Homeಮುಖಪುಟಚುನಾವಣೆ ಬಳಿಕ ಮತ್ತೆ ಹಿಂಸಾಚಾರದ ಆತಂಕ| ಸುಪ್ರೀಂ ಮೊರೆ ಹೋದ ಮಣಿಪುರದ ಕುಕಿ-ಝೋ ಸಮುದಾಯ: ವರದಿ

ಚುನಾವಣೆ ಬಳಿಕ ಮತ್ತೆ ಹಿಂಸಾಚಾರದ ಆತಂಕ| ಸುಪ್ರೀಂ ಮೊರೆ ಹೋದ ಮಣಿಪುರದ ಕುಕಿ-ಝೋ ಸಮುದಾಯ: ವರದಿ

- Advertisement -
- Advertisement -

ಲೋಕಸಭೆ ಚುನಾವಣೆಯ ಬಳಿಕ ರಾಜ್ಯದಲ್ಲಿ ತಮ್ಮ ವಿರುದ್ದ ಮತ್ತೆ ಹಿಂಸಾಚಾರ ನಡೆಯುವ ಆತಂಕ ವ್ಯಕ್ತಪಡಿಸಿರುವ ಮಣಿಪುರದ ಬುಡಕಟ್ಟು ಜನಾಂಗ ಕುಕಿ-ಝೋ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.

ಕಳೆದ ಆರು ತಿಂಗಳಿನಿಂದ, ಮಣಿಪುರದ ಕುಕಿ-ಝೋ ಸಮುದಾಯವು ಆಕ್ರಮಣಕಾರಿ ಗುಂಪುಗಳು ಸಂಪೂರ್ಣ ಶಸ್ತ್ರಸಜ್ಜಿತರಾಗಿ ಸಿದ್ದರಾಗುತ್ತಿರುವುದನ್ನು ಪ್ರತ್ಯಕ್ಷವಾಗಿ ನೋಡಿದೆ. ಈ ಗುಂಪುಗಳಲ್ಲಿ ಒಂದಾದ ಅರಂಬೈ ಟೆಂಗೋಲ್ ಕುಕಿಗಳನ್ನು ನಾಶ ಮಾಡುವುದಾಗಿ ಬೆದರಿಕೆ ಹಾಕಿದೆ ಎಂದು ಅರ್ಜಿಯಲ್ಲಿ ಹೇಳಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

ಹಿಂಸಾಚಾರದ ತನಿಖೆಗಳ ಮೇಲ್ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ನೇಮಿಸಿರುವ ಮಹಾರಾಷ್ಟ್ರದ ಪೊಲೀಸ್ ಅಧಿಕಾರಿ ದತ್ತಾತ್ರೇ ಪಡಸಾಲಿಗೀಕರ್ ಅವರು ಕುಕಿ- ಝೋ ಸಮುದಾಯದ ನೆರವಿಗೆ ಬಂದಿಲ್ಲ ಎಂದು ಆರ್ಜಿಯಲ್ಲಿ ಆರೋಪಿಸಲಾಗಿದೆ.

ಸಮುದಾಯದ ಮೇಲಿನ ಕ್ರೂರ ದಾಳಿಯ ಬಗ್ಗೆ ಮತ್ತೆ ಮತ್ತೆ ಮನವಿ ಸಲ್ಲಿಸಿದ್ದರೂ ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ದಾಳಿಕೋರರು ಸ್ವತಂತ್ರವಾಗಿ ತಿರಗುತ್ತಿದ್ದುಮ ಹಿಂಸಾಚಾರ ಮತ್ತು ಶಸ್ತ್ರಾಸ್ತ್ರ ದೋಚುವಿಕೆಗೆ ಸಂಬಂಧಿಸಿದಂತೆ ಪಡಸಾಲಗೀಕರ್‌ ಅವರಿಗೆ ಐದು ಮನವಿ ಸಲ್ಲಿಸಿದ್ದರೂ, ಸಂತ್ರಸ್ತ ಸಮುದಾಯದ ನೆರವಿಗೆ ಬಂದಿಲ್ಲ ಎಂದು ಹೇಳಲಾಗಿದೆ.

