Homeಮುಖಪುಟಮಣಿಪುರದಲ್ಲಿ ಗ್ರಾಮಸ್ಥರಿಗೆ ಮನೆ ಬಿಟ್ಟು ತೆರಳುವಂತೆ ಬಲವಂತ

ಮಣಿಪುರದಲ್ಲಿ ಗ್ರಾಮಸ್ಥರಿಗೆ ಮನೆ ಬಿಟ್ಟು ತೆರಳುವಂತೆ ಬಲವಂತ

- Advertisement -
- Advertisement -

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಮುಂದುವರಿದಿದೆ. ಮಣಿಪುರದ ಗಡಿ ಪಟ್ಟಣವಾದ ಮೊರೆಹ್‌ನಲ್ಲಿ ಭದ್ರತಾ ಪಡೆಗಳು ಮತ್ತು ಸಶಸ್ತ್ರದಾರಿಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, 200 ಗ್ರಾಮಸ್ಥರಿಗೆ ಮನೆ ಬಿಟ್ಟು ತೆರಳುವಂತೆ ಬಲವಂತ ಮಾಡಲಾಗಿದೆ. ಗುಂಡಿನ ಚಕಮಕಿಯ ಮುಂದುವರಿಕೆಯಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.

ಮ್ಯಾನ್ಮಾರ್ ಗಡಿಯಲ್ಲಿ ಮೊರೆಹ್‌ ಪಟ್ಟಣವಿದೆ. ಈ ಪ್ರದೇಶದಲ್ಲಿ ಭದ್ರತಾ ಪಡೆಗಳ ಮೇಲೆ ಸಶಸ್ತ್ರದಾರಿಗಳಿಂದ ಸರಣಿ ದಾಳಿಯು ನಡೆಯುತ್ತಿದೆ. ಭದ್ರತಾ ಪಡೆಗಳು ಮತ್ತು ಮಣಿಪುರ ಪೊಲೀಸ್ ಕಮಾಂಡೋಗಳನ್ನು ಗುರಿಯಾಗಿಸಿಕೊಂಡು ಹೆಚ್ಚಿನ ದಾಳಿಯು ನಡೆಯುತ್ತಿರುವ ಹಿನ್ನೆಲೆ ಹೆಚ್ಚಿನ ನಿಗಾವನ್ನು ಕೂಡ ವಹಿಸಲಾಗಿದೆ.

ಗುಂಡಿನ ಚಕಮಕಿಯು ಭಾನುವಾರ ಮತ್ತೆ ಆರಂಭವಾಗಿದೆ. ಇತ್ತೀಚಿನ ಹಿಂಸಾಚಾರವು ಗ್ರಾಮಸ್ಥರು ತಮ್ಮ ಮನೆಗಳನ್ನು ತೊರೆಯುವಂತೆ ಮಾಡಿದೆ. ಸೋಮವಾರ ನ್ಯೂ ಮೊರೆಹ್, ಲಂಗ್ಕಿಚೋಯ್ ಮತ್ತು ಜಿಯಾನ್ ವೆಂಗ್‌ನಲ್ಲಿ ಗುಂಡಿನ ದಾಳಿ ನಡೆದಿದೆ. ಸಶಸ್ತ್ರದಾರಿಗಳು ಭದ್ರತಾ ಪಡೆಗಳಂತೆ ನಟಿಸಿ ಕುಕಿ ಜನರಿರುವ ಗ್ರಾಮಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿ ಆರಂಭವಾದ ಬಳಿಕ ಸುಮಾರು 200 ಗ್ರಾಮಸ್ಥರು ಮನೆ ತೊರೆದಿದ್ದಾರೆ.

