Homeಮುಖಪುಟತಮಿಳುನಾಡಿನ ಬಗ್ಗೆ ಸುಳ್ಳು ಸುದ್ದಿ ಹರಡಿ ಬಂಧಿಸಲ್ಪಟ್ಟಿದ್ದ ಯೂಟ್ಯೂಬರ್ ಕಶ್ಯಪ್ ಬಿಜೆಪಿಗೆ ಸೇರ್ಪಡೆ

ತಮಿಳುನಾಡಿನ ಬಗ್ಗೆ ಸುಳ್ಳು ಸುದ್ದಿ ಹರಡಿ ಬಂಧಿಸಲ್ಪಟ್ಟಿದ್ದ ಯೂಟ್ಯೂಬರ್ ಕಶ್ಯಪ್ ಬಿಜೆಪಿಗೆ ಸೇರ್ಪಡೆ

- Advertisement -
- Advertisement -

ಯೂಟ್ಯೂಬರ್ ಮನೀಶ್ ಕಶ್ಯಪ್ ಬಿಜೆಪಿ ಸಂಸದ ಮನೋಜ್ ತಿವಾರಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬಿಹಾರ ಮೂಲದ ಯೂಟ್ಯೂಬರ್ ಕಶ್ಯಪ್ ಕಳೆದ ವರ್ಷ ನಕಲಿ ಮಾಹಿತಿ ಹರಡಿದ್ದಕ್ಕಾಗಿ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಹೊರಗಿದ್ದಾರೆ.

ತಮಿಳುನಾಡಿನಲ್ಲಿ ಬಿಹಾರದ ಕಾರ್ಮಿಕರನ್ನು ಕೊಲ್ಲಲಾಗಿದೆ ಎಂದು ಸುಳ್ಳು ಸುದ್ದಿಯನ್ನು ಹಬ್ಬಿಸಿ ಯ್ಯೂಟ್ಯೂಬರ್‌ ಮನೀಶ್ ಕಶ್ಯಪ್ ಬಂಧಕ್ಕೊಳಪಟ್ಟಿದ್ದರು. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಪತ್ರಕರ್ತ ಮೊಹಮ್ಮದ್‌ ಝಬೈರ್‌, ಹಲವಾರು ಬಿಹಾರದ ವಲಸೆ ಕಾರ್ಮಿಕರು ತಮಿಳುನಾಡಿನಲ್ಲಿ ಕೊಲ್ಲಲ್ಪಟ್ಟಿದ್ದಾರೆ ಎಂದು ಹೇಳುವ ಮೂಲಕ ತಮಿಳುನಾಡಿನಲ್ಲಿ ಬಿಹಾರದ ವಲಸೆ ಕಾರ್ಮಿಕರಲ್ಲಿ ಸುರಕ್ಷತೆಯ ಭಯವನ್ನು ಹೆಚ್ಚಿಸಲು ಅತ್ಯುತ್ತಮ ಪ್ರಯತ್ನ ಮಾಡಿದ್ದ ಮನೀಶ್ ಕಶ್ಯಪ್ ನೆನಪಿದೆಯೇ? ಆತನನನ್ನು ಈ ಹಿಂದೆ ಅಪಾಯಕಾರಿ ತಪ್ಪು ಮಾಹಿತಿ ನೀಡಿದ್ದಕ್ಕೆ ಬಂಧಿಸಲಾಗಿತ್ತು. ಇದೀಗ ಅವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ಬಿಜೆಪಿ ಸನ್ಮಾನಿಸಿದೆ. ತಪ್ಪು ಮಾಹಿತಿಯನ್ನು ಹಂಚಿಕೊಳ್ಳುವ ಪ್ರತಿಯೊಬ್ಬ ಪ್ರಭಾವಿಗಳಿಗೆ ಇದು ತುಂಬಾ ಉತ್ತೇಜನಕಾರಿಯಾಗಿದೆ ಎಂದು ಹೇಳಿದ್ದಾರೆ.

ಏನಿದು ಘಟನೆ?

