Homeಮುಖಪುಟಉದ್ಯಮಿಗಳ ಲಾಬಿಗೆ ಸರ್ಕಾರ ಮಣಿದಿದೆ: ಮಣಿವಣ್ಣನ್ ವರ್ಗಾವಣೆಗೆ ತೀವ್ರ ವಿರೋಧ

ಉದ್ಯಮಿಗಳ ಲಾಬಿಗೆ ಸರ್ಕಾರ ಮಣಿದಿದೆ: ಮಣಿವಣ್ಣನ್ ವರ್ಗಾವಣೆಗೆ ತೀವ್ರ ವಿರೋಧ

- Advertisement -
- Advertisement -

ಕಾರ್ಮಿಕ ಇಲಾಖೆ ಹಾಗೂ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್. ಪಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

ಕಾರ್ಮಿಕ ಇಲಾಖೆಯಿಂದ ಮಣಿವಣ್ಣನ್ ಎತ್ತಂಗಡಿ ಮಾಡಿರುವುದರ ಹಿಂದೆ ದೊಡ್ಡ ಲಾಬಿ ಅಡಗಿದೆ. ಕಾರ್ಮಿಕರಿಗೆ ಕನಿಷ್ಠ ವೇತನ, ಲಾಕ್‌ಡೌನ್ ಸಂದರ್ಭದ ಸಂಬಳ ನೀಡುವಂತೆ ಮಣಿವಣ್ಣನ್‌ರವರಿ ಹಲವಾರು ಕೈಗಾರಿಕೋದ್ಯಮಿಗಳಿಗೆ ನೋಟಿಸ್ ನೀಡಿದ್ದರು. ಹೀಗಾಗಿ ಅವರನ್ನು ಏಕಾಏಕಿ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ಎರಡು ತಿಂಗಳಿಂದ ಸಂಬಳ ನೀಡಿಲ್ಲ, ಕುಟುಂಬ ನಿರ್ವಹಣೆಗೆ ತೊಂದರೆ ಆಗಿದೆ ಎಂದು 732 ಕಾರ್ಮಿಕರಿಂದ ಮಣಿವಣ್ಣನ್ ಗೆ ದೂರು ನೀಡಲಾಗಿತ್ತು ಎನ್ನಲಾಗುತ್ತಿದೆ. ಹಾಗಾಗಿ ದೂರಿನ ಹಿನ್ನೆಲೆಯಲ್ಲಿ ಎಲ್ಲಾ ಕೈಗಾರಿಕೆಗಳ ಮುಖ್ಯಸ್ಥರಿಗೆ ನೋಟಿಸ್ ಸಿದ್ದಪಡಿಸುವಂತೆ ಅಧಿಕಾರಿಗಳಿಗೆ ಮಣಿವಣ್ಣನ್ ಸೂಚನೆ ನೀಡಿದ್ದರು. ಹಾಗಾಗಿ ಕೈಗಾರಿಕೋದ್ಯಮಿಗಳು ಇವರ ವರ್ಗಾವಣೆಗೆ ಒತ್ತಡ ತಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಲಾಕ್‌ಡೌನ್‌ ತೆರವುಗೊಳಿಸುತ್ತಿರುವಾಗ ಕಾರ್ಮಿಕರೊಂದಿಗೆ ಮಾತನಾಡಿ ನಾವು ಸರಿಪಡಿಸುತ್ತೇವೆ. ನಮಗೆ ಮಣಿವಣ್ಣನ್‌ನವರಿಂದ ತೊಂದರೆಯಾಗುತ್ತಿದೆ ಎಂದು ಕೈಗಾರಿಕೋದ್ಯಮಿಗಳ ಸಂಘಟನೆ ಪ್ರಮುಖರು ಸಿಎಂಗೆ ದೂರು ನೀಡಿದ್ದು, ಅನಿವಾರ್ಯವಾಗಿ ಕೈಗಾರಿಕೋದ್ಯಮಿಗಳ ಒತ್ತಡಕ್ಕೆ ಸಿಲುಕಿದ ಸಿಎಂ ಮಣಿವಣ್ಣನ್ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದಾರೆ ಎಂಬ ಆರೋಪ ಹರಿದಾಡುತ್ತಿದೆ.

ಇನ್ನು ಸಾಮಾಜಿಕ ಜಾಲತಾಣಗಳಲ್ಲಿಯೂ ಸಹ ಮಣಿವಣ್ಣನ್‌ರವರ ವರ್ಗಾವಣೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಲಿಂಗರಾಜು ಮಳವಳ್ಳಿ ಎಂಬುವವರು ಟೀಕೆ ಮಾಡಿದ್ದು ಹೀಗೆ..

“ಮಾಲೀಕರ ಪ್ರಕಾರ ಮಣಿವಣ್ಣನ್‌ರವರು ಮಾಡಿದ ಘನಘೋರ ತಪ್ಪುಗಳು:

1.ಲಾಕ್ ಡೌನ್ ಅವಧಿಯಲ್ಲಿ ಕಾರ್ಮಿಕರನ್ನು ಕೆಲಸದಿಂದ ತೆಗೆಯುವಂತಿಲ್ಲ ಎಂಬ ಆದೇಶ
2.ಕಾರ್ಮಿಕರಿಗೆ ರಜಾ ಸಹಿತ ಪೂರ್ತಿ ವೇತನ ನೀಡಬೇಕು ಎಂಬ ಆದೇಶ
3.ಕೆಲಸದಿಂದ ವಜಾಗೊಂಡಲ್ಲಿ ದೂರು ದಾಖಲಿಸಲು ಅವಕಾಶ ಕೊಟ್ಟಿದ್ದು
4.ಸಾಮಾಜಿಕ ಜಾಲತಾಣದಲ್ಲಿ ಮೇಲಿನ ಎಲ್ಲವನ್ನೂ ಹಂಚಿಕೊಂಡಿದ್ದು
5.ಕಾರ್ಮಿಕ ಸಂಘಟನೆಗಳ ಸಲಹೆ ಪಡೆದು ಕೋವಿಡ್ ಪರಿಹಾರ ಕಾರ್ಯವನ್ನು ಸಮರ್ಥವಾಗಿ ನಿಭಾಯಿಸಿದ್ದು

ಇದಕ್ಕಾಗಿ ‘ವರ್ಗಾವಣೆ ಪ್ರಶಸ್ತಿ’ ನೀಡಲಾಗಿದೆ.”

ಇನ್ನು ಖ್ಯಾತ ಕಾರ್ಟೂನಿಸ್ಟ್‌ ಸತೀಶ್‌ ಆಚಾರ್ಯರವರ ಕಾರ್ಟೂನ್‌ ಒಂದು ಸಾಕಷ್ಟು ಸಂಖ್ಯೆಯಲ್ಲಿ ಷೇರ್‌ ಆಗುತ್ತಿದೆ.

ಚಿತ್ರಕೃಪೆ: ಸತೀಶ್‌ ಆಚಾರ್ಯ

 


ಇದನ್ನೂ ಓದಿ: ರಾಜ್ಯ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ‘ಮಣಿವಣ್ಣನ್. ಪಿ’ ವರ್ಗಾವಣೆ 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...