Homeಮುಖಪುಟತಮಿಳುನಾಡಿನ ಬಗ್ಗೆ ಸುಳ್ಳು ಸುದ್ದಿ ಹರಡಿ ಬಂಧಿಸಲ್ಪಟ್ಟಿದ್ದ ಯೂಟ್ಯೂಬರ್ ಕಶ್ಯಪ್ ಬಿಜೆಪಿಗೆ ಸೇರ್ಪಡೆ

ತಮಿಳುನಾಡಿನ ಬಗ್ಗೆ ಸುಳ್ಳು ಸುದ್ದಿ ಹರಡಿ ಬಂಧಿಸಲ್ಪಟ್ಟಿದ್ದ ಯೂಟ್ಯೂಬರ್ ಕಶ್ಯಪ್ ಬಿಜೆಪಿಗೆ ಸೇರ್ಪಡೆ

- Advertisement -
- Advertisement -

ಯೂಟ್ಯೂಬರ್ ಮನೀಶ್ ಕಶ್ಯಪ್ ಬಿಜೆಪಿ ಸಂಸದ ಮನೋಜ್ ತಿವಾರಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬಿಹಾರ ಮೂಲದ ಯೂಟ್ಯೂಬರ್ ಕಶ್ಯಪ್ ಕಳೆದ ವರ್ಷ ನಕಲಿ ಮಾಹಿತಿ ಹರಡಿದ್ದಕ್ಕಾಗಿ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಹೊರಗಿದ್ದಾರೆ.

ತಮಿಳುನಾಡಿನಲ್ಲಿ ಬಿಹಾರದ ಕಾರ್ಮಿಕರನ್ನು ಕೊಲ್ಲಲಾಗಿದೆ ಎಂದು ಸುಳ್ಳು ಸುದ್ದಿಯನ್ನು ಹಬ್ಬಿಸಿ ಯ್ಯೂಟ್ಯೂಬರ್‌ ಮನೀಶ್ ಕಶ್ಯಪ್ ಬಂಧಕ್ಕೊಳಪಟ್ಟಿದ್ದರು. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಪತ್ರಕರ್ತ ಮೊಹಮ್ಮದ್‌ ಝಬೈರ್‌, ಹಲವಾರು ಬಿಹಾರದ ವಲಸೆ ಕಾರ್ಮಿಕರು ತಮಿಳುನಾಡಿನಲ್ಲಿ ಕೊಲ್ಲಲ್ಪಟ್ಟಿದ್ದಾರೆ ಎಂದು ಹೇಳುವ ಮೂಲಕ ತಮಿಳುನಾಡಿನಲ್ಲಿ ಬಿಹಾರದ ವಲಸೆ ಕಾರ್ಮಿಕರಲ್ಲಿ ಸುರಕ್ಷತೆಯ ಭಯವನ್ನು ಹೆಚ್ಚಿಸಲು ಅತ್ಯುತ್ತಮ ಪ್ರಯತ್ನ ಮಾಡಿದ್ದ ಮನೀಶ್ ಕಶ್ಯಪ್ ನೆನಪಿದೆಯೇ? ಆತನನನ್ನು ಈ ಹಿಂದೆ ಅಪಾಯಕಾರಿ ತಪ್ಪು ಮಾಹಿತಿ ನೀಡಿದ್ದಕ್ಕೆ ಬಂಧಿಸಲಾಗಿತ್ತು. ಇದೀಗ ಅವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ಬಿಜೆಪಿ ಸನ್ಮಾನಿಸಿದೆ. ತಪ್ಪು ಮಾಹಿತಿಯನ್ನು ಹಂಚಿಕೊಳ್ಳುವ ಪ್ರತಿಯೊಬ್ಬ ಪ್ರಭಾವಿಗಳಿಗೆ ಇದು ತುಂಬಾ ಉತ್ತೇಜನಕಾರಿಯಾಗಿದೆ ಎಂದು ಹೇಳಿದ್ದಾರೆ.

ಏನಿದು ಘಟನೆ?