ಮಾರ್ಚ್ 1ರಂದು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಹುಟ್ಟುಹಬ್ಬ. ಸ್ಟಾಲಿನ್ ಹುಟ್ಟುಹಬ್ಬಕ್ಕೆ ಶುಭ ಕೋರಲೆಂದು ಬಿಹಾರದ ಉಪಮುಖ್ಯಮಂತ್ರಿ ಹಾಗೂ ಆರ್‌ಜೆಡಿ ಪಕ್ಷದ ನಾಯಕ ತೇಜಸ್ವಿ ಯಾದವ್ ತಮಿಳುನಾಡಿಗೆ ಆಗಮಿಸಿದ್ದರು. ಅದೇ ದಿನ ಬಿಹಾರದ ಬಿಜೆಪಿ ಪಕ್ಷದ ಅಧಿಕೃತ ಟ್ವಿಟರ್ ಖಾತೆಯಲ್ಲಿ “ತಮಿಳುನಾಡಿನಲ್ಲಿ ಹಿಂದಿ ಮಾತನಾಡಿದ್ದಕ್ಕಾಗಿ 12 ಜನರನ್ನು ಒಂದೇ ಕೋಣೆಯಲ್ಲಿ ಕೂಡಿಹಾಕಿ ನೇಣು ಬಿಗಿದು ಕೊಲ್ಲಲಾಗಿದೆ” ಎಂದು ಒಂದು ವಿಡಿಯೋವನ್ನು ಹಂಚಿಕೊಳ್ಳಲಾಗಿತ್ತು. ಇದರ ಬೆನ್ನಿಗೆ “ಮನೀಶ್ ಕಶ್ಯಪ್”  ತನ್ನ ಯೂಟ್ಯೂಬ್ ಚಾನೆಲ್ ಮತ್ತು ಫೇಸ್ಬುಕ್ ಅಕೌಂಟ್‌ನಲ್ಲಿ, ’ತಮಿಳುನಾಡಿನಲ್ಲಿ ಬಿಹಾರದ ಕಾರ್ಮಿಕರನ್ನು ಕಂಡಕಂಡಲ್ಲಿ ಮಚ್ಚಿನಿಂದ ಕೊಚ್ಚಿ ಕೊಲ್ಲಲಾಗುತ್ತಿದೆ’ ಎಂದು ಸುದ್ದಿಯನ್ನು ಮಾಡಿದ್ದ. ಆತನ ವಿಡಿಯೋವನ್ನು 6 ಮಿಲಿಯನ್ ಜನ ವೀಕ್ಷಿಸಿದ್ದರು. ಬಿಹಾರದ ವಿಧಾನಸಭೆಯಲ್ಲೂ ಈ ವಿಚಾರವಾಗಿ ಭಾರಿ ಚರ್ಚೆಯಾಗಿತ್ತು. ಅಲ್ಲಿನ ವಿರೋಧ ಪಕ್ಷವಾದ ಬಿಜೆಪಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ರಾಜೀನಾಮೆಗೆ ಪಟ್ಟುಹಿಡಿದಿತ್ತು.

ವಿರೋಧ ಪಕ್ಷದ ನಾಯಕ ವಿಜಯ್ ಸಿನ್ಹ ಈ ಮನೀಶ್ ಕಶ್ಯಪ್ ಎಂಬ ವ್ಯಕ್ತಿಯ ಯೂಟ್ಯೂಬ್ ಚಾನೆಲ್‌ಗೆ ಸಂದರ್ಶನ ನೀಡಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಮತ್ತು ಅವರ ಹುಟ್ಟುಹಬ್ಬಕ್ಕೆ ಶುಭಕೋರಿದ್ದ ತೇಜಸ್ವಿ ಯಾದವ್ ಬಗ್ಗೆ ಅವಹೇಳನಕಾರಿಯಾದಂತಹ ಮಾತುಗಳನ್ನಾಡಿದ್ದರು. ಇಂತವರ ಸರ್ಕಾರ ಬಿಹಾರಕ್ಕೆ ಬೇಕೆ? ತೇಜಸ್ವಿ ಯಾದವ್ ಸ್ಟಾಲಿನ್‌ಗೆ ಕೇಕ್ ತಿನ್ನಿಸುವ ದಿನದಲ್ಲೇ ನಮ್ಮ ಬಿಹಾರಿಗಳು ಕೊಲೆಯಾಗುತ್ತಿದ್ದಾರೆ ಎಂದು ಜನರನ್ನು ಪ್ರಚೋದಿಸಿದ್ದರು.

