Homeಮುಖಪುಟಮಣಿಪುರದಲ್ಲಿ ಗ್ರಾಮಸ್ಥರಿಗೆ ಮನೆ ಬಿಟ್ಟು ತೆರಳುವಂತೆ ಬಲವಂತ

ಮಣಿಪುರದಲ್ಲಿ ಗ್ರಾಮಸ್ಥರಿಗೆ ಮನೆ ಬಿಟ್ಟು ತೆರಳುವಂತೆ ಬಲವಂತ

- Advertisement -
- Advertisement -

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಮುಂದುವರಿದಿದೆ. ಮಣಿಪುರದ ಗಡಿ ಪಟ್ಟಣವಾದ ಮೊರೆಹ್‌ನಲ್ಲಿ ಭದ್ರತಾ ಪಡೆಗಳು ಮತ್ತು ಸಶಸ್ತ್ರದಾರಿಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, 200 ಗ್ರಾಮಸ್ಥರಿಗೆ ಮನೆ ಬಿಟ್ಟು ತೆರಳುವಂತೆ ಬಲವಂತ ಮಾಡಲಾಗಿದೆ. ಗುಂಡಿನ ಚಕಮಕಿಯ ಮುಂದುವರಿಕೆಯಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.

ಮ್ಯಾನ್ಮಾರ್ ಗಡಿಯಲ್ಲಿ ಮೊರೆಹ್‌ ಪಟ್ಟಣವಿದೆ. ಈ ಪ್ರದೇಶದಲ್ಲಿ ಭದ್ರತಾ ಪಡೆಗಳ ಮೇಲೆ ಸಶಸ್ತ್ರದಾರಿಗಳಿಂದ ಸರಣಿ ದಾಳಿಯು ನಡೆಯುತ್ತಿದೆ. ಭದ್ರತಾ ಪಡೆಗಳು ಮತ್ತು ಮಣಿಪುರ ಪೊಲೀಸ್ ಕಮಾಂಡೋಗಳನ್ನು ಗುರಿಯಾಗಿಸಿಕೊಂಡು ಹೆಚ್ಚಿನ ದಾಳಿಯು ನಡೆಯುತ್ತಿರುವ ಹಿನ್ನೆಲೆ ಹೆಚ್ಚಿನ ನಿಗಾವನ್ನು ಕೂಡ ವಹಿಸಲಾಗಿದೆ.

ಗುಂಡಿನ ಚಕಮಕಿಯು ಭಾನುವಾರ ಮತ್ತೆ ಆರಂಭವಾಗಿದೆ. ಇತ್ತೀಚಿನ ಹಿಂಸಾಚಾರವು ಗ್ರಾಮಸ್ಥರು ತಮ್ಮ ಮನೆಗಳನ್ನು ತೊರೆಯುವಂತೆ ಮಾಡಿದೆ. ಸೋಮವಾರ ನ್ಯೂ ಮೊರೆಹ್, ಲಂಗ್ಕಿಚೋಯ್ ಮತ್ತು ಜಿಯಾನ್ ವೆಂಗ್‌ನಲ್ಲಿ ಗುಂಡಿನ ದಾಳಿ ನಡೆದಿದೆ. ಸಶಸ್ತ್ರದಾರಿಗಳು ಭದ್ರತಾ ಪಡೆಗಳಂತೆ ನಟಿಸಿ ಕುಕಿ ಜನರಿರುವ ಗ್ರಾಮಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿ ಆರಂಭವಾದ ಬಳಿಕ ಸುಮಾರು 200 ಗ್ರಾಮಸ್ಥರು ಮನೆ ತೊರೆದಿದ್ದಾರೆ.

