ತಪಡಿಸಿರುವ ಮಣಿಪುರದ ಬುಡಕಟ್ಟು ಜನಾಂಗ ಕುಕಿ-ಝೋ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.

ಕಳೆದ ಆರು ತಿಂಗಳಿನಿಂದ, ಮಣಿಪುರದ ಕುಕಿ-ಝೋ ಸಮುದಾಯವು ಆಕ್ರಮಣಕಾರಿ ಗುಂಪುಗಳು ಸಂಪೂರ್ಣ ಶಸ್ತ್ರಸಜ್ಜಿತರಾಗಿ ಸಿದ್ದರಾಗುತ್ತಿರುವುದನ್ನು ಪ್ರತ್ಯಕ್ಷವಾಗಿ ನೋಡಿದೆ. ಈ ಗುಂಪುಗಳಲ್ಲಿ ಒಂದಾದ ಅರಂಬೈ ಟೆಂಗೋಲ್ ಕುಕಿಗಳನ್ನು ನಾಶ ಮಾಡುವುದಾಗಿ ಬೆದರಿಕೆ ಹಾಕಿದೆ ಎಂದು ಅರ್ಜಿಯಲ್ಲಿ ಹೇಳಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

ಹಿಂಸಾಚಾರದ ತನಿಖೆಗಳ ಮೇಲ್ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ನೇಮಿಸಿರುವ ಮಹಾರಾಷ್ಟ್ರದ ಪೊಲೀಸ್ ಅಧಿಕಾರಿ ದತ್ತಾತ್ರೇ ಪಡಸಾಲಿಗೀಕರ್ ಅವರು ಕುಕಿ- ಝೋ ಸಮುದಾಯದ ನೆರವಿಗೆ ಬಂದಿಲ್ಲ ಎಂದು ಆರ್ಜಿಯಲ್ಲಿ ಆರೋಪಿಸಲಾಗಿದೆ.

ಸಮುದಾಯದ ಮೇಲಿನ ಕ್ರೂರ ದಾಳಿಯ ಬಗ್ಗೆ ಮತ್ತೆ ಮತ್ತೆ ಮನವಿ ಸಲ್ಲಿಸಿದ್ದರೂ ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ದಾಳಿಕೋರರು ಸ್ವತಂತ್ರವಾಗಿ ತಿರಗುತ್ತಿದ್ದುಮ ಹಿಂಸಾಚಾರ ಮತ್ತು ಶಸ್ತ್ರಾಸ್ತ್ರ ದೋಚುವಿಕೆಗೆ ಸಂಬಂಧಿಸಿದಂತೆ ಪಡಸಾಲಗೀಕರ್‌ ಅವರಿಗೆ ಐದು ಮನವಿ ಸಲ್ಲಿಸಿದ್ದರೂ, ಸಂತ್ರಸ್ತ ಸಮುದಾಯದ ನೆರವಿಗೆ ಬಂದಿಲ್ಲ ಎಂದು ಹೇಳಲಾಗಿದೆ.

ಮೊದಲ ದಾಳಿಗಿಂತಲೂ ತೀವ್ರ ದಾಳಿ ನಡೆಯುವ ಸಾಧ್ಯತೆ ಇರುವುದರಿಂದ ನ್ಯಾಯಾಲಯದ ಮುಂದೆ ಕೈಮುಗಿದು ನಿಂತಿದ್ದೇವೆ. ಕುಕಿ ಸಮುದಾಯದ ಬಾಲಕನ ಶಿರಚ್ಛೇದ ಮಾಡಿದ ಆರೋಪ ಎದುರಿಸುತ್ತಿರುವ ಕುಂಬಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಎಸ್ ಪ್ರೇಮಚಂದ್ರ ಸಿಂಗ್‌ ಅವರನ್ನು ಬಂಧಿಸಬೇಕು. ಹಿಂಸಾಚಾರ ತಡೆಗಟ್ಟಲು ಅರಂಬೈ ಟೆಂಗೋಲ್ ಮತ್ತು ಮೈತೇಯಿ ಲೀಪುನ್ ಗುಂಪಿನ ನಾಯಕರನ್ನು ಬಂಧಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಅಲ್ಲದೆ, 170 ಕುಕಿಗಳ ಸಾವು, ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಸಿದ್ಧಪಡಿಸಲಾದ ಆರೋಪ ಪಟ್ಟಿಗಳ ವಿವರಗಳನ್ನು ಮಣಿಪುರ ಸರ್ಕಾರ ಕೂಡಲೇ ಬಹಿರಂಗಪಡಿಸಬೇಕು. ಭಾರತೀಯ ಸೇನೆಯು ತಕ್ಷಣವೇ ಕುಕಿ-ಝೋ ಸಮುದಾಯದ ಜೀವ ಮತ್ತು ಆಸ್ತಿ ರಕ್ಷಣೆಗೆ ಮುಂದಾಗಬೇಕು. ಪಡಸಾಲಿಗೀಕರ್ ಮತ್ತು ನ್ಯಾಯಮೂರ್ತಿ ಗೀತಾ ಮಿತ್ತಲ್ ಸಮಿತಿ ಸಲ್ಲಿಸಿದ ವರದಿಗಳನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಲಾಗಿದೆ.

ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದ ವಿವಿಧ ಅರ್ಜಿಗಳು ಸುಪ್ರೀಂ ಕೋರ್ಟ್‌ ಅಂಗಳದಲ್ಲಿವೆ. ಹಿಂಸಾಚಾರದ ತನಿಖೆ ಮೇಲ್ವಿಚಾರಣೆಗಾಗಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್ ಅವರ ನೇತೃತ್ವದ ಅಖಿಲ ಮಹಿಳಾ ನ್ಯಾಯಾಂಗ ಸಮಿತಿಯನ್ನು ಸುಪ್ರೀಂ ಕೋರ್ಟ್‌ ರಚಿಸಿದೆ. ಆದರೆ, ರಾಜ್ಯ ಸರ್ಕಾರದ ಪ್ರತಿಯೊಂದು ವಿವರಗಳನ್ನು ಪರಿಶೀಲಿಸುವ ಕೆಲಸ ತನ್ನದಲ್ಲ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳು ಕೆಲ ತಿಂಗಳುಗಳ ಹಿಂದೆ ತಿಳಿಸಿದ್ದರು.

ಮಾಹಿತಿ ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ‘ಮತಗಟ್ಟೆಗಳಲ್ಲಿ ನಮ್ಮನ್ನು ತಿರಸ್ಕಾರದಿಂದ ನೋಡುತ್ತಾರೆ..’; ತಾರತಮ್ಯದ ಆತಂಕ ವ್ಯಕ್ತಪಡಿಸಿದ ಟ್ರಾನ್ಸ್‌ಜೆಂಡರ್ ಮತದಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...