ಮೊರೆಹ್‌ನ ‘ಹಿಲ್ ಟ್ರೈಬಲ್ ಕೌನ್ಸಿಲ್’ ಯುನಿಟ್ 8ರ ಅಧ್ಯಕ್ಷರಾದ ಕೆ. ಮಿನ್ಲುನ್ ಟೌಥಾಂಗ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಸದ್ಯ ಊರಿನ ಇನ್ನೊಂದು ಭಾಗದಲ್ಲಿರುವ ಕಟ್ಟಡದಲ್ಲಿ ತಂಗಿದ್ದೇವೆ. ಗುಂಡಿನ ದಾಳಿಯು ನಿಂತಿದೆ ಎಂದು ನಮಗೆ ತಿಳಿಸಲಾಗಿದೆ ಆದರೆ ನಾವು ದಾಳಿಗೆ ಒಳಗಾಗುವ ಭೀತಿಯಿಂದ ಗ್ರಾಮಕ್ಕೆ ಹಿಂತಿರುಗುವುದಿಲ್ಲ ಎಂದು ಹೇಳಿದ್ದಾರೆ.

ಮೊರೆಹ್‌ ಬಜಾರ್ ಬಳಿ ಭಾನುವಾರ ಸಂಜೆ ಭದ್ರತಾ ಸಿಬ್ಬಂದಿಗಳು ಮತ್ತು ಸಶಸ್ತ್ರ ಗುಂಪಿನ ನಡುವೆ ಗುಂಡಿನ ಚಕಮಕಿ ನಡೆದಿದೆ. ಕನಿಷ್ಠ 10 ಮಂದಿ ಗಾಯಗೊಂಡಿದ್ದಾರೆ. ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ತಿಳಿಸಿದೆ.

ಕುಕಿ ಇನ್ಪಿ ತೆಂಗ್ನೌಪಾಲ್‌ನ ವಕ್ತಾರರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮಣಿಪುರ ಪೊಲೀಸ್ ಕಮಾಂಡೋಗಳು ಪಕ್ಷಪಾತ ಮಾಡುತ್ತಿದ್ದಾರೆ ಮತ್ತು ಕುಕಿ-ಜೋ ಬುಡಕಟ್ಟು ಜನಾಂಗದವರ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ. ರಾಜ್ಯ ಪೊಲೀಸ್ ಪಡೆಗಳ ಬದಲಿಗೆ ಕೇಂದ್ರೀಯ ಅರೆಸೇನಾ ಪಡೆಗಳನ್ನು ನೇಮಿಸಬೇಕು ಎಂದು ಆಗ್ರಹಿಸಿದ್ದಾರೆ.

ಮಣಿಪುರ ಪೊಲೀಸ್ ಕಮಾಂಡೋಗಳು ಪಕ್ಷಪಾತಿಗಳಾಗಿದ್ದಾರೆ ಮತ್ತು ಕುಕಿ-ಜೋ ಬುಡಕಟ್ಟು ಜನಾಂಗದವರ ಹತ್ಯೆಯಲ್ಲಿ ತೊಡಗಿದ್ದಾರೆ. ಅನೇಕ ಮೈತೈ ಗುಂಪುಗಳು, ಕಮಾಂಡೋಗಳು ಅಥವಾ ಭದ್ರತಾ ಪಡೆಗಳಂತೆ ನಟಿಸುತ್ತಿದ್ದಾರೆ ಮತ್ತು ಕುಕಿ ಗ್ರಾಮಗಳ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ತೆಂಗ್ನೌಪಾಲ್ ಹೇಳಿದ್ದಾರೆ.

