Homeಮುಖಪುಟತಮಿಳುನಾಡಿನ ಬಗ್ಗೆ ಸುಳ್ಳು ಸುದ್ದಿ ಹರಡಿ ಬಂಧಿಸಲ್ಪಟ್ಟಿದ್ದ ಯೂಟ್ಯೂಬರ್ ಕಶ್ಯಪ್ ಬಿಜೆಪಿಗೆ ಸೇರ್ಪಡೆ

ತಮಿಳುನಾಡಿನ ಬಗ್ಗೆ ಸುಳ್ಳು ಸುದ್ದಿ ಹರಡಿ ಬಂಧಿಸಲ್ಪಟ್ಟಿದ್ದ ಯೂಟ್ಯೂಬರ್ ಕಶ್ಯಪ್ ಬಿಜೆಪಿಗೆ ಸೇರ್ಪಡೆ

- Advertisement -
- Advertisement -

ಯೂಟ್ಯೂಬರ್ ಮನೀಶ್ ಕಶ್ಯಪ್ ಬಿಜೆಪಿ ಸಂಸದ ಮನೋಜ್ ತಿವಾರಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬಿಹಾರ ಮೂಲದ ಯೂಟ್ಯೂಬರ್ ಕಶ್ಯಪ್ ಕಳೆದ ವರ್ಷ ನಕಲಿ ಮಾಹಿತಿ ಹರಡಿದ್ದಕ್ಕಾಗಿ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಹೊರಗಿದ್ದಾರೆ.

ತಮಿಳುನಾಡಿನಲ್ಲಿ ಬಿಹಾರದ ಕಾರ್ಮಿಕರನ್ನು ಕೊಲ್ಲಲಾಗಿದೆ ಎಂದು ಸುಳ್ಳು ಸುದ್ದಿಯನ್ನು ಹಬ್ಬಿಸಿ ಯ್ಯೂಟ್ಯೂಬರ್‌ ಮನೀಶ್ ಕಶ್ಯಪ್ ಬಂಧಕ್ಕೊಳಪಟ್ಟಿದ್ದರು. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಪತ್ರಕರ್ತ ಮೊಹಮ್ಮದ್‌ ಝಬೈರ್‌, ಹಲವಾರು ಬಿಹಾರದ ವಲಸೆ ಕಾರ್ಮಿಕರು ತಮಿಳುನಾಡಿನಲ್ಲಿ ಕೊಲ್ಲಲ್ಪಟ್ಟಿದ್ದಾರೆ ಎಂದು ಹೇಳುವ ಮೂಲಕ ತಮಿಳುನಾಡಿನಲ್ಲಿ ಬಿಹಾರದ ವಲಸೆ ಕಾರ್ಮಿಕರಲ್ಲಿ ಸುರಕ್ಷತೆಯ ಭಯವನ್ನು ಹೆಚ್ಚಿಸಲು ಅತ್ಯುತ್ತಮ ಪ್ರಯತ್ನ ಮಾಡಿದ್ದ ಮನೀಶ್ ಕಶ್ಯಪ್ ನೆನಪಿದೆಯೇ? ಆತನನನ್ನು ಈ ಹಿಂದೆ ಅಪಾಯಕಾರಿ ತಪ್ಪು ಮಾಹಿತಿ ನೀಡಿದ್ದಕ್ಕೆ ಬಂಧಿಸಲಾಗಿತ್ತು. ಇದೀಗ ಅವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ಬಿಜೆಪಿ ಸನ್ಮಾನಿಸಿದೆ. ತಪ್ಪು ಮಾಹಿತಿಯನ್ನು ಹಂಚಿಕೊಳ್ಳುವ ಪ್ರತಿಯೊಬ್ಬ ಪ್ರಭಾವಿಗಳಿಗೆ ಇದು ತುಂಬಾ ಉತ್ತೇಜನಕಾರಿಯಾಗಿದೆ ಎಂದು ಹೇಳಿದ್ದಾರೆ.

ಏನಿದು ಘಟನೆ?