ಇದಲ್ಲದೆ ಬಿಜೆಪಿ ಟ್ವಿಟರ್‌ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿತ್ತು. ಈ ವಿಡಿಯೋ ವೈರಲ್ ಆಗಿದ್ದೆ ತಡ ಇಡೀ ದಿನ ಹಿಂದಿ ಮತ್ತು ಆಂಗ್ಲ ದೃಶ್ಯ ಮಾಧ್ಯಮಗಳು ತಮಿಳುನಾಡಿನ ವಿರುದ್ಧ ಸಾಲುಸಾಲು ವರದಿಗಳನ್ನು ಬಿತ್ತರಿಸಿದವು. ತಮಿಳುನಾಡಿನಲ್ಲಿ ಬಿಹಾರ ಮತ್ತು ಉತ್ತರಪ್ರದೇಶ ಸೇರಿದಂತೆ ಹಿಂದಿ ಭಾಷಿಕರಿಗೆ ರಕ್ಷಣೆ ಇಲ್ಲ, ಅಲ್ಲಿನ ಸರ್ಕಾರವೇ ತಮಿಳು ಉಗ್ರಗಾಮಿಗಳ ಬೆನ್ನಿಗೆ ನಿಂತಿದೆ ಎಂದು ವಿಷಕಾರಲು ಆರಂಭಿಸಿದವು. ಪರಿಣಾಮ ಪ್ರಕರಣದ ತನಿಖೆಗೆ ಸಿಎಂ ನಿತೀಶ್ ಕುಮಾರ್ ಒಂದು ತಂಡವನ್ನು ರಚಿಸಿ ತಮಿಳುನಾಡಿಗೂ ಕಳುಹಿಸಿದ್ದರು.

ಆದರೆ, ಘಟನೆಯ ಮರುದಿನವೇ ಫ್ಯಾಕ್ಟ್‌ಚೆಕ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಇದು ಸುಳ್ಳು ಸುದ್ದಿ ಎಂದು ಕಂಡು ಹಿಡಿದಿದ್ದರು. ಈ ಹಲ್ಲೆ ತಮಿಳುನಾಡಿನಲ್ಲಿ ನಡೆದದ್ದಲ್ಲ. ಇದೊಂದು ಸುಳ್ಳು ಸುದ್ದಿಯಾಗಿದ್ದು, ತಮಿಳುನಾಡಿನಲ್ಲಿ ಯಾವುದೇ ಬಿಹಾರಿ ಕಾರ್ಮಿಕರ ಮೇಲೆ ಹಲ್ಲೆಯಾಗಿಲ್ಲ ಎಂದು ಸಾಕ್ಷಿ ಸಮೇತ ಸರಣಿ ಟ್ವೀಟ್ ಮಾಡಿದ್ದರು. ಈ ಟ್ವೀಟ್ ಮೂಲಕ ಬಿಜೆಪಿಯ ಅಸಲಿ ತಂತ್ರಗಾರಿಕೆ ಜಗಜ್ಜಾಹೀರಾಗಿತ್ತು.

ತಮಿಳುನಾಡಿನ ದೃಶ್ಯ ಮತ್ತು ಮುದ್ರಣ ಮಾಧ್ಯಮಗಳು ಬಿಜೆಪಿಯ ಈ ಸುಳ್ಳು ಸುದ್ದಿಯ ಬಗ್ಗೆ ಬಿಸಿಬಿಸಿ ಚರ್ಚೆ ಶುರು ಮಾಡುತ್ತಿದ್ದಂತೆ ಅಣ್ಣಾಮಲೈ ತನ್ನ ಖಾಸಗಿ ಟ್ವಿಟರ್ ಖಾತೆಯಿಂದ ಆ ವಿಡಿಯೋವನ್ನು ಡಿಲೀಟ್ ಮಾಡಿದ್ದರು. ಇದಾದ ಬಳಿಕ ಸುಳ್ಳು ಸುದ್ದಿಯನ್ನು ಹಬ್ಬಿದ ಕಾರಣಕ್ಕೆ ಮನೀಶ್ ಕಶ್ಯಪ್ ಅವರನ್ನು ಬಂಧಿಸಲಾಗಿತ್ತು.

ಇದನ್ನು ಓದಿ: ಅಮೆರಿಕದ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಬಗ್ಗೆ ಸ್ಯಾಮ್ ಪಿತ್ರೋಡಾ ಕೊಟ್ಟಿದ್ದ ವಿವರಣೆಯನ್ನು ‘ರಾಜಕೀಯ ಅಸ್ತ್ರ’ ಮಾಡಿಕೊಂಡ ಬಿಜೆಪಿ: ಆದರೆ ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...