Homeಮುಖಪುಟಚುನಾವಣೆ ಬಳಿಕ ಮತ್ತೆ ಹಿಂಸಾಚಾರದ ಆತಂಕ| ಸುಪ್ರೀಂ ಮೊರೆ ಹೋದ ಮಣಿಪುರದ ಕುಕಿ-ಝೋ ಸಮುದಾಯ: ವರದಿ

ಚುನಾವಣೆ ಬಳಿಕ ಮತ್ತೆ ಹಿಂಸಾಚಾರದ ಆತಂಕ| ಸುಪ್ರೀಂ ಮೊರೆ ಹೋದ ಮಣಿಪುರದ ಕುಕಿ-ಝೋ ಸಮುದಾಯ: ವರದಿ

- Advertisement -
- Advertisement -

ಲೋಕಸಭೆ ಚುನಾವಣೆಯ ಬಳಿಕ ರಾಜ್ಯದಲ್ಲಿ ತಮ್ಮ ವಿರುದ್ದ ಮತ್ತೆ ಹಿಂಸಾಚಾರ ನಡೆಯುವ ಆತಂಕ ವ್ಯಕ್ತಪಡಿಸಿರುವ ಮಣಿಪುರದ ಬುಡಕಟ್ಟು ಜನಾಂಗ ಕುಕಿ-ಝೋ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.

ಕಳೆದ ಆರು ತಿಂಗಳಿನಿಂದ, ಮಣಿಪುರದ ಕುಕಿ-ಝೋ ಸಮುದಾಯವು ಆಕ್ರಮಣಕಾರಿ ಗುಂಪುಗಳು ಸಂಪೂರ್ಣ ಶಸ್ತ್ರಸಜ್ಜಿತರಾಗಿ ಸಿದ್ದರಾಗುತ್ತಿರುವುದನ್ನು ಪ್ರತ್ಯಕ್ಷವಾಗಿ ನೋಡಿದೆ. ಈ ಗುಂಪುಗಳಲ್ಲಿ ಒಂದಾದ ಅರಂಬೈ ಟೆಂಗೋಲ್ ಕುಕಿಗಳನ್ನು ನಾಶ ಮಾಡುವುದಾಗಿ ಬೆದರಿಕೆ ಹಾಕಿದೆ ಎಂದು ಅರ್ಜಿಯಲ್ಲಿ ಹೇಳಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

ಹಿಂಸಾಚಾರದ ತನಿಖೆಗಳ ಮೇಲ್ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ನೇಮಿಸಿರುವ ಮಹಾರಾಷ್ಟ್ರದ ಪೊಲೀಸ್ ಅಧಿಕಾರಿ ದತ್ತಾತ್ರೇ ಪಡಸಾಲಿಗೀಕರ್ ಅವರು ಕುಕಿ- ಝೋ ಸಮುದಾಯದ ನೆರವಿಗೆ ಬಂದಿಲ್ಲ ಎಂದು ಆರ್ಜಿಯಲ್ಲಿ ಆರೋಪಿಸಲಾಗಿದೆ.

ಸಮುದಾಯದ ಮೇಲಿನ ಕ್ರೂರ ದಾಳಿಯ ಬಗ್ಗೆ ಮತ್ತೆ ಮತ್ತೆ ಮನವಿ ಸಲ್ಲಿಸಿದ್ದರೂ ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ದಾಳಿಕೋರರು ಸ್ವತಂತ್ರವಾಗಿ ತಿರಗುತ್ತಿದ್ದುಮ ಹಿಂಸಾಚಾರ ಮತ್ತು ಶಸ್ತ್ರಾಸ್ತ್ರ ದೋಚುವಿಕೆಗೆ ಸಂಬಂಧಿಸಿದಂತೆ ಪಡಸಾಲಗೀಕರ್‌ ಅವರಿಗೆ ಐದು ಮನವಿ ಸಲ್ಲಿಸಿದ್ದರೂ, ಸಂತ್ರಸ್ತ ಸಮುದಾಯದ ನೆರವಿಗೆ ಬಂದಿಲ್ಲ ಎಂದು ಹೇಳಲಾಗಿದೆ.