ಘಟನೆಯಿಂದಾಗಿ ಕುಕಿ ಮಹಿಳೆಯರು ಸೋಮವಾರ ಮೊರೆಹ್ ಮತ್ತು ಕಾಂಗ್ಪೊಕ್ಪಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕುಕಿ ಪ್ರದೇಶಗಳಿಂದ ಮಣಿಪುರ ಪೊಲೀಸ್ ಕಮಾಂಡೋಗಳನ್ನು ತೆಗೆದುಹಾಕಬೇಕೆಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ದಾಳಿಗಳಲ್ಲಿ ಮ್ಯಾನ್ಮಾರ್‌ನ ಕೈವಾಡದ ಬಗ್ಗೆ ಮುಖ್ಯಮಂತ್ರಿ ಬಿರೇನ್ ಸಿಂಗ್ ಸಂಶಯ  ವ್ಯಕ್ತಪಡಿಸಿದ್ದಾರೆ. ಮ್ಯಾನ್ಮಾರ್ ಕಡೆಯಿಂದ ವಿದೇಶಿ ಆಗಂತುಕರು ಕೃತ್ಯದಲ್ಲಿ ಭಾಗಿಯಾಗಿರುವ ಬಗ್ಗೆ ನಮಗೆ ಅನುಮಾನವಿದೆ ಎಂದು ಹೇಳಿದ್ದಾರೆ. ಮೇ 3 ರಂದು ಹಿಂಸಾಚಾರ ಪ್ರಾರಂಭವಾದಾಗಿನಿಂದ ಅವರು ಇದೇ ರೀತಿಯ ವಾದಗಳನ್ನು ಮುಂದಿಡುತ್ತಿದ್ದಾರೆ. ಆದರೆ ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ವಿಫಲವಾದ ಅವರ ಸರ್ಕಾರದ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನವಾಗಿದೆ ಎಂದು ವಿಮರ್ಶಕರು ವಾದಿಸುತ್ತಾರೆ.

ಮೈತೈ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನ ನೀಡುವುದನ್ನು ವಿರೋಧಿಸಿ ಮಣಿಪುರದ ಗುಡ್ಡಗಾಡು ಜಿಲ್ಲೆಗಳಲ್ಲಿ ಮೇ 3, 2023ರಂದು ‘ಬುಡಕಟ್ಟು ಐಕಮತ್ಯ ಮೆರವಣಿಗೆ’ ಆಯೋಜಿಸಲಾಗಿತ್ತು. ಇದು ಬಳಿಕ ಜನಾಂಗೀಯ ಹಿಂಸಾಚಾರಕ್ಕೆ ತಿರುಗಿತ್ತು. ಮೇ.3ರಿಂದ ಮಣಿಪುರದಲ್ಲಿ ಕುಕಿಗಳು ಮತ್ತು ಮೈತೈ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಿಂದ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ರಾಜ್ಯದಲ್ಲಿ ಕನಿಷ್ಠ 60,000 ಜನರು ನಿರಾಶ್ರಿತರಾಗಿದ್ದಾರೆ. ಡಿ.4ರಂದು ತೆಂಗೊಪಾಲ್ ಜಿಲ್ಲೆಯ ಲೀತು ಗ್ರಾಮದಲ್ಲಿ ನಡೆದ ಗುಂಡಿನ ಕಾಳಗದಲ್ಲಿ 13 ಮಂದಿ ಮೃತಪಟ್ಟಿದ್ದರು. ಕೆಲ ದಿನಗಳ ಕಾಲ ಶಾಂತವಾಗಿದ್ದ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಪ್ರತ್ಯೇಕವಾದ ಘಟನೆಯಲ್ಲಿ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೈತೈ ಮತ್ತು ಕುಕಿ ಗುಂಪುಗಳ ನಡುವೆ ನಡೆದ ಹಿಂಸಾಚಾರದಲ್ಲಿ ಮೈತೈ ಸಮುದಾಯದ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಇದಲ್ಲದೆ ಮಣಿಪುರ ಗಡಿಭಾಗದ ಮೊರೆಹ್ ಪಟ್ಟಣದಲ್ಲಿ ಪೊಲೀಸ್ ಕಮಾಂಡೋಗಳು ಮತ್ತು ಸಶಸ್ತ್ರದಾರಿ ಗುಂಪಿನ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್‌ ಪೇದೆ ಗಾಯಗೊಂಡಿದ್ದರು.

ಇದನ್ನು ಓದಿ: ಸಿಯಾನಾ ಹಿಂಸಾಚಾರದ ಆರೋಪಿಗೆ ಪಕ್ಷದ ನಾಯಕತ್ವ ಕೊಟ್ಟ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...