Homeಮುಖಪುಟಮಣಿಪುರದಲ್ಲಿ ಗ್ರಾಮಸ್ಥರಿಗೆ ಮನೆ ಬಿಟ್ಟು ತೆರಳುವಂತೆ ಬಲವಂತ

ಮಣಿಪುರದಲ್ಲಿ ಗ್ರಾಮಸ್ಥರಿಗೆ ಮನೆ ಬಿಟ್ಟು ತೆರಳುವಂತೆ ಬಲವಂತ

- Advertisement -
- Advertisement -

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಮುಂದುವರಿದಿದೆ. ಮಣಿಪುರದ ಗಡಿ ಪಟ್ಟಣವಾದ ಮೊರೆಹ್‌ನಲ್ಲಿ ಭದ್ರತಾ ಪಡೆಗಳು ಮತ್ತು ಸಶಸ್ತ್ರದಾರಿಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, 200 ಗ್ರಾಮಸ್ಥರಿಗೆ ಮನೆ ಬಿಟ್ಟು ತೆರಳುವಂತೆ ಬಲವಂತ ಮಾಡಲಾಗಿದೆ. ಗುಂಡಿನ ಚಕಮಕಿಯ ಮುಂದುವರಿಕೆಯಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.

ಮ್ಯಾನ್ಮಾರ್ ಗಡಿಯಲ್ಲಿ ಮೊರೆಹ್‌ ಪಟ್ಟಣವಿದೆ. ಈ ಪ್ರದೇಶದಲ್ಲಿ ಭದ್ರತಾ ಪಡೆಗಳ ಮೇಲೆ ಸಶಸ್ತ್ರದಾರಿಗಳಿಂದ ಸರಣಿ ದಾಳಿಯು ನಡೆಯುತ್ತಿದೆ. ಭದ್ರತಾ ಪಡೆಗಳು ಮತ್ತು ಮಣಿಪುರ ಪೊಲೀಸ್ ಕಮಾಂಡೋಗಳನ್ನು ಗುರಿಯಾಗಿಸಿಕೊಂಡು ಹೆಚ್ಚಿನ ದಾಳಿಯು ನಡೆಯುತ್ತಿರುವ ಹಿನ್ನೆಲೆ ಹೆಚ್ಚಿನ ನಿಗಾವನ್ನು ಕೂಡ ವಹಿಸಲಾಗಿದೆ.

ಗುಂಡಿನ ಚಕಮಕಿಯು ಭಾನುವಾರ ಮತ್ತೆ ಆರಂಭವಾಗಿದೆ. ಇತ್ತೀಚಿನ ಹಿಂಸಾಚಾರವು ಗ್ರಾಮಸ್ಥರು ತಮ್ಮ ಮನೆಗಳನ್ನು ತೊರೆಯುವಂತೆ ಮಾಡಿದೆ. ಸೋಮವಾರ ನ್ಯೂ ಮೊರೆಹ್, ಲಂಗ್ಕಿಚೋಯ್ ಮತ್ತು ಜಿಯಾನ್ ವೆಂಗ್‌ನಲ್ಲಿ ಗುಂಡಿನ ದಾಳಿ ನಡೆದಿದೆ. ಸಶಸ್ತ್ರದಾರಿಗಳು ಭದ್ರತಾ ಪಡೆಗಳಂತೆ ನಟಿಸಿ ಕುಕಿ ಜನರಿರುವ ಗ್ರಾಮಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿ ಆರಂಭವಾದ ಬಳಿಕ ಸುಮಾರು 200 ಗ್ರಾಮಸ್ಥರು ಮನೆ ತೊರೆದಿದ್ದಾರೆ.