ಮೊದಲ ದಾಳಿಗಿಂತಲೂ ತೀವ್ರ ದಾಳಿ ನಡೆಯುವ ಸಾಧ್ಯತೆ ಇರುವುದರಿಂದ ನ್ಯಾಯಾಲಯದ ಮುಂದೆ ಕೈಮುಗಿದು ನಿಂತಿದ್ದೇವೆ. ಕುಕಿ ಸಮುದಾಯದ ಬಾಲಕನ ಶಿರಚ್ಛೇದ ಮಾಡಿದ ಆರೋಪ ಎದುರಿಸುತ್ತಿರುವ ಕುಂಬಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಎಸ್ ಪ್ರೇಮಚಂದ್ರ ಸಿಂಗ್‌ ಅವರನ್ನು ಬಂಧಿಸಬೇಕು. ಹಿಂಸಾಚಾರ ತಡೆಗಟ್ಟಲು ಅರಂಬೈ ಟೆಂಗೋಲ್ ಮತ್ತು ಮೈತೇಯಿ ಲೀಪುನ್ ಗುಂಪಿನ ನಾಯಕರನ್ನು ಬಂಧಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಅಲ್ಲದೆ, 170 ಕುಕಿಗಳ ಸಾವು, ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಸಿದ್ಧಪಡಿಸಲಾದ ಆರೋಪ ಪಟ್ಟಿಗಳ ವಿವರಗಳನ್ನು ಮಣಿಪುರ ಸರ್ಕಾರ ಕೂಡಲೇ ಬಹಿರಂಗಪಡಿಸಬೇಕು. ಭಾರತೀಯ ಸೇನೆಯು ತಕ್ಷಣವೇ ಕುಕಿ-ಝೋ ಸಮುದಾಯದ ಜೀವ ಮತ್ತು ಆಸ್ತಿ ರಕ್ಷಣೆಗೆ ಮುಂದಾಗಬೇಕು. ಪಡಸಾಲಿಗೀಕರ್ ಮತ್ತು ನ್ಯಾಯಮೂರ್ತಿ ಗೀತಾ ಮಿತ್ತಲ್ ಸಮಿತಿ ಸಲ್ಲಿಸಿದ ವರದಿಗಳನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಲಾಗಿದೆ.

ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದ ವಿವಿಧ ಅರ್ಜಿಗಳು ಸುಪ್ರೀಂ ಕೋರ್ಟ್‌ ಅಂಗಳದಲ್ಲಿವೆ. ಹಿಂಸಾಚಾರದ ತನಿಖೆ ಮೇಲ್ವಿಚಾರಣೆಗಾಗಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್ ಅವರ ನೇತೃತ್ವದ ಅಖಿಲ ಮಹಿಳಾ ನ್ಯಾಯಾಂಗ ಸಮಿತಿಯನ್ನು ಸುಪ್ರೀಂ ಕೋರ್ಟ್‌ ರಚಿಸಿದೆ. ಆದರೆ, ರಾಜ್ಯ ಸರ್ಕಾರದ ಪ್ರತಿಯೊಂದು ವಿವರಗಳನ್ನು ಪರಿಶೀಲಿಸುವ ಕೆಲಸ ತನ್ನದಲ್ಲ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳು ಕೆಲ ತಿಂಗಳುಗಳ ಹಿಂದೆ ತಿಳಿಸಿದ್ದರು.

ಮಾಹಿತಿ ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ‘ಮತಗಟ್ಟೆಗಳಲ್ಲಿ ನಮ್ಮನ್ನು ತಿರಸ್ಕಾರದಿಂದ ನೋಡುತ್ತಾರೆ..’; ತಾರತಮ್ಯದ ಆತಂಕ ವ್ಯಕ್ತಪಡಿಸಿದ ಟ್ರಾನ್ಸ್‌ಜೆಂಡರ್ ಮತದಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...