ಮೊರೆಹ್‌ನ ‘ಹಿಲ್ ಟ್ರೈಬಲ್ ಕೌನ್ಸಿಲ್’ ಯುನಿಟ್ 8ರ ಅಧ್ಯಕ್ಷರಾದ ಕೆ. ಮಿನ್ಲುನ್ ಟೌಥಾಂಗ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಸದ್ಯ ಊರಿನ ಇನ್ನೊಂದು ಭಾಗದಲ್ಲಿರುವ ಕಟ್ಟಡದಲ್ಲಿ ತಂಗಿದ್ದೇವೆ. ಗುಂಡಿನ ದಾಳಿಯು ನಿಂತಿದೆ ಎಂದು ನಮಗೆ ತಿಳಿಸಲಾಗಿದೆ ಆದರೆ ನಾವು ದಾಳಿಗೆ ಒಳಗಾಗುವ ಭೀತಿಯಿಂದ ಗ್ರಾಮಕ್ಕೆ ಹಿಂತಿರುಗುವುದಿಲ್ಲ ಎಂದು ಹೇಳಿದ್ದಾರೆ.

ಮೊರೆಹ್‌ ಬಜಾರ್ ಬಳಿ ಭಾನುವಾರ ಸಂಜೆ ಭದ್ರತಾ ಸಿಬ್ಬಂದಿಗಳು ಮತ್ತು ಸಶಸ್ತ್ರ ಗುಂಪಿನ ನಡುವೆ ಗುಂಡಿನ ಚಕಮಕಿ ನಡೆದಿದೆ. ಕನಿಷ್ಠ 10 ಮಂದಿ ಗಾಯಗೊಂಡಿದ್ದಾರೆ. ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ತಿಳಿಸಿದೆ.

ಕುಕಿ ಇನ್ಪಿ ತೆಂಗ್ನೌಪಾಲ್‌ನ ವಕ್ತಾರರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮಣಿಪುರ ಪೊಲೀಸ್ ಕಮಾಂಡೋಗಳು ಪಕ್ಷಪಾತ ಮಾಡುತ್ತಿದ್ದಾರೆ ಮತ್ತು ಕುಕಿ-ಜೋ ಬುಡಕಟ್ಟು ಜನಾಂಗದವರ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ. ರಾಜ್ಯ ಪೊಲೀಸ್ ಪಡೆಗಳ ಬದಲಿಗೆ ಕೇಂದ್ರೀಯ ಅರೆಸೇನಾ ಪಡೆಗಳನ್ನು ನೇಮಿಸಬೇಕು ಎಂದು ಆಗ್ರಹಿಸಿದ್ದಾರೆ.

ಮಣಿಪುರ ಪೊಲೀಸ್ ಕಮಾಂಡೋಗಳು ಪಕ್ಷಪಾತಿಗಳಾಗಿದ್ದಾರೆ ಮತ್ತು ಕುಕಿ-ಜೋ ಬುಡಕಟ್ಟು ಜನಾಂಗದವರ ಹತ್ಯೆಯಲ್ಲಿ ತೊಡಗಿದ್ದಾರೆ. ಅನೇಕ ಮೈತೈ ಗುಂಪುಗಳು, ಕಮಾಂಡೋಗಳು ಅಥವಾ ಭದ್ರತಾ ಪಡೆಗಳಂತೆ ನಟಿಸುತ್ತಿದ್ದಾರೆ ಮತ್ತು ಕುಕಿ ಗ್ರಾಮಗಳ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ತೆಂಗ್ನೌಪಾಲ್ ಹೇಳಿದ್ದಾರೆ.