ಮಾರ್ಚ್ 1ರಂದು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಹುಟ್ಟುಹಬ್ಬ. ಸ್ಟಾಲಿನ್ ಹುಟ್ಟುಹಬ್ಬಕ್ಕೆ ಶುಭ ಕೋರಲೆಂದು ಬಿಹಾರದ ಉಪಮುಖ್ಯಮಂತ್ರಿ ಹಾಗೂ ಆರ್‌ಜೆಡಿ ಪಕ್ಷದ ನಾಯಕ ತೇಜಸ್ವಿ ಯಾದವ್ ತಮಿಳುನಾಡಿಗೆ ಆಗಮಿಸಿದ್ದರು. ಅದೇ ದಿನ ಬಿಹಾರದ ಬಿಜೆಪಿ ಪಕ್ಷದ ಅಧಿಕೃತ ಟ್ವಿಟರ್ ಖಾತೆಯಲ್ಲಿ “ತಮಿಳುನಾಡಿನಲ್ಲಿ ಹಿಂದಿ ಮಾತನಾಡಿದ್ದಕ್ಕಾಗಿ 12 ಜನರನ್ನು ಒಂದೇ ಕೋಣೆಯಲ್ಲಿ ಕೂಡಿಹಾಕಿ ನೇಣು ಬಿಗಿದು ಕೊಲ್ಲಲಾಗಿದೆ” ಎಂದು ಒಂದು ವಿಡಿಯೋವನ್ನು ಹಂಚಿಕೊಳ್ಳಲಾಗಿತ್ತು. ಇದರ ಬೆನ್ನಿಗೆ “ಮನೀಶ್ ಕಶ್ಯಪ್”  ತನ್ನ ಯೂಟ್ಯೂಬ್ ಚಾನೆಲ್ ಮತ್ತು ಫೇಸ್ಬುಕ್ ಅಕೌಂಟ್‌ನಲ್ಲಿ, ’ತಮಿಳುನಾಡಿನಲ್ಲಿ ಬಿಹಾರದ ಕಾರ್ಮಿಕರನ್ನು ಕಂಡಕಂಡಲ್ಲಿ ಮಚ್ಚಿನಿಂದ ಕೊಚ್ಚಿ ಕೊಲ್ಲಲಾಗುತ್ತಿದೆ’ ಎಂದು ಸುದ್ದಿಯನ್ನು ಮಾಡಿದ್ದ. ಆತನ ವಿಡಿಯೋವನ್ನು 6 ಮಿಲಿಯನ್ ಜನ ವೀಕ್ಷಿಸಿದ್ದರು. ಬಿಹಾರದ ವಿಧಾನಸಭೆಯಲ್ಲೂ ಈ ವಿಚಾರವಾಗಿ ಭಾರಿ ಚರ್ಚೆಯಾಗಿತ್ತು. ಅಲ್ಲಿನ ವಿರೋಧ ಪಕ್ಷವಾದ ಬಿಜೆಪಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ರಾಜೀನಾಮೆಗೆ ಪಟ್ಟುಹಿಡಿದಿತ್ತು.

ವಿರೋಧ ಪಕ್ಷದ ನಾಯಕ ವಿಜಯ್ ಸಿನ್ಹ ಈ ಮನೀಶ್ ಕಶ್ಯಪ್ ಎಂಬ ವ್ಯಕ್ತಿಯ ಯೂಟ್ಯೂಬ್ ಚಾನೆಲ್‌ಗೆ ಸಂದರ್ಶನ ನೀಡಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಮತ್ತು ಅವರ ಹುಟ್ಟುಹಬ್ಬಕ್ಕೆ ಶುಭಕೋರಿದ್ದ ತೇಜಸ್ವಿ ಯಾದವ್ ಬಗ್ಗೆ ಅವಹೇಳನಕಾರಿಯಾದಂತಹ ಮಾತುಗಳನ್ನಾಡಿದ್ದರು. ಇಂತವರ ಸರ್ಕಾರ ಬಿಹಾರಕ್ಕೆ ಬೇಕೆ? ತೇಜಸ್ವಿ ಯಾದವ್ ಸ್ಟಾಲಿನ್‌ಗೆ ಕೇಕ್ ತಿನ್ನಿಸುವ ದಿನದಲ್ಲೇ ನಮ್ಮ ಬಿಹಾರಿಗಳು ಕೊಲೆಯಾಗುತ್ತಿದ್ದಾರೆ ಎಂದು ಜನರನ್ನು ಪ್ರಚೋದಿಸಿದ್ದರು.