ಮೊದಲ ದಾಳಿಗಿಂತಲೂ ತೀವ್ರ ದಾಳಿ ನಡೆಯುವ ಸಾಧ್ಯತೆ ಇರುವುದರಿಂದ ನ್ಯಾಯಾಲಯದ ಮುಂದೆ ಕೈಮುಗಿದು ನಿಂತಿದ್ದೇವೆ. ಕುಕಿ ಸಮುದಾಯದ ಬಾಲಕನ ಶಿರಚ್ಛೇದ ಮಾಡಿದ ಆರೋಪ ಎದುರಿಸುತ್ತಿರುವ ಕುಂಬಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಎಸ್ ಪ್ರೇಮಚಂದ್ರ ಸಿಂಗ್‌ ಅವರನ್ನು ಬಂಧಿಸಬೇಕು. ಹಿಂಸಾಚಾರ ತಡೆಗಟ್ಟಲು ಅರಂಬೈ ಟೆಂಗೋಲ್ ಮತ್ತು ಮೈತೇಯಿ ಲೀಪುನ್ ಗುಂಪಿನ ನಾಯಕರನ್ನು ಬಂಧಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಅಲ್ಲದೆ, 170 ಕುಕಿಗಳ ಸಾವು, ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಸಿದ್ಧಪಡಿಸಲಾದ ಆರೋಪ ಪಟ್ಟಿಗಳ ವಿವರಗಳನ್ನು ಮಣಿಪುರ ಸರ್ಕಾರ ಕೂಡಲೇ ಬಹಿರಂಗಪಡಿಸಬೇಕು. ಭಾರತೀಯ ಸೇನೆಯು ತಕ್ಷಣವೇ ಕುಕಿ-ಝೋ ಸಮುದಾಯದ ಜೀವ ಮತ್ತು ಆಸ್ತಿ ರಕ್ಷಣೆಗೆ ಮುಂದಾಗಬೇಕು. ಪಡಸಾಲಿಗೀಕರ್ ಮತ್ತು ನ್ಯಾಯಮೂರ್ತಿ ಗೀತಾ ಮಿತ್ತಲ್ ಸಮಿತಿ ಸಲ್ಲಿಸಿದ ವರದಿಗಳನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಲಾಗಿದೆ.

ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದ ವಿವಿಧ ಅರ್ಜಿಗಳು ಸುಪ್ರೀಂ ಕೋರ್ಟ್‌ ಅಂಗಳದಲ್ಲಿವೆ. ಹಿಂಸಾಚಾರದ ತನಿಖೆ ಮೇಲ್ವಿಚಾರಣೆಗಾಗಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್ ಅವರ ನೇತೃತ್ವದ ಅಖಿಲ ಮಹಿಳಾ ನ್ಯಾಯಾಂಗ ಸಮಿತಿಯನ್ನು ಸುಪ್ರೀಂ ಕೋರ್ಟ್‌ ರಚಿಸಿದೆ. ಆದರೆ, ರಾಜ್ಯ ಸರ್ಕಾರದ ಪ್ರತಿಯೊಂದು ವಿವರಗಳನ್ನು ಪರಿಶೀಲಿಸುವ ಕೆಲಸ ತನ್ನದಲ್ಲ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳು ಕೆಲ ತಿಂಗಳುಗಳ ಹಿಂದೆ ತಿಳಿಸಿದ್ದರು.

ಮಾಹಿತಿ ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ‘ಮತಗಟ್ಟೆಗಳಲ್ಲಿ ನಮ್ಮನ್ನು ತಿರಸ್ಕಾರದಿಂದ ನೋಡುತ್ತಾರೆ..’; ತಾರತಮ್ಯದ ಆತಂಕ ವ್ಯಕ್ತಪಡಿಸಿದ ಟ್ರಾನ್ಸ್‌ಜೆಂಡರ್ ಮತದಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...