ಮೊರೆಹ್‌ನ ‘ಹಿಲ್ ಟ್ರೈಬಲ್ ಕೌನ್ಸಿಲ್’ ಯುನಿಟ್ 8ರ ಅಧ್ಯಕ್ಷರಾದ ಕೆ. ಮಿನ್ಲುನ್ ಟೌಥಾಂಗ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಸದ್ಯ ಊರಿನ ಇನ್ನೊಂದು ಭಾಗದಲ್ಲಿರುವ ಕಟ್ಟಡದಲ್ಲಿ ತಂಗಿದ್ದೇವೆ. ಗುಂಡಿನ ದಾಳಿಯು ನಿಂತಿದೆ ಎಂದು ನಮಗೆ ತಿಳಿಸಲಾಗಿದೆ ಆದರೆ ನಾವು ದಾಳಿಗೆ ಒಳಗಾಗುವ ಭೀತಿಯಿಂದ ಗ್ರಾಮಕ್ಕೆ ಹಿಂತಿರುಗುವುದಿಲ್ಲ ಎಂದು ಹೇಳಿದ್ದಾರೆ.

ಮೊರೆಹ್‌ ಬಜಾರ್ ಬಳಿ ಭಾನುವಾರ ಸಂಜೆ ಭದ್ರತಾ ಸಿಬ್ಬಂದಿಗಳು ಮತ್ತು ಸಶಸ್ತ್ರ ಗುಂಪಿನ ನಡುವೆ ಗುಂಡಿನ ಚಕಮಕಿ ನಡೆದಿದೆ. ಕನಿಷ್ಠ 10 ಮಂದಿ ಗಾಯಗೊಂಡಿದ್ದಾರೆ. ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ತಿಳಿಸಿದೆ.

ಕುಕಿ ಇನ್ಪಿ ತೆಂಗ್ನೌಪಾಲ್‌ನ ವಕ್ತಾರರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮಣಿಪುರ ಪೊಲೀಸ್ ಕಮಾಂಡೋಗಳು ಪಕ್ಷಪಾತ ಮಾಡುತ್ತಿದ್ದಾರೆ ಮತ್ತು ಕುಕಿ-ಜೋ ಬುಡಕಟ್ಟು ಜನಾಂಗದವರ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ. ರಾಜ್ಯ ಪೊಲೀಸ್ ಪಡೆಗಳ ಬದಲಿಗೆ ಕೇಂದ್ರೀಯ ಅರೆಸೇನಾ ಪಡೆಗಳನ್ನು ನೇಮಿಸಬೇಕು ಎಂದು ಆಗ್ರಹಿಸಿದ್ದಾರೆ.

ಮಣಿಪುರ ಪೊಲೀಸ್ ಕಮಾಂಡೋಗಳು ಪಕ್ಷಪಾತಿಗಳಾಗಿದ್ದಾರೆ ಮತ್ತು ಕುಕಿ-ಜೋ ಬುಡಕಟ್ಟು ಜನಾಂಗದವರ ಹತ್ಯೆಯಲ್ಲಿ ತೊಡಗಿದ್ದಾರೆ. ಅನೇಕ ಮೈತೈ ಗುಂಪುಗಳು, ಕಮಾಂಡೋಗಳು ಅಥವಾ ಭದ್ರತಾ ಪಡೆಗಳಂತೆ ನಟಿಸುತ್ತಿದ್ದಾರೆ ಮತ್ತು ಕುಕಿ ಗ್ರಾಮಗಳ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ತೆಂಗ್ನೌಪಾಲ್ ಹೇಳಿದ್ದಾರೆ.