ಇದಲ್ಲದೆ ಬಿಜೆಪಿ ಟ್ವಿಟರ್‌ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿತ್ತು. ಈ ವಿಡಿಯೋ ವೈರಲ್ ಆಗಿದ್ದೆ ತಡ ಇಡೀ ದಿನ ಹಿಂದಿ ಮತ್ತು ಆಂಗ್ಲ ದೃಶ್ಯ ಮಾಧ್ಯಮಗಳು ತಮಿಳುನಾಡಿನ ವಿರುದ್ಧ ಸಾಲುಸಾಲು ವರದಿಗಳನ್ನು ಬಿತ್ತರಿಸಿದವು. ತಮಿಳುನಾಡಿನಲ್ಲಿ ಬಿಹಾರ ಮತ್ತು ಉತ್ತರಪ್ರದೇಶ ಸೇರಿದಂತೆ ಹಿಂದಿ ಭಾಷಿಕರಿಗೆ ರಕ್ಷಣೆ ಇಲ್ಲ, ಅಲ್ಲಿನ ಸರ್ಕಾರವೇ ತಮಿಳು ಉಗ್ರಗಾಮಿಗಳ ಬೆನ್ನಿಗೆ ನಿಂತಿದೆ ಎಂದು ವಿಷಕಾರಲು ಆರಂಭಿಸಿದವು. ಪರಿಣಾಮ ಪ್ರಕರಣದ ತನಿಖೆಗೆ ಸಿಎಂ ನಿತೀಶ್ ಕುಮಾರ್ ಒಂದು ತಂಡವನ್ನು ರಚಿಸಿ ತಮಿಳುನಾಡಿಗೂ ಕಳುಹಿಸಿದ್ದರು.

ಆದರೆ, ಘಟನೆಯ ಮರುದಿನವೇ ಫ್ಯಾಕ್ಟ್‌ಚೆಕ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಇದು ಸುಳ್ಳು ಸುದ್ದಿ ಎಂದು ಕಂಡು ಹಿಡಿದಿದ್ದರು. ಈ ಹಲ್ಲೆ ತಮಿಳುನಾಡಿನಲ್ಲಿ ನಡೆದದ್ದಲ್ಲ. ಇದೊಂದು ಸುಳ್ಳು ಸುದ್ದಿಯಾಗಿದ್ದು, ತಮಿಳುನಾಡಿನಲ್ಲಿ ಯಾವುದೇ ಬಿಹಾರಿ ಕಾರ್ಮಿಕರ ಮೇಲೆ ಹಲ್ಲೆಯಾಗಿಲ್ಲ ಎಂದು ಸಾಕ್ಷಿ ಸಮೇತ ಸರಣಿ ಟ್ವೀಟ್ ಮಾಡಿದ್ದರು. ಈ ಟ್ವೀಟ್ ಮೂಲಕ ಬಿಜೆಪಿಯ ಅಸಲಿ ತಂತ್ರಗಾರಿಕೆ ಜಗಜ್ಜಾಹೀರಾಗಿತ್ತು.

ತಮಿಳುನಾಡಿನ ದೃಶ್ಯ ಮತ್ತು ಮುದ್ರಣ ಮಾಧ್ಯಮಗಳು ಬಿಜೆಪಿಯ ಈ ಸುಳ್ಳು ಸುದ್ದಿಯ ಬಗ್ಗೆ ಬಿಸಿಬಿಸಿ ಚರ್ಚೆ ಶುರು ಮಾಡುತ್ತಿದ್ದಂತೆ ಅಣ್ಣಾಮಲೈ ತನ್ನ ಖಾಸಗಿ ಟ್ವಿಟರ್ ಖಾತೆಯಿಂದ ಆ ವಿಡಿಯೋವನ್ನು ಡಿಲೀಟ್ ಮಾಡಿದ್ದರು. ಇದಾದ ಬಳಿಕ ಸುಳ್ಳು ಸುದ್ದಿಯನ್ನು ಹಬ್ಬಿದ ಕಾರಣಕ್ಕೆ ಮನೀಶ್ ಕಶ್ಯಪ್ ಅವರನ್ನು ಬಂಧಿಸಲಾಗಿತ್ತು.

ಇದನ್ನು ಓದಿ: ಅಮೆರಿಕದ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಬಗ್ಗೆ ಸ್ಯಾಮ್ ಪಿತ್ರೋಡಾ ಕೊಟ್ಟಿದ್ದ ವಿವರಣೆಯನ್ನು ‘ರಾಜಕೀಯ ಅಸ್ತ್ರ’ ಮಾಡಿಕೊಂಡ ಬಿಜೆಪಿ: ಆದರೆ ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....