ಮಾರ್ಚ್ 1ರಂದು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಹುಟ್ಟುಹಬ್ಬ. ಸ್ಟಾಲಿನ್ ಹುಟ್ಟುಹಬ್ಬಕ್ಕೆ ಶುಭ ಕೋರಲೆಂದು ಬಿಹಾರದ ಉಪಮುಖ್ಯಮಂತ್ರಿ ಹಾಗೂ ಆರ್‌ಜೆಡಿ ಪಕ್ಷದ ನಾಯಕ ತೇಜಸ್ವಿ ಯಾದವ್ ತಮಿಳುನಾಡಿಗೆ ಆಗಮಿಸಿದ್ದರು. ಅದೇ ದಿನ ಬಿಹಾರದ ಬಿಜೆಪಿ ಪಕ್ಷದ ಅಧಿಕೃತ ಟ್ವಿಟರ್ ಖಾತೆಯಲ್ಲಿ “ತಮಿಳುನಾಡಿನಲ್ಲಿ ಹಿಂದಿ ಮಾತನಾಡಿದ್ದಕ್ಕಾಗಿ 12 ಜನರನ್ನು ಒಂದೇ ಕೋಣೆಯಲ್ಲಿ ಕೂಡಿಹಾಕಿ ನೇಣು ಬಿಗಿದು ಕೊಲ್ಲಲಾಗಿದೆ” ಎಂದು ಒಂದು ವಿಡಿಯೋವನ್ನು ಹಂಚಿಕೊಳ್ಳಲಾಗಿತ್ತು. ಇದರ ಬೆನ್ನಿಗೆ “ಮನೀಶ್ ಕಶ್ಯಪ್”  ತನ್ನ ಯೂಟ್ಯೂಬ್ ಚಾನೆಲ್ ಮತ್ತು ಫೇಸ್ಬುಕ್ ಅಕೌಂಟ್‌ನಲ್ಲಿ, ’ತಮಿಳುನಾಡಿನಲ್ಲಿ ಬಿಹಾರದ ಕಾರ್ಮಿಕರನ್ನು ಕಂಡಕಂಡಲ್ಲಿ ಮಚ್ಚಿನಿಂದ ಕೊಚ್ಚಿ ಕೊಲ್ಲಲಾಗುತ್ತಿದೆ’ ಎಂದು ಸುದ್ದಿಯನ್ನು ಮಾಡಿದ್ದ. ಆತನ ವಿಡಿಯೋವನ್ನು 6 ಮಿಲಿಯನ್ ಜನ ವೀಕ್ಷಿಸಿದ್ದರು. ಬಿಹಾರದ ವಿಧಾನಸಭೆಯಲ್ಲೂ ಈ ವಿಚಾರವಾಗಿ ಭಾರಿ ಚರ್ಚೆಯಾಗಿತ್ತು. ಅಲ್ಲಿನ ವಿರೋಧ ಪಕ್ಷವಾದ ಬಿಜೆಪಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ರಾಜೀನಾಮೆಗೆ ಪಟ್ಟುಹಿಡಿದಿತ್ತು.

ವಿರೋಧ ಪಕ್ಷದ ನಾಯಕ ವಿಜಯ್ ಸಿನ್ಹ ಈ ಮನೀಶ್ ಕಶ್ಯಪ್ ಎಂಬ ವ್ಯಕ್ತಿಯ ಯೂಟ್ಯೂಬ್ ಚಾನೆಲ್‌ಗೆ ಸಂದರ್ಶನ ನೀಡಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಮತ್ತು ಅವರ ಹುಟ್ಟುಹಬ್ಬಕ್ಕೆ ಶುಭಕೋರಿದ್ದ ತೇಜಸ್ವಿ ಯಾದವ್ ಬಗ್ಗೆ ಅವಹೇಳನಕಾರಿಯಾದಂತಹ ಮಾತುಗಳನ್ನಾಡಿದ್ದರು. ಇಂತವರ ಸರ್ಕಾರ ಬಿಹಾರಕ್ಕೆ ಬೇಕೆ? ತೇಜಸ್ವಿ ಯಾದವ್ ಸ್ಟಾಲಿನ್‌ಗೆ ಕೇಕ್ ತಿನ್ನಿಸುವ ದಿನದಲ್ಲೇ ನಮ್ಮ ಬಿಹಾರಿಗಳು ಕೊಲೆಯಾಗುತ್ತಿದ್ದಾರೆ ಎಂದು ಜನರನ್ನು ಪ್ರಚೋದಿಸಿದ್ದರು.