ಘಟನೆಯಿಂದಾಗಿ ಕುಕಿ ಮಹಿಳೆಯರು ಸೋಮವಾರ ಮೊರೆಹ್ ಮತ್ತು ಕಾಂಗ್ಪೊಕ್ಪಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕುಕಿ ಪ್ರದೇಶಗಳಿಂದ ಮಣಿಪುರ ಪೊಲೀಸ್ ಕಮಾಂಡೋಗಳನ್ನು ತೆಗೆದುಹಾಕಬೇಕೆಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ದಾಳಿಗಳಲ್ಲಿ ಮ್ಯಾನ್ಮಾರ್‌ನ ಕೈವಾಡದ ಬಗ್ಗೆ ಮುಖ್ಯಮಂತ್ರಿ ಬಿರೇನ್ ಸಿಂಗ್ ಸಂಶಯ  ವ್ಯಕ್ತಪಡಿಸಿದ್ದಾರೆ. ಮ್ಯಾನ್ಮಾರ್ ಕಡೆಯಿಂದ ವಿದೇಶಿ ಆಗಂತುಕರು ಕೃತ್ಯದಲ್ಲಿ ಭಾಗಿಯಾಗಿರುವ ಬಗ್ಗೆ ನಮಗೆ ಅನುಮಾನವಿದೆ ಎಂದು ಹೇಳಿದ್ದಾರೆ. ಮೇ 3 ರಂದು ಹಿಂಸಾಚಾರ ಪ್ರಾರಂಭವಾದಾಗಿನಿಂದ ಅವರು ಇದೇ ರೀತಿಯ ವಾದಗಳನ್ನು ಮುಂದಿಡುತ್ತಿದ್ದಾರೆ. ಆದರೆ ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ವಿಫಲವಾದ ಅವರ ಸರ್ಕಾರದ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನವಾಗಿದೆ ಎಂದು ವಿಮರ್ಶಕರು ವಾದಿಸುತ್ತಾರೆ.

ಮೈತೈ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನ ನೀಡುವುದನ್ನು ವಿರೋಧಿಸಿ ಮಣಿಪುರದ ಗುಡ್ಡಗಾಡು ಜಿಲ್ಲೆಗಳಲ್ಲಿ ಮೇ 3, 2023ರಂದು ‘ಬುಡಕಟ್ಟು ಐಕಮತ್ಯ ಮೆರವಣಿಗೆ’ ಆಯೋಜಿಸಲಾಗಿತ್ತು. ಇದು ಬಳಿಕ ಜನಾಂಗೀಯ ಹಿಂಸಾಚಾರಕ್ಕೆ ತಿರುಗಿತ್ತು. ಮೇ.3ರಿಂದ ಮಣಿಪುರದಲ್ಲಿ ಕುಕಿಗಳು ಮತ್ತು ಮೈತೈ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಿಂದ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ರಾಜ್ಯದಲ್ಲಿ ಕನಿಷ್ಠ 60,000 ಜನರು ನಿರಾಶ್ರಿತರಾಗಿದ್ದಾರೆ. ಡಿ.4ರಂದು ತೆಂಗೊಪಾಲ್ ಜಿಲ್ಲೆಯ ಲೀತು ಗ್ರಾಮದಲ್ಲಿ ನಡೆದ ಗುಂಡಿನ ಕಾಳಗದಲ್ಲಿ 13 ಮಂದಿ ಮೃತಪಟ್ಟಿದ್ದರು. ಕೆಲ ದಿನಗಳ ಕಾಲ ಶಾಂತವಾಗಿದ್ದ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಪ್ರತ್ಯೇಕವಾದ ಘಟನೆಯಲ್ಲಿ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೈತೈ ಮತ್ತು ಕುಕಿ ಗುಂಪುಗಳ ನಡುವೆ ನಡೆದ ಹಿಂಸಾಚಾರದಲ್ಲಿ ಮೈತೈ ಸಮುದಾಯದ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಇದಲ್ಲದೆ ಮಣಿಪುರ ಗಡಿಭಾಗದ ಮೊರೆಹ್ ಪಟ್ಟಣದಲ್ಲಿ ಪೊಲೀಸ್ ಕಮಾಂಡೋಗಳು ಮತ್ತು ಸಶಸ್ತ್ರದಾರಿ ಗುಂಪಿನ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್‌ ಪೇದೆ ಗಾಯಗೊಂಡಿದ್ದರು.

ಇದನ್ನು ಓದಿ: ಸಿಯಾನಾ ಹಿಂಸಾಚಾರದ ಆರೋಪಿಗೆ ಪಕ್ಷದ ನಾಯಕತ್ವ ಕೊಟ್ಟ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...