ಘಟನೆಯಿಂದಾಗಿ ಕುಕಿ ಮಹಿಳೆಯರು ಸೋಮವಾರ ಮೊರೆಹ್ ಮತ್ತು ಕಾಂಗ್ಪೊಕ್ಪಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕುಕಿ ಪ್ರದೇಶಗಳಿಂದ ಮಣಿಪುರ ಪೊಲೀಸ್ ಕಮಾಂಡೋಗಳನ್ನು ತೆಗೆದುಹಾಕಬೇಕೆಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ದಾಳಿಗಳಲ್ಲಿ ಮ್ಯಾನ್ಮಾರ್‌ನ ಕೈವಾಡದ ಬಗ್ಗೆ ಮುಖ್ಯಮಂತ್ರಿ ಬಿರೇನ್ ಸಿಂಗ್ ಸಂಶಯ  ವ್ಯಕ್ತಪಡಿಸಿದ್ದಾರೆ. ಮ್ಯಾನ್ಮಾರ್ ಕಡೆಯಿಂದ ವಿದೇಶಿ ಆಗಂತುಕರು ಕೃತ್ಯದಲ್ಲಿ ಭಾಗಿಯಾಗಿರುವ ಬಗ್ಗೆ ನಮಗೆ ಅನುಮಾನವಿದೆ ಎಂದು ಹೇಳಿದ್ದಾರೆ. ಮೇ 3 ರಂದು ಹಿಂಸಾಚಾರ ಪ್ರಾರಂಭವಾದಾಗಿನಿಂದ ಅವರು ಇದೇ ರೀತಿಯ ವಾದಗಳನ್ನು ಮುಂದಿಡುತ್ತಿದ್ದಾರೆ. ಆದರೆ ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ವಿಫಲವಾದ ಅವರ ಸರ್ಕಾರದ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನವಾಗಿದೆ ಎಂದು ವಿಮರ್ಶಕರು ವಾದಿಸುತ್ತಾರೆ.

ಮೈತೈ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನ ನೀಡುವುದನ್ನು ವಿರೋಧಿಸಿ ಮಣಿಪುರದ ಗುಡ್ಡಗಾಡು ಜಿಲ್ಲೆಗಳಲ್ಲಿ ಮೇ 3, 2023ರಂದು ‘ಬುಡಕಟ್ಟು ಐಕಮತ್ಯ ಮೆರವಣಿಗೆ’ ಆಯೋಜಿಸಲಾಗಿತ್ತು. ಇದು ಬಳಿಕ ಜನಾಂಗೀಯ ಹಿಂಸಾಚಾರಕ್ಕೆ ತಿರುಗಿತ್ತು. ಮೇ.3ರಿಂದ ಮಣಿಪುರದಲ್ಲಿ ಕುಕಿಗಳು ಮತ್ತು ಮೈತೈ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಿಂದ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ರಾಜ್ಯದಲ್ಲಿ ಕನಿಷ್ಠ 60,000 ಜನರು ನಿರಾಶ್ರಿತರಾಗಿದ್ದಾರೆ. ಡಿ.4ರಂದು ತೆಂಗೊಪಾಲ್ ಜಿಲ್ಲೆಯ ಲೀತು ಗ್ರಾಮದಲ್ಲಿ ನಡೆದ ಗುಂಡಿನ ಕಾಳಗದಲ್ಲಿ 13 ಮಂದಿ ಮೃತಪಟ್ಟಿದ್ದರು. ಕೆಲ ದಿನಗಳ ಕಾಲ ಶಾಂತವಾಗಿದ್ದ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಪ್ರತ್ಯೇಕವಾದ ಘಟನೆಯಲ್ಲಿ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೈತೈ ಮತ್ತು ಕುಕಿ ಗುಂಪುಗಳ ನಡುವೆ ನಡೆದ ಹಿಂಸಾಚಾರದಲ್ಲಿ ಮೈತೈ ಸಮುದಾಯದ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಇದಲ್ಲದೆ ಮಣಿಪುರ ಗಡಿಭಾಗದ ಮೊರೆಹ್ ಪಟ್ಟಣದಲ್ಲಿ ಪೊಲೀಸ್ ಕಮಾಂಡೋಗಳು ಮತ್ತು ಸಶಸ್ತ್ರದಾರಿ ಗುಂಪಿನ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್‌ ಪೇದೆ ಗಾಯಗೊಂಡಿದ್ದರು.

ಇದನ್ನು ಓದಿ: ಸಿಯಾನಾ ಹಿಂಸಾಚಾರದ ಆರೋಪಿಗೆ ಪಕ್ಷದ ನಾಯಕತ್ವ ಕೊಟ್ಟ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...