ಇದಲ್ಲದೆ ಬಿಜೆಪಿ ಟ್ವಿಟರ್‌ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿತ್ತು. ಈ ವಿಡಿಯೋ ವೈರಲ್ ಆಗಿದ್ದೆ ತಡ ಇಡೀ ದಿನ ಹಿಂದಿ ಮತ್ತು ಆಂಗ್ಲ ದೃಶ್ಯ ಮಾಧ್ಯಮಗಳು ತಮಿಳುನಾಡಿನ ವಿರುದ್ಧ ಸಾಲುಸಾಲು ವರದಿಗಳನ್ನು ಬಿತ್ತರಿಸಿದವು. ತಮಿಳುನಾಡಿನಲ್ಲಿ ಬಿಹಾರ ಮತ್ತು ಉತ್ತರಪ್ರದೇಶ ಸೇರಿದಂತೆ ಹಿಂದಿ ಭಾಷಿಕರಿಗೆ ರಕ್ಷಣೆ ಇಲ್ಲ, ಅಲ್ಲಿನ ಸರ್ಕಾರವೇ ತಮಿಳು ಉಗ್ರಗಾಮಿಗಳ ಬೆನ್ನಿಗೆ ನಿಂತಿದೆ ಎಂದು ವಿಷಕಾರಲು ಆರಂಭಿಸಿದವು. ಪರಿಣಾಮ ಪ್ರಕರಣದ ತನಿಖೆಗೆ ಸಿಎಂ ನಿತೀಶ್ ಕುಮಾರ್ ಒಂದು ತಂಡವನ್ನು ರಚಿಸಿ ತಮಿಳುನಾಡಿಗೂ ಕಳುಹಿಸಿದ್ದರು.

ಆದರೆ, ಘಟನೆಯ ಮರುದಿನವೇ ಫ್ಯಾಕ್ಟ್‌ಚೆಕ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಇದು ಸುಳ್ಳು ಸುದ್ದಿ ಎಂದು ಕಂಡು ಹಿಡಿದಿದ್ದರು. ಈ ಹಲ್ಲೆ ತಮಿಳುನಾಡಿನಲ್ಲಿ ನಡೆದದ್ದಲ್ಲ. ಇದೊಂದು ಸುಳ್ಳು ಸುದ್ದಿಯಾಗಿದ್ದು, ತಮಿಳುನಾಡಿನಲ್ಲಿ ಯಾವುದೇ ಬಿಹಾರಿ ಕಾರ್ಮಿಕರ ಮೇಲೆ ಹಲ್ಲೆಯಾಗಿಲ್ಲ ಎಂದು ಸಾಕ್ಷಿ ಸಮೇತ ಸರಣಿ ಟ್ವೀಟ್ ಮಾಡಿದ್ದರು. ಈ ಟ್ವೀಟ್ ಮೂಲಕ ಬಿಜೆಪಿಯ ಅಸಲಿ ತಂತ್ರಗಾರಿಕೆ ಜಗಜ್ಜಾಹೀರಾಗಿತ್ತು.

ತಮಿಳುನಾಡಿನ ದೃಶ್ಯ ಮತ್ತು ಮುದ್ರಣ ಮಾಧ್ಯಮಗಳು ಬಿಜೆಪಿಯ ಈ ಸುಳ್ಳು ಸುದ್ದಿಯ ಬಗ್ಗೆ ಬಿಸಿಬಿಸಿ ಚರ್ಚೆ ಶುರು ಮಾಡುತ್ತಿದ್ದಂತೆ ಅಣ್ಣಾಮಲೈ ತನ್ನ ಖಾಸಗಿ ಟ್ವಿಟರ್ ಖಾತೆಯಿಂದ ಆ ವಿಡಿಯೋವನ್ನು ಡಿಲೀಟ್ ಮಾಡಿದ್ದರು. ಇದಾದ ಬಳಿಕ ಸುಳ್ಳು ಸುದ್ದಿಯನ್ನು ಹಬ್ಬಿದ ಕಾರಣಕ್ಕೆ ಮನೀಶ್ ಕಶ್ಯಪ್ ಅವರನ್ನು ಬಂಧಿಸಲಾಗಿತ್ತು.

ಇದನ್ನು ಓದಿ: ಅಮೆರಿಕದ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಬಗ್ಗೆ ಸ್ಯಾಮ್ ಪಿತ್ರೋಡಾ ಕೊಟ್ಟಿದ್ದ ವಿವರಣೆಯನ್ನು ‘ರಾಜಕೀಯ ಅಸ್ತ್ರ’ ಮಾಡಿಕೊಂಡ ಬಿಜೆಪಿ: ಆದರೆ ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...